ಬೆಂಗಳೂರು ಟ್ರಾಫಿಕ್‌ನಲ್ಲಿ ಸಿಲುಕಿ ಸಮಯಕ್ಕೆ ಸರಿಯಾಗಿ ತುರ್ತು ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಸಾವು

ಬೆಂಗಳೂರು : ಬೆಂಗಳೂರಿನ ಟ್ರಾಫಿಕ್‌ನಲ್ಲಿ ಆಂಬುಲೆನ್ಸ್ ಸಿಲುಕಿದ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಆಸ್ಪತ್ರೆ ತಲುಪಲು ವಿಳಂಬವಾಗಿ ತುರ್ತು ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಹುದಾ ಕೌಸರ್​​ ಎಂಬ ಒಂದೂವರೆ ವರ್ಷದ ಮಗು ನೆಲಮಂಗಲದ ಬಳಿ ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಂಡು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಹೋಗಲಾಗದೆ ಚಿಕಿತ್ಸೆ ದೊರಕದೆ ಮೃತಪಟ್ಟಿದೆ. … Continued

ಮೂರು ಅಂತಸ್ತಿನ ಕಟ್ಟಡದ ಛಾವಣಿಯಿಂದ 4 ತಿಂಗಳ ಮಗು ಎಸೆದ ಮಂಗ

ಬರೇಲಿ: ಉತ್ತರ ಪ್ರದೇಶದ ಬರೇಲಿಯ ಗ್ರಾಮಾಂತರ ಪ್ರದೇಶದಲ್ಲಿ ಕೋತಿಯೊಂದು ಮೂರು ಅಂತಸ್ತಿನ ಮನೆಯ ಛಾವಣಿಯಿಂದ ನಾಲ್ಕು ತಿಂಗಳ ಗಂಡು ಮಗುವನ್ನು ಎಸೆದ ಪರಿಣಾಮ ಅದು ಮೃತಪಟ್ಟಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಘಟನೆ ಕುರಿತು ವರದಿಯಾಗಿದ್ದು, ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಕಳುಹಿಸಲಾಗಿದೆ ಎಂದು ಬರೇಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಲಿತ್ ವರ್ಮಾ ತಿಳಿಸಿದ್ದಾರೆ. … Continued