ಬರ್ತ್ ಡೇ ಪಾರ್ಟಿಯಲ್ಲಿ ಪಾಲ್ಗೊಂಡ 10 ಜನರಿಗೆ ಕೊರೊನಾ ಸೋಂಕು: ಅಪಾರ್ಟ್‌ಮೆಂಟ್ ಸೀಲ್‌ಡೌನ್

ಬೆಂಗಳೂರು: ಬೆಂಗಳೂರಿನಲ್ಲಿ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಹತ್ತು ಮಂದಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ನಗರದ ಕೋರಮಂಗಲದ ರಹೇಜ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಬರ್ತ್ ಡೇ ಪಾರ್ಟಿ ಮಾಡಿದ್ದ ೧೦ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸದ್ಯ ಅಪಾರ್ಟ್ಮೆಂಟ್ ಅನ್ನು ಸೀಲ್ ಡೌನ್ ಮಾಡಲಾಗಿದೆ. ೧೬ ಜನ ಸೇರಿ ಬರ್ತ್ ಡೇ ಪಾರ್ಟಿ ಮಾಡಿದ್ದರು. ಇದರಲ್ಲಿ ಹತ್ತು … Continued

ನಡುರಾತ್ರಿ ರೈಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

ಬೆಂಗಳೂರು: ಚಲಿಸುವ ರೈಲಿನ ಬಾಗಿಲಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುವಾಗ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟಿದ್ದು, ಶ್ರೀರಂಗಪಟ್ಟಣದಲ್ಲಿ ಶವ ಪತ್ತೆಯಾಗಿದೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಅಣ್ಣೆಚಕ್ಕನಹಳ್ಳಿಯ ಅಭಿಷೇಕ್ (೧೯) ಮೃತ ಯುವಕ ಎಂದು ಗುರುತಿಸಲಾಗಿದೆ. ಗಾಂಧಿನಗರದ ಬಾರ್ ಒಂದರಲ್ಲಿ ರೆಸ್ಟೊರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಅಭಿಷೇಕ್ ನ.೬ರಂದು ರಾತ್ರಿ ಸ್ನೇಹಿತರ ಜೊತೆ … Continued

ಪುನೀತ್ ʼಅಂತಿಮ ದರ್ಶನʼಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಅವಕಾಶ

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಸಿದ್ಧತೆ ನಡೆಸಲಾಗಿದೆ. ಇಂದು (ಶುಕ್ರವಾರ)  ಸಂಜೆ 5 ಗಂಟೆಗೆ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಕಂಠೀರವ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಇಂದು ಸಂಜೆಯಿಂದ ನಾಳೆ ವರೆಗೂ ಅಭಿಮಾನಿಗಳಿಗೆ, ಸಾರ್ವಜನಿಕರಿಗೆ, ಪುನೀತ್ ಅಂತಿಮ ದರ್ಶನಕ್ಕೆ … Continued

ಬೈಕ್‍ಗೆ ಡಿಕ್ಕಿ ಹೊಡೆದ ಟಿಪ್ಪರ್‌ ; ತಾಯಿ- ಮಗು ಸ್ಥಳದಲ್ಲೇ ಸಾವು

ಬೆಂಗಳೂರು: ವೇಗವಾಗಿ ಬಂದ ಟಿಪ್ಪರ್ ಲಾರಿ ಮುಂದೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಕೆಳಗೆ ಬಿದ್ದ ತಾಯಿ-ಮಗು ಮೇಲೆ ವಾಹನ ಹೋದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಎಚ್‍ಎಎಲ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು (ಸೋಮವಾರ) ಬೆಳಗ್ಗೆ ನಡೆದಿದೆ. ಮೃತರನ್ನು ಕೆ.ಆರ್.ಪುರಂ ನಿವಾಸಿ ಶ್ರೀದೇವಿ(21) ಮತ್ತು ಒಂದು ವರ್ಷದ ಗಂಡುಮಗು … Continued

ಮನೆಮನೆಗೆ ಪೂರೈಸುವ ಗಿಫ್ಟ್ ಬಾಕ್ಸ್‌ನಲ್ಲಿ ಡ್ರಗ್ಸ್ ಪೂರೈಕೆ; ಇಬ್ಬರ ಬಂಧನ

ಬೆಂಗಳೂರು: ಬಿಟ್ ಕಾಯಿನ್ ಮೂಲಕ ಡಾರ್ಕ್ ನೆಟ್‌ನಲ್ಲಿ ಮಾದಕ ವಸ್ತುಗಳನ್ನು ಖರೀದಿಸಿ ಮನೆ ಮನೆಗೆ ಸ್ವಿಗ್ಗಿ ಡಂಜೋ ಹೆಸರಿನಲ್ಲಿ ಗ್ರಾಹಕರಿಗೆ ಗಿಫ್ಟ್ ಬಾಕ್ಸ್‌ಗಳಲ್ಲಿ ತಲುಪಿಸುತ್ತಿದ್ದ ಹೊಸ ವಿಧಾನದ ಬೃಹತ್ ಡ್ರಗ್ಸ್ ಸರಬರಾಜು ಮಾರಾಟ ಜಾಲವನ್ನು ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಭೇದಿಸಿದ್ದಾರೆ. ಬೃಹತ್ ಜಾಲದಲ್ಲಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿ ಅವರಿಂದ ೬೦ … Continued

ನಮ್ಮ ಮೆಟ್ರೋಗೆ ದಶಕದ ಸಂಭ್ರಮ : 60 ಕೋಟಿ ಜನರ ಪ್ರಯಾಣ

ಬೆಂಗಳೂರು : ನಮ್ಮ ಮೆಟ್ರೋ, ಟ್ರಾಫಿಕ್‌ ಟ್ರಾಫಿಕ್‌ ತೊಂದರೆಯಲ್ಲಿ ಸಿಲುಕಿ ತತ್ತರಿಸಿದ್ದ ಜನರಿಗೆ ಅದರಿಂದ ಮುಕ್ತಿ ನೀಡಲು ರಾಜ್ಯ ಸರ್ಕಾರವು ಕೇಂದ್ರದ ಸಹಕಾರದಿಂದ ಆರಂಭಿಸಿದ ಯೋಜನೆಯಾಗಿದ್ದು ಇದಕ್ಕೆ ಈಗ ದಶಕದ ಸಂಭ್ರಮ. ಬೆಂಗಳೂರಿನ ಮಹತ್ವಾಕಾಂಕ್ಷಿ ಯೋಜನೆ ನಮ್ಮ ಮೆಟ್ರೊದಲ್ಲಿ ಕಳೆದ ಹತ್ತು ವರ್ಷಗಳಲ್ಲಿ 60 ಕೋಟಿ ಜನರು ಪ್ರಯಾಣ ಬೆಳೆಸಿದ್ದು, 1286.6 ಕೋಟಿ ರೂ. ಆದಾಯ … Continued

ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಗಲ್ಫ್ ಇಸ್ಲಾಮಿಕ್ ಹೂಡಿಕೆಯ ಕಚೇರಿ: 3 ವರ್ಷಗಳಲ್ಲಿ 3500 ಕೋಟಿ ರೂ. ‌ಬಂಡವಾಳ ಹೂಡಿಕೆ

ದುಬೈ: ಭಾರತ ಹಾಗೂ ‌ ಯುನೈಟೆಡ್ ‌ಅರಬ್ ಯಮಿರೆಟ್ಸ್ ( ಯುಎಇ) ನಡುವೆ ಹೂಡಿಕೆ ಸಂಬಂಧಗಳನ್ನು ಭವಿಷ್ಯದಲ್ಲಿ ಮತ್ತಷ್ಟು ಬಲಪಡಿಸಲು ಗಲ್ಫ್ ಇಸ್ಲಾಮಿಕ್ ಹೂಡಿಕೆ ( GII) ತನ್ನ ಕಚೇರಿಯನ್ನು ರಾಜಧಾನಿ ‌ಬೆಂಗಳೂರಿನಲ್ಲಿ ತೆರೆಯಲು ಮುಂದೆ ‌ಬಂದಿದೆ. ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ,ಹಾಗೂ ಐಟಿ ಮತ್ತು ಬಿಟಿ ಸಚಿವ … Continued

ಬೆಂಗಳೂರಲ್ಲಿ ಶಿಶು ಮಾರಾಟ ಜಾಲ ಪತ್ತೆ, ಐವರು ಬಂಧನ, 12 ಮಕ್ಕಳ ರಕ್ಷಣೆ..!

ಬೆಂಗಳೂರು: ಅಸಹಾಯಕ ಪೋಷಕರಿಂದ ನವಜಾತ ಶಿಶುಗಳನ್ನು ಪಡೆದು ಲಕ್ಷಾಂತರ ರೂ.ಗಳಿಗೆ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಪಶ್ಚಿಮ ವಲಯದ ಮಾನವ ಕಳ್ಳ ಸಾಗಾಣಿಕೆ ನಿಗ್ರಹ ಘಟಕ ಪತ್ತೆ ಹಚ್ಚಿದ್ದು, ಮೂವರು ಮಹಿಳೆಯರು ಸೇರಿದಂತೆ ಐದು ಮಂದಿ ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಗು ಕಳ್ಳತನ ಪ್ರಕರಣದ ಜಾಡು ಹಿಡಿದು ತನಿಖೆ ನಡೆಸಿದ … Continued

ಬೆಂಗಳೂರು: ಬಾಕಿ ತೆರಿಗೆ ಪಾವತಿಸದ ಮಂತ್ರಿ ಮಾಲ್​ಗೆ ಬೀಗ ಜಡಿದ ಬಿಬಿಎಂಪಿ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಗೆ ಆಸ್ತಿ ತೆರಿಗೆ ಕಟ್ಟದ ಸತಾಯಿಸುತ್ತಿದ್ದ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ (Mantri Square Mall)ಗೆ ಇಂದು (ಸೆಪ್ಟಂಬರ್‌30, ಗುರುವಾರ) ಬೆಳಿಗ್ಗೆ ಬೀಗ ಹಾಕಲಾಗಿದೆ. ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ ಮಂತ್ರಿ ಮಾಲ್‌ಗೆ ಬೀಗ ಹಾಕಿದ ಕಾರಣ ಮಾಲ್‌ಗೆ ಬಿಬಿಎಂಪಿ ಅಧೀಕಾರಿಗಳು ಬೀಗ ಜಡಿದಿದ್ದಾರೆ. 2017ರ ಬಳಿಕ ಇದೂವರೆಗೂ ಮಂತ್ರಿ ಮಾಲ್​ ಆಸ್ತಿ … Continued

ಬೆಂಗಳೂರಿನಲ್ಲಿ ನೋಡ ನೋಡುತ್ತಿದ್ದಂತೆ ಬಹುಮಹಡಿ ಕಟ್ಟಡ ನೆಲಸಮ

ಬೆಂಗಳೂರು: ಲಕ್ಕಸಂದ್ರ ಬಳಿ ಮೂರು ಅಂತಸ್ತಿನ ಕಟ್ಟಡ ನೆಲಸಮವಾಗಿದೆ. ಮನೆ ಕುಸಿದು ಬೀಳುವ ದೃಶ್ಯ ಸೆರೆಯಾಗಿದ್ದು ಸದ್ಯ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಕಟ್ಟಡದಲ್ಲಿ 20 ಕ್ಕೂ ಅಧಿಕ ಮಂದಿ ವಾಸವಾಗಿದ್ದರು ಎಂದು ಹೇಳಲಾಗಿದೆ. ಕುಸಿದ ಕಟ್ಟಡ ಹಳೆಯದಾಗಿದೆ. ಕಟ್ಟಡದಲ್ಲಿ ವಾಸಕ್ಕೆ ಯೋಗ್ಯವಲ್ಲದ ಕಾರಣ ಹಾಗೂ ಕಟ್ಟಡ ವಾಲಿದ್ದರಿಂದಾಗಿ  ಕಟ್ಟಡವನ್ನು ನೆಲಸಮಗೊಳಿಸಲಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಮುಂದೆ ಉಂಟಾಗುತ್ತಿದ್ದಂತ … Continued