ಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕ

ಅಯೋಧ್ಯೆ: ರಾಮಮಂದಿರದ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿರುವ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಬುಧವಾರ (ಸೆಪ್ಟೆಂಬರ್‌ 2) ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ಅವರನ್ನು ಟ್ರಸ್ಟ್‌ನ ಮೊದಲ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ)ಯಾಗಿ ನೇಮಿಸಿದೆ. ಪಶ್ಚಿಮ ವಾಯು ಕಮಾಂಡ್‌ ಮುಖ್ಯಸ್ಥರಾಗಿ ‘ಆಪರೇಷನ್‌ ಸಿಂಧೂರ’ ವೇಳೆ ನೇತೃತ್ವ ವಹಿಸಿದ್ದ ಜೀತೇಂದ್ರ ಮಿಶ್ರ ಅವರಿಗೆ … Continued

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ಚಂಪತ್ ರೈಗೆ ಕ್ಲೀನ್ ಚಿಟ್

ಅಯೋಧ್ಯೆ : ಅಯೋಧ್ಯೆಯ ರಾಮ ಮಂದಿರದಲ್ಲಿ ಕಾಣಿಕೆ ಕಳವು ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT), ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರಿಗೆ ಕ್ಲೀನ್‌ಚಿಟ್ ನೀಡಿದೆ ಹಾಗೂ ಟ್ರಸ್ಟ್‌ನ ಮಾಜಿ ಸದಸ್ಯ ಅನಿಲ ಮಿಶ್ರಾ ಅವರ ಮೇಲಿದ್ದ ಆರೋಪಗಳಿಗೂ ಎಸ್‌ಐಟಿ ತನಿಖೆಯಲ್ಲಿ … Continued

ಅಯೋಧ್ಯೆ ರಾಮಮಂದಿರ ಕಾಣಿಕೆ ದುರುಪಯೋಗ ಪ್ರಕರಣ: ಸುಪ್ರೀಂ ಕೋರ್ಟ್‌ ಆದೇಶದಂತೆ ಎಸ್‌ಐಟಿ ಪುನರ್ರಚನೆ

ಲಕ್ನೋ : ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನದಲ್ಲಿ ಭಕ್ತರು ಸಮರ್ಪಿಸಿದ ಕಾಣಿಕೆ ಹಣದ ದುರುಪಯೋಗ ನಡೆದಿದೆ ಎಂಬ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಯನ್ನು ಉತ್ತರ ಪ್ರದೇಶ ಸರ್ಕಾರ ಪುನರ್ರಚಿಸಿದೆ. ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಹೊಸ ತನಿಖಾ ತಂಡಕ್ಕೆ ಸೇರಿಸಲಾಗಿದೆ. ಹೊಸದಾಗಿ ರಚಿಸಲಾದ ಎಸ್‌ಐಟಿಯ ಮುಖ್ಯಸ್ಥರಾಗಿ … Continued

ರಾಮ ಮಂದಿರ ಕಾಣಿಕೆ ಕಳವು ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಆರ್‌ಎಸ್‌ಎಸ್ ಒತ್ತಾಯ, ಎಸ್‌ಐಟಿ ತನಿಖೆಗೆ ಬೆಂಬಲ

ಅಯೋಧ್ಯೆ: ಅಯೋಧ್ಯೆಯ ಶ್ರೀ ರಾಮಲಲ್ಲಾ ಮಂದಿರದ ಕಾಣಿಕೆ ಹುಂಡಿಗಳಿಂದ ಹಣ ಕಳವು ನಡೆದಿರುವ ಆರೋಪದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಯಾರೆಂದು ತನಿಖೆಯಲ್ಲಿ ಸಾಬೀತಾದರೆ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಗ್ರಹಿಸಿದೆ. ಇದೇ ವೇಳೆ, ಈ ವಿವಾದವನ್ನು “ಹಿಂದೂ ವಿರೋಧಿ ಹಾಗೂ ರಾಷ್ಟ್ರವಿರೋಧಿ ಶಕ್ತಿಗಳು” ದುರುಪಯೋಗಪಡಿಸಿಕೊಳ್ಳಲು ಯತ್ನಿಸುತ್ತಿವೆ … Continued

ರಾಮ ಮಂದಿರ ಟ್ರಸ್ಟ್‌ ದೇಣಿಗೆ ದುರ್ಬಳಕೆ ಆರೋಪ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ : ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ರಾಮ ಮಂದಿರ ನಿರ್ಮಾಣಕ್ಕಾಗಿ ಬಂದಿರುವ ದೇಣಿಗೆ ಹಣದ ದುರ್ಬಳಕೆ ನಡೆದಿದೆ ಎಂಬ ಆರೋಪಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ನ್ಯಾಯಮೂರ್ತಿ ಎಂ.ಎಂ. ಸುಂದರೇಶ ಹಾಗೂ ನ್ಯಾಯಮೂರ್ತಿ … Continued

ಸಿಸಿಟಿವಿ ಮುಚ್ಚುತ್ತಿದ್ದರು….ಶೌಚಾಲಯದಲ್ಲಿ ಹಣ ಅಡಗಿಸಿಡುತ್ತಿದ್ದರು…..: ರಾಮಮಂದಿರ ದೇಣಿಗೆ ಕಳ್ಳತನದ ಬೆಚ್ಚಿಬೀಳಿಸುವ ಕಥೆ

ಅಯೋಧ್ಯೆ: ರಾಮಮಂದಿರದ ಹುಂಡಿಗಳಲ್ಲಿ ಭಕ್ತರು ಸಮರ್ಪಿಸಿದ್ದ ಕೋಟ್ಯಂತರ ರೂಪಾಯಿ ದೇಣಿಗೆ ಹಣವನ್ನು ಎಣಿಕೆ ಮಾಡುವ ಸಿಬ್ಬಂದಿಯೇ ವ್ಯವಸ್ಥಿತವಾಗಿ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಚ್ಚಿಬೀಳಿಸುವ ಹೊಸ ಸಂಗತಿಗಳು ಬೆಳಕಿಗೆ ಬಂದಿವೆ. ಸಿಸಿಟಿವಿ ಕ್ಯಾಮೆರಾವನ್ನು ಉದ್ದೇಶಪೂರ್ವಕವಾಗಿ ಮುಚ್ಚಿ, ಮತ್ತೊಬ್ಬ ಸಿಬ್ಬಂದಿ ನಗದು ಹಣವನ್ನು ಬಟ್ಟೆಯೊಳಗೆ ಅಡಗಿಸಿಕೊಳ್ಳುತ್ತಿದ್ದ ವಿಧಾನ ಸೇರಿದಂತೆ ಹಣ ದೋಚಲು ಅನುಸರಿಸಿದ್ದ ಹಲವು ತಂತ್ರಗಳು ವಿಶೇಷ … Continued

ಅಯೋಧ್ಯಾ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: 8 ಜನರ ಬಂಧನದ ಬೆನ್ನಲ್ಲೇ ಟ್ರಸ್ಟ್ ಮುಖ್ಯಸ್ಥ ಚಂಪತ ರಾಯ್ ರಾಜೀನಾಮೆ

ಅಯೋಧ್ಯಾ: ಅಯೋಧ್ಯೆ  ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟ್‌ನ ಮತ್ತೊಬ್ಬ ಪ್ರಮುಖ ಸದಸ್ಯ ಅನಿಲ ಮಿಶ್ರಾ ತಮ್ಮ ಸ್ಥಾನಗಳಿಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯಲ್ಲಿ ಭಾರಿ ಪ್ರಮಾಣದ ಹಣ ಕಳ್ಳತನವಾಗಿದೆ ಎಂಬ ಆರೋಪದ ನಂತರ ಉತ್ತರ ಪ್ರದೇಶ ಸರ್ಕಾರ ರಚಿಸಿದ ವಿಶೇಷ ತನಿಖಾ … Continued

ಅಯೋಧ್ಯೆ ರಾಮ ಮಂದಿರ ಕಾಣಿಕೆ ಹಣ ಕಳುವು ಪ್ರಕರಣ : 8 ಆರೋಪಿಗಳ ಬಂಧನ

ಅಯೋಧ್ಯಾ : ಅಯೋಧ್ಯೆಯ ರಾಮ ಮಂದಿರದಲ್ಲಿ ಭಕ್ತರು ಅರ್ಪಿಸಿದ ಕಾಣಿಕೆ ಹಣವನ್ನು ಕಳುವು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಪ್ರಕಾರ, ಈ ಪ್ರಕರಣದಲ್ಲಿ ಎಂಟು ಜನರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದ್ದು, ಇವರಲ್ಲಿ ಆರು ಮಂದಿ ದೇವಸ್ಥಾನದ ನಗದು ಎಣಿಕೆ ವಿಭಾಗದ ಉದ್ಯೋಗಿಗಳಾಗಿದ್ದಾರೆ. ಆರೋಪಿಗಳು … Continued

ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣ : ಸಿಎಂ ಯೋಗಿ ಆದಿತ್ಯನಾಥಗೆ ತನಿಖಾ ವರದಿ ಹಸ್ತಾಂತರಿಸಿದ ಎಸ್‌ಐಟಿ

 ಲಕ್ನೋ/ಅಯೋಧ್ಯೆ : ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರಕ್ಕೆ ಕೋಟ್ಯಂತರ ರೂಪಾಯಿ ಮೌಲ್ಯದ ದೇಣಿಗೆ ಹರಿದುಬರುತ್ತಿರುವ ಬೆನ್ನಲ್ಲೇ, ಕಾಣಿಕೆ ಹಣ ಮತ್ತು ಆಭರಣಗಳ ನಿರ್ವಹಣೆಯಲ್ಲಿ ಭಾರಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಈ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT)ವು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು … Continued

ಅಯೋಧ್ಯೆ ರಾಮಮಂದಿರ ಸಂಕೀರ್ಣದಲ್ಲಿ ನಮಾಜ್ ಮಾಡಲು ಯತ್ನಿಸಿದ ಕಾಶ್ಮೀರಿ ವ್ಯಕ್ತಿಯ ಬಂಧನ

ಅಯೋಧ್ಯೆ: ಅಯೋಧ್ಯೆಯ ಭವ್ಯ ರಾಮಮಂದಿರ ಸಂಕೀರ್ಣದೊಳಗೆ ನಮಾಜ್ ಮಾಡಲು ಯತ್ನಿಸಿದ ಮತ್ತು ಭದ್ರತಾ ಸಿಬ್ಬಂದಿ ತಡೆದಾಗ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಕಾಶ್ಮೀರದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಬಂಧಿತನನ್ನು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ನಿವಾಸಿ ಅಹ್ಮದ್ ಶೇಖ್ (55) ಎಂದು ಗುರುತಿಸಲಾಗಿದೆ. ಶುಕ್ರವಾರ ಮಂದಿರಕ್ಕೆ ಪ್ರವೇಶಿಸಿದ ಈತ, ದರ್ಶನದ ನಂತರ … Continued