ಉದ್ಘಾಟನೆಯಾದ 2ನೇ ದಿನವೇ ಅಯೋಧ್ಯೆ ರಾಮ ಮಂದಿರದೊಳಕ್ಕೆ ಮಂಗ(ಹುನುಮಂತ)ನ ಪ್ರವೇಶ….

ಅಯೋಧ್ಯೆ: ಭಗವಾನ್‌ ರಾಮ ಇರುವಲ್ಲಿ ಹನುಮಂತ ಇದ್ದೇ ಇರುತ್ತಾನೆ ಎನ್ನುವುದು ಬಲವಾದ ನಂಬಿಕೆ. ಈ ನಂಬಿಕೆಗೆ ಕಾಕತಾಳೀಯವಾದ ಘಟನೆ ಅಯೋಧ್ಯೆ ರಾಮ ಮಂದಿರದಲ್ಲಿ ನಡೆದಿದೆ. ಮಂದಿರ ಉದ್ಘಾಟನೆಯಾದ ಮಾರನೇ ದಿನ ಮಂಗವೊಂದು ಮಂದಿರದ ಗರ್ಭಗುಡಿ ಪ್ರವೇಶಿಸಿ, ರಾಮನನ್ನು ಕಣ್ತುಂಬಿಕೊಂಡ ಘಟನೆ ನಡೆದಿದೆ. ಈ ಬಗ್ಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಾಮಾಜಿಕ ಜಾಲತಾಣ … Continued

ವೀಡಿಯೊ…| ನಾವು ಅಯೋಧ್ಯೆಯಲ್ಲಿ ಏನು ನೋಡಿದ್ದೇವೆ…”: ರಾಮ ಮಂದಿರ ಕಾರ್ಯಕ್ರಮದ ಮಿಂಚು ನೋಟ ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸೋಮವಾರ ಉದ್ಘಾಟನೆ ಮಾಡಿದ ಕುರಿತಾದ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ ಮತ್ತು “ಮುಂದಿನ ವರ್ಷಗಳಲ್ಲಿ ಇದು ನಮ್ಮ ನೆನಪಿನಲ್ಲಿ ಉಳಿಯುತ್ತದೆ” ಎಂದು ಹೇಳಿದ್ದಾರೆ. ಮೂರು ನಿಮಿಷಗಳ ವೀಡಿಯೊದಲ್ಲಿ, ಮಡಚಿದ ಕೆಂಪು ದುಪಟ್ಟಾದಲ್ಲಿ ಬೆಳ್ಳಿಯ ಛತ್ರಿಯನ್ನು ಹಿಡಿದುಕೊಂಡು ಪ್ರಧಾನಿ ದೇವಾಲಯದ ಗರ್ಭಗುಡಿಗೆ ಕಾಲಿಡುತ್ತಿರುವುದನ್ನು ಕಾಣಬಹುದು. ನೂತನವಾಗಿ ನಿರ್ಮಿಸಲಾದ … Continued

ವೀಡಿಯೊ….| ರಾಮಲೀಲಾ ನಾಟಕದಲ್ಲಿ ʼಹನುಮಂತʼನ ಪಾತ್ರಧಾರಿ ವೇದಿಕೆಯಲ್ಲೇ ಕುಸಿದುಬಿದ್ದು ಸಾವು

ಹರಿಯಾಣದ ಭಿವಾನಿಯಲ್ಲಿ ಸೋಮವಾರ ‘ರಾಮಲೀಲಾ’ ನಾಟಕದಲ್ಲಿ ಹನುಮಂತನ ಪಾತ್ರವನ್ನು ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ವೇದಿಕೆಯ ಮೇಲೆ ಕುದಿಬಿದ್ದು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹರೀಶ ಮೆಹ್ತಾ ಎಂದು ಗುರುತಿಸಲಾದ ಹುನುಮಂತನ ಪಾತ್ರಧಾರಿ ತನ್ನ ಪ್ರದರ್ಶನದ ಸಮಯದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಿವಾನಿಯ ಜವಾಹರ ಚೌಕ್ ಪ್ರದೇಶದಲ್ಲಿ ಭಗವಾನ್ ರಾಮನ ಗೌರವಾರ್ಥ “ರಾಜ ತಿಲಕ” ಎಂಬ ಕಾರ್ಯಕ್ರಮದಲ್ಲಿ ಈ ಘಟನೆ … Continued

ವೀಡಿಯೊ…| ನಾನು ನಾಸ್ತಿಕನಲ್ಲ-ಆಸ್ತಿಕ ; ʼಜೈ ಶ್ರೀರಾಮʼ ಘೋಷಣೆ ಕೂಗಿದ ಸಿದ್ದರಾಮಯ್ಯ

ಬೆಂಗಳೂರು: ನಾನು ನಾಸ್ತಿಕನಲ್ಲ, ನಾನು ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳಿವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾರೆ, ಗುಡಿ ಕಟ್ಟುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜೈ ಶ್ರೀರಾಮ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು ಎಂದು ಹೇಳಿದ ಅವರು, ಜೈ ಶ್ರೀರಾಮ … Continued

ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಲಾಲ ಕೃಷ್ಣ ಅಡ್ವಾಣಿ ಪಾಲ್ಗೊಳ್ಳುತ್ತಿಲ್ಲ…

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ತೀವ್ರ ಚಳಿಯ ಕಾರಣ ಇಂದು, ಸೋಮವಾರ ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. 96ರ ಹರೆಯದ ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರು ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಎಚ್‌ಪಿಯ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕಕುಮಾರ … Continued

ವೀಡಿಯೊ…| ಅಯೋಧ್ಯೆಯಲ್ಲಿ ಭಗವಾನ್ ರಾಮಲಲ್ಲಾ ವಿಗ್ರಹದ ‘ಪ್ರಾಣ ಪ್ರತಿಷ್ಠೆ’ ಸಮಾರಂಭವನ್ನು ಮರಳಿನಲ್ಲಿ ಅದ್ಭುತವಾಗಿ ಚಿತ್ರಿಸಿದ ಕಲಾವಿದ | ವೀಕ್ಷಿಸಿ

ಸೋಮವಾರ ಭವ್ಯವಾದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ವಿಗ್ರಹದ ‘ಪ್ರಾಣ ಪ್ರತಿಷ್ಠಾ’ (ಪ್ರತಿಷ್ಠಾಪನೆ) ಸಮಾರಂಭವನ್ನು ಅದ್ಭುತವಾಗಿ ಚಿತ್ರಿಸುವ ಮರಳು ಅನಿಮೇಷನ್ ಅನ್ನು ಒಡಿಶಾ ಮೂಲದ ಕಲಾವಿದರೊಬ್ಬರು ಹಂಚಿಕೊಂಡಿದ್ದಾರೆ. ಆರು ನಿಮಿಷಗಳ ವೀಡಿಯೊದಲ್ಲಿ ಮರಳು ಕಲಾವಿದ ಮಾನಸ್ ಸಾಹೂ ಎಂಬವರು ಬ್ರಷ್‌ನ ಬದಲಿಗೆ ಕ್ಯಾನ್ವಾಸ್ ಮತ್ತು ಮರಳಿನ ಮೇಲೆ ತನ್ನ ಕೈಗಳನ್ನು ಬಳಸಿ ಚಿತ್ರಿಸುವುದನ್ನು ತೋರಿಸುತ್ತದೆ. ಕಲಾವಿದನು ರಾಮನ … Continued

ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ : ವ್ಯಕ್ತಿ ಬಂಧನ

ಅರರಿಯಾ : ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಾಯಕನಂತೆ ಪೋಸು ನೀಡಿ, ಜನವರಿ 22 ರಂದು (ಸೋಮವಾರ) ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ 21 ವರ್ಷದ ವ್ಯಕ್ತಿಯನ್ನು ಬಿಹಾರದ ಅರರಿಯಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ. . ಆರೋಪಿ ಇಂತೇಖಾಬ್ ಆಲಂ ಎಂಬಾತನನ್ನು ಶನಿವಾರ ತಡರಾತ್ರಿ ಬಲುವಾ ಕಲಿಯಗಂಜ್‌ನಲ್ಲಿರುವ ಆತನ ಮನೆಯಿಂದ ಬಂಧಿಸಲಾಗಿದ್ದು, ಆತ ಮಾನಸಿಕವಾಗಿ ಅಸ್ವಸ್ಥನಂತೆ … Continued

ರಾಮ ಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ ಹೊರಟ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ

ಬೆಂಗಳೂರು: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Deve Gowda) ಹಾಗೂ ಕುಟುಂಬದ ಸದಸ್ಯರು ಅಯೋಧ್ಯೆಗೆ ತೆರಳಿದ್ದಾರೆ. ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್‌ ರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಪೂಜಾ ಕೈಂಕರ್ಯಗಳು ಈಗಾಗಲೇ ಆರಂಭಗೊಂಡಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಮಾಜಿ ಪ್ರಧಾನಿ ದೇವೇಗೌಡರು ಭಾನುವಾರ (ಜನವರಿ … Continued

ಮುಖ ಸಂಪೂರ್ಣವಾಗಿ ಕಂಡ ರಾಮಲಲ್ಲಾ ವಿಗ್ರಹದ ಫೋಟೋ ನಿಜವಾದುದಲ್ಲ : ರಾಮ ಮಂದಿರದ ಮುಖ್ಯ ಅರ್ಚಕರ ಸ್ಪಷ್ಟನೆ

ನವದೆಹಲಿ: ಶುಕ್ರವಾರ ವೈರಲ್‌ ಆಗಿರುವ ರಾಮಮಂದಿರ ಗರ್ಭಗುಡಿಯಲ್ಲಿನ ರಾಮಲಲ್ಲಾ ವಿಗ್ರಹದ ಫೋಟೋ ನಿಜವಾದುದಲ್ಲ. ಅಯೋಧ್ಯೆ ರಾಮ ಮಂದಿರದ ರಾಮಲಲ್ಲಾ ವಿಗ್ರಹದ ಚಿತ್ರಗಳು ಹೇಗೆ ಸೋರಿಕೆಯಾದವು ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಒತ್ತಾಯಿಸಿದ್ದಾರೆ. ಗುರುವಾರ ಬಹಿರಂಗಗೊಂಡಿದ್ದ ಚಿತ್ರದಲ್ಲಿ ವಿಗ್ರಹದ ಕಣ್ಣುಗಳಿಗೆ ಹಳದಿ … Continued

ಮಾಧ್ಯಮ, ಸೋಶಿಯಲ್ ಮೀಡಿಯಾಗಳಲ್ಲಿ ರಾಮ ಮಂದಿರದ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಬೇಡಿ : ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಸಲಹೆ

ನವದೆಹಲಿ: ಮುಂಬರುವ ರಾಮಮಂದಿರ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸುಳ್ಳು ಅಥವಾ ನಕಲಿ ವಿಷಯವನ್ನು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರವು ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಕಟ್ಟುನಿಟ್ಟಿನ ಸಲಹೆ  ನೀಡಿದೆ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಕೆಲವು ಪರಿಶೀಲಿಸದ, ಪ್ರಚೋದನಕಾರಿ ಮತ್ತು ನಕಲಿ ಸಂದೇಶಗಳನ್ನು ಪ್ರಸಾರ ಮಾಡುವ ಸಾಧ್ಯತೆ ಬಗ್ಗೆ ಒತ್ತಿ ಹೇಳಿದ್ದು, ಇದು ಸಾಮಾಜಿಕ ಮಾಧ್ಯಮಗಳಲ್ಲಿ, … Continued