ದೆಹಲಿ ಸಿಎಂ ನಿವಾಸದಲ್ಲಿ ತನ್ನ ಮೇಲೆ ಹಲ್ಲೆ ; ಎಎಪಿ ನಾಯಕಿ ಸ್ವಾತಿ ಮಲಿವಾಲ್ ಎಂದು ಹೇಳಿಕೊಂಡ ಮಹಿಳೆಯಿಂದ ಪೊಲೀಸರಿಗೆ 2 ಕರೆಗಳು : ಮೂಲಗಳು

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರು ಸೋಮವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕ (ಪಿಎ) ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪಿಸಿಆರ್ ಗೆ ಕರೆ ಮಾಡಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಬೆಳಗ್ಗೆ ದೆಹಲಿ ಪೊಲೀಸರಿಗೆ ಸತತ ಎರಡು ಕರೆಗಳು ಬಂದಿದ್ದು, ಇವೆರಡೂ ಸಿವಿಲ್ … Continued

ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

ಹುಬ್ಬಳ್ಳಿ: ಕಾಲೇಜ್‌ ಕ್ಯಾಂಪಸ್‌ ಒಳಗೆ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಬಿವಿಬಿ ಕಾಲೇಜಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಎಂಸಿಎ ವಿದ್ಯಾರ್ಥಿನಿಯನ್ನು ನೇಹಾ ಹಿರೇಮಠ ಎಂದು ಗುರುತಿಸಲಾಗಿದ್ದು, ಈಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ಎಂದು ಹೇಳಲಾಗಿದೆ. ಈ ದುಷ್ಕೃತ್ಯ ಎಸೆಗಿರುವ … Continued

ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು : ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಹೇಳಿಕೆ ನೀಡಿರುವ ಈಶಾನ್ಯ ವಿಭಾಗ ಡಿಸಿಪಿ  ಅವರು, ಘಟನೆಗೆ ಸಂಬಂಧಪಟ್ಟಂತೆ ನಾಲ್ವರನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ಕೂಡ ಮಾಡಲಾಗಿದೆ. ಘಟನೆಯಲ್ಲಿ ನಾಲ್ವರು ಭಾಗಿಯಾಗಿರುವುದು ಗೊತ್ತಾಗಿದೆ. ನಾಲ್ವರಲ್ಲಿ ಇಬ್ಬರು … Continued

ವಿಜಯವಾಡ : ರೋಡ್ ಶೋ ವೇಳೆ ಕಲ್ಲೆಸೆತ ; ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಗೆ ಗಾಯ

ವಿಜಯವಾಡ: ದೇಶಾದ್ಯಂತ ಲೋಕಸಭಾ ಚುನಾವಣೆಯ ಪ್ರಚಾರ ಬಿರುಸು ಪಡೆಯುತ್ತಿರುವಂತೆಯೇ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಶನಿವಾರ ಸಂಜೆ ರೋಡ್ ಶೋ ವೇಳೆಯಲ್ಲಿ ದುಷ್ಕರ್ಮಿಗಳು ಕಲ್ಲು ತೂರಿದ್ದರಿಂದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಎಡಗಣ್ಣಿನ ಮೇಲ್ಬಾಗದಲ್ಲಿ ಗಾಯವಾಗಿರುವ ಫೋಟೋ, ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮೇಮಂತ ಸಿದ್ದಂ” ಬಸ್ … Continued

ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದಿಲ್ಲ : ಸಚಿವ ದಿನೇಶ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ಬೆಂಗಳೂರಿನ ನಗರತಪೇಟೆಯಲ್ಲಿ ಲೌಡ್‌ ಸ್ಪೀಕರಿನಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೆ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣದ ಬಗ್ಗೆ ಸಚಿವ ದಿನೇಶ ಗುಂಡೂರಾವ್ ಸ್ಪಷ್ಟನೆ ನೀಡಿದ್ದು, ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ ಎಂದು ತಿಳಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಚೋದನೆಗೆ ಒಳಗಾಗದೆ ವಿವೇಚನೆಯಿಂದ ಯೋಚಿಸಿ. … Continued

ಲೌಡ್ ಸ್ಪೀಕರಿನಲ್ಲಿ ಹನುಮಾನ ಚಾಲೀಸಾ ಹಾಕಿದ್ದಕ್ಕಾಗಿ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಮೂವರ ಬಂಧನ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಅಂಗಡಿಯಲ್ಲಿ ಲೌಡ್ ಸ್ಪೀಕರ್ ಹಾಕಿದ್ದಕ್ಕಾಗಿ ಆಕ್ಷೇಪ ವ್ಯಕ್ತಪಡಿಸಿ ಯುವಕರ ಗುಂಪೊಂದು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ ಸಿದ್ದನಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಭಾನುವಾರ ಸಂಜೆ … Continued

ಬೆಳಗಾವಿ : ಪ್ರೇಮಿಗಳೆಂದು ತಿಳಿದು ಅಕ್ಕ-ತಮ್ಮನನ್ನು ಕೂಡಿ ಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು

ಬೆಳಗಾವಿ : ಬೆಳಗಾವಿ ಪ್ರವೇಶಿಸುವ ಕೋಟೆ ಕೆರೆಯ ದಡದಲ್ಲಿ ಕುಳಿತಿದ್ದವರನ್ನು ಶೆಡ್ ನೊಳಗೆ ಕೂಡಿಹಾಕಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಗಾಂಜಾ ನಶೆಯಲ್ಲಿ ಏಳು ಜನ ಅನ್ಯಕೋಮಿನ ಯುವಕರು ಸೇರಿ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಹೊರವಲಯದ ಯಮನಪುರದ ಸಚಿನ್ ಲಮಾಣಿ (22), ಮುಸ್ಕಾನ್ ಪಟೇಲ್ (23) … Continued

ಬೆಳಗಾವಿ : ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಆರೋಪಿ ಬಂಧನ

ಬೆಳಗಾವಿ : ಕುಡುಗೋಲಿನಿಂದ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಬಸುರ್ತೆ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಅಂಗನವಾಡಿ ಮಕ್ಕಳು ತನ್ನ ಮನೆಯ ಹೂವುಗಳನ್ನು ಕಿತ್ತಿದ್ದಾರೆಂದು ಕೋಪಗೊಂಡ ಮನೆಯ ಮಾಲೀಕ ಕಲ್ಯಾಣಿ ಜ್ಯೋತಿಬಾ ಮೋರೆ ಎಂಬಾತ ಜಗಳ ತೆಗೆದು ಕುಡುಗೋಲಿನಿಂದ … Continued

ಖಲಿಸ್ತಾನ್ ವಿರುದ್ಧ ಮಾತನಾಡಿದ ನ್ಯೂಜಿಲೆಂಡ್ ರೇಡಿಯೋ ಜಾಕಿ ಕೊಲ್ಲಲು ಸಂಚು ರೂಪಿಸಿದ 3 ಅಪರಾಧಿಗಳಿಗೆ ಶಿಕ್ಷೆ

ಖಲಿಸ್ತಾನಿ ಸಿದ್ಧಾಂತದ ವಿರುದ್ಧ ದನಿಯೆತ್ತಿದ್ದ ಆಕ್ಲೆಂಡ್ ಮೂಲದ ಸಿಖ್ ರೇಡಿಯೋ ಜಾಕಿಯೊಬ್ಬರ ಹತ್ಯೆಗೆ ಯತ್ನಿಸಿದ ಆರೋಪದಲ್ಲಿ ನ್ಯೂಜಿಲೆಂಡ್‌ನಲ್ಲಿ ಮೂವರು ಭಾರತೀಯ ಮೂಲದ ವ್ಯಕ್ತಿಗಳಿಗೆ ಶಿಕ್ಷೆ ವಿಧಿಸಲಾಗಿದೆ. ದಿ ನ್ಯೂಜಿಲೆಂಡ್ ಹೆರಾಲ್ಡ್ ಪ್ರಕಾರ, ಹರ್ನೆಕ್ ಸಿಂಗ್ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ 2020 ಡಿಸೆಂಬರ್ 23ರಂದು ಆಕ್ಲೆಂಡ್‌ನ ವಾಟಲ್ ಡೌನ್ಸ್ ಪ್ರದೇಶದಲ್ಲಿ ಮೂವರು ಆರೋಪಿಗಳು ಹಲ್ಲೆ ನಡೆಸಿದ್ದರು … Continued

ಮೂಡಿಗೆರೆ : ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆ ಸಿಬ್ಬಂದಿ ಸಾವು

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಬುಧವಾರ ನಡೆದ ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆಯ ಸಿಬ್ಬಂದಿಯೇ ಮೃತಪಟ್ಟ ಘಟನೆ ನಡೆದ ವರದಿಯಾಗಿದೆ. ಮೃತರನ್ನು ಕಾರ್ತಿಕ್ ಗೌಡ (26) ಎಂದು ಗುರುತಿಸಲಾಗಿದ್ದು, ಇದಲ್ಲದೆ ಆನೆ ನಿಗ್ರಹ ಪಡೆಯ ಇಬ್ಬರು ಸಿಬ್ಬಂದಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೆಗಳ ಹಾವಳಿ ನಿಯಂತ್ರಿಸಲು … Continued