ಬೆಂಗಳೂರು ಕಾಲ್ತುಳಿತ ಪ್ರಕರಣ : ಕೆಎಸ್‌ಸಿಎ ಪದಾಧಿಕಾರಿಗಳಿಗೆ ಹೈಕೋರ್ಟ್‌ ನಿಂದ ದೊಡ್ಡ ರಿಲೀಫ್‌

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವಕ್ಕೂ ಮುನ್ನ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಪದಾಧಿಕಾರಿಗಳ ವಿರುದ್ಧ ಬಲವಂತ ಕ್ರಮಕೈಗೊಳ್ಳಬಾರದು ಎಂದು ಶುಕ್ರವಾರ ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ, ಕೆಎಸ್‌ಸಿಎ ಪದಾಧಿಕಾರಿಗಳು ನ್ಯಾಯಾಲಯದ ವ್ಯಾಪ್ತಿ ತೊರೆಯಬಾರದು ಮತ್ತು ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಬೇಕು ಎಂದೂ ಹೈಕೋರ್ಟ್‌ ಸೂಚಿಸಿದೆ. … Continued