ವೀಡಿಯೊ..| ಬೆಂಗಳೂರು : ವೇಗವಾಗಿ ಚಾಲನೆ ಮಾಡಿದ್ದನ್ನು ಆಕ್ಷೇಪಿಸಿದ್ದಕ್ಕೆ ಮಹಿಳೆ ಕೆನ್ನೆಗೆ ಬಲವಾಗಿ ಹೊಡೆದ ರ‍್ಯಾಪಿಡೋ ಚಾಲಕ ; ಕೆಳಕ್ಕೆ ಬಿದ್ದ ಮಹಿಳೆ

ಬೆಂಗಳೂರು : ಮೂರು ದಿನಗಳ ಹಿಂದೆ ನಡೆದ ಘಟನೆಯಲ್ಲಿ ಬೆಂಗಳೂರಿನ ಜಯನಗರ ಪ್ರದೇಶದ ಪಾದರಕ್ಷೆಗಳ ಶೋರೂಂ ಬಳಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕ ಅತಿವೇಗದ ಚಾಲನೆ ಮಾಡಿದ್ದಾನೆ ಎಂಬ ಕಾರಣಕ್ಕೆ ಮಹಿಳೆ ಆಕ್ಷೇಪ ವ್ಯಕ್ತಪಡಿಸಿದ ನಂತರ ವಾಗ್ವಾದ ಪ್ರಾರಂಭವಾಯಿತು ಎಂದು ವರದಿಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, … Continued

ಬೆಂಗಳೂರು | ಪುನರ್ವಸತಿ ಕೇಂದ್ರದಲ್ಲಿ ರೋಗಿಗೆ ದೊಣ್ಣೆಯಿಂದ ಅಮಾನುಷವಾಗಿ ಹಲ್ಲೆ : ವೀಡಿಯೊ ವೈರಲ್‌

ಬೆಂಗಳೂರು : ಬೆಂಗಳೂರಿನ ಬಳಿಯ ಪುನರ್ವಸತಿ ಕೇಂದ್ರವೊಂದರಲ್ಲಿ ರೋಗಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದ್ದು, ಅದರ ಆಘಾತಕಾರಿ ವೀಡಿಯೊವೊಂದು ಹೊರಹೊಮ್ಮಿದೆ. ಸಿಸಿಟಿವಿ ದೃಶ್ಯಗಳಲ್ಲಿ ನಾಲ್ವರು ಇತರರ ಸಮ್ಮುಖದಲ್ಲಿ ವ್ಯಕ್ತಿಯೊಬ್ಬ ಕೋಣೆಯೊಳಗೆ ಕೋಲಿನಿಂದ ರೋಗಿಯನ್ನು ಹೊಡೆಯುತ್ತಿರುವುದನ್ನು ತೋರಿಸಲಾಗಿದೆ. ರೋಗಿಯನ್ನು ಇಬ್ಬರು ಎಳೆದೊಯ್ದಿರುವುದು ಸಹ ಕಂಡುಬಂದಿದೆ. ಬೆಂಗಳೂರಿನಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ನೆಲಮಂಗಲದಲ್ಲಿರುವ ಖಾಸಗಿ … Continued

ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಆರೋಪ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ವಿರುದ್ಧ ದೂರು

ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್ ಎಂ ರೇವಣ್ಣ ಅವರು ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮಹಿಳಾ ಕಾರ್ಯಕರ್ತರೊಬ್ಬರು ಆರೋಪಿಸಿ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಕಾಂಗ್ರೆಸ್‌ ಕಾರ್ಯಕರ್ತೆ ನಂದಿನಿ ನಾಗರಾಜ ಅವರು ದೂರು ದಾಖಲಿಸಿದ್ದಾರೆ. ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರಿಗೂ … Continued

ಬಸ್‌ ನಲ್ಲೇ ಎಲೆ ಅಡಿಕೆ ತಿಂದು ಉಗಿದ ಮಹಿಳೆ ; ಪ್ರಶ್ನೆ ಮಾಡಿದ್ದಕ್ಕೆ ಕಂಡಕ್ಟರಗೆ ಹಿಗ್ಗಾಮುಗ್ಗಾ ಥಳಿತ…!

ತುಮಕೂರು : ಕ್ಷುಲ್ಲಕ ಕಾರಣಕ್ಕೆ ಸಾರಿಗೆ ಬಸ್ ನಿರ್ವಾಹಕ ಮತ್ತು ಪ್ರಯಾಣಿಕರ ಮಧ್ಯೆ ಜಗಳ ನಡೆದು, ನಿರ್ವಾಹಕನನ್ನು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ನಡೆದಿದೆ. ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಎಲೆ ಅಡಿಕೆ ತಿಂದ ಮಹಿಳೆ ಅದನ್ನು ಬಸ್ಸಿನ ಒಳಗೆ ಉಗಿದಿದ್ದರು. ಇದನ್ನು ನೋಡಿ ಪ್ರಶ್ನೆ ಮಾಡಿದ ಕಂಡಕ್ಟರ್‌ ಮೇಲೆ ಹಲ್ಲೆ ನಡೆಸಿ ಹಿಗ್ಗಾಮುಗ್ಗಾ … Continued

ವರದಕ್ಷಿಣೆ ಕಿರುಕುಳ ಆರೋಪ : ಪತಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸವೀತಿ

ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸವೀತಿ ಬೂರಾ ಅವರು ವರದಕ್ಷಿಣೆಗಾಗಿ ತನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಏಷ್ಯಾಡ್ ಕಂಚಿನ ವಿಜೇತ ಕಬಡ್ಡಿ ಆಟಗಾರ ಪತಿ ದೀಪಕ ಹೂಡಾ ವಿರುದ್ಧ ಹರಿಯಾಣದ ಹಿಸಾರ್‌ನಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಪತಿ ಹಾಗೂ ಪತ್ನಿ ಇಬ್ಬರೂ ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿದ್ದು, ಹಿಸಾರ್ ಮತ್ತು ರೋಹ್ಟಕ್ ಪೊಲೀಸ್ ಠಾಣೆಗಳಲ್ಲಿ … Continued

ಬೆಳಗಾವಿ | ಮರಾಠಿ ಮಾತನಾಡಲು ಬರಲ್ಲ ಎಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ : ಮತ್ತೊಬ್ಬ ಆರೋಪಿ ಬಂಧನ

ಬೆಳಗಾವಿ : ಮರಾಠಿ ಮಾತನಾಡಲು ಬರಲ್ಲ ಎಂದು ಹೇಳಿದ್ದಕ್ಕೆ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ಬಸ್‌ ನಿರ್ವಾಹಕ ಮಹಾದೇವ ಹುಕ್ಕೇರಿ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಮಾರಿಹಾಳ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಈಗಾಗಲೇ ಬಂಧಿಸಲಾಗಿದ್ದು, ಈಗ ಬಾಳೇಕುಂದ್ರಿಯ ಮೋಹನ ಹಂಚಿನಾಳ … Continued

ಬಾಸ್‌ ಜೊತೆ ಮಲಗಲು ನಿರಾಕರಿಸಿದ್ದಕ್ಕೆ ಪತ್ನಿಗೆ ತಲಾಖ್ ನೀಡಿದ ಗಂಡ..!

ಮುಂಬೈ: ಬಾಸ್‍ ಜೊತೆ ಮಲಗಲು ನಿರಾಕರಿಸಿದ್ದಕ್ಕಾಗಿ ವ್ಯಕ್ತಿಯೊಬ್ಬ ಪತ್ನಿಗೆ ತ್ರಿವಳಿ ತಲಾಖ್(Talaq Case) ನೀಡಿದ ವಿದ್ಯಮಾನ ವರದಿಯಾಗಿದೆ. ಆರೋಪಿ ಪತಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿದ್ದು, ಈತನ ವಿರುದ್ಧ ಮುಂಬೈನ ಕಲ್ಯಾಣ ಪ್ರಕರಣ ದಾಖಲಾಗಿದೆ. 45 ವರ್ಷದ ವ್ಯಕ್ತಿಯೊಬ್ಬ ತನ್ನ ಎರಡನೇ 28 ವರ್ಷದ ಪತ್ನಿಗೆ ಪಾರ್ಟಿಯಲ್ಲಿ ತನ್ನ ಬಾಸ್‍ನೊಂದಿಗೆ ಮಲಗಲು ಸೂಚಿಸಿದ್ದಾನೆ, ಆದರೆ ಆಕೆ ನಿರಾಕರಿಸಿದ್ದಾಳೆ … Continued

ಬೆಳಗಾವಿ: ಹಿಂಡಲಗಾ ಜೈಲಿನಲ್ಲಿ ಸಹ ಕೈದಿ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಸಹಕೈದಿಯೊಬ್ಬನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಈ ಪ್ರಕರಣದಲ್ಲಿ ಬಂಧಿಯಾಗಿದ್ದ ಆರೋಪಿ ಮೇಲೆ ಜೈಲಿನಲ್ಲಿ ಹಲ್ಲೆ ಮಾಡಲಾಗಿದೆ. ಬಿಹಾರದ ಮೂಲದ ಸದ್ಯ ಬೆಳಗಾವಿ ರಾಮತೀರ್ಥನಗರ ನಿವಾಸಿ ಹಿತೇಶಕುಮಾರ ಚವಾಣ ಹಲ್ಲೆಗೆ ಒಳಗಾದ ಕೈದಿಯಾಗಿದ್ದಾನೆ. ಇನ್ನೊಂದು ಪ್ರಕರಣದಲ್ಲಿ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಾದ ಬಸವರಾಜ … Continued

ಬೆಳಗಾವಿ ಕೋರ್ಟ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ : ಅಲ್ಲಿದ್ದವರಿಂದ ಥಳಿತ

ಬೆಳಗಾವಿ: ವಿಚಾರಣೆಗಾಗಿ ಕರೆತಂದಿದ್ದಾಗ ಕೈದಿಯೊಬ್ಬ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಜಯೇಶ ಪೂಜಾರಿ ಎಂಬಾತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತಂದಾಗ ನಟೋರಿಯಸ್‌ ಪಾತಕಿ ದಕ್ಷಿಣ ಕನ್ನಡ ಮೂಲದ ಜಯೇಶ ಪೂಜಾರಿ ಪಾಕ್‌ ಪರ ಘೋಷಣೆಗಳನ್ನು ಕೂಗಿದ್ದಾನೆ. … Continued

ಬೆಳಗಾವಿ : ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ಮನೆ ಮಾಲೀಕ…!

ಬೆಳಗಾವಿ : ಅಂಗನವಾಡಿ ಮಕ್ಕಳು ಪಕ್ಕದ ಮನೆಯ ಹೂವು ಕಿತ್ತಿದ್ದಾರೆ ಎಂಬ ಕಾರಣಕ್ಕೆ ಸಹಾಯಕಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಅವರ ಮೂಗನ್ನು ಕತ್ತರಿಸಿದ ಘಟನೆ ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಅಂಗನವಾಡಿ ಸಹಾಯಕಿ ಸುಗಂಧಾ ಮೋರೆ (50) ಎಂಬವರ ಮೇಲೆ ಹಲ್ಲೆ ನಡೆಸಿ ಮೂಗು ಕತ್ತರಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ … Continued