ಕರ್ನಾಟಕಕ್ಕೆ 42,517 ಕೋಟಿ ರೂ. ವೆಚ್ಚದ 25 ರೈಲ್ವೆ ಯೋಜನೆಗಳು ಮಂಜೂರು : ರೈಲ್ವೆ ಸಚಿವ ಅಶ್ವಿನಿ ವೈಷ್ಣವ

ನವದೆಹಲಿ: ಕರ್ನಾಟಕದಲ್ಲಿ ರೈಲು ಸಂಪರ್ಕವನ್ನು ಹೆಚ್ಚಿಸಲು ಭಾರತೀಯ ರೈಲ್ವೆ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಆದಾಗ್ಯೂ, ಭೂಸ್ವಾಧೀನದ ವಿಳಂಬದಿಂದಾಗಿ ಅನೇಕ ಯೋಜನೆಗಳು ವಿಳಂಬವಾಗುತ್ತಿವೆ. ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಅಜಯ್ ಮಾಕನ್ ಅವರ ನಕ್ಷತ್ರ ಚಿಹ್ನೆಯ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಕರ್ನಾಟಕದಲ್ಲಿ ರೈಲ್ವೆ ಸಂಪರ್ಕವನ್ನು ಹೆಚ್ಚಿಸಲು, ಭಾರತೀಯ ರೈಲ್ವೆ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. … Continued

ರೈಲ್ವೆ ಸಚಿವರ ಭೇಟಿಯಾದ ಸಂಸದ ಕೋಟ ; ಕರಾವಳಿ, ಮಲೆನಾಡಿಗೆ ರೈಲ್ವೆ ಯೋಜನೆ, ಭಾರತೀಯ ರೈಲ್ವೆಯೊಳಗೆ ಕೊಂಕಣ ರೈಲ್ವೆ ವಿಲೀನಕ್ಕೆ ಒತ್ತಾಯ

ಉಡುಪಿ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ರೈಲು ಸಂಚಾರ ವ್ಯವಸ್ಥೆ ಸುಧಾರಣೆ ಮತ್ತು ಹೊಸ ರೈಲು ಒದಗಿಸಬೇಕು ಎಂದು ಕೋರಿ ಮನವಿ ಸಲ್ಲಿಸಿದರು. ಬಹುದಿನದ ಬೇಡಿಕೆಯಾದ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಳಗೆ ವಿಲೀನ ಮಾಡಬೇಕೆಂದು … Continued