ರಸ್ತೆ ದಾಟುತ್ತಿದ್ದ ಪಾದಚಾರಿಗಳ ಮೇಲೆ ಹರಿದ ಬಿಬಿಎಂಪಿ ಲಾರಿ; ಬಾಲಕಿ ಸಾವು, 8 ಮಂದಿಗೆ ಗಾಯ

ಬೆಂಗಳೂರು: ಡಿವೈಡರ್ ಮೂಲಕ‌ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿ ಮೇಲೆ‌ ಬಿಬಿಎಂಪಿ‌ ಕಸದ ಲಾರಿ ಹರಿದು ಬಾಲಕಿ ಸ್ಥಳದಲ್ಲಿಯೇ ಸಾವಿಗೀಡಾದ ದುರ್ಘಟನೆ ಸೋಮವಾರ ನಡೆದಿದೆ. ಘಟನೆಯಲ್ಲಿ ಇತರ 8 ಮಂದಿಗೆ ಗಾಯವಾಗಿದೆ. ಮೃತ ಬಾಲಕಿಯನ್ನು 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ 13 ವರ್ಷದ ಅಕ್ಷಯಾ ಎಂದು ಗುರುತಿಸಲಾಗಿದೆ. ನಿನ್ನೆ (ಭಾನುವಾರ) ರಾತ್ರಿ ಮಳೆಯಾಗಿದ್ದರಿಂದ‌ ಹೆಬ್ಬಾಳ ಪೊಲೀಸ್ … Continued

ರಂಗಭೂಮಿ ಕಲಾವಿದೆ ಮೇಲೆ ಸಹಪಾಠಿಗಳಿಂದಲೇ ಆ್ಯಸಿಡ್ ದಾಳಿ

ಬೆಂಗಳೂರು: ರಂಗಭೂಮಿ ಕಲಾವಿದೆಯೊಬ್ಬರ ಮೇಲೆ ಆ್ಯಸಿಡ್​ ದಾಳಿ ಮಾಡಿರುವ ಘಟನೆ ನಗರದ ನಂದಿನಿಲೇಔಟ್​ನ ಗಣೇಶ ಬ್ಲಾಕ್​ನಲ್ಲಿ ಮಾರ್ಚ್​ 18ರಂದು ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಆ್ಯಸಿಡ್ ದಾಳಿಯಿಂದ ಗಾಯಗೊಂಡ ದೇವಿ ಅವರು ರಂಗಭೂಮಿ ಕಲಾವಿದೆಯಾಗಿದ್ದಾರೆ. ಮಾರ್ಚ್‌18 ರಂದು ಮನೆಯ ಜಗಲಿಯ ಮೇಲೆ‌ ಮಲಗಿದ್ದ ವೇಳೆ ಆಸಿಡ್ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ … Continued

ಕೋರ್ಟ್ ಆವರಣದಲ್ಲಿ ಗಲಾಟೆ ಪ್ರಕರಣ : ವಕೀಲ ಜಗದೀಶ್ ಬಂಧನ

ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ನೇತೃತ್ವದ ನಿಯೋಗ ನೀಡಿದ ದೂರಿನ ನಂತರ ವಕೀಲ ಜಗದೀಶ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ವಕೀಲ ಜಗದೀಶ … Continued

ಹಿಜಾಬ್‌ ವಿವಾದ: ಬೆಂಗಳೂರಲ್ಲಿ ಫೆಬ್ರವರಿ 22ರ ವರಗೆ ಶಾಲಾ -ಕಾಲೇಜು ಸುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಂದಿನ ಎರಡು ವಾರಗಳ ವರೆಗೆ ನಗರದಲ್ಲಿ ಶಾಲಾ ಕಾಲೇಜು ಸುತ್ತ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಗರದ ಶಾಲಾ-ಕಾಲೇಜುಗಳ ಸುತ್ತಮುತ್ತ ಯಾವುದೇ ರೀತಿಯ ಗುಂಪು ಅಥವಾ ಆಂದೋಲನ ನಿರ್ಬಂಧಿಸಲು ಫೆ.22 ರ ತನಕ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ … Continued

ಬೆಂಗಳೂರು: ಈ ಬೆಕ್ಕು ಹುಡುಕಿಕೊಟ್ಟವರಿಗೆ ಸಿಗಲಿದೆ 35,000 ರೂ ಬಹುಮಾ‌ನ…!

ಬೆಂಗಳೂರು: ತಮ್ಮ ಸಾಕು ಪ್ರಾಣಿಗಳು ಸತ್ತಾಗ, ಅವುಗಳು ಕಳೆದುಹೋದರೆ ಮಾಲೀಕರು ಪಡುವ ಪಾಡು ಅಷ್ಟಿಷ್ಟಲ್ಲ. ಆದರೆ ನಗರದಲ್ಲಿ ಬೆಕ್ಕೊಂದನ್ನು ಕಳೆದುಕೊಂಡ ಮಾಲೀಕರೊಬ್ಬರು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿ, ಬೆಕ್ಕು ಹುಡುಕಿಕೊಡುವಂತೆ ದೂರು ನೀಡಿದ್ದಾರೆ. ಜೊತೆಗೆ ಹುಡುಕಿಕೊಟ್ಟವರಿಗೆ 35 ಸಾವಿರ ರೂ.ಗಳ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಬೆಂಗಳೂರಿನ ಜಯನಗರದ ರಾಜಣ್ಣ ಲೇಔಟ್ ನಿವಾಸಿ ಮಿಸ್ಬಾ ಶರೀಫ್ ಎಂಬವರು, … Continued

ನೈಸ್‌ ರಸ್ತೆಯಲ್ಲಿ ಅಪಘಾತ : ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು: ವ್ಯಾಗನರ್ ಕಾರಿಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಸರಣಿ ಅಪಘಾತದಲ್ಲಿ ,ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬನ್ನೇರುಘಟ್ಟ-ತುಮಕೂರು ನೈಸ್ ರಸ್ತೆಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೇರಳ ಮೂಲದ ನಾಲ್ವರು ಮೃತಪಟ್ಟವರು. ಗಾಯಗೊಂಡ ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರೆಲ್ಲರೂ … Continued

ಬೆಂಗಳೂರು: ಬೈಕ್ ಕಳುವು ದಂಧೆಗೆ ಪೊಲೀಸ್ ಕಾನ್‌ಸ್ಟೇಬಲ್ ನೇತೃತ್ವ..!

ಬೆಂಗಳೂರು: ಬೆಂಗಳೂರಿನಲ್ಲಿ ಕಳ್ಳತನವಾಗಿದ್ದ 77 ಲಕ್ಷ ಮೌಲ್ಯದ 53 ಬೈಕ್‌ಗಳನ್ನು ಪೊಲೀಸರು ಶುಕ್ರವಾರ ವಶಪಡಿಸಿಕೊಂಡಿದ್ದು, ದಂಧೆಯ ಹಿಂದೆ ಪೊಲೀಸನೇ ಕಿಂಗ್ ಪಿನ್ ಎಂದು ತಿಳಿದು ಬಂದಿದೆ. ಆರೋಪಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಯ ಕ್ರೈಂ ಪೊಲೀಸ್ ಕಾನ್‌ಸ್ಟೆಬಲ್ ಹೊನ್ನಪ್ಪ ದುರದಪ್ಪ ಮಾಳಗಿ ಬೈಕ್ ಕಳುವು ಗ್ಯಾಂಗ್ ನ ನೇತೃತ್ವ ವಹಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಟ್ಟೆ ಅಂಗಡಿಯೊಂದರಲ್ಲಿ … Continued

ಜನರಲ್‌ ಬಿಪಿನ್ ರಾವತ್ ಸಾವಿನ ಕುರಿತು ಆಕ್ಷೇಪಾರ್ಹ ಪೋಸ್ಟ್ : ವ್ಯಕ್ತಿ ಬಂಧನ

ಬೆಂಗಳೂರು: ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಸಾವಿನ ಕುರಿತು ಫೇಸ್‍ಬುಕ್‍ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಟಿ.ಕೆ.ವಂಸತಕುಮಾರ್ (೪೦) ಬಂಧಿತ ಆರೋಪಿಯಾಗಿದ್ದಾನೆ. ಈತ ಖಾಸಗಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾನೆ. ಆರೋಪಿ ಜನರಲ್‌ ಬಿಪಿನ್ ರಾವತ್ ಸಾವಿನ ಬಗ್ಗೆ … Continued

ಬೆಂಗಳೂರು:ಉತ್ತರ ಕನ್ನಡ ಸಂಘದ ಕಾರ್ಯಕಾರಿಣಿಗೆ 19 ಸದಸ್ಯರು ಅವಿರೋಧವಾಗಿ ಆಯ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಪ್ರತಿಷ್ಠಿತ ಉತ್ತರ ಕನ್ನಡ ಸಂಘ(ರಿ)ದ ಸರ್ವ ಸದಸ್ಯರ 42ನೇ ವಾರ್ಷಿಕ ಮಹಾ ಸಭೆಯು ಅಧ್ಯಕ್ಷರಾದ ವಿಜಯ ಕಾಮತ ಅಧ್ಯಕ್ಷತೆಯಲ್ಲಿ ಉತ್ತರ ಕನ್ನಡ ಭವನದಲ್ಲಿ ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ನೂತನ ಕಾರ್ಯಕಾರಿ ಸಮಿತಿಗೆ 19 ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾದ ಅರುಣ ಪ್ರಭು ಅವರು ಭಗವಂತನ ಸ್ತುತಿಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. … Continued

ಬರ್ತ್ ಡೇ ಪಾರ್ಟಿಯಲ್ಲಿ ಪಾಲ್ಗೊಂಡ 10 ಜನರಿಗೆ ಕೊರೊನಾ ಸೋಂಕು: ಅಪಾರ್ಟ್‌ಮೆಂಟ್ ಸೀಲ್‌ಡೌನ್

ಬೆಂಗಳೂರು: ಬೆಂಗಳೂರಿನಲ್ಲಿ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಹತ್ತು ಮಂದಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ನಗರದ ಕೋರಮಂಗಲದ ರಹೇಜ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಬರ್ತ್ ಡೇ ಪಾರ್ಟಿ ಮಾಡಿದ್ದ ೧೦ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸದ್ಯ ಅಪಾರ್ಟ್ಮೆಂಟ್ ಅನ್ನು ಸೀಲ್ ಡೌನ್ ಮಾಡಲಾಗಿದೆ. ೧೬ ಜನ ಸೇರಿ ಬರ್ತ್ ಡೇ ಪಾರ್ಟಿ ಮಾಡಿದ್ದರು. ಇದರಲ್ಲಿ ಹತ್ತು … Continued