5 ವರ್ಷಗಳಲ್ಲಿ 400 ಕೋಟಿ ರೂ ತೆರಿಗೆ ಪಾವತಿ ; ದೇವಸ್ಥಾನ ಟ್ರಸ್ಟ್

ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕಳೆದ ಐದು ವರ್ಷಗಳಲ್ಲಿ ಸುಮಾರು 400 ಕೋಟಿ ರೂಪಾಯಿ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಿದೆ, ಧಾರ್ಮಿಕ ಪ್ರವಾಸೋದ್ಯಮದಲ್ಲಿ ಏರಿಕೆಯಾಗಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್‌ ಭಾನುವಾರ ತಿಳಿಸಿದ್ದಾರೆ. ಈ ಮೊತ್ತವನ್ನು ಫೆಬ್ರವರಿ 5, 2020 ಮತ್ತು ಫೆಬ್ರವರಿ 5, 2025 ರ ನಡುವೆ ಪಾವತಿಸಲಾಗಿದೆ ಎಂದು ಟ್ರಸ್ಟ್ … Continued

ಅಯೋಧ್ಯೆ ರಾಮಮಂದಿರಕ್ಕೆ ಬರೋಬ್ಬರಿ 2100 ಕೋಟಿ ರೂ. ಚೆಕ್‌ ಕೊಟ್ಟ ದಾನಿ ; ಆದ್ರೆ ಇಲ್ಲೊಂದು ಟ್ವಿಸ್ಟ್‌ ; ಅದೇನಂದ್ರೆ…

ಲಕ್ನೋ : ಅಯೋಧ್ಯೆಯ ರಾಮಮಂದಿರದ ಟ್ರಸ್ಟ್‌ಗೆ ದಾನಿಯೊಬ್ಬರು ಬರೋಬ್ಬರಿ 2,100 ಕೋಟಿ ರೂ.. ಮೊತ್ತದ ಚೆಕ್‌ ಕಳಹಿಸಿದ್ದಾರೆ. ಈ ಚೆಕ್‌ ಮೇಲೆ ದಾನಿ ಹೆಸರು, ವಿಳಾಸ, ಫೋನ್‌ ನಂಬರ್‌ ಇದೆ. ಆದರೆ ಇಲ್ಲೊಂದು ಟ್ವಿಸ್ಟ್‌ ಇದೆ. ಟ್ವಿಸ್ಟ್ ಏನೆಂದರೆ ಚೆಕ್ ಕಳುಹಿಸಿದ ದಾನಿ ಅದನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿ ಹೆಸರಿಗೆ ಟ್ರಸ್ಟ್‌ಗೆ ಪೋಸ್ಟ್‌ ಮಾಡಿದ್ದು, … Continued

ಅಯೋಧ್ಯೆ : ಮಳೆಗೆ ಗುಂಡಿ ಬಿದ್ದ ರಾಮಪಥ ; 6 ಅಧಿಕಾರಿಗಳು ಅಮಾನತು

ಅಯೋಧ್ಯೆ: ಹೊಸದಾಗಿ ನಿರ್ಮಿಸಲಾದ ರಾಮಪಥದಲ್ಲಿ ಮೊದಲನೇ ಮಳೆಗೆ ಗುಂಡಿ ಬಿದ್ದ ಹಾಗೂ ಅಯೋಧ್ಯೆ ಜಲಾವೃತಗೊಂಡ ಪ್ರಕರಣಕ್ಕೆ ಸಂಬಂಧ ಪಾಲಿಕೆಯ ಆರು ಅಧಿಕಾರಿಗಳನ್ನು ಉತ್ತರ ಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. ಜೂನ್ 23 ಹಾಗೂ 26ರಂದು ಸುರಿದ ಮಳೆಗೆ ರಾಮಪಥವು ಜಲಾವೃತಗೊಂಡಿತ್ತು. ಹಾಗೂ ನೀರು ಅಕ್ಕಪಕ್ಕದ ಮನೆಗಳಿಗೂ ನುಗ್ಗಿತ್ತು. ರಾಮ ಮಂದಿರಕ್ಕೆ ಸಂ‍ಪರ್ಕ ಕಲ್ಪಿಸುವ 14 ಕಿಮೀ ಉದ್ದದ … Continued

ಮಳೆಗೆ ಅಯೋಧ್ಯೆ ರಾಮ ಮಂದಿರದ ಗರ್ಭಗುಡಿ ಮೇಲ್ಛಾವಣಿಯಲ್ಲಿ ಸೋರಿಕೆ: ಪ್ರಧಾನ ಅರ್ಚಕ

ಅಯೋಧ್ಯೆ: ಜನವರಿ 22 ರಂದು ಸಾರ್ವಜನಿಕ ದರ್ಶನಕ್ಕೆ ಉದ್ಘಾಟನೆಗೊಂಡ ನಂತರ, ಮೊದಲ ಭಾರಿ ಮಳೆಗೆ ಅಯೋಧ್ಯೆ ರಾಮ ಮಂದಿರದ ದೇವಾಲಯದ ಗರ್ಭಗುಡಿಯ ಮೇಲ್ಛಾವಣಿಯಿಂದ ನೀರು ಸೋರಿಕೆಯಾಗುತ್ತಿದೆ ಎಂದು ದೇಗುಲದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ. ದೇವಸ್ಥಾನದ ಆವರಣದಿಂದ ಮಳೆ ನೀರು ಹರಿದು ಹೋಗಲು ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಸೋರಿಕೆಯಾಗಿದೆ. ದೇವಸ್ಥಾನದ ಅಧಿಕಾರಿಗಳು ಸೂಕ್ತ … Continued

ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಅರ್ಚಕ ನಿಧನ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ನೆರವೇರಿಸಿದ್ದ ಪ್ರಧಾನ ಅರ್ಚಕ ಆಚಾರ್ಯ ಲಕ್ಷ್ಮೀಕಾಂತ ದೀಕ್ಷಿತ್ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. 86 ವರ್ಷದ ಲಕ್ಷ್ಮೀಕಾಂತ ದೀಕ್ಷಿತ್ ಅವರು ಕಳೆದ ಕೆಲವು ದಿನಗಳಿಂದ ಚೆನ್ನಾಗಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಮಣಿಕರ್ಣಿಕಾ ಘಾಟ್‌ನಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಜನವರಿ 22 ರಂದು ಅಯೋಧ್ಯೆ ದೇವಸ್ಥಾನದಲ್ಲಿ … Continued

ಇಂಡಿಯಾ ಮೈತ್ರಿಕೂಟ ಅಧಿಕಾರ ಬಂದ್ರೆ ಅಯೋಧ್ಯೆ ರಾಮಮಂದಿರ ಶುದ್ಧೀಕರಿಸ್ತೇವೆ : ವಿವಾದ ಸೃಷ್ಟಿಸಿದ ಕಾಂಗ್ರೆಸ್‌ ನಾಯಕನ ಹೇಳಿಕೆ

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ವಿರೋಧ ಪಕ್ಷದ ಭಾರತ ಬಣ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮಮಂದಿರವನ್ನು ಶುದ್ಧೀಕರಿಸಲಾಗುತ್ತದೆ ಎಂದು ಹೇಳುವ ಮೂಲಕ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಶುಕ್ರವಾರ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಈ ಕುರಿತು ಮಾತನಾಡಿದ ನಾನಾ ಪಟೋಲೆ, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಅಧಿಕಾರಕ್ಕೇರಿದರೆ, ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರವನ್ನು ಶುದ್ಧೀಕರಿಸಲಾಗುತ್ತದೆ. ಅಲ್ಲಿರುವುದು … Continued

ವೀಡಿಯೊ…| ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿ ರಾಮಲಲ್ಲಾ ದರ್ಶನ ಪಡೆದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

ಅಯೋಧ್ಯೆ: ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿ ಭಗವಾನ್‌ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಆರಿಫ್ ಮೊಹಮ್ಮದ್ ಖಾನ್ ಅವರು ದೇವಾಲಯವನ್ನು ‘ಶಾಂತಿಯ ಸ್ಥಳ’ ಎಂದು ಕರೆದರು. ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಕೇರಳ ರಾಜಭವನವು ರಾಜ್ಯಪಾಲರು ರಾಮ ಮಂದಿರಕ್ಕೆ ಭೇಟಿ ನೀಡಿದ್ದರು ಎಂದು ಹೇಳಿದೆ. ರಾಮಲಲ್ಲಾ ವಿಗ್ರಹದ … Continued

ವೀಡಿಯೊ | ಜನವರಿಯಲ್ಲಿ ಉದ್ಘಾಟನೆಯಾದ ನಂತರ ಅಯೋಧ್ಯೆ ರಾಮಮಂದಿರದಲ್ಲಿ ಇದೇ ಮೊದಲ ಬಾರಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ಅಯೋಧ್ಯಾ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಜನವರಿಯಲ್ಲಿ ಮಂದಿರ ಉದ್ಘಾಟನೆಯ ನಂತರ ಇದು ಅವರ ಮೊದಲ ಭೇಟಿಯಾಗಿದೆ. ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನದ ಎರಡು ದಿನಗಳ ಮೊದಲು ದೂರದರ್ಶನದಲ್ಲಿ ಪ್ರಸಾರವಾದ ಸಮಾರಂಭದಲ್ಲಿ, ಪ್ರಧಾನಿ ಮೋದಿ ಅವರು ರಾಮಲಲ್ಲಾ ವಿಗ್ರಹಕ್ಕೆ ಸಾಷ್ಟಾಂಗ ನಮಸ್ಕಾರ ಮಾಡುತ್ತಿರುವುದು ಕಂಡುಬಂದಿದೆ. … Continued

ರಾಮನವಮಿಗೂ ಮುನ್ನ ಅಯೋಧ್ಯೆ ರಾಮಮಂದಿರಕ್ಕೆ 7 ಕೆಜಿ ಚಿನ್ನದಿಂದ ತಯಾರಿಸಿದ ರಾಮಾಯಣ ಪುಸ್ತಕ ಸಮರ್ಪಿಸಿದ ನಿವೃತ್ತ ಐಎಎಸ್‌ ಅಧಿಕಾರಿ..

ರಾಮನವಮಿಗೆ ಕೆಲ ದಿನಗಳ ಮುಂಚೆ ಅಯೋಧ್ಯೆಯ ರಾಮಮಂದಿರಕ್ಕೆ ಚಿನ್ನದ ರಾಮಚರಿತಮಾನಸವನ್ನು ಸಮರ್ಪಿಸಲಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾದ ನಂತರ ಇದು ಮೊದಲ ರಾಮನವಮಿ ಆಚರಣೆಯಾಗಿದೆ. ಈ ಶುಭ ಸಂದರ್ಭದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ್ ಅವರು ಬಾಲ ರಾಮನಿಗೆ ಸುವರ್ಣ ರಾಮಾಯಣವನ್ನು ಉಡುಗೊರೆಯಾಗಿ ನೀಡಿದ್ದಾರೆ. ಚಿನ್ನದಲ್ಲಿ ಸ್ಕ್ರಿಪ್ಟ್ ಮಾಡಲಾದ ರಾಮಚರಿತಮಾನಸವನ್ನು ಮಾಜಿ ಐಎಎಸ್ ಅಧಿಕಾರಿ … Continued

ಅಯೋಧ್ಯೆಗೆ ಬರುವ ಯಾತ್ರಿಕರಿಗೆ ಉಚಿತ ಚಿಕಿತ್ಸೆ ನೀಡಲು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ : ಅಪೋಲೋ ಹಾಸ್ಪಿಟಲ್ಸ್ ಘೋಷಣೆ

ಅಯೋಧ್ಯೆ : ಅಪೋಲೋ ಹಾಸ್ಪಿಟಲ್ಸ್ ಗ್ರೂಪ್ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಯಾತ್ರಾಸ್ಥಳದಲ್ಲಿ ಅತ್ಯಾಧುನಿಕ ಮಲ್ಟಿ-ಸ್ಪೆಷಾಲಿಟಿ ತುರ್ತು ವೈದ್ಯಕೀಯ ಕೇಂದ್ರ ಪ್ರಾರಂಭಿಸುವುದಾಗಿ ಘೋಷಿಸಿದೆ. ಕೇಂದ್ರದ ಸುಧಾರಿತ ಸೇವೆಗಳ ಕುರಿತು ಮಾತನಾಡಿದ ಅಪೋಲೋ ಹಾಸ್ಪಿಟಲ್ಸ್ ಗ್ರೂಪ್ ಅಧ್ಯಕ್ಷ ಡಾ. ಪ್ರತಾಪ್ ಸಿ.ರೆಡ್ಡಿ ಈ ಮಲ್ಟಿ-ಸ್ಪೆಷಾಲಿಟಿ ತುರ್ತು ವೈದ್ಯಕೀಯ ಕೇಂದ್ರ(multi-specialty emergency medical centre)ದಲ್ಲಿ ಉತ್ತಮವಾದ ವಿಸ್ತೃತ ವೈದ್ಯಕೀಯ ಸೇವೆಗಳು … Continued