ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?

ನವದೆಹಲಿ: ಆಗ್ನೇಯ ಏಷ್ಯಾದ ದೇಶಗಳಿಂದ ಭಾರತಕ್ಕೆ ಅಡಕೆ ಆಮದು ಮಾಡಿಕೊಂಡು, ಅದನ್ನು ಬಾಂಗ್ಲಾದೇಶ ಮೂಲದ ಅಡಕೆ ಎಂದು ಸುಳ್ಳು ಹೇಳಿ ವಂಚಿಸಿ ದಕ್ಷಿಣ ಏಷ್ಯಾ ಮುಕ್ತ ವ್ಯಾಪಾರ ಒಪ್ಪಂದ (SAFTA) ಅಡಿ ದೊರೆಯುವ ಕಸ್ಟಮ್ಸ್ ಸುಂಕ ವಿನಾಯಿತಿ ಪಡೆಯುತ್ತಿದ್ದರೆನ್ನಲಾದ ದೊಡ್ಡ ಜಾಲವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಭೇದಿಸಿದೆ. ಡಿಆರ್‌ಐ(DRI) ನಡೆಸಿದ ತನಿಖೆಯಲ್ಲಿ ಈ ಜಾಲದಿಂದ … Continued

ವಿಡಿಯೊ| ಹಸೀನಾ ಜೊತೆ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಖ್ಯಾತ ಕ್ರಿಕೆಟರ್‌ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ನವದೆಹಲಿ : ಬಾಂಗ್ಲಾದೇಶದ ಮಾಜಿ ಕ್ರಿಕೆಟ್ ನಾಯಕ ಹಾಗೂ ಮಾಜಿ ಅವಾಮಿ ಲೀಗ್ ಮಾಜಿ ಸಂಸದ ಶಕೀಬ್ ಅಲ್ ಹಸನ್ ಅವರ ನಿವಾಸದ ಮೇಲೆ ಬುಧವಾರ ರಾತ್ರಿ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಭಾರತದ ದೆಹಲಿಯಿಂದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಜೊತೆ ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ಶಕೀಬ್ ಅಲ್ ಹಸನ್ ಭಾಗವಹಿಸಿದ ಕೆಲವೇ ಗಂಟೆಗಳ … Continued

“ನನ್ನನ್ನು ಕೊಲ್ಲಬಹುದು….ಜೈಲಿಗೆ ಹಾಕಬಹುದು…ಆದ್ರೂ ಬಾಂಗ್ಲಾದೇಶಕ್ಕೆ ಹೋಗ್ತೇನೆ ” : ಶೇಖ್ ಹಸೀನಾ ಘೋಷಣೆ

ನವದೆಹಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ತಾಯ್ನಾಡಿಗೆ ಮರಳುವುದಾಗಿ ಘೋಷಿಸಿದ್ದು, ಮರಳಿದ ಬಳಿಕ ಎದುರಾಗಬಹುದಾದ ಯಾವುದೇ ಪರಿಣಾಮಗಳನ್ನು ಎದುರಿಸಲು ಸಿದ್ಧವಿರುವುದಾಗಿ ಹೇಳಿದ್ದಾರೆ. ಬಂಧನ, ಜೈಲು ಶಿಕ್ಷೆ ಅಥವಾ ಜೀವಕ್ಕೆ ಅಪಾಯ ಎದುರಾದರೂ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಾಂಗ್ಲಾದೇಶ ತೊರೆದು ದೆಹಲಿಯಲ್ಲಿ ನೆಲೆಸಿರುವ ಬಳಿಕ ಬುಧವಾರ ಮೊದಲ … Continued

“ಈ ವರ್ಷವೇ ನನ್ನ ದೇಶಕ್ಕೆ ಮರಳುತ್ತೇನೆ” ; ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಘೋಷಣೆ

ನವದೆಹಲಿ: ಸುಮಾರು ಎರಡು ವರ್ಷಗಳಿಂದ ಭಾರತದಲ್ಲಿ ದೇಶಾಂತರದ ಜೀವನ ನಡೆಸುತ್ತಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ, “ಈ ವರ್ಷವೇ ನಾನು ನನ್ನ ದೇಶಕ್ಕೆ ಮರಳುತ್ತೇನೆ” ಎಂದು ಪ್ರಕಟಿಸುವ ಮೂಲಕ ತಮ್ಮ ದೇಶಾಂತರದ ಅಂತ್ಯಕ್ಕೆ ಸೂಚನೆ ನೀಡಿದ್ದಾರೆ. 2024ರ ಆಗಸ್ಟ್ 5ರಂದು ವಿದ್ಯಾರ್ಥಿ ನೇತೃತ್ವದ ಭಾರಿ ಜನಾಂದೋಲನದ ಬಳಿಕ ಅಧಿಕಾರ ಕಳೆದುಕೊಂಡು ಭಾರತಕ್ಕೆ ಬಂದಿದ್ದ ಹಸೀನಾ, … Continued

ವಿಡಿಯೋ..| ಬಾಂಗ್ಲಾದೇಶದಲ್ಲಿ ‘ ಡೊನಾಲ್ಡ್ ಟ್ರಂಪ್’ ಹೋಲುವ ʼಕೋಣದ್ದೇ ಹವಾ: ನೋಡಲು ಮುಗಿಬಿದ್ದ ಜನ !

ಬಾಂಗ್ಲಾದೇಶದಲ್ಲಿ ಎರಡು ಅಪರೂಪದ ಅಲ್ಬಿನೋ (ಬಿಳಿ/ಗುಲಾಬಿ ಚರ್ಮದ) ಕೋಣಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿವೆ. ಈ ಎಮ್ಮೆಗಳು ವಿಶ್ವದ ಇಬ್ಬರು ಪ್ರಮುಖ ರಾಜಕೀಯ ನಾಯಕರನ್ನು ಹೋಲುತ್ತಿರುವುದೇ ಇದಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ‘ದಿ ಇಂಡಿಪೆಂಡೆಂಟ್’ ವರದಿ ಪ್ರಕಾರ, ಬಾಂಗ್ಲಾದೇಶದ ರಾಜಧಾನಿ ಢಾಕಾ ಸಮೀಪದ ನಾರಾಯಣಗಂಜ್‌ನ ಫಾರ್ಮ್‌ವೊಂದರಲ್ಲಿರುವ 700 ಕೆಜಿ ತೂಕದ ಗುಲಾಬಿ ಚರ್ಮದ … Continued

ಬೆಂಗಳೂರು : 272 ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರು

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ನಡೆದ ಅಕ್ರಮ ವಲಸಿಗರ ವಿರುದ್ಧದ ಬೃಹತ್ ಕಾರ್ಯಾಚರಣೆಯಲ್ಲಿ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಟ್ಟು 272 ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಗಡೀಪಾರು ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ. ನಗರದಾದ್ಯಂತ ವಿವಿಧ ಪ್ರದೇಶಗಳಲ್ಲಿ ನಡೆಸಿದ ತಪಾಸಣಾ ಅಭಿಯಾನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಗಡೀಪಾರು … Continued

ವೀಡಿಯೊ : ಎಲ್ಲರೂ ನೋಡನೋಡುತ್ತಿದ್ದಂತೆ ನದಿಗೆ ಬಿದ್ದು ಮುಳುಗಿದ ಬಸ್ ; 24 ಪ್ರಯಾಣಿಕರು ಸಾವು

ಢಾಕಾ: ಬಾಂಗ್ಲಾದೇಶದ ರಾಜಬರಿ ಜಿಲ್ಲೆಯಲ್ಲಿ ಬುಧವಾರ ಸಂಜೆ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 24 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಪ್ರಯಾಣಿಕರಿದ್ದ ಬಸ್ಸೊಂದು ಫೆರ್ರಿ (ಸಾರಿಗೆ ದೋಣಿ) ಹತ್ತಲು ಪ್ರಯತ್ನಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಪದ್ಮಾ ನದಿಗೆ ಬಿದ್ದು ಮುಳುಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಮಾರ್ಚ್ 25, ಬುಧವಾರ ಸಂಜೆ ಸುಮಾರು 5:15ರ ಸುಮಾರಿಗೆ ರಾಜಬರಿ … Continued

ವೀಡಿಯೊ | ವಿವಾದಾತ್ಮಕ ರನ್ ಔಟ್: ಸಿಟ್ಟಿನಿಂದ ಹೆಲ್ಮೆಟ್ ಎಸೆದು ಆಕ್ರೋಶ ವ್ಯಕ್ತಪಡಿಸಿದ ಪಾಕ್ ಬ್ಯಾಟರ್ ಸಲ್ಮಾನ್ ಅಘಾ !

ಢಾಕಾದ ಶೇರ್-ಎ-ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಬಾಂಗ್ಲಾದ ಆಲ್ ರೌಂಡರ್ ಮೆಹಿದಿ ಹಸನ್ ಮಿರಾಜ್ ಅವರ ನಡೆ ಪಾಕಿಸ್ತಾನದ ಬ್ಯಾಟರ್ ಸಲ್ಮಾನ್ ಅಘಾ ಅವರ ಕೆಂಗಣ್ಣಿಗೆ ಗುರಿಯಾಗಿದೆ. ಪಂದ್ಯದ 39ನೇ ಓವರ್‌ನಲ್ಲಿ ಮೊಹಮ್ಮದ್ ರಿಜ್ವಾನ್ ನೇರವಾಗಿ ಹೊಡೆದ ಚೆಂಡು ಮಿರಾಜ್ ಕಾಲಿಗೆ ಬಡಿದು … Continued

ಬಾಂಗ್ಲಾದೇಶ ಅಸ್ಥಿರಗೊಳಿಸಲು, ಸಾಂವಿಧಾನಿಕ ಶೂನ್ಯತೆ ಸೃಷ್ಟಿಸಲು ಯತ್ನ : ಮುಹಮ್ಮದ್‌ ಯೂನಸ್ ವಿರುದ್ಧ ಅಧ್ಯಕ್ಷರ ಗಂಭೀರ ಆರೋಪ

ಢಾಕಾ: ತಾರಿಕ್ ರೆಹಮಾನ್ ನೇತೃತ್ವದ ಹೊಸ ಸರ್ಕಾರ ಬಾಂಗ್ಲಾದೇಶದ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ, ಆ ದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಾಜಿ ಮುಖ್ಯ ಸಲಹೆಗಾರ ಮತ್ತು ನೊಬೆಲ್ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಯೂನಸ್ ಅವರು ತಮ್ಮನ್ನು ಅಸಂವಿಧಾನಿಕವಾಗಿ ಅಧಿಕಾರದಿಂದ ಕೆಳಗಿಳಿಸಲು “ಸಂಚು” ರೂಪಿಸಿದ್ದರು ಎಂದು ಅವರು … Continued

ಭಾರತದಲ್ಲಿ ಭೀಕರ ದಾಳಿಗೆ ಸಂಚು ; ಪಾಕ್‌ ಐಎಸ್‌ಐ, ಬಾಂಗ್ಲಾದೇಶ ಭಯೋತ್ಪಾದಕ ಸಂಘಟನೆಗಳ ಜೊತೆ ನಂಟಿದ್ದ 8 ಜನರ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ (ISI) ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಸಂಘಟನೆಗಳ ಬೆಂಬಲದೊಂದಿಗೆ ಭಾರತದಲ್ಲಿ ಭೀಕರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಎಂಟು ಮಂದಿ ಶಂಕಿತರನ್ನು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ದೆಹಲಿಯ ಕೆಂಪು ಕೋಟೆ ಸೇರಿದಂತೆ ಪ್ರಮುಖ ಧಾರ್ಮಿಕ ಸ್ಥಳಗಳ ಮೇಲೆ ದಾಳಿ ನಡೆಸಲು ಇವರು ಯೋಜಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ತಮಿಳುನಾಡಿನ … Continued