ಹಿಂದೂಸ್ಥಾನೀ ಸಂಗೀತದ ಮೇರು ಗಾಯಕ, ದುರ್ಲಭ ರಾಗಗಳ ನಿಧಿ ಡಾ. ರಾಜಶೇಖರ ಮನ್ಸೂರ ಇನ್ನಿಲ್ಲ

ಧಾರವಾಡ: ಹಿಂದುಸ್ಥಾನಿ ಸಂಗೀತದ ಮೇರು ಗಾಯಕ, ಅಪ್ರಚಲಿತ ರಾಗಗಳನ್ನು ಪ್ರಸ್ತುತಪಡಿಸುವ ದೇಶದ ಕೆಲವೇ ಕೆಲವು ಗಾಯಕರಲ್ಲಿ ಒಬ್ಬರಾಗಿದ್ದ ಡಾ. ರಾಜಶೇಖರ ಮನ್ಸೂರ ಅವರು ಇಂದು ಭಾನುವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಡಾ. ರಾಜಶೇಖರ ಮನ್ಸೂರ ಅವರಿಗೆ ೭೯ ವರ್ಷ ವಯಸ್ಸಾಗಿತ್ತು. ತಂದೆ ದಿವಂಗತ ಡಾ.ಮಲ್ಲಿಕಾರ್ಜುನ ಮನ್ಸೂರ ಅವರಂತೆಯೇ ಹಿಂದೂಸ್ಥಾನೀ ಸಂಗೀತದ ಜೈಪುರ-ಅತ್ರೌಲಿ ಘರಾಣೆಯ ಅಗ್ರ ಗಾಯಕರಾಗಿದ್ದ ರಾಜಶೇಖರ … Continued

ರಾತ್ರಿ ಹೊತ್ತು ಬೊಗಳುತ್ತವೆ ಎಂದು 10 ನಾಯಿಗಳಿಗೆ ವಿಷವಿಕ್ಕಿ ಕೊಂದ ಧೂರ್ತರು..!

ಬೆಂಗಳೂರು: ರಾಜಧಾನಿಯಲ್ಲಿ ಹತ್ತು ಶ್ವಾನಗಳಿಗೆ ವಿಷವಿಟ್ಟು ಸಾಯಿಸಿದ ಅಮಾನವೀಯ ಘಟನೆ ಪರಪ್ಪನ ಅಗ್ರಹಾರ ಬಳಿಯ ರಾಯಸಂದ್ರದಲ್ಲಿ ಬಡೆದ ಬಗ್ಗೆ ವರದಿಯಾಗಿದೆ. ರಾತ್ರಿ ಹೊತ್ತು ನಾಯಿಗಳು ಬೊಗಳುತ್ತವೆ ಎಂದು ಅಪಾರ್ಟ್ ಮೆಂಟ್ ಬಳಿ ಇದ್ದ ಶ್ವಾನಗಳಿಗೆ ದುಷ್ಕರ್ಮಿಗಳು ವಿಷವುಣಿಸಿದ್ದಾರೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಕೆಲ ಶ್ವಾನಗಳು ಅಸ್ವಸ್ಥಗೊಂಡಿದ್ದು, ಅನಿಮಲ್ ಅಸೋಸಿಯೇಷನ್‌ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ್ದು, ಈ … Continued

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ, 6 ಮಂದಿ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಲೈಂಕಿಕ ದೌರ್ಜನ್ಯವೆಸಗಿದ ಆರು ಮಂದಿ ಆರೋಪಿಗಳನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ಬಾಲಕರನ್ನೂ ಸಹ ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ವಿಚಾರಣೆ ಮಾಡಿ ತನಿಖೆ ಮುಂದುವರೆಸಿದ್ದಾರೆ. ಸುಮಾರು 15 ವರ್ಷದ ಅಪ್ರಾಪ್ತ ಬಾಲಕಿ 25 ವರ್ಷದ ಯುವಕನನ್ನು ಪ್ರೀತಿಸುತ್ತಿದ್ದಳು. … Continued

ಕಾರ್ಖಾನೆ ಯಂತ್ರಕ್ಕೆ ವೇಲ್ ಸಿಲುಕಿ ಯುವತಿ ಸಾವು

ಬೆಂಗಳೂರು: ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯಂತ್ರಕ್ಕೆ ವೇಲ್ ಸಿಲುಕಿಕೊಂಡು ಯುವತಿಯೊಬ್ಬರು ಮೃತಪಟ್ಟ ಘಟನೆ ಚಂದ್ರಾಲೇಔಟ್‌ನ ನಾಯಂಡಹಳ್ಳಿಯಲ್ಲಿ ಇಂದು, ಭಾನುವಾರ ಬೆಳಿಗ್ಗೆ ನಡೆದಿದೆ. ಗಂಗೊಂಡನಹಳ್ಳಿಯ ಶಾಜಿಯಾ ಬಾನು(೨೮)ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಾಯಂಡಹಳ್ಳಿಯ ಕೈಗಾರಿಕಾ ಪ್ರದೇಶದ ಜಡ್ ಎಸ್ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಶಾಜಿಯಾ ಬಾನು ಕೆಲಸ ಮಾಡುತ್ತಿದ್ದ ವೇಳೆ ಅವರ ವೇಲ್ ಮಷಿನ್‌ಗೆ ಸಿಲುಕಿ ತಲೆಗೆ ಗಂಭೀರವಾಗಿ … Continued

ಎಸಿಬಿ ದಾಳಿ ವೇಳೆ ಬಿಡಿಎ ಮಧ್ಯವರ್ತಿ ಮನೆಯಲ್ಲಿ 4.5 ಕೆಜಿ ಚಿನ್ನ ಪತ್ತೆ..!

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಲಂಚ ಮತ್ತು ಪ್ರಭಾವ ಬೀರಿ ಸರ್ಕಾರಿ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಆರೋಪದ ಮೇಲೆ ಒಂಬತ್ತು ಮಂದಿ ಖಾಸಗಿ ಮಧ್ಯವರ್ತಿಗಳ ಮೇಲೆ ಮಂಗಳವಾರ ಬೆಳಿಗ್ಗೆ ದಾಳಿ ಮಾಡಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶೋಧ ನಡೆಸುತ್ತಿದೆ. ಮೋಹನ್ ವಿರುದ್ಧ ಭ್ರಷ್ಟಾಚಾರ, ಅವ್ಯವಹಾರದ ಆರೋಪದ ಹಿನ್ನೆಲೆಯಲ್ಲಿ ಆರ್.ಟಿ.ನಗರದ ಮನೋರಾಯನಪಾಳ್ಯದಲ್ಲಿರುವ ಅವರ ಮನೆ … Continued

ಬೆಂಗಳೂರಲ್ಲಿ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು: ಇಂದು, ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ 9 ಕಡೆ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಧಿಕಾರಿಗಳಿಗೆ ಲಂಚದ ಆಮಿಷವೊಡ್ಡಿ ಮತ್ತು ಪ್ರಭಾವ ಬೀರಿ ಕೆಲಸದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ 9 ಮಧ್ಯವರ್ತಿಗಳ ಮೇಲೆ ಮಂಗಳವಾರ ಬೆಳಗ್ಗೆ ಎಸಿಬಿ ಎಸ್ಪಿ ಉಮಾ ಪ್ರಶಾಂಶ ನೇತೃತ್ವದಲ್ಲಿ 100ಕ್ಕೂ … Continued

ರಸ್ತೆ ದಾಟುತ್ತಿದ್ದ ಪಾದಚಾರಿಗಳ ಮೇಲೆ ಹರಿದ ಬಿಬಿಎಂಪಿ ಲಾರಿ; ಬಾಲಕಿ ಸಾವು, 8 ಮಂದಿಗೆ ಗಾಯ

ಬೆಂಗಳೂರು: ಡಿವೈಡರ್ ಮೂಲಕ‌ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿ ಮೇಲೆ‌ ಬಿಬಿಎಂಪಿ‌ ಕಸದ ಲಾರಿ ಹರಿದು ಬಾಲಕಿ ಸ್ಥಳದಲ್ಲಿಯೇ ಸಾವಿಗೀಡಾದ ದುರ್ಘಟನೆ ಸೋಮವಾರ ನಡೆದಿದೆ. ಘಟನೆಯಲ್ಲಿ ಇತರ 8 ಮಂದಿಗೆ ಗಾಯವಾಗಿದೆ. ಮೃತ ಬಾಲಕಿಯನ್ನು 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ 13 ವರ್ಷದ ಅಕ್ಷಯಾ ಎಂದು ಗುರುತಿಸಲಾಗಿದೆ. ನಿನ್ನೆ (ಭಾನುವಾರ) ರಾತ್ರಿ ಮಳೆಯಾಗಿದ್ದರಿಂದ‌ ಹೆಬ್ಬಾಳ ಪೊಲೀಸ್ … Continued

ರಂಗಭೂಮಿ ಕಲಾವಿದೆ ಮೇಲೆ ಸಹಪಾಠಿಗಳಿಂದಲೇ ಆ್ಯಸಿಡ್ ದಾಳಿ

ಬೆಂಗಳೂರು: ರಂಗಭೂಮಿ ಕಲಾವಿದೆಯೊಬ್ಬರ ಮೇಲೆ ಆ್ಯಸಿಡ್​ ದಾಳಿ ಮಾಡಿರುವ ಘಟನೆ ನಗರದ ನಂದಿನಿಲೇಔಟ್​ನ ಗಣೇಶ ಬ್ಲಾಕ್​ನಲ್ಲಿ ಮಾರ್ಚ್​ 18ರಂದು ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಆ್ಯಸಿಡ್ ದಾಳಿಯಿಂದ ಗಾಯಗೊಂಡ ದೇವಿ ಅವರು ರಂಗಭೂಮಿ ಕಲಾವಿದೆಯಾಗಿದ್ದಾರೆ. ಮಾರ್ಚ್‌18 ರಂದು ಮನೆಯ ಜಗಲಿಯ ಮೇಲೆ‌ ಮಲಗಿದ್ದ ವೇಳೆ ಆಸಿಡ್ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ … Continued

ಕೋರ್ಟ್ ಆವರಣದಲ್ಲಿ ಗಲಾಟೆ ಪ್ರಕರಣ : ವಕೀಲ ಜಗದೀಶ್ ಬಂಧನ

ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ನೇತೃತ್ವದ ನಿಯೋಗ ನೀಡಿದ ದೂರಿನ ನಂತರ ವಕೀಲ ಜಗದೀಶ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ವಕೀಲ ಜಗದೀಶ … Continued

ಹಿಜಾಬ್‌ ವಿವಾದ: ಬೆಂಗಳೂರಲ್ಲಿ ಫೆಬ್ರವರಿ 22ರ ವರಗೆ ಶಾಲಾ -ಕಾಲೇಜು ಸುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಂದಿನ ಎರಡು ವಾರಗಳ ವರೆಗೆ ನಗರದಲ್ಲಿ ಶಾಲಾ ಕಾಲೇಜು ಸುತ್ತ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಗರದ ಶಾಲಾ-ಕಾಲೇಜುಗಳ ಸುತ್ತಮುತ್ತ ಯಾವುದೇ ರೀತಿಯ ಗುಂಪು ಅಥವಾ ಆಂದೋಲನ ನಿರ್ಬಂಧಿಸಲು ಫೆ.22 ರ ತನಕ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ … Continued