ಬಾಂಗ್ಲಾದೇಶದಲ್ಲಿ ದಂಗೆ | ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ದೆಹಲಿಯ ಬಳಿ ಬಂದಿಳಿದ ಶೇಖ್ ಹಸೀನಾ ; ಅಜಿತ ದೋವಲ್ ಭೇಟಿ

ನವದೆಹಲಿ: ಬಾಂಗ್ಲಾದೇಶದ ನಾಯಕಿ ಶೇಖ್ ಹಸೀನಾ ಅವರು ಸೋಮವಾರ ಸಂಜೆ ದೆಹಲಿಯಿಂದ ಸುಮಾರು 30 ಕಿಮೀ ದೂರದಲ್ಲಿರುವ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಹಿಂಡನ್ ವಾಯುಪಡೆ ನೆಲೆಗೆ ಬಂದಿಳಿದಿದ್ದಾರೆ ಎಂದು ವರದಿಯಾಗಿದೆ. ನಂತರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾದರು. ಕೆಲವು ಗಂಟೆಗಳ ಹಿಂದೆ 76 ವರ್ಷ ವಯಸ್ಸಿನ ಹಾಗೂ ಐದು ಬಾರಿ ಬಾಂಗ್ಲಾದೇಶದ … Continued

ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ; ಆಡಳಿತ ನಿಯಂತ್ರಣಕ್ಕೆ ತೆಗೆದುಕೊಂಡ ಸೇನೆ

ಅವಾಮಿ ಲೀಗ್‌ ಪಕ್ಷದ ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವಿನ ಹಿಂಸಾತ್ಮಕ ಘರ್ಷಣೆಗಳ ನಡುವೆ ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಬಾಂಗ್ಲಾದೇಶದ ಸೇನೆಯು ಆಡಳಿತದ ಮೇಲೆ ನಿಯಂತ್ರಣ ತೆಗೆದುಕೊಂಡಿದ್ದು, ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಅವರು ಸೇನೆಯು ಮಧ್ಯಂತರ ಸರ್ಕಾರವನ್ನು ರಚಿಸಲಿದೆ ಎಂದು … Continued

ಬಾಂಗ್ಲಾದೇಶದ ಘರ್ಷಣೆಯಲ್ಲಿ 72 ಮಂದಿ ಸಾವು: ರಾಜಧಾನಿ ಢಾಕಾದಲ್ಲಿ ಅನಿರ್ದಿಷ್ಟಾವಧಿಗೆ ಕರ್ಫ್ಯೂ

ಢಾಕಾ : ಬಾಂಗ್ಲಾದೇಶದಲ್ಲಿ ಭಾನುವಾರ ನಡೆದ ಘರ್ಷಣೆಯಲ್ಲಿ ಕನಿಷ್ಠ 72 ಜನರು ಸಾವಿಗೀಡಾಗಿದ್ದಾರೆ ಮತ್ತು ಹತ್ತಾರು ಜನರು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಬಾಂಗ್ಲಾದೇಶದಲ್ಲಿ ಭಾನುವಾರ ನಡೆದ ಘರ್ಷಣೆಯಲ್ಲಿ ಕನಿಷ್ಠ 72 ಜನರು ಸಾವನ್ನಪ್ಪಿದ್ದಾರೆ ಮತ್ತು ಹತ್ತಾರು ಜನರು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಸ್ಟನ್ ಗ್ರೆನೇಡ್‌ಗಳನ್ನು ಪ್ರಯೋಗಿಸಿದ್ದಾರೆ. ಹಿಂಸಾತ್ಮಕ ಪರಿಸ್ಥಿತಿಯ ನಂತರ, ಭಾನುವಾರ … Continued

ಬಾಂಗ್ಲಾದೇಶದ ಪ್ರತಿಭಟನೆಯಲ್ಲಿ 105 ಮಂದಿ ಸಾವು : ದೇಶಾದ್ಯಂತ ಕರ್ಫ್ಯೂ, ಮಿಲಿಟರಿ ನಿಯೋಜನೆ

ಢಾಕಾ : ದೇಶಾದ್ಯಂತ ಹರಡಿರುವ ಅಶಾಂತಿಯ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಅಧಿಕಾರಿಗಳು ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಿದ್ದಾರೆ. ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಗಳು ಕನಿಷ್ಠ 105 ಜನರ ಸಾವಿಗೆ ಕಾರಣವಾಗಿವೆ ಎಂದು ಸುದ್ದಿ ಸಂಸ್ಥೆ AFP ವರದಿ ಮಾಡಿದೆ. ಇದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರಿಗೆ ಕಠಿಣ ರಾಜಕೀಯ ಸವಾಲನ್ನು ಒಡ್ಡುತ್ತಿದೆ, ಏಕೆಂದರೆ ವಿದ್ಯಾರ್ಥಿಗಳು … Continued

ಬಾಂಗ್ಲಾದೇಶದಲ್ಲಿ ಪ್ರತಿಭಟನೆ ಉಲ್ಬಣ : 39 ಸಾವು, ಸರ್ಕಾರಿ ಟಿವಿ ಪ್ರಧಾನ ಕಚೇರಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಢಾಕಾ : ಸರ್ಕಾರಿ ಉದ್ಯೋಗಗಳಿಗೆ ಮೀಸಲಾತಿ ವ್ಯವಸ್ಥೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಪ್ರತಿಭಟನಾಕಾರರು, ಭದ್ರತಾ ಅಧಿಕಾರಿಗಳು ಮತ್ತು ಸರ್ಕಾರದ ಪರ ವಿದ್ಯಾರ್ಥಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯ ನಂತರ ವ್ಯಾಪಕ ಹಿಂಸಾಚಾರವು ಬಾಂಗ್ಲಾದೇಶದಲ್ಲಿ ಭುಗಿಲೆದ್ದಿದೆ. ಹಿಂಸಾಚಾರದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದಾರೆ, ಬಾಂಗ್ಲಾದೇಶದಲ್ಲಿ ಗುರುವಾರವು ಅತ್ಯಂತ ಹಿಂಸಾತ್ಮಕ ದಿನವಾಗಿದೆ. ವಿದ್ಯಾರ್ಥಿಗಳು ಬಾಂಗ್ಲಾದೇಶದಾದ್ಯಂತ ಸಾರಿಗೆಯನ್ನು ಸ್ಥಗಿತಗೊಳಿಸಲು ಪ್ರಯತ್ನಿಸಿದಾಗ ಪೊಲೀಸರು … Continued

ಅತಿಯಾದ ʼನಿದ್ದೆʼಯ ಕಾರಣದಿಂದ ಭಾರತದ ವಿರುದ್ಧದ T20 ವಿಶ್ವಕಪ್ ಪಂದ್ಯ ತಪ್ಪಿಸಿಕೊಂಡ ಬಾಂಗ್ಲಾದೇಶದ ವೇಗದ ಬೌಲರ್‌…!

ಬಾಂಗ್ಲಾದೇಶ ಕ್ರಿಕೆಟ್ ತಂಡದ ವೇಗದ ಬೌಲರ್ ತಸ್ಕಿನ್ ಅಹ್ಮದ್ ಅವರು ‘ಅತಿ ನಿದ್ದೆ’ಯಿಂದಾಗಿ ಭಾರತ ವಿರುದ್ಧದ ಟಿ20 ವಿಶ್ವಕಪ್ 2024 ಪಂದ್ಯದಲ್ಲಿ ಆಡುವುದನ್ನು ತಪ್ಪಿಸಿಕೊಂಡರು ಎಂದು ವರದಿಯೊಂದು ಹೇಳಿದೆ. ತಸ್ಕಿನ್ ತನ್ನ ಕೋಣೆಯಲ್ಲಿ ಮಲಗಿದ್ದ ಕಾರಣ ತಂಡದ ಮ್ಯಾನೇಜ್‌ಮೆಂಟಿಗೆ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಮತ್ತು ಇದರ ಪರಿಣಾಮವಾಗಿ, ಪಂದ್ಯದ ವೇಳೆ ಅವರು ತಂಡದ ಬಸ್ ತಪ್ಪಿಸಿಕೊಂಡರು … Continued

ಟಿ20 ವಿಶ್ವಕಪ್ 2024 : ಬಾಂಗ್ಲಾದೇಶ ಸೋಲಿಸಿ ಸೆಮಿಫೈನಲ್‌ ಪ್ರವೇಶಿಸಿದ ಅಫ್ಘಾನಿಸ್ತಾನ ; ಆಸ್ಟ್ರೇಲಿಯಾ ಹೊರಕ್ಕೆ

ವಿನ್ಸೆಂಟ್‌ : ಮಳೆ ಬಾಧಿತ ಸೂಪರ್ 8 ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎಂಟು ರನ್‌ಗಳಿಂದ ಸೋಲಿಸಿದ ಅಫ್ಘಾನಿಸ್ತಾನವು T20 ವಿಶ್ವಕಪ್‌ನ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಆಗಾಗ ಮಳೆಯ ಅಡಚಣೆಯನ್ನು ಕಂಡ ಅಫ್ಘಾನಿಸ್ತಾನ ತಂಡವು ಗೆಲ್ಲಲೇಬೇಕಾದ ಪಂದ್ಯದಲ್ಲಿ ತನ್ನ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 115 ರನ್ ಗಳಿಸಿತು ಮತ್ತು ನಂತರ ಬಾಂಗ್ಲಾದೇಶವನ್ನು 17.5 ಓವರ್‌ಗಳಲ್ಲಿ 105 ರನ್‌ಗಳಿಗೆ ಆಲೌಟ್ … Continued

ವೀಡಿಯೊ..| ಟಿ20 ವಿಶ್ವಕಪ್‌ 2024 ; ಹ್ಯಾಟ್ರಿಕ್ ವಿಕೆಟ್ ಪಡೆದು ಸಾಧನೆ ಮಾಡಿದ ಆಸ್ಟ್ರೇಲಿಯಾದ ವೇಗಿ

ನಾರ್ತ್ ಸೌಂಡ್: ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಸೂಪರ್ ಎಂಟರ ಹಂತದ ಪಂದ್ಯದ ವೇಳೆ ಆಸ್ಟ್ರೇಲಿಯಾದ ವೇಗಿ ಪ್ಯಾಟ್ ಕಮ್ಮಿನ್ಸ್ ಮೊದಲ ಹ್ಯಾಟ್ರಿಕ್ ಗಳಿಸಿದ್ದಾರೆ. 31 ವರ್ಷ ವಯಸ್ಸಿನ ಪ್ಯಾಟ್‌ ಕಮಿನ್ಸ್‌ ಅವರು 18 ನೇ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ ಮಹಮುದ್ದುಲ್ಲಾ ಮತ್ತು ಮಹೇದಿ ಹಸನ್ ಅವರನ್ನು ಔಟ್‌ ಮಾಡಿದರು ಮತ್ತು ನಂತರ ಕೊನೆಯ … Continued

ಹನಿಟ್ರ್ಯಾಪ್‌ ಗೆ ಕೆಡವಿ ಕೋಲ್ಕತ್ತಾದಲ್ಲಿ ಬಾಂಗ್ಲಾದೇಶ ಸಂಸದನ ಹತ್ಯೆ..? : ಢಾಕಾದಲ್ಲಿ ಮಹಿಳೆ ಬಂಧನ

ಕೋಲ್ಕತ್ತಾ: ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನ್ವರ್ ಅವರು ಕೋಲ್ಕತ್ತಾದಲ್ಲಿ ಹತ್ಯೆಯಾಗುವ ಮೊದಲು ಅವರನ್ನು ಹನಿ ಟ್ರ್ಯಾಪ್ ಮಾಡಲು ಬಳಸಿದ್ದಾರೆ ಎನ್ನಲಾದ ಮಹಿಳೆಯನ್ನು ಢಾಕಾದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಶಿಲಾಂತಿ ರೆಹಮಾನ್ ಎಂದು ಗುರುತಿಸಲಾದ ಮಹಿಳೆ ಬಾಂಗ್ಲಾದೇಶದ ಪ್ರಜೆ ಮತ್ತು ಪ್ರಮುಖ ಆರೋಪಿ ಅಖ್ತರುಝಾಮಾನ್ ಶಾಹಿನ್ ಎಂಬಾತನ ಗೆಳತಿ ಎಂದು ವರದಿಯಾಗಿದೆ. ಅಮೆರಿಕದ ಪ್ರಜೆಯಾಗಿರುವ ಅಖ್ತರುಜ್ಜಮಾನ್ … Continued

ಕೋಲ್ಕತ್ತಾ | ಬಾಂಗ್ಲಾದೇಶ ಸಂಸದನ ಹತ್ಯೆಗೆ ಸ್ನೇಹಿತನಿಂದಲೇ 5 ಕೋಟಿ ರೂ. ಸುಪಾರಿ ; ಚರ್ಮ ಸುಲಿದು, ದೇಹ ಕತ್ತರಿಸಿ ವಿವಿಧೆಡೆ ಎಸೆದರು : ಮೂಲಗಳು

ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರ ಅಪರಾಧ ತನಿಖಾ ಇಲಾಖೆ (ಸಿಐಡಿ) ಒಬ್ಬ ಶಂಕಿತನನ್ನು ಬಂಧಿಸಿದೆ. ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರು ಬುಧವಾರ ಕೋಲ್ಕತ್ತಾ ಬಳಿಯ ನ್ಯೂ ಟೌನ್‌ನಲ್ಲಿ ಬಾಡಿಗೆ ವಸತಿಗೃಹದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಗೌಪ್ಯ ಮೂಲಗಳ ಪ್ರಕಾರ, ಬಂಧಿತ ಶಂಕಿತನನ್ನು … Continued