ಸಿಸಿಟಿವಿ ಮುಚ್ಚುತ್ತಿದ್ದರು….ಶೌಚಾಲಯದಲ್ಲಿ ಹಣ ಅಡಗಿಸಿಡುತ್ತಿದ್ದರು…..: ರಾಮಮಂದಿರ ದೇಣಿಗೆ ಕಳ್ಳತನದ ಬೆಚ್ಚಿಬೀಳಿಸುವ ಕಥೆ

ಅಯೋಧ್ಯೆ: ರಾಮಮಂದಿರದ ಹುಂಡಿಗಳಲ್ಲಿ ಭಕ್ತರು ಸಮರ್ಪಿಸಿದ್ದ ಕೋಟ್ಯಂತರ ರೂಪಾಯಿ ದೇಣಿಗೆ ಹಣವನ್ನು ಎಣಿಕೆ ಮಾಡುವ ಸಿಬ್ಬಂದಿಯೇ ವ್ಯವಸ್ಥಿತವಾಗಿ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಚ್ಚಿಬೀಳಿಸುವ ಹೊಸ ಸಂಗತಿಗಳು ಬೆಳಕಿಗೆ ಬಂದಿವೆ. ಸಿಸಿಟಿವಿ ಕ್ಯಾಮೆರಾವನ್ನು ಉದ್ದೇಶಪೂರ್ವಕವಾಗಿ ಮುಚ್ಚಿ, ಮತ್ತೊಬ್ಬ ಸಿಬ್ಬಂದಿ ನಗದು ಹಣವನ್ನು ಬಟ್ಟೆಯೊಳಗೆ ಅಡಗಿಸಿಕೊಳ್ಳುತ್ತಿದ್ದ ವಿಧಾನ ಸೇರಿದಂತೆ ಹಣ ದೋಚಲು ಅನುಸರಿಸಿದ್ದ ಹಲವು ತಂತ್ರಗಳು ವಿಶೇಷ … Continued

ಅಯೋಧ್ಯಾ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: 8 ಜನರ ಬಂಧನದ ಬೆನ್ನಲ್ಲೇ ಟ್ರಸ್ಟ್ ಮುಖ್ಯಸ್ಥ ಚಂಪತ ರಾಯ್ ರಾಜೀನಾಮೆ

ಅಯೋಧ್ಯಾ: ಅಯೋಧ್ಯೆ  ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟ್‌ನ ಮತ್ತೊಬ್ಬ ಪ್ರಮುಖ ಸದಸ್ಯ ಅನಿಲ ಮಿಶ್ರಾ ತಮ್ಮ ಸ್ಥಾನಗಳಿಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯಲ್ಲಿ ಭಾರಿ ಪ್ರಮಾಣದ ಹಣ ಕಳ್ಳತನವಾಗಿದೆ ಎಂಬ ಆರೋಪದ ನಂತರ ಉತ್ತರ ಪ್ರದೇಶ ಸರ್ಕಾರ ರಚಿಸಿದ ವಿಶೇಷ ತನಿಖಾ … Continued

ಅಯೋಧ್ಯೆ ರಾಮ ಮಂದಿರ ಕಾಣಿಕೆ ಹಣ ಕಳುವು ಪ್ರಕರಣ : 8 ಆರೋಪಿಗಳ ಬಂಧನ

ಅಯೋಧ್ಯಾ : ಅಯೋಧ್ಯೆಯ ರಾಮ ಮಂದಿರದಲ್ಲಿ ಭಕ್ತರು ಅರ್ಪಿಸಿದ ಕಾಣಿಕೆ ಹಣವನ್ನು ಕಳುವು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಪ್ರಕಾರ, ಈ ಪ್ರಕರಣದಲ್ಲಿ ಎಂಟು ಜನರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದ್ದು, ಇವರಲ್ಲಿ ಆರು ಮಂದಿ ದೇವಸ್ಥಾನದ ನಗದು ಎಣಿಕೆ ವಿಭಾಗದ ಉದ್ಯೋಗಿಗಳಾಗಿದ್ದಾರೆ. ಆರೋಪಿಗಳು … Continued

ವೀಡಿಯೊಗಳು…| ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ ; ರಾಮ ಮಂದಿರ ಶಿಖರದ ಮೇಲೆ ಕೇಸರಿ ಧ್ವಜ ಹಾರಿಸಿದ ಪ್ರಧಾನಿ ಮೋದಿ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಭವ್ಯ ಶ್ರೀರಾಮ ಮಂದಿರದ ಗೋಪುರದ (ಶಿಖರ) ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಕೇಸರಿ ಧ್ವಜವನ್ನು ಹಾರಿಸುವ ಮೂಲಕ ದೇವಾಲಯದ ನಿರ್ಮಾಣ ಕಾರ್ಯದ ಪೂರ್ಣಗೊಳಿಸುವಿಕೆಯನ್ನು ಘೋಷಿಸಿದ್ದಾರೆ. ಪ್ರಧಾನಮಂತ್ರಿಗಳ ಕಚೇರಿ (PMO) ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, 10 ಅಡಿ ಎತ್ತರ ಮತ್ತು 20 ಅಡಿ ಉದ್ದವಿರುವ ಈ … Continued

ಅಯೋಧ್ಯೆಯಲ್ಲಿ ಭವ್ಯ ‘ಧರ್ಮ ಧ್ವಜ’ ಸಮಾರಂಭಕ್ಕೆ ಸಿದ್ಧತೆ ಪೂರ್ಣ ; ನಾಳೆ (ನ.25) ಪ್ರಧಾನಿ ಮೋದಿ ಧ್ವಜಾರೋಹಣ

ಅಯೋಧ್ಯೆ: ಭವ್ಯ ರಾಮ ಮಂದಿರದಲ್ಲಿ ಮಂಗಳವಾರ (ನವೆಂಬರ್ 25) ನಡೆಯಲಿರುವ ಮಹತ್ವದ ‘ಧರ್ಮ ಧ್ವಜ’ (ಕೇಸರಿ ಬಾವುಟ) ಸಮಾರಂಭಕ್ಕಾಗಿ ಅಯೋಧ್ಯೆ ನಗರವು ಅಂತಿಮ ಹಂತದ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಈ ಸಮಾರಂಭವು ರಾಮ ಮಂದಿರದ ನಿರ್ಮಾಣ ಕಾರ್ಯದ ಮುಕ್ತಾಯವಾದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಯೋಧ್ಯೆಗೆ ಭೇಟಿ ನೀಡಲಿದ್ದು, ರಾಮ ಮಂದಿರದ ಗೋಪುರದ … Continued

ಅಯೋಧ್ಯೆ ದೀಪೋತ್ಸವ : ಬೆಳಗಿದ 26.17 ಲಕ್ಷ ದೀಪಗಳು, 2,128 ಜನರಿಂದ ಆರತಿ ; ಎರಡು ವಿಶ್ವ ದಾಖಲೆ ಸೃಷ್ಟಿ

ಅಯೋಧ್ಯೆ: ಸರಯೂ ನದಿಯ ತಟದಲ್ಲಿ ಭಾನುವಾರ ನಡೆದ ದೀಪೋತ್ಸವದ ಸಂಭ್ರಮದಲ್ಲಿ ದೀಪಾವಳಿ ಹಬ್ಬವು ಮತ್ತೊಮ್ಮೆ ದಾಖಲೆ ಸೃಷ್ಟಿಸುವ ವೈಭವಕ್ಕೆ ಸಾಕ್ಷಿಯಾಯಿತು. ಅಯೋಧ್ಯೆಯ ರಾಮ್ ಕಿ ಪೈಡಿ ಮತ್ತು 56 ಘಾಟ್‌ಗಳಲ್ಲಿ ಒಟ್ಟಿಗೆ ಬರೋಬ್ಬರಿ 26.17 ಲಕ್ಷ ದೀಪಗಳನ್ನು ಬೆಳಗಿಸಲಾಯಿತು. ಜೊತೆಗೆ, 2,128 ಮಂದಿ ಏಕಕಾಲದಲ್ಲಿ ‘ಮಹಾ ಆರತಿ’ ಮಾಡುವ ಮೂಲಕ, ಈ ಬಾರಿಯ ದೀಪೋತ್ಸವದಲ್ಲಿ ಎರಡು … Continued

5 ವರ್ಷಗಳಲ್ಲಿ 400 ಕೋಟಿ ರೂ ತೆರಿಗೆ ಪಾವತಿ ; ದೇವಸ್ಥಾನ ಟ್ರಸ್ಟ್

ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕಳೆದ ಐದು ವರ್ಷಗಳಲ್ಲಿ ಸುಮಾರು 400 ಕೋಟಿ ರೂಪಾಯಿ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಿದೆ, ಧಾರ್ಮಿಕ ಪ್ರವಾಸೋದ್ಯಮದಲ್ಲಿ ಏರಿಕೆಯಾಗಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್‌ ಭಾನುವಾರ ತಿಳಿಸಿದ್ದಾರೆ. ಈ ಮೊತ್ತವನ್ನು ಫೆಬ್ರವರಿ 5, 2020 ಮತ್ತು ಫೆಬ್ರವರಿ 5, 2025 ರ ನಡುವೆ ಪಾವತಿಸಲಾಗಿದೆ ಎಂದು ಟ್ರಸ್ಟ್ … Continued

ಅಯೋಧ್ಯೆ ರಾಮಮಂದಿರಕ್ಕೆ ಬರೋಬ್ಬರಿ 2100 ಕೋಟಿ ರೂ. ಚೆಕ್‌ ಕೊಟ್ಟ ದಾನಿ ; ಆದ್ರೆ ಇಲ್ಲೊಂದು ಟ್ವಿಸ್ಟ್‌ ; ಅದೇನಂದ್ರೆ…

ಲಕ್ನೋ : ಅಯೋಧ್ಯೆಯ ರಾಮಮಂದಿರದ ಟ್ರಸ್ಟ್‌ಗೆ ದಾನಿಯೊಬ್ಬರು ಬರೋಬ್ಬರಿ 2,100 ಕೋಟಿ ರೂ.. ಮೊತ್ತದ ಚೆಕ್‌ ಕಳಹಿಸಿದ್ದಾರೆ. ಈ ಚೆಕ್‌ ಮೇಲೆ ದಾನಿ ಹೆಸರು, ವಿಳಾಸ, ಫೋನ್‌ ನಂಬರ್‌ ಇದೆ. ಆದರೆ ಇಲ್ಲೊಂದು ಟ್ವಿಸ್ಟ್‌ ಇದೆ. ಟ್ವಿಸ್ಟ್ ಏನೆಂದರೆ ಚೆಕ್ ಕಳುಹಿಸಿದ ದಾನಿ ಅದನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿ ಹೆಸರಿಗೆ ಟ್ರಸ್ಟ್‌ಗೆ ಪೋಸ್ಟ್‌ ಮಾಡಿದ್ದು, … Continued

ಅಯೋಧ್ಯೆ : ಮಳೆಗೆ ಗುಂಡಿ ಬಿದ್ದ ರಾಮಪಥ ; 6 ಅಧಿಕಾರಿಗಳು ಅಮಾನತು

ಅಯೋಧ್ಯೆ: ಹೊಸದಾಗಿ ನಿರ್ಮಿಸಲಾದ ರಾಮಪಥದಲ್ಲಿ ಮೊದಲನೇ ಮಳೆಗೆ ಗುಂಡಿ ಬಿದ್ದ ಹಾಗೂ ಅಯೋಧ್ಯೆ ಜಲಾವೃತಗೊಂಡ ಪ್ರಕರಣಕ್ಕೆ ಸಂಬಂಧ ಪಾಲಿಕೆಯ ಆರು ಅಧಿಕಾರಿಗಳನ್ನು ಉತ್ತರ ಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. ಜೂನ್ 23 ಹಾಗೂ 26ರಂದು ಸುರಿದ ಮಳೆಗೆ ರಾಮಪಥವು ಜಲಾವೃತಗೊಂಡಿತ್ತು. ಹಾಗೂ ನೀರು ಅಕ್ಕಪಕ್ಕದ ಮನೆಗಳಿಗೂ ನುಗ್ಗಿತ್ತು. ರಾಮ ಮಂದಿರಕ್ಕೆ ಸಂ‍ಪರ್ಕ ಕಲ್ಪಿಸುವ 14 ಕಿಮೀ ಉದ್ದದ … Continued

ಮಳೆಗೆ ಅಯೋಧ್ಯೆ ರಾಮ ಮಂದಿರದ ಗರ್ಭಗುಡಿ ಮೇಲ್ಛಾವಣಿಯಲ್ಲಿ ಸೋರಿಕೆ: ಪ್ರಧಾನ ಅರ್ಚಕ

ಅಯೋಧ್ಯೆ: ಜನವರಿ 22 ರಂದು ಸಾರ್ವಜನಿಕ ದರ್ಶನಕ್ಕೆ ಉದ್ಘಾಟನೆಗೊಂಡ ನಂತರ, ಮೊದಲ ಭಾರಿ ಮಳೆಗೆ ಅಯೋಧ್ಯೆ ರಾಮ ಮಂದಿರದ ದೇವಾಲಯದ ಗರ್ಭಗುಡಿಯ ಮೇಲ್ಛಾವಣಿಯಿಂದ ನೀರು ಸೋರಿಕೆಯಾಗುತ್ತಿದೆ ಎಂದು ದೇಗುಲದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ. ದೇವಸ್ಥಾನದ ಆವರಣದಿಂದ ಮಳೆ ನೀರು ಹರಿದು ಹೋಗಲು ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಸೋರಿಕೆಯಾಗಿದೆ. ದೇವಸ್ಥಾನದ ಅಧಿಕಾರಿಗಳು ಸೂಕ್ತ … Continued