ರೋಹಿಣಿ ಸಿಂಧೂರಿ ಮಾನಹಾನಿ ಪ್ರಕರಣ: ಡಿ.ರೂಪಾಗೆ ಜಾಮೀನು ನೀಡಿದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ

ಬೆಂಗಳೂರು : ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರು ದಾಖಲಿಸಿರುವ ಕ್ರಿಮಿನಲ್‌ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರಿಗೆ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಮಂಗಳವಾರ ಜಾಮೀನು ಮಂಜೂರು ಮಾಡಿದೆ. ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಮಾನಹಾನಿ ಪ್ರಕರಣದ ಸಂಬಂಧ ರೂಪಾ ಅವರಿಗೆ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿತ್ತು. ವಿಚಾರಣೆಯನ್ನು 24ನೇ … Continued

ಕಂಗನಾಗೆ ರಣೌತ್‌ಗೆ ಜಾಮೀನು

ಮುಂಬೈ: ಮಾನಹಾನಿ ಪ್ರಕರಣದಲ್ಲಿ ನ್ಯಾಯಾಲಯ ತನ್ನ ವಿರುದ್ಧ ಹೊರಡಿಸಿದ ಜಾಮೀನು ವಾರಂಟ್ ರದ್ದತಿಗಾಗಿ ನ್ಯಾಯಾಲಯಕ್ಕೆ ತೆರಳಿದ ನಂತರ ಮುಂಬೈನ ಅಂಧೇರಿ ನ್ಯಾಯಾಲಯವು ಬಾಲಿವುಡ್ ನಟಿ ಕಂಗನಾ ರಣೌತ್ ಅವರಿಗೆ ಜಾಮೀನು ನೀಡಿದೆ. 15,000 ಜಾಮೀನು ಮತ್ತು 20,000 ರೂ. ನಗದು ನೀಡಿದ ನಂತರ ಆಕೆಗೆ ಜಾಮೀನು ನೀಡಲಾಗಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. … Continued

ಯೋಗೀಶ್‌ ಗೌಡ ಕೊಲೆ ಪ್ರಕರಣ :ವಿನಯ್‌ ಕುಲಕರ್ಣಿ ಜಾಮೀನು ಅರ್ಜಿ ವಜಾ ಮಾಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌

ಬೆಂಗಳೂರು: ಧಾರವಾಡ ಜಿಪಂ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ವಜಾ ಮಾಡಿದೆ. ಈ ಪ್ರಕರದಲ್ಲಿ ತಮಗೆ ಜಾಮೀನು ನೀಡುವಂತೆ ಕೋರಿ ವಿನಯ್‌ ಕುಲಕರ್ಣಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಅಕ್ಷೇಪಣೆ ಸಲ್ಲಿಸಿದ್ದ ಸಿಬಿಐ, ಯೋಗೀಶ್‌ … Continued

ರೈತ ಹೋರಾಟಗಾರ್ತಿ ನವ್‌ದೀಪ‌ ಕೌರ್‌ಗೆ ಜಾಮೀನು

ರೈತ ಹೋರಾಟಗಾರ್ತಿ ನವ್ದೀಪ್‌ ಕೌರ್‌ಗೆ ಪಂಜಾಬ್‌ ಮತ್ತು ಹರಿಯಾಣ ಉಚ್ಚ ನ್ಯಾಯಾಲಯ ಜಾಮೀನು ನೀಡಿದೆ. ಈ ವರ್ಷದ ಆರಂಭದಲ್ಲಿ ದೆಹಲಿಯ ಗಡಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ೨೩ರ ಹರೆಯದ ನವದೀಪ್‌ ಕೌರ್‌ ಅವರನ್ನು ಬಂಧಿಸಲಾಗಿತ್ತು. ನದೀಪ್‌ ಕೊಲೆ ಯತ್ನ ಹಾಗೂ ಸುಲಿಗೆಯ ಆರೋಪ ಎದುರಿಸುತ್ತಿದ್ದಾರೆ. ಸೋನಿಪತ್‌ನ ಕೈಗಾರಿಕಾ ಘಟಕಕ್ಕೆ ಮುತ್ತಿಗೆ ಹಾಕಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ … Continued

ಕಬ್ಬಿಣ ಅದಿರು ಗಣಿ ಪ್ರಕರಣದಲ್ಲಿ ವರವರರಾವ್‌‌ಗೆ ಜಾಮೀನು

ನಾಗಪುರ: ಸೂರಜ್‌ಗರ ಕಬ್ಬಿಣ ಅದಿರು ಗಣಿ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ವರವರರಾವ್‌ಗೆ ಬಾಂಬೆ ಉಚ್ಚ ನ್ಯಾಯಾಲಯದ ನಾಗಪುರ ಪೀಠ ಜಾಮೀನು ನೀಡಿದೆ. ೮೨ ವರ್ಷದ ವರವರರಾವ್‌ ಹಾಗೂ ನ್ಯಾಯವಾದಿ ಸುರೇಂದ್ರ ಗದ್ಲಿಂಗ್‌ ಗಡಚಿರೋಲಿ ಠಾಣೆ ಪೊಲೀಸರು ೨೦೧೯ರ ಫೆಬ್ರವರಿಯಲ್ಲಿ ಬಂಧಿಸಿದ್ದರು. ನ್ಯಾಯಮೂರ್ತಿ ಸ್ವಪ್ನಾ ಜೋಶಿ ಜಾಮೀನು ನೀಡಿದರು. ವರವರರಾವ್‌ ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ವೈದ್ಯಕೀಯ … Continued

ಮಾಜಿ ಮೇಯರ್‌ ಸಂಪತ್‌ರಾಜ್‌ಗೆ ಶರತ್ತುಬದ್ಧ ಜಾಮೀನು

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮಾಜಿ ಮೇಯರ್ ಸಂಪತ್‍ರಾಜ್ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಶರತ್ತುಬದ್ಧ ಜಾಮೀನು ನೀಡಿದೆ. ಸಂಪತ್‍ರಾಜ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ನಾ ಶರತ್ತುಬದ್ಧ ಜಾಮೀನು ನೀಡಿದ್ದಾರೆ. ಸಂಪತ್‍ರಾಜ್ ಪರ ವಕೀಲರಾದ ಮಹೇಶ್, ಸಿ.ವಿ.ನಾಗೇಶ್ ಈಗಾಗಲೇ ಎರಡು ಆರೋಪ ಪಟ್ಟಿ ದಾಖಲಿಸಲಾಗಿದೆ. … Continued

ಪತ್ರಕರ್ತ ಪುನಿಯಾಗೆ ಜಾಮೀನು

ನವ ದೆಹಲಿ: :ಸಿಂಗು ಗಡಿಯಲ್ಲಿ ಪೊಲೀಸರ  ಕರ್ತವ್ಯಕ್ಕೆ ಅಡ್ಡಿ   ಮತ್ತು ಪೊಲೀಸ್ ಸಿಬ್ಬಂದಿಗೆ ನೋವುಂಟು ಮಾಡಿದ್ದಾರೆ ಎಂಬ ಆರೋಪದ ಮೇಲೆ ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದ  ಸ್ವತಂತ್ರ ಪತ್ರಕರ್ತ (ಫ್ರೀಲ್ಯಾನ್ಸ್ ‌ಜರ್ನಲಿಸ್ಟ್)  ಮಂದೀಪ್ ಪುನಿಯಾ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ. ಆದೇಶದಲ್ಲಿ, ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ರೋಹಿಣಿ ನ್ಯಾಯಾಲಯ) ಸತ್ವೀರ್ ಸಿಂಗ್ ಲಂಬಾ … Continued