ವೀಡಿಯೊಗಳು | ಮಾನಸ್ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರಿಗೆ ಶಾಕ್‌ ; ಸಫಾರಿ ಜೀಪನ್ನು ಎತ್ತಿ ಒಗೆಯಲು ಪ್ರಯತ್ನಿಸಿದ ಖಡ್ಗಮೃಗ-ವೀಕ್ಷಿಸಿ

ದಿಸ್ಪುರ್‌: ಇತ್ತೀಚೆಗೆ ಅಸ್ಸಾಂನ ಮಾನಸ್ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ವಾಹನದ ಮೇಲೆ ಖಡ್ಗಮೃಗ (Rhinoceros) ದಾಳಿಗೆ ಮುಂದಾಗಿದ್ದು, ಅದು ಸಫಾರಿ ಜೀಪನ್ನೇ ಎತ್ತಿದೆ. ಈ ಘಟನೆಯಿಂದ ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೈರಲ್ ಆದ ವೀಡಿಯೊದಲ್ಲಿ ಖಡ್ಗಮೃಗವು ಜೀಪ್ ನಿಲ್ಲಿಸಿದ್ದ ರಸ್ತೆಯ ಕಡೆಗೆ ನಡೆದುಕೊಂಡು ಹೋಗುತ್ತಿರುವುದನ್ನು ಸೆರೆಹಿಡಿಯಲಾಗಿದೆ. ಅಲ್ಲದೆ, … Continued

ಪಹಲ್ಗಾಮ್ ದಾಳಿಯ ಹಿಂದೆ ಸರ್ಕಾರದ ಪಿತೂರಿ ಹೇಳಿಕೆ : ಅಸ್ಸಾಂ ಶಾಸಕನ ಬಂಧನ

ಗುವಾಹತಿ/ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಮತ್ತು ಈ ಮೊದಲು ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಗಳ ಕುರಿತು ವಿವಾದಿತ ಹೇಳಿಕೆ ನೀಡಿದ್ದಕ್ಕಾಗಿ ಅಸ್ಸಾಂನ ಶಾಸಕರೊಬ್ಬರನ್ನು ಬಂಧಿಸಲಾಗಿದೆ. 2019 ರ ಫೆಬ್ರವರಿಯಲ್ಲಿ ಪುಲ್ವಾಮಾದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಬೆಂಗಾವಲು ಪಡೆಯ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿ ಮತ್ತು ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಕೊಂದಿದ್ದು … Continued

ಅಪರೂಪದ 11 ಹಲ್ಲಿಗಳ ಕಳ್ಳಸಾಗಾಣಿಕೆಗೆ ಯತ್ನಿಸಿ ಸಿಕ್ಕಿಬಿದ್ದ ಗ್ಯಾಂಗ್‌ ; ಒಂದು ಹಲ್ಲಿಗೆ 60 ಲಕ್ಷ ರೂ.ಗಳಂತೆ ಮಾರಾಟಕ್ಕೆ ಯತ್ನ..!

ಗುವಾಹತಿ : ಅಸ್ಸಾಂನ ದಿಬ್ರುಗಢದಲ್ಲಿ ಪೊಲೀಸರು ಶುಕ್ರವಾರ 11 ಅಪರೂಪದ ಟೋಕೆ ಗೆಕ್ಕೊ ಹಲ್ಲಿಗಳನ್ನು ವಶಪಡಿಸಿಕೊಂಡಿದ್ದು, ಮೂವರು ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿಯಲ್ಲಿ ಟೋಕೆ ಗೆಕ್ಕೊಗಳನ್ನು ಹೆಚ್ಚು ಅಳಿವಿನಂಚಿನಲ್ಲಿವ ಜೀವಿಗಳೆಂದು ಪಟ್ಟಿ ಮಾಡಲಾಗಿರುವುದರಿಂದ ಅವುಗಳ ರಫ್ತು ನಿಷೇಧಿಸಲಾಗಿದೆ. ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ, ಗರಿಷ್ಠ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ … Continued

ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಮಾಜಿ ಸಿಎಂ ಪುತ್ರಿ ; ವೀಡಿಯೊ ವೈರಲ್‌

ಗುವಾಹತಿ : ಮಾಜಿ ಮುಖ್ಯಮಂತ್ರಿಯೊಬ್ಬರ ಪುತ್ರಿ ಚಾಲಕನ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೊ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮದ್ಯದ ಅಮಲಿನಲ್ಲಿ ಚಾಲಕ ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎಂದು ಮಹಿಳೆ ಆರೋಪಿಸಿದ್ದಾರೆ. ಅಸ್ಸಾಂನ ಮಾಜಿ ಮುಖ್ಯಮಂತ್ರಿ ಪ್ರಫುಲ್ಲಕುಮಾರ ಮಹಂತ ಅವರ ಪುತ್ರಿ ಪ್ರಜೋಯೀತಾ ಕಶ್ಯಪ್ ಎದುರಿಗೆ ವ್ಯಕ್ತಿಯೊಬ್ಬರು ಮಂಡಿಯೂರಿ ಕುಳಿತಿದ್ದು, ಆತನನ್ನು ಮಹಿಳೆ ಬಯ್ಯುತ್ತಿದ್ದು … Continued

ಮೈ ಜುಂ ಎನ್ನುವ ವೀಡಿಯೊ | ಕಾಜಿರಂಗದಲ್ಲಿ ಸಫಾರಿ ಜೀಪಿನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು…

ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಆತಂಕಕಾರಿ ವೀಡಿಯೊವೊಂದು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದು, ಸಫಾರಿ ವೇಳೆ ಅದೃಷ್ಟವಶಾತ್‌ ತಾಯಿ-ಮಗಳು ಅಪಾಯದಿಂದ ಪಾರಾಗಿದ್ದಾರೆ. ತಾಯಿ ಮತ್ತು ಅವರ ಮಗಳು ಚಲಿಸುತ್ತಿದ್ದ ಸಫಾರಿ ಜೀಪ್‌ನಿಂದ ಘೇಂಡಾಮೃಗಗಳ ಮುಂದೆ ಬಿದ್ದಿದ್ದಾರೆ. ಘೇಂಡಾಮೃಗವೊಂದು ದಾಳಿ ಮಾಡಲು ಸಿದ್ಧವಾಗಿದ್ದರೂ ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೈರಲ್ ವೀಡಿಯೊದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸಫಾರಿ ಜೀಪ್‌ಗಳು ತಿರುಗುತ್ತಿರುವಾಗ ಯುವತಿ … Continued

ವೀಡಿಯೊ..| ಊರಿಗೆ ಬಂದ ವ್ಯಾಘ್ರ ; ಕಲ್ಲು, ಇಟ್ಟಿಗೆಯಿಂದ ಹೊಡೆದ ಜನ : ದೃಷ್ಟಿ ಕಳೆದುಕೊಂಡ ಹುಲಿ

ಗುವಾಹತಿ : ಹುಲಿಯನ್ನು ಕಂಡು ಭಯಭೀತರಾದ ಜನರು ಅದರ ಮೇಲೆ ಕಲ್ಲು ಮತ್ತು ಇಟ್ಟಿಗೆಗಳನ್ನು ಎಸೆದ ಪರಿಣಾಮ ಹುಲಿಯೊಂದು ತೀವ್ರವಾಗಿ ಗಾಯಗೊಂಡಿದೆ. ಅಲ್ಲದೆ, ಚೂಪಾದ ಕಲ್ಲುಗಳು ತಗುಲಿ ಹುಲಿಯ ಮೆದುಳಿಗೆ ಗಾಯವಾಗಿ ಕಣ್ಣಿನ ದೃಷ್ಟಿಯನ್ನೂ ಕಳೆದುಕೊಂಡಿದೆ. ಈ ಘಟನೆ ಅಸ್ಸಾಂನ ಕಲಿಯಾಬೋರ್‌ ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಸ್ಸಾಂ ನ ಅರಣ್ಯ ಪ್ರದೇಶದ ಪೊದೆಗಳಲ್ಲಿ ಬಹಿರಂಗವಾಗಿ … Continued

ವೀಡಿಯೊ..| ಅಸ್ಸಾಂನಲ್ಲಿ ಬೈಕ್ ಸವಾರನನ್ನು ಅಟ್ಟಾಡಿಸಿಕೊಂಡು ಹೋಗಿ ಕೊಂದುಹಾಕಿದ ಘೇಂಡಾಮೃಗ…

ಅಸ್ಸಾಂನ ಮೊರಿಗಾಂವ್ ಜಿಲ್ಲೆಯ ಪೊಬಿತೋರಾ ವನ್ಯಜೀವಿ ಅಭಯಾರಣ್ಯದ ಬಳಿ ಘೇಂಡಾಮೃಗವೊಂದು ಅಟ್ಟಿಸಿಕೊಂಡು ಹೋಗಿ ದಾಳಿ ಮಾಡಿದ ನಂತರ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮೃತ ವ್ಯಕ್ತಿಯನ್ನು ಸದ್ದಾಂ ಹುಸೇನ್ (37 ವರ್ಷ) ಘಟನೆಯ ಸ್ಥಳದಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ಕಾಮ್ರೂಪ್ ಮೆಟ್ರೋಪಾಲಿಟನ್ ಜಿಲ್ಲೆಯ ನಿವಾಸಿ ಎಂದು ಗುರುತಿಸಲಾಗಿದೆ. ಅವರು ತಮ್ಮ ದ್ವಿಚಕ್ರ … Continued

ವೀಡಿಯೊ..| ಅಸ್ಸಾಂನ ಅಹೋಂ ರಾಜವಂಶದ ಸಮಾಧಿ ದಿಬ್ಬ ʼಮೊಯ್ದಮ್‌ʼ ಈಗ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಗೆ ಸೇರ್ಪಡೆ

ನವದೆಹಲಿ: ದೆಹಲಿಯಲ್ಲಿ ಶುಕ್ರವಾರ ನಡೆದ ಯುನೆಸ್ಕೋದ 46ನೇ ವಿಶ್ವ ಪರಂಪರೆ ಸಮಿತಿ ಅಧಿವೇಶನದಲ್ಲಿ ಅಸ್ಸಾಂನ ಅಹೋಮ್ ರಾಜವಂಶದ ಮೊಯ್ದಮ್‌ (Moidam)ಗಳನ್ನು ಭಾರತದ 43ನೇ ವಿಶ್ವ ಪರಂಪರೆಯ ತಾಣವೆಂದು ಘೋಷಿಸಲಾಯಿತು. 2023-24ರ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಗೆ ಭಾರತದಿಂದ ಮೊಯಿದಮ್‌ಗಳನ್ನು ನಾಮನಿರ್ದೇಶನ ಮಾಡಲಾಗಿದೆ. ಇದು ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಯನ್ನು ಉತ್ತೇಜಿಸಲು ಕೆಲಸ ಮಾಡುವ ವಿಶ್ವಸಂಸ್ಥೆಯ … Continued

ಕ್ಲಾಸ್‌ ರೂಂ ಒಳಗೇ ಶಿಕ್ಷಕನನ್ನು ಇರಿದು ಸಾಯಿಸಿದ ಅಪ್ರಾಪ್ತ ವಿದ್ಯಾರ್ಥಿ…!

ಗುವಾಹತಿ : ಅಸ್ಸಾಂನ ಶಿವಸಾಗರ ಜಿಲ್ಲೆಯಲ್ಲಿ ಶನಿವಾರ ತರಗತಿಯೊಳಗೆ ಕೋಚಿಂಗ್ ಸೆಂಟರ್‌ನ ಶಿಕ್ಷಕರೊಬ್ಬರನ್ನು ಅವರ ವಿದ್ಯಾರ್ಥಿಯೇ ಚಾಕುವಿನಿಂದ ಕೊಂದಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅಪ್ರಾಪ್ತ ವಯಸ್ಕ ವಿದ್ಯಾರ್ಥಿಯನ್ನು ಶಿವಸಾಗರ ಪಟ್ಟಣದ ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದ್ದಾರೆ. 11 ನೇ ತರಗತಿಯ ವಿದ್ಯಾರ್ಥಿಯನ್ನು ಹಿಂದಿನ ದಿನ ಯಾವುದೋ ವಿಷಯಕ್ಕೆ ಶಿಕ್ಷಕರು ನಿಂದಿಸಿದ್ದರು … Continued

ರೀಮಲ್ ಚಂಡಮಾರುತ: ಅಸ್ಸಾಂ, ಮಿಜೋರಾಂನಲ್ಲಿ ಭಾರಿ ಗಾಳಿಮಳೆ, 24 ಮಂದಿ ಸಾವು

ಗುವಾಹತಿ: ‘ರೀಮಲ್‌’ ಚಂಡಮಾರುತದ ಪರಿಣಾಮ ಮಿಜೋರಾಂ ಮತ್ತು ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ಮಳೆ ಸಂಬಂಧಿಸಿದ ಅನಾಹುತದಲ್ಲಿ 24 ಜನರು ಮೃತಪಟ್ಟಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಮಿಜೋರಾಂ ಮತ್ತು ಅಸ್ಸಾಂನಲ್ಲಿ ಬಿರುಗಾಳಿಯಿಂದ ಕೂಡಿದ ಭಾರಿ ಮಳೆಯಾಗಿದೆ. ಮಿಜೋರಾಂನ ಐಜ್ವಾಲ್ ಜಿಲ್ಲೆಯ ಮೆಲ್ತುಮ್‌ನಲ್ಲಿ ಕಲ್ಲಿನ ಕ್ವಾರಿ ಕುಸಿದ ಪರಿಣಾಮ 15 … Continued