ಅವರು 4ನೇ ತರಗತಿಯಲ್ಲಿದ್ದಾಗ ಹೊಡೆದಾಡಿಕೊಂಡಿದ್ರು… ಈಗ 50 ವರ್ಷಗಳ ನಂತರ ಭೇಟಿಯಾದಾಗ ಥಳಿಸಿ ಸೇಡು ತೀರಿಸಿಕೊಂಡ್ರು…!

ಕಾಸರಗೋಡು : ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಅಸಾಮಾನ್ಯ ಘಟನೆಯೊಂದು ವರದಿಯಾಗಿದೆ. 62 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇದು 50 ವರ್ಷದ ಹಿಂದಿನ ಬಾಲ್ಯದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಇಬ್ಬರು ಸೇರಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕೃಷ್ಣನ್ ಎಂಬವರ … Continued

ವೀಡಿಯೊ…| ಮಾಲೀಕನ ಮೇಲೆ ಹಲ್ಲೆ ಮಾಡಿದ ಮೂವರು ದರೋಡೆಕೋರರ ಮೇಲೆ ಪ್ರತಿದಾಳಿ ನಡೆಸಿ ಓಡಿಸಿದ ನಾಯಿ…!

ಮೋರ್ಬಿ (ಗುಜರಾತ್) : ನಿಷ್ಠೆ ಮತ್ತು ಅಸಾಧಾರಣ ಧೈರ್ಯ ತೋರಿದ ಘಟನೆಯೊಂದರಲ್ಲಿ , ಗುಜರಾತ್‌ನ ಮೋರ್ಬಿ ಜಿಲ್ಲೆಯಲ್ಲಿ ಜರ್ಮನ್ ಶೆಫರ್ಡ್ ನಾಯಿ ತನ್ನ ಮಾಲೀಕನನ್ನು ಮೂವರು ಆಕ್ರಮಣಕಾರರು ನಡೆಸಿದ ಹಿಂಸಾತ್ಮಕ ದರೋಡೆ ಪ್ರಯತ್ನದಿಂದ ರಕ್ಷಿಸಿದೆ. ಬೆಳಗಿನ ಜಾವ ನಡೆದ ಇಡೀ ಘಟನೆಯು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ ಮತ್ತು ನಾಯಿ ದಾಳಿಕೋರರ ಮೇಲೆ ದಾಳಿ ಮಾಡಿದ ನಂತರ … Continued

ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ ಬಾಘೇಲ್ ಮನೆಯಲ್ಲಿ ಶೋಧ ನಡೆಸಿದ್ದಕ್ಕೆ ಇಡಿ (ED) ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಗುಂಪು…!

ನವದೆಹಲಿ: ಆಪಾದಿತ ಮದ್ಯ ಹಗರದಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಪುತ್ರ ತನಿಖೆ ಎದುರಿಸುತ್ತಿದ್ದು, ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಅವರ ನಿವಾಸದಲ್ಲಿ ಶೋಧ ನಡೆಸಿದ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ಮೇಲೆ ಜನರ ಗುಂಪೊಂದು ದಾಳಿ ನಡೆಸಿದೆ. ಸೋಮವಾರ ಮುಂಜಾನೆ, ಇಡಿಯು ಆಪಾದಿತ ಮದ್ಯ ಹಗರಣದ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಬೂಪೇಶ … Continued

ಬೆಳಗಾವಿ : ಆಟೋ ಚಾಲಕನಿಂದ ಹಲ್ಲೆಗೊಳಗಾದ ಕೆಲವೇ ಕ್ಷಣಗಳಲ್ಲಿ ಗೋವಾದ ಮಾಜಿ ಶಾಸಕ ಸಾವು

ಬೆಳಗಾವಿ : ಬೆಳಗಾವಿಗೆ ಬಂದಿದ್ದ ಗೋವಾದ ಮಾಜಿ ಶಾಸಕರ ಲಾವೋ ಮಾಮಲೇದಾರ (69) ಜೊತೆಗೆ ಕ್ಷುಲ್ಲಕ ಕರಣಕ್ಕೆ ಜಗಳ ಆರಂಭಿಸಿದ ಆಟೋ ಚಾಲಕ ಅವರ ಮೇಲೆ ಹಲ್ಲೆ ಮಾಡಿದ್ದು, ನಂತರ ಮಾಜಿ ಶಾಸಕರು ಅಲ್ಲಿಂದ ಲಾಡ್ಜ್ ಒಳಗೆ ಬರುವಾಗ ಕುಸಿದು ಬಿದ್ದು ಸಾವಿಗೀಡಾದ ಘಟನೆ ಶನಿವಾರ ನಡೆದಿದೆ. ಬೆಳಗಾವಿಯ ಖಡೇಬಜಾರ್ ಮಾರುಕಟ್ಟೆಯ ಶ್ರೀನಿವಾಸ ವಸತಿ ಗೃಹ … Continued

2024ರಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ 2,200 ಹಿಂಸಾಚಾರ ಪ್ರಕರಣಗಳು : ಸರ್ಕಾರ

ನವದೆಹಲಿ: 2024 ರಲ್ಲಿ ವಿಶೇಷವಾಗಿ ನೆರೆಯ ದೇಶದಲ್ಲಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರ ಪತನದ ನಂತರ ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ 2,200 ಹಿಂಸಾಚಾರದ ಪ್ರಕರಣಗಳು ನಡೆದಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಶುಕ್ರವಾರ ಬಹಿರಂಗಪಡಿಸಿದೆ. ಇದೇ ಅವಧಿಯಲ್ಲಿ ಪಾಕಿಸ್ತಾನದಲ್ಲಿ ಇಂತಹ 112 ಪ್ರಕರಣಗಳು ವರದಿಯಾಗಿವೆ ಎಂದು ಸರ್ಕಾರ ಗಮನಿಸಿದೆ. ರಾಜ್ಯಸಭೆಯಲ್ಲಿ ಅಂಕಿಅಂಶಗಳನ್ನು … Continued

ಬಾಂಗ್ಲಾದೇಶ | ಬಂಧಿತ ಹಿಂದೂ ಸ್ವಾಮೀಜಿಯ ವಕೀಲರ ಮೇಲೆ ದಾಳಿ ; ಐಸಿಯುನಲ್ಲಿ ಚಿಕಿತ್ಸೆ : ಇಸ್ಕಾನ್

ನವದೆಹಲಿ: ಬಂಧಿತ ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಬ್ರಹ್ಮಚಾರಿಯ ಪರ ವಾದಿಸುತ್ತಿರುವ ಬಾಂಗ್ಲಾದೇಶದ ವಕೀಲರ ಮೇಲೆ “ಇಸ್ಲಾಮಿಸ್ಟ್‌ಗಳು ಅವರ ಮನೆಯಲ್ಲಿ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ” ಮತ್ತು ಪ್ರಸ್ತುತ ಅವರು ತೀವ್ರ ನಿಗಾ ಘಟಕದಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಇಸ್ಕಾನ್ ಇಂಡಿಯಾ ಹೇಳಿಕೊಂಡಿದೆ. ದೇಶದ್ರೋಹದ ಆರೋಪದ ಮೇಲೆ ಸನ್ಯಾಸಿಯ ಬಂಧನದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ ಹಿಂಸಾಚಾರದ … Continued

“ನಾ ಡ್ರೈವರ್ ” ಹಾಡಿನ ಗಾಯಕನಿಂದ ಇಬ್ಬರ ಮೇಲೆ ಹಲ್ಲೆ ; ಆರೋಪ

ಬೆಳಗಾವಿ : ನೋಡಿಕೊಂಡು ಕಾರು ಚಲಾಯಿಸಿ ಎಂದಿದ್ದಕ್ಕೆ “ನಾ ಡ್ರೈವರ್” ಎಂಬ ಹಾಡಿನ ಗಾಯಕ ಮಾಳು ನಿಪನಾಳ ಓರ್ವ ವ್ಯಕ್ತಿ ಮತ್ತು ಆತನ ಸಹೋದರಿ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಶೇಖಪ್ಪ ಹಕ್ಯಾಗೋಳ ಮತ್ತು ಅವರ ಸಹೋದರಿ ಚಿಕ್ಕೋಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ರಾಯಬಾಗ ತಾಲೂಕು ನಿಪನಾಳ ಗ್ರಾಮದ ಹೊರ ವಲಯದಲ್ಲಿ ಬೈಕ್ … Continued

ಸೆಲ್ಫಿ ತೆಗೆಯಲು ಹೋಗಿ ಕಾಡಾನೆಯಿಂದ ಸಾವಿಗೀಡಾದ ಯುವಕ…!

ಮುಂಬೈ : ಗುರುವಾರ (ಅಕ್ಟೋಬರ್ 24) ನಡೆದ ಅಹಿತಕರ ಘಟನೆಯಲ್ಲಿ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಮುಟ್ನೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ 24 ವರ್ಷದ ವ್ಯಕ್ತಿಯೊಬ್ಬರು ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಡಾನೆ ದಾಳಿಯಿಂದ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ವ್ಯಕ್ತಿ ಸಮೀಪ ಹೋಗಿ ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಆನೆ ಆತನ ಮೇಲೆ ದಾಳಿ … Continued

ಟ್ರೇನಿ ಸೇನಾ ಅಧಿಕಾರಿಗಳ ಮೇಲೆ ದಾಳಿ-ಹಲ್ಲೆ ; ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ಭೋಪಾಲ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಮಂಗಳವಾರ ತಡರಾತ್ರಿ ಇಬ್ಬರು ಯುವ ಸೇನಾ ಅಧಿಕಾರಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಲಾಗಿದ್ದು, ಅವರ ಸ್ನೇಹಿತೆಯ ಮೇಲೆ ಬಂದೂಕು ತೋರಿಸಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ವರದಿಯಾಗಿದೆ. ದಾಳಿಕೋರರು ದರೋಡೆ ಮಾಡುವ ಉದ್ದೇಶದಿಂದ ವಿಹಾರಕ್ಕೆ ಹೊರಟಿದ್ದ ಗುಂಪಿನ ಮೇಲೆ ದಾಳಿ ನಡೆಸಿದ್ದು, ದಾಳಿಕೋರರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಹಾಗೂ ಅವರಲ್ಲಿ ಒಬ್ಬ ಕ್ರಿಮಿನಲ್ … Continued

ವೀಡಿಯೊ…| ಚಿಕ್ಕಮಗಳೂರು : ಕರ್ತವ್ಯ ನಿರತ ವೈದ್ಯರ ಮೇಲೆ ಚಪ್ಪಲಿ ಎಸೆದ ಮಹಿಳೆ…!

ಚಿಕ್ಕಮಗಳೂರು: ಚಿಕ್ಕಮಗಳೂರಿನ ಆಸ್ಪತ್ರೆಯೊಂದರಲ್ಲಿ ವೈದ್ಯರೊಬ್ಬರ ಮೇಲೆ ಮಹಿಳೆಯೊಬ್ಬರು ಚಪ್ಪಲಿ ಎಸೆದ ಘಟನೆ ನಡೆದಿದ್ದು,  ಭಾರೀ ಆಕ್ರೋಶ ವ್ಯಕ್ತವಾಗಿದೆ. ಕರ್ತವ್ಯದಲ್ಲಿದ್ದ ವೈದ್ಯರೊಬ್ಬರ ಮೇಲೆ ಮಹಿಳೆಯೊಬ್ಬಳು ಮೊದಲು ಚಪ್ಪಲಿ ಎಸೆದಿದ್ದಾಳೆ. ನಂತರ ಮಹಿಳೆಯೊಂದಿಗಿನ ಗುಂಪೊಂದು ವೈದ್ಯರನ್ನು ಕರ್ತವ್ಯ ನಿರ್ವಹಿಸಲು ತೊಂದರೆ ಪಡಿಸಿ ಅವರ ಅಂಗಿಯ ಕಾಲರ್‌ ಅನ್ನು ಹಿಡುದು ಎಳೆದಾಡಿದೆ ಎಂದು ವರದಿಯಾಗಿದೆ. ಈ ವೀಡಿಯೊ ವೈರಲ್‌ ಆಗಿದ್ದು, … Continued