ಈ ವಾರ ಅಯೋಧ್ಯೆ ರಾಮ ಮಂದಿರದ ಮೇಲೆ ದಾಳಿ : ಖಲಿಸ್ತಾನಿ ಭಯೋತ್ಪಾದಕ ಪನ್ನು ಬೆದರಿಕೆ

ನವದೆಹಲಿ: ಈ ವಾರದಲ್ಲಿ ಅಯೋಧ್ಯೆ ರಾಮಮಂದಿರ ಮತ್ತು ಕೆನಡಾದಲ್ಲಿನ ಹಲವು ಹಿಂದೂ ದೇಗುಲಗಳ ಮೇಲೆ ದಾಳಿ ನಡೆಸುವುದಾಗಿ ‘ಸಿಖ್‌ ಫಾರ್ ಜಸ್ಟಿಸ್‌’ ಸಂಘಟನೆಯ ನಾಯಕ, ಘೋಷಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್‌ ಪನ್ನೂನ್‌ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರಿಗೂ ಎಚ್ಚರಿಸಿದ್ದಾನೆ. ಖಲಿಸ್ತಾನಿ ಉಗ್ರರ ವಿಷಯ ಭಾರತ- ಕೆನಡಾ … Continued

ವೀಡಿಯೊ..| ಅಯೋಧ್ಯೆ ದೀಪೋತ್ಸವದಲ್ಲಿ ಬೆಳಗಿದ 25 ಲಕ್ಷಕ್ಕೂ ಹೆಚ್ಚು ದೀಪಗಳು…ಹೊಸ ವಿಶ್ವ ದಾಖಲೆ

ಅಯೋಧ್ಯಾ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದ ಅದ್ಧೂರಿ ದೀಪೋತ್ಸವ ಕಾರ್ಯಕ್ರಮದಲ್ಲಿ 25 ಲಕ್ಷಕ್ಕೂ ಹೆಚ್ಚು ಮಣ್ಣಿನ ದೀಪಗಳನ್ನು ಒಟ್ಟಿಗೆ ಬೆಳಗಿಸಲಾಯಿತು. ಇದು ಹೊಸ ವಿಶ್ವ ದಾಖಲೆಯಾಗಿದೆ. ಸರಯೂ ನದಿಯ ದಡದಲ್ಲಿ 28 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಇರಿಸಲಾಗಿದೆ, ಮೇಲಿನಿಂದ ನೋಡಿದಾಗ ಭವ್ಯವಾದ ಚಿನ್ನದ ಹೊಳಪನ್ನು ನೀಡುತ್ತದೆ. ಕನಿಷ್ಠ 28 ಲಕ್ಷ ದೀಪಗಳನ್ನು ಬೆಳಗಿಸಲು ಸಂಘಟಕರು … Continued

ಅಕ್ಟೋಬರ್ 28 ರಿಂದ ಅಯೋಧ್ಯೆಯಲ್ಲಿ 4 ದಿನಗಳ ದೀಪೋತ್ಸವ ; ಬೆಳಗಲಿವೆ 25 ಲಕ್ಷ ದೀಪಗಳು…!

ಲಕ್ನೋ : ಈ ವರ್ಷದ ಜನವರಿಯಲ್ಲಿ ಭಗವಾನ್ ರಾಮನ ಐತಿಹಾಸಿಕ ‘ಪ್ರಾಣ ಪ್ರತಿಷ್ಠೆ’ಗೆ ಸಾಕ್ಷಿಯಾದ ಅಯೋಧ್ಯೆಯಲ್ಲಿ ಅಕ್ಟೋಬರ್ 28 ರಿಂದ ನಾಲ್ಕು ದಿನಗಳ ದೀಪೋತ್ಸವ ಆಚರಣೆ ನಡೆಯಲಿದೆ. ಇದು ಭಗವಾನ್ ರಾಮನ ದೇವಾಲಯ ಉದ್ಘಾಟನೆಯಾದ ನಂತರ ಮೊದಲ ಕಾರ್ಯಕ್ರಮವಾಗಿದೆ. ದೀಪೋತ್ಸವ ಆಚರಣೆಗಳು ಅಕ್ಟೋಬರ್ 28 ರಿಂದ ಅಕ್ಟೋಬರ್ 31ರ ವರೆಗೆ ನಡೆಯಲಿದೆ ಎಂದು ಉತ್ತರ ಪ್ರದೇಶ … Continued

ಅಯೋಧ್ಯೆ ರಾಮಮಂದಿರಕ್ಕೆ ಬರೋಬ್ಬರಿ 2100 ಕೋಟಿ ರೂ. ಚೆಕ್‌ ಕೊಟ್ಟ ದಾನಿ ; ಆದ್ರೆ ಇಲ್ಲೊಂದು ಟ್ವಿಸ್ಟ್‌ ; ಅದೇನಂದ್ರೆ…

ಲಕ್ನೋ : ಅಯೋಧ್ಯೆಯ ರಾಮಮಂದಿರದ ಟ್ರಸ್ಟ್‌ಗೆ ದಾನಿಯೊಬ್ಬರು ಬರೋಬ್ಬರಿ 2,100 ಕೋಟಿ ರೂ.. ಮೊತ್ತದ ಚೆಕ್‌ ಕಳಹಿಸಿದ್ದಾರೆ. ಈ ಚೆಕ್‌ ಮೇಲೆ ದಾನಿ ಹೆಸರು, ವಿಳಾಸ, ಫೋನ್‌ ನಂಬರ್‌ ಇದೆ. ಆದರೆ ಇಲ್ಲೊಂದು ಟ್ವಿಸ್ಟ್‌ ಇದೆ. ಟ್ವಿಸ್ಟ್ ಏನೆಂದರೆ ಚೆಕ್ ಕಳುಹಿಸಿದ ದಾನಿ ಅದನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿ ಹೆಸರಿಗೆ ಟ್ರಸ್ಟ್‌ಗೆ ಪೋಸ್ಟ್‌ ಮಾಡಿದ್ದು, … Continued

ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ ಹೊಗಳಿದ್ದಕ್ಕೆ ಪತ್ನಿಯ ಮೈ ಸುಟ್ಟು ತ್ರಿವಳಿ ತಲಾಖ್ ನೀಡಿದ ಗಂಡ..!

ಅಯೋಧ್ಯೆ : ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಹೊಗಳಿದ್ದಕ್ಕೆ ಮುಸ್ಲಿಂ ಮಹಿಳೆಯೊಬ್ಬರು ಪತಿಯಿಂದ ಭೀಕರ ಶಿಕ್ಷೆಗೆ ಗುರಿಯಾಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ ಪತಿ ಮೊದಲು ಪತ್ನಿಗೆ ಬೆಂಕಿ ಹಚ್ಚಿದ ಗಂಡ ನಂತರ ತ್ರಿವಳಿ ತಲಾಖ್ ನೀಡಿ ವಿಚ್ಛೇದನ ನೀಡಿದ್ದಾನೆ. ಬಹ್ರೈಚ್ ಮೂಲದ … Continued

ಅಯೋಧ್ಯೆಯ ರಾಮಪಥ-ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿದೀಪ ಕಳ್ಳತನ

ಅಯೋಧ್ಯೆ : ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳ್ಳತನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಯೋಧ್ಯೆಯಲ್ಲಿ ಹೆಚ್ಚಿನ ಭದ್ರತಾ ಪ್ರದೇಶದಲ್ಲಿರುವ ಭಕ್ತಿ ಪಥ ಮತ್ತು ರಾಮಪಥದಲ್ಲಿ ಈ ದೀಪಗಳನ್ನು ಅಳವಡಿಸಲಾಗಿತ್ತು. ಬೀದಿದೀಪ ಅಳವಡಿಕೆಗೆ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ ಗುತ್ತಿಗೆ ನೀಡಿದ್ದ ಯಶ್ ಎಂಟರ್‌ಪ್ರೈಸಸ್ ಮತ್ತು ಕೃಷ್ಣ ಆಟೋಮೊಬೈಲ್ಸ್ … Continued

ಅಯೋಧ್ಯೆಯ ʼಭಗವಾನ್‌ ರಾಮಲಲ್ಲಾʼನ ಚಿತ್ರ ಇರುವ ವಿಶ್ವದ ಮೊದಲ ಅಂಚೆ ಚೀಟಿ ಬಿಡುಗಡೆ ಮಾಡಿದ ಲಾವೋಸ್‌ ದೇಶ…!

ನವದೆಹಲಿ : ಅಯೋಧ್ಯೆಯ ಶ್ರೀರಾಮ ಲಲ್ಲಾ ಒಳಗೊಂಡ ಅಂಚೆ ಚೀಟಿಯನ್ನು ಲಾವೊ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್ (ಲಾವೊ ಪಿಡಿಆರ್) ಬಿಡುಗಡೆ ಮಾಡಿದ್ದು, ಹಿಂದೂ ದೇವರನ್ನು ಒಳಗೊಂಡ ಅಂಚೆಚೀಟಿ ಬಿಡುಗಡೆ ಮಾಡಿದ ವಿಶ್ವದ ಮೊದಲ ದೇಶವಾಗಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ ಅವರು ಲಾವೋಸ್‌ ದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ ಮತ್ತು … Continued

ಅಯೋಧ್ಯೆ : ಮಳೆಗೆ ಗುಂಡಿ ಬಿದ್ದ ರಾಮಪಥ ; 6 ಅಧಿಕಾರಿಗಳು ಅಮಾನತು

ಅಯೋಧ್ಯೆ: ಹೊಸದಾಗಿ ನಿರ್ಮಿಸಲಾದ ರಾಮಪಥದಲ್ಲಿ ಮೊದಲನೇ ಮಳೆಗೆ ಗುಂಡಿ ಬಿದ್ದ ಹಾಗೂ ಅಯೋಧ್ಯೆ ಜಲಾವೃತಗೊಂಡ ಪ್ರಕರಣಕ್ಕೆ ಸಂಬಂಧ ಪಾಲಿಕೆಯ ಆರು ಅಧಿಕಾರಿಗಳನ್ನು ಉತ್ತರ ಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. ಜೂನ್ 23 ಹಾಗೂ 26ರಂದು ಸುರಿದ ಮಳೆಗೆ ರಾಮಪಥವು ಜಲಾವೃತಗೊಂಡಿತ್ತು. ಹಾಗೂ ನೀರು ಅಕ್ಕಪಕ್ಕದ ಮನೆಗಳಿಗೂ ನುಗ್ಗಿತ್ತು. ರಾಮ ಮಂದಿರಕ್ಕೆ ಸಂ‍ಪರ್ಕ ಕಲ್ಪಿಸುವ 14 ಕಿಮೀ ಉದ್ದದ … Continued

ಮಳೆಗೆ ಅಯೋಧ್ಯೆ ರಾಮ ಮಂದಿರದ ಗರ್ಭಗುಡಿ ಮೇಲ್ಛಾವಣಿಯಲ್ಲಿ ಸೋರಿಕೆ: ಪ್ರಧಾನ ಅರ್ಚಕ

ಅಯೋಧ್ಯೆ: ಜನವರಿ 22 ರಂದು ಸಾರ್ವಜನಿಕ ದರ್ಶನಕ್ಕೆ ಉದ್ಘಾಟನೆಗೊಂಡ ನಂತರ, ಮೊದಲ ಭಾರಿ ಮಳೆಗೆ ಅಯೋಧ್ಯೆ ರಾಮ ಮಂದಿರದ ದೇವಾಲಯದ ಗರ್ಭಗುಡಿಯ ಮೇಲ್ಛಾವಣಿಯಿಂದ ನೀರು ಸೋರಿಕೆಯಾಗುತ್ತಿದೆ ಎಂದು ದೇಗುಲದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ. ದೇವಸ್ಥಾನದ ಆವರಣದಿಂದ ಮಳೆ ನೀರು ಹರಿದು ಹೋಗಲು ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಸೋರಿಕೆಯಾಗಿದೆ. ದೇವಸ್ಥಾನದ ಅಧಿಕಾರಿಗಳು ಸೂಕ್ತ … Continued

ಅಯೋಧ್ಯೆ ರಾಮಮಂದಿರ ಆವರಣದಲ್ಲಿ ಮೊಬೈಲ್ ಬಳಕೆ ನಿಷೇಧ

ಅಯೋಧ್ಯೆ : ಜನವರಿ 22ರಂದು ಉದ್ಘಾಟನೆಗೊಂಡ ಅಯೋಧ್ಯೆಯ ರಾಮಮಂದಿರದ ಆವರಣ ಮತ್ತು ಮಂದಿರದ ಒಳಗೆ ಇನ್ಮುಂದೆ ಮೊಬೈಲ್ ಬಳಕೆ ಮಾಡುವಂತಿಲ್ಲ. ದೇಗುಲದ ಆವರಣದ ಮತ್ತು ಮಂದಿರದ ಒಳಗೆ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದೇವಾಲಯದ ಟ್ರಸ್ಟ್ ತಿಳಿಸಿದೆ. ರಾಮಮಂದಿರ ಟ್ರಸ್ಟ್ ನ ಪದಾಧಿಕಾರಿಗಳು ಐಜಿ ಹಾಗೂ ಕಮಿಷನರ್ ಜೊತೆಗಿನ ಸಭೆ ನಡೆಸಲಾಗಿದ್ದು, ಭದ್ರತಾ ದೃಷ್ಟಿಯಿಂದ  … Continued