ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಮುಂದುವರಿದ ಹಿಂಸಾಚಾರ: ಮತ್ತೊಬ್ಬ ಹಿಂದೂವಿನ ಹತ್ಯೆ

ಢಾಕಾ : ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಅಸ್ಥಿರತೆಯ ನಡುವೆ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಮುಂದುವರಿದಿದೆ. ಭಾನುವಾರ (ಜನವರಿ 11) ರಾತ್ರಿ ಫೆನಿ ಜಿಲ್ಲೆಯ ದಗೊನ್ಬುಯಾನ್ ಪ್ರದೇಶದಲ್ಲಿ ಸಮೀರಕುಮಾರ ದಾಸ್ (28) ಎಂಬ ಆಟೋ ಚಾಲಕನನ್ನು ಗುಂಪೊಂದು ಹೊಡೆದು ಕೊಂದಿದೆ. ಈ ಘಟನೆಯೊಂದಿಗೆ, ಕಳೆದ 23 ದಿನಗಳಲ್ಲಿ ನಡೆದ 7ನೇ ಹಿಂದೂ ಹತ್ಯೆ ಇದಾಗಿದೆ. ದಾಳಿಕೋರರು … Continued

ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನಿವಾಸದ ಮೇಲೆ ದಾಳಿ: ಓರ್ವ ವಶಕ್ಕೆ

ವಾಷಿಂಗ್ಟನ್ : ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರ ಓಹಿಯೋದಲ್ಲಿರುವ ನಿವಾಸದ ಮೇಲೆ ಸೋಮವಾರ ದಾಳಿ ನಡೆದಿದ್ದು, ಈ ಸಂಬಂಧ ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೋಗಳಲ್ಲಿ ವ್ಯಾನ್ಸ್ ಅವರ ಮನೆಯ ಕಿಟಕಿ ಗಾಜುಗಳು ಪುಡಿಯಾಗಿರುವುದು ಕಂಡುಬಂದಿದೆ. ಆದರೆ, ಈ ದಾಳಿಯ ಹಿಂದಿನ … Continued

ಶಿಕ್ಷಣಾಧಿಕಾರಿಗೆ ಬೆಲ್ಟಿನಿಂದ ಹೊಡೆದ ಶಾಲಾ ಮುಖ್ಯ ಶಿಕ್ಷಕ ; ವೀಡಿಯೊ ವೈರಲ್‌

ಸೀತಾಪುರ : ಶಾಲಾ ಮುಖ್ಯೋಪಾಧ್ಯಾಯರೊಬ್ಬರು ಮೇಲೆ ಕಚೇರಿಯೊಳಗೆ ಬ್ಲಾಕ್‌ ಶಿಕ್ಷಣ ಅಧಿಕಾರಿ (ಬಿಇಒ)ಗೆ ಬೆಲ್ಟ್‌ನಿಂದ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ನಡೆದ ನಂತರ ಆರೋಪಿ ಶಿಕ್ಷಕನನ್ನು ತಕ್ಷಣವೇ ಪೊಲೀಸರಿಗೆ ಒಪ್ಪಿಸಲಾಯಿತು ಮತ್ತು ಕರ್ತವ್ಯದಿಂದ ಅಮಾನತುಗೊಳಿಸಲಾಯಿತು. ಮಂಗಳವಾರ ಸಂಜೆ ಬಿಇಒ ಅಖಿಲೇಶ ಪ್ರತಾಪ ಸಿಂಗ್ … Continued

ವೀಡಿಯೊ…| ವಂಡರ್‌ ನಾಯಿ : ಚಿರತೆ ಜೊತೆಗಿನ ಬೀದಿ ಹೋರಾಟದಲ್ಲಿ ಚಿರತೆಯನ್ನೇ 300 ಮೀಟರ್ ಎಳೆದೊಯ್ದ ಈ ಬೀದಿ ನಾಯಿ…!

ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಬೀದಿ ನಾಯಿ ಮತ್ತು ಚಿರತೆ ಮುಖಾಮುಖಿ ಹೋರಾಟದಲ್ಲಿ ಬೀದಿ ನಾಯಿಯು ಚಿರತೆಯನ್ನು ‘ಸೋಲಿಸಿ’ 300 ಮೀಟರ್‌ಗಳಷ್ಟು ದೂರು ಎಳೆದುಕೊಂಡು ಹೋಗಿದ್ದು, ಈ ವೀಡಿಯೊ ಈಗ ಭಾರಿ ವೈರಲ್‌ ಆಗಿದೆ. ಈ ಪ್ರಸಂಗವು ನಾಸಿಕದ ನಿಫಾಡ್‌ನಲ್ಲಿ ನಡೆದಿದ್ದು, ಪ್ರತ್ಯಕ್ಷದರ್ಶಿಗಳ ಪ್ರಕಾರ, ಈ ವಾರದ ಆರಂಭದಲ್ಲಿ ಚಿರತೆ ಆ ಪ್ರದೇಶಕ್ಕೆ ದಾರಿ ತಪ್ಪಿ ಬಂದಿದ್ದಾಗ … Continued

ಕಾಲೇಜಿನ ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್ ; ಹಲ್ಲೆ ನಡೆಸಿ, ವಿದ್ಯುತ್ ಶಾಕ್ ನೀಡಿದ ಹಿರಿಯ ವಿದ್ಯಾರ್ಥಿಗಳು…!

ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಸರ್ಕಾರಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬನಿಗೆ ಇತ್ತೀಚೆಗೆ ಹಿರಿಯ ವಿದ್ಯಾರ್ಥಿಗಳ ಗುಂಪೊಂದು ರ‍್ಯಾಕಿಂಗ್ ಮಾಡುವಾಗ ಹಲ್ಲೆ ನಡೆಸಿ, ನಂತರ ವಿದ್ಯುತ್ ಶಾಕ್ ನೀಡಿರುವ ಆರೋಪ ಕೇಳಿಬಂದಿದೆ. ಮೂಲಗಳ ಪ್ರಕಾರ, ದಾಚೆಪಲ್ಲಿ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಇದರ ವೀಡಿಯೊ ವೈರಲ್ ಆಗಿದೆ.ವಿದ್ಯಾರ್ಥಿಯನ್ನು ಹಾಸ್ಟೆಲ್‌ಗೆ ಕರೆದೊಯ್ದು ಹಲ್ಲೆ ನಡೆಸಿ ವಿದ್ಯುತ್ … Continued

ಧರ್ಮಸ್ಥಳ: ನಾಲ್ವರು ಯೂ ಟ್ಯೂಬರ್‌ ಗಳ ಮೇಲೆ ಹಲ್ಲೆ

ಮಂಗಳೂರು : ವೀಡಿಯೊ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಂತರ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್‌ ನಡೆಸಿದ್ದಾರೆ. ಸಂದರ್ಶನ ನಡೆಸುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದಿದೆ. ಈ ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಯೂ ಟ್ಯೂಬರ್‌ಗಳಾದ ಅಜಯ, … Continued

ಅಧಿಕಾರಿಯನ್ನು ಕಚೇರಿಯಿಂದ ಹೊರಗೆಳೆದು ಥಳಿತ, ಮುಖಕ್ಕೆ ಒದ್ದು ಹಲ್ಲೆ : ಮೂವರ ಬಂಧನ-ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಭುವನೇಶ್ವರ: ಭುವನೇಶ್ವರ ಮಹಾನಗರ ಪಾಲಿಕೆ (ಬಿಎಂಸಿ) ಕಚೇರಿಯಲ್ಲಿ ಹಿರಿಯ ಅಧಿಕಾರಿಯ ಮೇಲೆ ಗುಂಪೊಂದು ಸೋಮವಾರ ಹಲ್ಲೆ ನಡೆಸಿದ ನಂತರ ಭಾರೀ ನಾಟಕೀಯ ವಾತಾವರಣ ನಿರ್ಮಾಣವಾಯಿತು. ಆಘಾತಕಾರಿ ವಿಡಿಯೋದಲ್ಲಿ, ಬಿಎಂಸಿಯ ಹೆಚ್ಚುವರಿ ಆಯುಕ್ತ ರತ್ನಾಕರ್ ಸಾಹೂ ಅವರನ್ನು ಆ ವ್ಯಕ್ತಿಗಳು ತಮ್ಮ ಕಚೇರಿಯಿಂದ ಹೊರಗೆ ಎಳೆದುಕೊಂಡು ಹೋಗಿ, ಪದೇ ಪದೇ ಹೊಡೆದು, ಮುಖಕ್ಕೆ ಒದೆಯುತ್ತಿರುವುದು ಕಂಡುಬಂದಿದೆ. ಕುಂದುಕೊರತೆ … Continued

ಅವರು 4ನೇ ತರಗತಿಯಲ್ಲಿದ್ದಾಗ ಹೊಡೆದಾಡಿಕೊಂಡಿದ್ರು… ಈಗ 50 ವರ್ಷಗಳ ನಂತರ ಭೇಟಿಯಾದಾಗ ಥಳಿಸಿ ಸೇಡು ತೀರಿಸಿಕೊಂಡ್ರು…!

ಕಾಸರಗೋಡು : ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಅಸಾಮಾನ್ಯ ಘಟನೆಯೊಂದು ವರದಿಯಾಗಿದೆ. 62 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇದು 50 ವರ್ಷದ ಹಿಂದಿನ ಬಾಲ್ಯದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಇಬ್ಬರು ಸೇರಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕೃಷ್ಣನ್ ಎಂಬವರ … Continued

ವೀಡಿಯೊ…| ಮಾಲೀಕನ ಮೇಲೆ ಹಲ್ಲೆ ಮಾಡಿದ ಮೂವರು ದರೋಡೆಕೋರರ ಮೇಲೆ ಪ್ರತಿದಾಳಿ ನಡೆಸಿ ಓಡಿಸಿದ ನಾಯಿ…!

ಮೋರ್ಬಿ (ಗುಜರಾತ್) : ನಿಷ್ಠೆ ಮತ್ತು ಅಸಾಧಾರಣ ಧೈರ್ಯ ತೋರಿದ ಘಟನೆಯೊಂದರಲ್ಲಿ , ಗುಜರಾತ್‌ನ ಮೋರ್ಬಿ ಜಿಲ್ಲೆಯಲ್ಲಿ ಜರ್ಮನ್ ಶೆಫರ್ಡ್ ನಾಯಿ ತನ್ನ ಮಾಲೀಕನನ್ನು ಮೂವರು ಆಕ್ರಮಣಕಾರರು ನಡೆಸಿದ ಹಿಂಸಾತ್ಮಕ ದರೋಡೆ ಪ್ರಯತ್ನದಿಂದ ರಕ್ಷಿಸಿದೆ. ಬೆಳಗಿನ ಜಾವ ನಡೆದ ಇಡೀ ಘಟನೆಯು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ ಮತ್ತು ನಾಯಿ ದಾಳಿಕೋರರ ಮೇಲೆ ದಾಳಿ ಮಾಡಿದ ನಂತರ … Continued

ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ ಬಾಘೇಲ್ ಮನೆಯಲ್ಲಿ ಶೋಧ ನಡೆಸಿದ್ದಕ್ಕೆ ಇಡಿ (ED) ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಗುಂಪು…!

ನವದೆಹಲಿ: ಆಪಾದಿತ ಮದ್ಯ ಹಗರದಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಪುತ್ರ ತನಿಖೆ ಎದುರಿಸುತ್ತಿದ್ದು, ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಅವರ ನಿವಾಸದಲ್ಲಿ ಶೋಧ ನಡೆಸಿದ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ಮೇಲೆ ಜನರ ಗುಂಪೊಂದು ದಾಳಿ ನಡೆಸಿದೆ. ಸೋಮವಾರ ಮುಂಜಾನೆ, ಇಡಿಯು ಆಪಾದಿತ ಮದ್ಯ ಹಗರಣದ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಬೂಪೇಶ … Continued