ಅಯೋಧ್ಯೆ ರಾಮ ಮಂದಿರ ಉದ್ಘಾಟನೆ : ವಿರಾಟ ಕೊಹ್ಲಿಯಂತೆ ಕಾಣುವ ತದ್ರೂಪಿ ಪ್ರತ್ಯಕ್ಷ, ಕಿಂಗ್‌ ಕೊಹ್ಲಿ ಎಂದೇ ಭಾವಿಸಿ ಸೆಲ್ಫಿಗೆ ಮುಗಿಬಿದ್ದ ಜನ..| ವೀಕ್ಷಿಸಿ

ಅಯೋಧ್ಯೆ : ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಸೋಮವಾರ ಅದ್ಧೂರಿಯಾಗಿ ನೆರವೇರಿದ್ದು, ಮಂಗಳವಾರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಾಲಿವುಡ್‌ ಸೇರಿ ಹಲವು ಕ್ಷೇತ್ರಗಳ ತಾರೆಯರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದರೆ ಇದೇವೇಳೆ ಭಾರತದ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿರಾಟ ಕೊಹ್ಲಿಯಂತೆ ಕಾಣುವ ವ್ಯಕ್ತಿಯೊಬ್ಬರು ನೀಲಿ ಜರ್ಸಿಯಲ್ಲಿ  ಕಾಣಿಸಿಕೊಂಡಿದ್ದು, ಆತ … Continued

ವೀಡಿಯೊ…| ನಾವು ಅಯೋಧ್ಯೆಯಲ್ಲಿ ಏನು ನೋಡಿದ್ದೇವೆ…”: ರಾಮ ಮಂದಿರ ಕಾರ್ಯಕ್ರಮದ ಮಿಂಚು ನೋಟ ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸೋಮವಾರ ಉದ್ಘಾಟನೆ ಮಾಡಿದ ಕುರಿತಾದ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ ಮತ್ತು “ಮುಂದಿನ ವರ್ಷಗಳಲ್ಲಿ ಇದು ನಮ್ಮ ನೆನಪಿನಲ್ಲಿ ಉಳಿಯುತ್ತದೆ” ಎಂದು ಹೇಳಿದ್ದಾರೆ. ಮೂರು ನಿಮಿಷಗಳ ವೀಡಿಯೊದಲ್ಲಿ, ಮಡಚಿದ ಕೆಂಪು ದುಪಟ್ಟಾದಲ್ಲಿ ಬೆಳ್ಳಿಯ ಛತ್ರಿಯನ್ನು ಹಿಡಿದುಕೊಂಡು ಪ್ರಧಾನಿ ದೇವಾಲಯದ ಗರ್ಭಗುಡಿಗೆ ಕಾಲಿಡುತ್ತಿರುವುದನ್ನು ಕಾಣಬಹುದು. ನೂತನವಾಗಿ ನಿರ್ಮಿಸಲಾದ … Continued

1528ರಿಂದ 2024ರ ರಾಮಮಂದಿರ ಉದ್ಘಾಟನೆವರೆಗೆ : 500 ವರ್ಷಗಳ ಕಾಯುವಿಕೆ, ಶತಮಾನದ ಕಾನೂನು ಸಂಘರ್ಷಗಳು ; ರಾಮಜನ್ಮಭೂಮಿ ಹೋರಾಟ ಸಾಗಿಬಂದ ಹಾದಿ…

ನವದೆಹಲಿ : ಅಯೋಧ್ಯೆಯಲ್ಲಿ ಸುಮಾರು 400 ಕಂಬಗಳು, 44 ಬಾಗಿಲುಗಳುಳ್ಳ ನೂತನ ರಾಮಂದಿರದ ನೂತನ ರಾಮನ ವಿಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರಾಣ ಪ್ರತಿಷ್ಠೆ ಮಾಡಿದರು. ನೂರಾರು ಧಾರ್ಮಿಕ ವ್ಯಕ್ತಿಗಳು, ರಾಜಕಾರಣಿಗಳು ಮತ್ತು ಸೆಲೆಬ್ರಿಟಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಅಯೋಧ್ಯಾ ನಗರದಲ್ಲಿ ನಡೆದ ಸಮಾರಂಭಕ್ಕೆ ದೇಶವು ಸಾಕ್ಷಿಯಾಯಿತು. ಅಯೋಧ್ಯೆಯಲ್ಲಿ ಈ ನೂತನ ರಾಮಮಂದಿರ ನಿರ್ಮಾಣ ಆಗುವ … Continued

ಅಯೋಧ್ಯೆ ರಾಮಮಂದಿರದ ರಾಮಲಲ್ಲಾ ವಿಗ್ರಹದ ಮೇಲೆ ಯಾವೆಲ್ಲ ಆಭರಣಗಳಿವೆ…?

ಅಯೋಧ್ಯೆ: ರಾಮ ಮಂದಿರದಲ್ಲಿ ಭಗವಾನ್‌ ರಾಮ ಲಲ್ಲಾ ವಿಗ್ರಹ ‘ಪ್ರಾಣ ಪ್ರತಿಷ್ಠೆ’ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅದ್ಧೂರಿ ಸಮಾರಂಭದಲ್ಲಿ ನೆರವೇರಿಸಿದರು. ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮದಲ್ಲಿ ಸಾವಿರಾರು ಸಂತರು, ಕಲಾವಿದರು, ಸೆಲೆಬ್ರಿಟಿಗಳು, ಉದ್ಯಮಿಗಳು, ರಾಜಕಾರಣಿಗಳು ಸೇರಿದಂತೆ ಏಳು ಸಾವಿರಕ್ಕೂ ಹೆಚ್ಚು ವಿಶೇಷ ಆಹ್ವಾನಿತರು ಭಾಗವಹಿಸಿದ್ದರು. ಜನವರಿ 23 ರಿಂದ ಭಕ್ತರಿಗಾಗಿ ದೇವಾಲಯವನ್ನು … Continued

ವೀಡಿಯೊ…| ರಾಮಮಂದಿರ ಉದ್ಘಾಟನೆ : ಅಯೋಧ್ಯೆಯಲ್ಲಿ ಪರಸ್ಪರ ಅಪ್ಪಿಕೊಂಡು ಆನಂದ ಭಾಷ್ಪ ಸುರಿಸಿದ ಸಾಧ್ವಿ ಋತಂಭರಾ-ಉಮಾಭಾರತಿ

ಅಯೋಧ್ಯೆ: ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಉಮಾಭಾರತಿ ಪಾಲ್ಗೊಂಡಿದ್ದಾರೆ. ಅವರು 32 ವರ್ಷ 46 ದಿನಗಳ ಹಿಂದೆ ಇದೇ ಪವಿತ್ರ ಪಟ್ಟಣದಲ್ಲಿದ್ದರು. ಅಂದು ಬಾಬರಿ ಮಸೀದಿಯನ್ನು ಹಿಂದೂ ಕಾರ್ಯಕರ್ತರು ಧ್ವಂಸಗೊಳಿಸಿದ್ದರು. ಇಂದು, ಅದೇ ಸ್ಥಳದಲ್ಲಿ ಭವ್ಯವಾದ ರಾಮಮಂದಿರವೊಂದು ನಿರ್ಮಾಣವಾಗಿದ್ದು, ಕೋಟ್ಯಂತರ ಹಿಂದೂಗಳು ಭಗವಾನ್ ರಾಮನ ಜನ್ಮಸ್ಥಳವೆಂದು ನಂಬುತ್ತಾರೆ. ರಾಂ ಜನ್ಮಭೂಮಿ ಆಂದೋಲನದ ಮುಂಚೂಣಿಯಲ್ಲಿದ್ದ … Continued

ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಲಾಲ ಕೃಷ್ಣ ಅಡ್ವಾಣಿ ಪಾಲ್ಗೊಳ್ಳುತ್ತಿಲ್ಲ…

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ತೀವ್ರ ಚಳಿಯ ಕಾರಣ ಇಂದು, ಸೋಮವಾರ ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. 96ರ ಹರೆಯದ ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರು ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಎಚ್‌ಪಿಯ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕಕುಮಾರ … Continued

ಪ್ರಧಾನಿ ಮೋದಿ ಅಯೋಧ್ಯೆ ಕಾರ್ಯಕ್ರಮದ ವೇಳಾಪಟ್ಟಿ ಹೀಗಿದೆ….ರಾಮ ಮಂದಿರ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರ ಇಲ್ಲಿ ನೋಡಿ

ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಲೈವ್‌  [  ಅಯೋಧ್ಯಾ : ಅಯೋಧ್ಯೆಯಲ್ಲಿ ಪೂಜಾ ಕೈಂಕರ್ಯಗಳು ಪ್ರಾರಂಭವಾಗಿದ್ದು ಪೂಜಾರಿಗಳು ವಿವಿಧ ಪೂಜಾ ವಿಧಿ ವಿಧಾನಗಳನ್ನು ಶಾಸ್ತ್ರೊಕ್ತವಾಗಿ ನೆರವೇರಿಸುತ್ತಿದ್ದಾರೆ. ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಾಧು ಸಂತರು, ಪ್ರಮುಖ ಕೈಗಾರಿಕೋದ್ಯಮಿಗಳು, ಬಾಲಿವುಡ್‌ ತಾರೆಯರು ಸೇರಿದಂತೆ ಸುಮಾರು ಎಂಟು ಸಾವಿರ ಗಣ್ಯರು ಭಾಗಿಯಾಗುತ್ತಿದ್ದಾರೆ. ಬಾಲರಾಮನ … Continued

ವೀಡಿಯೊ…| ಅಯೋಧ್ಯೆಯಲ್ಲಿ ಭಗವಾನ್ ರಾಮಲಲ್ಲಾ ವಿಗ್ರಹದ ‘ಪ್ರಾಣ ಪ್ರತಿಷ್ಠೆ’ ಸಮಾರಂಭವನ್ನು ಮರಳಿನಲ್ಲಿ ಅದ್ಭುತವಾಗಿ ಚಿತ್ರಿಸಿದ ಕಲಾವಿದ | ವೀಕ್ಷಿಸಿ

ಸೋಮವಾರ ಭವ್ಯವಾದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ವಿಗ್ರಹದ ‘ಪ್ರಾಣ ಪ್ರತಿಷ್ಠಾ’ (ಪ್ರತಿಷ್ಠಾಪನೆ) ಸಮಾರಂಭವನ್ನು ಅದ್ಭುತವಾಗಿ ಚಿತ್ರಿಸುವ ಮರಳು ಅನಿಮೇಷನ್ ಅನ್ನು ಒಡಿಶಾ ಮೂಲದ ಕಲಾವಿದರೊಬ್ಬರು ಹಂಚಿಕೊಂಡಿದ್ದಾರೆ. ಆರು ನಿಮಿಷಗಳ ವೀಡಿಯೊದಲ್ಲಿ ಮರಳು ಕಲಾವಿದ ಮಾನಸ್ ಸಾಹೂ ಎಂಬವರು ಬ್ರಷ್‌ನ ಬದಲಿಗೆ ಕ್ಯಾನ್ವಾಸ್ ಮತ್ತು ಮರಳಿನ ಮೇಲೆ ತನ್ನ ಕೈಗಳನ್ನು ಬಳಸಿ ಚಿತ್ರಿಸುವುದನ್ನು ತೋರಿಸುತ್ತದೆ. ಕಲಾವಿದನು ರಾಮನ … Continued

ರಾಮ ಮಂದಿರ ಉದ್ಘಾಟನೆ : ಜನವರಿ 22 ರಂದು ಸಾರ್ವಜನಿಕ ರಜೆ ಘೋಷಿಸಿದ ಕಾಂಗ್ರೆಸ್ ಆಡಳಿತದ ಮೊದಲ ರಾಜ್ಯವಾದ ಹಿಮಾಚಲ..!

ಶಿಮ್ಲಾ: ಅಯೋಧ್ಯೆಯಲ್ಲಿ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಸರ್ಕಾರ ಜನವರಿ 22 ರಂದು ಸಾರ್ವಜನಿಕ ರಜೆ ಘೋಷಿಸಿದೆ. ಹಿಮಾಚಲ ಪ್ರದೇಶ ರಾಮಮಂದಿರ ಕಾರ್ಯಕ್ರಮಕ್ಕೆ ರಜೆ ಘೋಷಿಸಿದ ಏಕೈಕ ಕಾಂಗ್ರೆಸ್ ಆಡಳಿತದ ರಾಜ್ಯವಾಗಿದೆ. ಭಗವಾನ್‌ ರಾಮಲಲ್ಲಾ ‘ಪ್ರಾಣ ಪ್ರತಿಷ್ಠಾ’ದ ಸಂದರ್ಭದಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಜನವರಿ … Continued

ಅಯೋಧ್ಯೆಯ ರಾಮ ಮಂದಿರಕ್ಕೆ ಪಾಕ್‌ ಆಕ್ರಮಿತ ಕಾಶ್ಮೀರದಿಂದ ನೀರು ಕಳುಹಿಸಿದ ಮುಸ್ಲಿಂ ವ್ಯಕ್ತಿ…!

ನವದೆಹಲಿ: ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಭಗವಾನ್‌ ರಾಮಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಬಳಸಲು ಮುಸ್ಲಿಂ ವ್ಯಕ್ತಿಯೊಬ್ಬರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಶಾರದಾ ಪೀಠದ ಕುಂಡದಿಂದ ಪವಿತ್ರ ನೀರನ್ನು ಸಂಗ್ರಹಿಸಿ ಬ್ರಿಟನ್ ಮೂಲಕ ಭಾರತಕ್ಕೆ ಕಳುಹಿಸಿದ್ದಾರೆ…! 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರದಲ್ಲಿ ಬಾಲಾಕೋಟ್ ವೈಮಾನಿಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ … Continued