ಭೀಕರ ದುರಂತ : ಭಾರತೀಯ ವಾಯುಪಡೆಯ AN-32 ವಿಮಾನ ಪತನ ; ಐವರು ಸಿಬ್ಬಂದಿ ಸಾವು

ನವದೆಹಲಿ: ಅಸ್ಸಾಂನ ಜೋರ್ಹತ್ ಜಿಲ್ಲೆಯಲ್ಲಿ ಶನಿವಾರ ಭಾರತೀಯ ವಾಯುಪಡೆಗೆ (IAF) ಸೇರಿದ AN-32 ಸಾರಿಗೆ ವಿಮಾನವೊಂದು ಪತನಗೊಂಡಿದ್ದು, ಐವರು ವಾಯುಪಡೆ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಭಾರತೀಯ ವಾಯುಪಡೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. “ಅಸ್ಸಾಂನ ಜೋರ್ಹತ್ ವಾಯುನೆಲೆಯಲ್ಲಿ ನಡೆದ AN-32 ಸಾರಿಗೆ ವಿಮಾನ ಅಪಘಾತದಲ್ಲಿ ಐವರು ಭಾರತೀಯ ವಾಯುಪಡೆ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಿಮಾನದ ಸಹ-ಪೈಲಟ್ (ಕೋ-ಪೈಲಟ್) … Continued

ಅಸ್ಸಾಂ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆ ಅಂಗೀಕಾರ ; ಯುಸಿಸಿ ತಂದ ದೇಶದ 3ನೇ ರಾಜ್ಯ

ಗುವಾಹತಿ: ವಿಪಕ್ಷಗಳ ತೀವ್ರ ಪ್ರತಿಭಟನೆಯ ನಡುವೆಯೇ, ಅಸ್ಸಾಂ ವಿಧಾನಸಭೆಯು ಬುಧವಾರ ‘ಏಕರೂಪ ನಾಗರಿಕ ಸಂಹಿತೆ (UCC) ಅಸ್ಸಾಂ, 2026’ ಮಸೂದೆಯನ್ನು ಧ್ವನಿಮತದ ಮೂಲಕ ಅಂಗೀಕರಿಸಿದೆ. ಇದರೊಂದಿಗೆ ಉತ್ತರಾಖಂಡ ಮತ್ತು ಗುಜರಾತ್ ನಂತರ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಅಂಗೀಕರಿಸಿದ ದೇಶದ ಮೂರನೇ ರಾಜ್ಯವಾಗಿ ಅಸ್ಸಾಂ ಹೊರಹೊಮ್ಮಿದೆ. (ಗೋವಾದಲ್ಲಿ ಪೋರ್ಚುಗೀಸ್ ಆಳ್ವಿಕೆಯ ಕಾಲದಿಂದಲೇ ಸಾಮಾನ್ಯ ನಾಗರಿಕ ಕಾನೂನು … Continued

ಪ್ರವಾಸಿಗರಿದ್ದ ಜೀಪ್ ಅನ್ನೇ ಮಗುಚಲು ಯತ್ನಿಸಿದ ಖಡ್ಗಮೃಗ ! ಮಾನಸ್‌ ರಾಷ್ಟ್ರೀಯ ಉದ್ಯಾನವನದ ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಅಸ್ಸಾಂನ ಮಾನಸ್ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಸಫಾರಿ ಜೀಪ್ ಮೇಲೆ ಖಡ್ಗಮೃಗವೊಂದು ಆಕ್ರಮಣಕಾರಿಯಾಗಿ ಮುನ್ನುಗ್ಗಿ ವಾಹನವನ್ನೇ ಎತ್ತಿದ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಬಾನ್ಸ್‌ಬಾರಿ ವಲಯದಲ್ಲಿ ನಡೆದಿರುವ ಈ ರೋಮಾಂಚನಕಾರಿ ಹಾಗೂ ಭಯಾನಕ ದೃಶ್ಯದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ವ್ಯಾಪಕ ಗಮನ ಸೆಳೆದಿದೆ. ವಿಶ್ವ ಪರಂಪರೆಯ ತಾಣವಾಗಿರುವ ಮಾನಸ್ ರಾಷ್ಟ್ರೀಯ … Continued

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಲೆಗೆ ಟಿಎಂಸಿ ಧೂಳೀಪಟ ; ತಮಿಳುನಾಡಲ್ಲಿ ʼವಿಜಯʼ ಕ್ರಾಂತಿ, ಕೇರಳದಲ್ಲಿ ʼಕೈʼಗೆ ಜೈ, ಅಸ್ಸಾಂನಲ್ಲಿ ಬಿಜೆಪಿಗೆ ಮತ್ತೆ ಮಣೆ

 ನವದೆಹಲಿ:  ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದ್ದು, ಕೆಲವೆಡೆ ದಶಕಗಳ ಕಾಲ ಆಳ್ವಿಕೆ ನಡೆಸಿದ ನಾಯಕರನ್ನು ಮತದಾರರು ತಿರಸ್ಕರಿಸಿದ್ದು, ಹೊಸ ನಾಯಕತ್ವಕ್ಕೆ ಮನ್ನಣೆ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಸುದೀರ್ಘ ಆಡಳಿತಕ್ಕೆ ಅಂತಿಮ ತೆರೆ ಬಿದ್ದಿದೆ. 294 ಕ್ಷೇತ್ರಗಳ ಪೈಕಿ ಬಿಜೆಪಿ … Continued

ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಜಯದತ್ತ ಬಿಜೆಪಿ, ತಮಿಳುನಾಡಿನಲ್ಲಿ ವಿಜಯ ಕಮಾಲ್‌, ಕೇರಳದ ಕಾಂಗ್ರೆಸ್ಸಿಗೆ ಜೈ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ

ನವದೆಹಲಿ: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಡೆದ 2026 ರ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಆರಂಭವಾಗಿದೆ.  4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ರಾಜಕೀಯ ದಿಕ್ಕನ್ನು ಸೂಚಿಸುವ ಆರಂಭಿಕ ಟ್ರೆಂಡ್‌ಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಆಡಳಿತಾರೂಢ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯನ್ನು ಹಿಂದಿಕ್ಕಿ ಅಧಿಕಾರದತ್ತ ದಾಪುಗಾಲು ಇಡುತ್ತಿರುವುದು ಕಂಡುಬಂದಿದೆ.  … Continued

ಚುನಾವಣೆ : ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ಗೆಲ್ಲುವುದು ಯಾರು..? ಎಕ್ಸಿಟ್‌ ಪೋಲ್‌ ಹೇಳುವುದೇನು..?

ನವದೆಹಲಿ: ತಮಿಳುನಾಡು, ಕೇರಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗಳ ಮಹಾ ಸಮರ ಮುಕ್ತಾಯಗೊಂಡಿದೆ. ಮತಯಂತ್ರಗಳಲ್ಲಿ ಭದ್ರವಾಗಿದ್ದ ಅಭ್ಯರ್ಥಿಗಳ ಭವಿಷ್ಯದ ಸುಳಿವು ನೀಡುವ ‘ಎಕ್ಸಿಟ್ ಪೋಲ್’ಗಳು (ಮತಗಟ್ಟೆ ಸಮೀಕ್ಷೆ) ಇದೀಗ ಹೊರಬಿದ್ದಿದೆ. ತಮಿಳುನಾಡಿನಲ್ಲಿ ಡಿಎಂಕೆಯ ಭದ್ರಕೋಟೆಗೆ ನಟ ವಿಜಯ ಸವಾಲಾಗಲಿದ್ದಾರೆಯೇ? ಕೇರಳದಲ್ಲಿ ದಶಕಗಳ ಕಾಲ ನಡೆದಿದ್ದ ಅಧಿಕಾರ ಬದಲಾವಣೆಯ ಸಂಪ್ರದಾಯ ಮರಳಿ ಬರಲಿದೆಯೇ?  ಅಸ್ಸಾಂನಲ್ಲಿ ಬಿಜೆಪಿಯ ಅಶ್ವಮೇಧ … Continued

ವಿಧಾನಸಭೆ ಚುನಾವಣೆ : ಅಸ್ಸಾಂನಲ್ಲಿ 84.42%, ಕೇರಳದಲ್ಲಿ 75%, ಪುದುಚೇರಿಯಲ್ಲಿ 86.92%ರಷ್ಟು ಮತದಾನ

ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆ ಚುನಾವಣೆಯಲ್ಲಿ ಗುರುವಾರ (ಏಪ್ರಿಲ್ 9) ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನವು ಬಿಗಿ ಭದ್ರತೆ ಹಾಗೂ ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕಣ್ಗಾವಲಿನಲ್ಲಿ ನಡೆದಿದೆ. ಮೂರೂ ರಾಜ್ಯಗಳ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ … Continued

ಅಸ್ಸಾಂನಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್: ಬಿಜೆಪಿ ಸೇರಿದ ಸಂಸದ ಪ್ರದ್ಯುತ್ ಬೋರ್ಡೊಲೋಯ್

ನವದೆಹಲಿ: ಚುನಾವಣೆ ಗೋಷಣೆಯಾದ ಬೆನ್ನಲ್ಲೇ ಕಾಂಗ್ರೆಸಿಗೆ ದೊಡ್ಡ ಆಘಾತದಲ್ಲಿ ಅಸ್ಸಾಂನ ಲೋಕಸಭಾ ಸಂಸದ ಪ್ರದ್ಯುತ್ ಬೋರ್ಡೊಲೋಯ್ ಅವರು ಬುಧವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮತ್ತು ಅಸ್ಸಾಂ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ ಸೈಕಿಯಾ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾದರು. ಅಸ್ಸಾಂಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ 20 ದಿನಗಳು ಬಾಕಿ ಇರುವಾಗ … Continued

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿಗೆ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನವದೆಹಲಿ:  ಚುನಾವಣಾ ಆಯೋಗವು ಇಂದು, ಭಾನುವಾರ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕಗಳನ್ನು ಘೋಷಿಸಿದೆ. ಉಳಿದ ಎಲ್ಲಾ ರಾಜ್ಯಗಳಲ್ಲಿ ಚುನಾವಣೆಗಳು ಒಂದೇ ಹಂತದಲ್ಲಿ ನಡೆಯಲಿದ್ದರೆ, ಪಶ್ಚಿಮ ಬಂಗಾಳ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ. ಅಸ್ಸಾಂ, ಕೇರಳ ಮತ್ತು ಪುದುಚೇರಿಗೆ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ … Continued

ಅಸ್ಸಾಂನಲ್ಲಿ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಬಿಗ್ ಶಾಕ್: 3 ಶಾಸಕರು ಸೇರಿ ಐವರು ನಾಯಕರು ಬಿಜೆಪಿಗೆ ಸೇರ್ಪಡೆ

ಗುವಾಹತಿ: ಅಸ್ಸಾಂ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಉಂಟಾಗಿದೆ. ಕಾಂಗ್ರೆಸ್‌ನ ಮೂವರು ಪ್ರಮುಖ ಶಾಸಕರು ಹಾಗೂ ಟಿಎಂಸಿಯ ಓರ್ವ ನಾಯಕ ಇಂದು, ಗುರುವಾರ ಅಧಿಕೃತವಾಗಿ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ದೊಡ್ಡ ಶಾಕ್‌ ನೀಡಿದ್ದಾರೆ. ಗುರುವಾರ ಗುವಾಹತಿಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಶಾಸಕರುಗಳಾದ … Continued