ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಹಂಗಾಮಿ ಸರ್ಕಾರ ಇಂದು ಪ್ರಮಾಣವಚನ : ಸೇನಾ ಮುಖ್ಯಸ್ಥ

ಢಾಕಾ : ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯೆ, ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಗುರುವಾರ (ಆಗಸ್ಟ್ 8) ಪ್ರಮಾಣವಚನ ಸ್ವೀಕರಿಸಲಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಘೋಷಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನರಲ್ ವಾಕರ್‌, ಪ್ರಮಾಣ ವಚನ ಸಮಾರಂಭವು ರಾತ್ರಿ 8 ಗಂಟೆಗೆ (ಸ್ಥಳೀಯ ಕಾಲಮಾನ) ನಡೆಯುವ … Continued

ಬಾಂಗ್ಲಾದೇಶ ಬಿಕ್ಕಟ್ಟು : ನೊಬೆಲ್ ಪುರಸ್ಕೃತ 84 ವರ್ಷದ ಮೊಹಮ್ಮದ್ ಯೂನಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆ

ನವದೆಹಲಿ : ಭಾರೀ ಪ್ರತಿಭಟನೆಗಳ ನಡುವೆ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಬಾಂಗ್ಲಾದೇಶದ ನೊಬೆಲ್ ಪ್ರಶಸ್ತಿ ಪುರಸ್ಕೃತ ಕಿರು ಹಣಕಾಸು ಪ್ರವರ್ತಕ ಮುಹಮ್ಮದ್ ಯೂನಸ್ ಅವರನ್ನು ಮಿಲಿಟರಿ ಬೆಂಬಲಿತ ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಹಸೀನಾ ಅವರ ಪದಚ್ಯುತಿಯಲ್ಲಿ ಪ್ರತಿಭಟನೆ ಅಂತ್ಯಗೊಂಡ ನಂತರ ವಿದ್ಯಾರ್ಥಿ ಮುಖಂಡರು ಮಂಗಳವಾರ ಸಂಜೆ ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಜಮಾನ್ … Continued

ಬಾಂಗ್ಲಾದೇಶ ಬಿಕ್ಕಟ್ಟು : ಅವಾಮಿ ಲೀಗ್‌ ನಾಯಕನ ಹೊಟೇಲಿಗೆ ಬೆಂಕಿ ಹಚ್ಚಿ 24 ಜನರನ್ನು ಸಜೀವ ದಹನ ಮಾಡಿದ ಗುಂಪು

ಢಾಕಾ: ಅವಾಮಿ ಲೀಗ್ ಪಕ್ಷದ ನಾಯಕಿ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ತೊರೆದ ನಂತರ ಬಾಂಗ್ಲಾದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಅವಾಮಿ ಲೀಗ್ ಪಕ್ಷದ ನಾಯಕರ ಒಡೆತನದ ಹೋಟೆಲ್‌ ಗೆ ಗುಂಪೊಂದು ಬೆಂಕಿ ಹಚ್ಚಿ ಇಂಡೋನೇಷ್ಯಾ ಪ್ರಜೆ ಸೇರಿದಂತೆ ಕನಿಷ್ಠ 24 ಜನರನ್ನು ಸಜೀವ ದಹನ ಮಾಡಿದೆ ಎಂದು ಸ್ಥಳೀಯ ಪತ್ರಕರ್ತರು … Continued

ಬಾಂಗ್ಲಾದೇಶ ಬಿಕ್ಕಟ್ಟು | ಬಾಂಗ್ಲಾದೇಶ ಸೇನಾ ಮುಖ್ಯಸ್ಥ ವಾಕರ್-ಉಜ್-ಜಮಾನ್ ಬಗ್ಗೆ ಶೇಖ್ ಹಸೀನಾಗೆ ʼಭಾರತʼ ಮೊದಲೇ ಎಚ್ಚರಿಸಿತ್ತೆ ?

ನವದೆಹಲಿ: ಕಳೆದ ವರ್ಷ ಜೂನ್‌ನಲ್ಲಿ ಸೇನಾ ಮುಖ್ಯಸ್ಥರಾಗಿ ಜನರಲ್ ವಾಕರ್-ಉಜ್-ಜಮಾನ್ ಅವರನ್ನು ನೇಮಕ ಮಾಡುವುದರ ಬಗೆಗಿನ ಸಂಭವನೀಯ ಅಪಾಯಗಳ ಬಗ್ಗೆ ಭಾರತೀಯ ಸರ್ಕಾರಿ ಅಧಿಕಾರಿಗಳು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಈ ಮೊದಲೇ ಎಚ್ಚರಿಕೆ ನೀಡಿದ್ದರು ಎಂದು ವರದಿಯೊಂದು ಹೇಳಿದೆ. ಈ ಎಚ್ಚರಿಕೆಗಳ ಹೊರತಾಗಿಯೂ, ಹಸೀನಾ ಅವರು ವಾಕರ್-ಉಜ್-ಜಮಾನ್ ಅವರನ್ನು ಸೇನಾ ಮುಖ್ಯಸ್ಥರಾಗಿ … Continued