ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ ರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ ದಾಳಿ

ಬಳ್ಳಾರಿ: ಬಳ್ಳಾರಿ ನಗರ ಕಾಂಗ್ರೆಸ್‌ ಶಾಸಕ ನಾರಾ ಭರತ ರೆಡ್ಡಿ ಮನೆ, ಕಚೇರಿಗಳ ಮೇಲೆ ಶನಿವಾರ ಮುಂಜಾನೆ ಜಾರಿ ನಿರ್ದೇಶನಾಲಯ (ಇ.ಡಿ)ದ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಅಲ್ಲದೆ, ಅವರ ತಂದೆ ಹಾಗೂ ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮತ್ತು ಸಂಬಂಧಿಗಳ ಮನೆಗಳು, ಕಚೇರಿಗಳ ಮೇಲೆಯೂ ದಾಳಿ ನಡೆಸಲಾಗಿದೆ. ಜಾರಿ ನಿರ್ದೇಶನಾಲಯ … Continued

ನಕಲಿ ನೋಟು ಜಾಲ : ಕರ್ನಾಟಕದ ಬಳ್ಳಾರಿ ಸೇರಿ 4 ರಾಜ್ಯಗಳಲ್ಲಿ ಏಕಕಾಲದಲ್ಲಿ ಎನ್‌ ಐ ಎ ದಾಳಿ

ನವದೆಹಲಿ: ಕರ್ನಾಟಕದ ಬಳ್ಳಾರಿ ಜಿಲ್ಲೆ ಹಾಗೂ ಇತರ ಮೂರು ರಾಜ್ಯಗಳ ವಿವಿಧ ಸ್ಥಳಗಳಲ್ಲಿ ಶನಿವಾರ ಶೋಧ ಕಾರ್ಯ ನಡೆಸಿರುವ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ನಕಲಿ ನೋಟು ಜಾಲವನ್ನು ಭೇದಿಸಿದೆ. ಉತ್ತರಪ್ರದೇಶ, ಬಿಹಾರ, ಮಹಾರಾಷ್ಟ್ರ, ಕರ್ನಾಟಕದಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಈ ಪ್ರಕರಣವು ಶಂಕಿತರಿಂದ ರೂಪಿಸಲಾದ ದೊಡ್ಡ ಪಿತೂರಿಗೆ ಸಂಬಂಧಿಸಿದ್ದು, ಕೆಲವರನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.₹500, … Continued

ನೂತನ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಾವುಟ ಬಿಡುಗಡೆ ಮಾಡಿದ ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ

ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಇತ್ತೀಚೆಗೆ ಘೋಷಿಸಿರುವ ನೂತನ ಪಕ್ಷವಾದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಾವುಟವನ್ನು ಅವರ ಪತ್ನಿ ಅರುಣಾ ಲಕ್ಷ್ಮಿ ಅವರು ಬೆಣಕಲ್ ಗ್ರಾಮದಲ್ಲಿ ಭಾನುವಾರ ಅನಾವರಣ ಮಾಡಿದ್ದಾರೆ. ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿಗೆ ಪ್ರವೇಶ ನಿಷೇಧ ಆಗಿರುವ ಕಾರಣ ಅಲ್ಲಿ ಅವರ ಪತ್ನಿ ರಾಜಕೀಯದ ಅಖಾಡಾಕ್ಕೆ ಇಳಿದಿದ್ದಾರೆ. ಬಾವುಟದಲ್ಲಿ ಹಸ್ತಲಾಘವ … Continued

ಮನಸ್ಸು ಮಾಡಿದರೆ ನಾನು ಒಂದು ದಿನವಾದರೂ ಮುಖ್ಯಮಂತ್ರಿ ಆಗಬಲ್ಲೆ : ಜನಾರ್ದನ ರೆಡ್ಡಿ

ಬಳ್ಳಾರಿ: ನನಗೆ ಶಾಸಕ, ಮಂತ್ರಿಯಾಗಬೇಕೆಂಬ ಆಸೆಯಿಲ್ಲ. ಮನಸ್ಸು ಮಾಡಿದರೆ ಒಂದು ದಿನವಾದರೂ ಮುಖ್ಯಮಂತ್ರಿಯಾಗಬಲ್ಲೆ ಎಂದು ಮಾಜಿ ಸಚಿವ ಬಿ. ಜನಾರ್ದನ ರೆಡ್ಡಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಂಗಳವಾರ ನಡೆದ ಶಾಸಕ ಸೋಮಶೇಖರ್ ರೆಡ್ಡಿ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೆಡ್ಡಿ ಮತ್ತು ರಾಮುಲು ಸಹೋದರರಿಗೆ ಹಣದ ಅವಶ್ಯಕತೆ ಇಲ್ಲ. ನನಗಂತೂ ಶಾಸಕ, ಮಂತ್ರಿಯಾಗುವ ಆಸೆ, ಆಕಾಂಕ್ಷೆಗಳಿಲ್ಲ. ಮನಸ್ಸು … Continued

ಬಳ್ಳಾರಿ: ಡ್ರಾಮಾ ಜ್ಯೂನಿಯರ್ ನೋಡಲು ಮನೆ ಬಿಟ್ಟು ಬೆಂಗಳೂರಿಗೆ ಬಂದ 4 ಮಕ್ಕಳು

ಬಳ್ಳಾರಿ: ಖಾಸಗಿ ಮನೋರಂಜನಾ ವಾಹಿನಿಯಲ್ಲಿ ಬರುವ ‘ಡ್ರಾಮಾ ಜ್ಯೂನಿಯರ್’ ರಿಯಾಲಿಟಿ ಶೋ ನೋಡಲು ಮನೆ ಬಿಟ್ಟು ಬೆಂಗಳೂರಿನತ್ತ ಮಕ್ಕಳು ಬಂದ ಘಟನೆ ಬಳ್ಳಾರಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬೇಸಿಗೆ ರಜೆ ನೀಡಿದ ಹಿನ್ನೆಲೆಯಲ್ಲಿ ಬಳ್ಳಾರಿಯ ಚಂದ್ರಶೇಕರ ಹಾಗೂ ವೀರೇಶ ಎಂಬವರ ನಾಲ್ಕು ಹೆಣ್ಣು ಮಕ್ಕಳು ಮನೆಯಲ್ಲಿ ಆಟವಾಡುತ್ತಿದ್ದರು. ಆಟ ಆಡುವುದು ಬಿಟ್ಟು ಓದಿನ ಕಡೆ ಗಮನ … Continued