ಸ್ವಲ್ಪವೇ ಅಮಲು ಪದಾರ್ಥ ಬೆರೆಸಿದ್ರೂ ಗುಟ್ಕಾ , ಪಾನ್‌ ಮಸಲಾ ಸಂಪೂರ್ಣ ನಿಷೇಧ; ಸಿಎಂ ಶಿವಕುಮಾರ ಎಚ್ಚರಿಕೆ

ಬೆಂಗಳೂರು: ಸ್ವಲ್ಪವೇ ಅಮಲು ಪದಾರ್ಥ ಬೆರಕೆ ಮಾಡಿದರೂ ಕರ್ನಾಟಕದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಮಾರಾಟ ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಣದಲ್ಲಿ ಭಾನುವಾರ ಏರ್ಪಡಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 31ನೇ ಸಂಸ್ಥಾಪನಾ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ … Continued

ಜೂನ್ 22ರ ವರೆಗೆ ದೇಶಾದ್ಯಂತ ಟೆಲಿಗ್ರಾಂ ಬಂದ್‌ ; ನೀಟ್ ಮರುಪರೀಕ್ಷೆ ಅಕ್ರಮ ತಡೆಗೆ ಕ್ರಮ : ತೊಂದರೆಗೆ ಕ್ಷಮೆ ಕೋರಿದ ಎನ್‌ಟಿಎ

ನವದೆಹಲಿ: ಮುಂಬರುವ ನೀಟ್ (NEET UG 2026) ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಯಾವುದೇ ರೀತಿಯ ದುರುಪಯೋಗವನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ದೇಶಾದ್ಯಂತ ಜನಪ್ರಿಯ ಇನ್‌ಸ್ಟಂಟ್ ಮೆಸೇಜಿಂಗ್ ಆ್ಯಪ್ ಆದ ಟೆಲಿಗ್ರಾಂ (Telegram) ಅನ್ನು ಜೂನ್ 22ರವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರವು ನಿರ್ಬಂಧಿಸಿದೆ. ಜೂನ್ 21 ರಂದು ನೀಟ್ ಮರುಪರೀಕ್ಷೆ … Continued

‘ಡಾನ್ 3’ ವಿವಾದ: ಸಿನಿಮಾ ಕಾರ್ಮಿಕರ ಒಕ್ಕೂಟದಿಂದ ಸೂಪರ್‌ಸ್ಟಾರ್ ರಣವೀರ ಸಿಂಗ್‌ಗೆ ‘ಅಸಹಕಾರ’ದ ನಿಷೇಧ

ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯ್ಸ್ (FWICE) ನಟ ರಣವೀರ ಸಿಂಗ್ ವಿರುದ್ಧ ‘ಅಸಹಕಾರ’ (Non cooperation) ಆದೇಶ ಹೊರಡಿಸಿದ್ದು, ಈ ಮೂಲಕ ಚಿತ್ರರಂಗದಲ್ಲಿ ರಣವೀರ್ ಸಿಂಗ್ ಅವರೊಂದಿಗೆ ಯಾರೂ ಸಹಕರಿಸದಂತೆ ಮತ್ತು ಕೆಲಸ ಮಾಡದಂತೆ ಸೂಚಿಸಿ, ಪರೋಕ್ಷವಾಗಿ ಬ್ಯಾನ್ ಮಾಡಲಾಗಿದೆ. ನಿರ್ದೇಶಕ ಫರ್ಹಾನ್ ಅಖ್ತರ್ ಅವರ ಬಹುನಿರೀಕ್ಷಿತ ‘ಡಾನ್ 3’ (Don 3) … Continued

ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧ

ಬೆಂಗಳೂರು :  ಕರ್ನಾಟಕ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ಮತ್ತು ವಿತರಣೆಗೆ ಸಂಬಂಧಿಸಿದಂತೆ ಪೆಟ್ರೋಲ್ ಬಂಕ್‌ಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಗ್ರಾಹಕರ ಹಿತದೃಷ್ಟಿಯಿಂದ ಹಾಗೂ ಸುರಕ್ಷತೆಯ ಕಾರಣಗಳಿಗಾಗಿ ನಿಯಂತ್ರಿತ ಇಂಧನ ವಿತರಣಾ ಪದ್ಧತಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಇಲಾಖೆ ಎಲ್ಲಾ ಇಂಧನ ಕೇಂದ್ರಗಳಿಗೆ ನಿರ್ದೇಶನ ನೀಡಿದೆ ಮಾರ್ಗಸೂಚಿಯ ಪ್ರಕಾರ, … Continued

85 ವರ್ಷಗಳ ನಂತ್ರ ಮದುವೆ ದಿಬ್ಬಣ ಹೊರಡಿಸಿದ ಕುಟುಂಬ; ಮಗುವಿನ ಜನನದಿಂದ ಈ ನಿಷೇಧ ಅಂತ್ಯ…!

ಗಯಾ: ಮಗ್ಗಗಳಿಗೆ ಹೆಸರಾದ ಬಿಹಾರದ ಗಯಾ ಜಿಲ್ಲೆಯ ‘ಪಟ್ವಾ ಟೋಲಿ’ ಎಂಬ ಸಣ್ಣ ನೇಯ್ಗೆಯ ಓಣಿ ಇತ್ತೀಚೆಗೆ ಐತಿಹಾಸಿಕ ಕ್ಷಣವೊಂದು ದಾಖಲಾಗಿದೆ. ಕಳೆದ ಸುಮಾರು 85 ವರ್ಷಗಳಿಂದ ಮದುವೆಯ ಮೆರವಣಿಗೆಯನ್ನೇ ನಡೆಸದ ಕುಟುಂಬವೊಂದು, ಈ ತಿಂಗಳು ಆ ಹಳೆಯ ಸಂಪ್ರದಾಯವನ್ನು ಮುರಿದು ಅದ್ಧೂರಿಯಾಗಿ ಮದುವೆ ಆಚರಿಸಿದೆ. ಈ ವಿಚಿತ್ರ ಸಂಪ್ರದಾಯದ ಹಿಂದೆ ಒಂದು ಕಣ್ಣೀರಿನ ಕಥೆಯಿದೆ. … Continued

ರಷ್ಯಾದಲ್ಲಿ ವ್ಯಾಟ್ಸಾಪ್‌ ಸಂಪೂರ್ಣ ನಿರ್ಬಂಧ…

ಮಾಸ್ಕೋ: ಜಗತ್ತಿನ ಜನಪ್ರಿಯ ಸಂದೇಶ ರವಾನೆ ಅಪ್ಲಿಕೇಶನ್ ಆದ ‘ವ್ಯಾಟ್ಸಾಪ್‌’ (WhatsApp) ಅನ್ನು ರಷ್ಯಾದಲ್ಲಿ ಗುರುವಾರದಿಂದ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಸ್ಥಳೀಯ ಕಾನೂನುಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ ಅಮೆರಿಕ ಮೂಲದ ಮೆಟಾ (Meta) ಕಂಪನಿಯ ಒಡೆತನದ ಈ ಆ್ಯಪ್ ಅನ್ನು ರಷ್ಯಾ ಸರ್ಕಾರ ಅಧಿಕೃತವಾಗಿ ನಿಷೇಧಿಸಿದೆ. ಇದರ ಬದಲಿಗೆ ರಷ್ಯನ್ನರು ಸರ್ಕಾರಿ ಪ್ರಾಯೋಜಿತ ಮ್ಯಾಕ್ಸ್‌ (‘MAX’) ಎಂಬ … Continued

ನಟ ಶಿವಕಾರ್ತಿಕೇಯನ್ ನಟನೆಯ ‘ಪರಾಶಕ್ತಿ’ ಚಿತ್ರಕ್ಕೆ ತಮಿಳುನಾಡು ಯೂತ್ ಕಾಂಗ್ರೆಸ್ ವಿರೋಧ: ಕಾರಣ…?

 ಚೆನ್ನೈ: ತಮಿಳುನಾಡಿನ ಖ್ಯಾತ ನಟ ಶಿವಕಾರ್ತಿಕೇಯನ್ ಅಭಿನಯದ ಇತ್ತೀಚಿನ ಚಿತ್ರ ‘ಪರಾಶಕ್ತಿ’ (Parasakthi) ಇದೀಗ ದೊಡ್ಡ ವಿವಾದಕ್ಕೆ ಗುರಿಯಾಗಿದೆ. ಈ ಚಿತ್ರದಲ್ಲಿ ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಿರುವ ತಮಿಳುನಾಡು ಯೂತ್ ಕಾಂಗ್ರೆಸ್, ಚಿತ್ರವನ್ನು ತಕ್ಷಣವೇ ನಿಷೇಧಿಸಬೇಕೆಂದು ಒತ್ತಾಯಿಸಿದೆ. ಸುಧಾ ಕೊಂಗರ ಪ್ರಸಾದ ನಿರ್ದೇಶನದ ಈ ಸಿನಿಮಾ ಜನವರಿ 10 ರಂದು ಬಿಡುಗಡೆಯಾಗಿತ್ತು. 1960 … Continued

ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆ ನಿಷೇಧ, ‘ನಂದಿನಿ’ ತಿನಿಸು ಕಡ್ಡಾಯ : ಸಿಎಂ ಆದೇಶ

ಬೆಂಗಳೂರು: ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆಯನ್ನು ನಿಷೇಧಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ … Continued

ದೆಹಲಿಯಲ್ಲಿ ನಡೆದ ಅಫ್ಘಾನಿಸ್ತಾನ ವಿದೇಶಾಂಗ ಸಚಿವರ ಪತ್ರಿಕಾಗೋಷ್ಠಿಗೆ ಮಹಿಳಾ ಪತ್ರಕರ್ತರಿಗೆ ನಿಷೇಧ…!

 ನವದೆಹಲಿ : ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಹಿಳೆಯರಿಗೆ ಭಾಗವಹಿಸಲು ಅವಕಾಶ ನೀಡದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅಮೀರ್ ಖಾನ್ ಮುತ್ತಕಿ ಅವರು ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರದ ಭಾಗವಾಗಿದ್ದು, ಈ ಗುಂಪು ಮಹಿಳೆಯರ ಮೇಲೆ ನಿರ್ಬಂಧಗಳನ್ನು ವಿಧಿಸುವುದಕ್ಕೆ, ವಿಶೇಷವಾಗಿ ಅವರು ಕೆಲಸ ಮಾಡುವುದನ್ನು ನಿರ್ಬಂಧಿಸುವುದಕ್ಕೆ ಹೆಸರುವಾಸಿಯಾಗಿದೆ. ಗುರುವಾರ ಭಾರತಕ್ಕೆ … Continued

ಪದಚ್ಯುತ ಮಾಜಿ ಪ್ರಧಾನಿ ಹಸೀನಾ ಪಕ್ಷ ಅವಾಮಿ ಲೀಗ್‌ ನಿಷೇಧಕ್ಕೆ ಮುಂದಾದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ

ಢಾಕಾ : ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಅನ್ನು ನಿಷೇಧಿಸುವ ಬಗ್ಗೆ “ತ್ವರಿತ ನಿರ್ಧಾರ” ತೆಗೆದುಕೊಳ್ಳುವುದಾಗಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಶುಕ್ರವಾರ ಹೇಳಿದೆ. ಹಸೀನಾ ಅವರ ಪಕ್ಷವನ್ನು ವಿಸರ್ಜಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ನೇತೃತ್ವದ ಹೊಸದಾಗಿ ರಚನೆಯಾದ ರಾಷ್ಟ್ರೀಯ ನಾಗರಿಕ ಪಕ್ಷದ (ಎನ್‌ಸಿಪಿ) ಕಾರ್ಯಕರ್ತರು ರಾತ್ರೋರಾತ್ರಿ ಅವರ ಅಧಿಕೃತ ನಿವಾಸದ ಮುಂದೆ ರ್ಯಾಲಿ … Continued