ಬಾಂಗ್ಲಾದೇಶ ಬಿಕ್ಕಟ್ಟು | ಹಂಗಾಮಿ ಸರ್ಕಾರ ಚುನಾವಣೆ ನಡೆಸಲು ನಿರ್ಧರಿಸಿದಾಗ ಶೇಖ್ ಹಸೀನಾ ಬಾಂಗ್ಲಾದೇಶಕ್ಕೆ ಹಿಂತಿರುಗುತ್ತಾರೆ ; ಹಸೀನಾ ಪುತ್ರ

ನವದೆಹಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಬಾಂಗ್ಲಾದೇಶದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿದಾಗ ಅವರು ತಮ್ಮ ದೇಶಕ್ಕೆ ಹಿಂದಿರುಗಲಿದ್ದಾರೆ ಎಂದು ಅವರ ಮಗ ಹೇಳಿದ್ದಾರೆ. ವಾರಗಳ ಮಾರಣಾಂತಿಕ ಪ್ರತಿಭಟನೆಗಳ ನಂತರ ಹಸೀನಾ ಸೋಮವಾರ ಭಾರತಕ್ಕೆ ಪಲಾಯನ ಮಾಡಿದ್ದರು. ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ನೇತೃತ್ವದ ಉಸ್ತುವಾರಿ ಸರ್ಕಾರವು ಗುರುವಾರ ಪ್ರಮಾಣ ವಚನ … Continued

ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಹಂಗಾಮಿ ಸರ್ಕಾರ ಇಂದು ಪ್ರಮಾಣವಚನ : ಸೇನಾ ಮುಖ್ಯಸ್ಥ

ಢಾಕಾ : ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯೆ, ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಗುರುವಾರ (ಆಗಸ್ಟ್ 8) ಪ್ರಮಾಣವಚನ ಸ್ವೀಕರಿಸಲಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಘೋಷಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನರಲ್ ವಾಕರ್‌, ಪ್ರಮಾಣ ವಚನ ಸಮಾರಂಭವು ರಾತ್ರಿ 8 ಗಂಟೆಗೆ (ಸ್ಥಳೀಯ ಕಾಲಮಾನ) ನಡೆಯುವ … Continued

ಶೇಖ್ ಹಸೀನಾ ವಿರುದ್ಧ ಸಂಚು | ಖಲೀದಾ ಜಿಯಾ ಪುತ್ರ-ಪಾಕಿಸ್ತಾನದ ಐಎಸ್‌ಐ ಸಭೆ-ಲಂಡನ್ ನಲ್ಲಿ ಯೋಜನೆ-ಢಾಕಾದಲ್ಲಿ ಕಾರ್ಯರೂಪ: ಬಾಂಗ್ಲಾದೇಶ ಗುಪ್ತಚರ ವರದಿ

ಗುಪ್ತಚರ ವರದಿಗಳ ಪ್ರಕಾರ, ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾದ ಮೀಸಲಾತಿ ವ್ಯವಸ್ಥೆಯ ವಿರುದ್ಧ ಭಾರಿ ಪ್ರತಿಭಟನೆಗಳಿಗೆ ಸಾಕ್ಷಿಯಾದ ಬಾಂಗ್ಲಾದೇಶದಲ್ಲಿ ಆಡಳಿತ ಬದಲಾವಣೆಯ ನೀಲನಕ್ಷೆಯನ್ನು ಲಂಡನ್‌ನಲ್ಲಿ ಪಾಕಿಸ್ತಾನದ ಐಎಸ್‌ಐ ಸಹಯೋಗದೊಂದಿಗೆ ರಚಿಸಲಾಗಿತ್ತು ಎಂದು ವರದಿಯೊಂದು ಹೇಳಿದೆ. ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯ (ಬಿಎನ್‌ಪಿ) ಹಂಗಾಮಿ ಮುಖ್ಯಸ್ಥ ಹಾಗೂ ಖಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಮತ್ತು … Continued

ಬಾಂಗ್ಲಾದೇಶ ಬಿಕ್ಕಟ್ಟು : ಅವಾಮಿ ಲೀಗ್‌ ನಾಯಕನ ಹೊಟೇಲಿಗೆ ಬೆಂಕಿ ಹಚ್ಚಿ 24 ಜನರನ್ನು ಸಜೀವ ದಹನ ಮಾಡಿದ ಗುಂಪು

ಢಾಕಾ: ಅವಾಮಿ ಲೀಗ್ ಪಕ್ಷದ ನಾಯಕಿ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ತೊರೆದ ನಂತರ ಬಾಂಗ್ಲಾದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಅವಾಮಿ ಲೀಗ್ ಪಕ್ಷದ ನಾಯಕರ ಒಡೆತನದ ಹೋಟೆಲ್‌ ಗೆ ಗುಂಪೊಂದು ಬೆಂಕಿ ಹಚ್ಚಿ ಇಂಡೋನೇಷ್ಯಾ ಪ್ರಜೆ ಸೇರಿದಂತೆ ಕನಿಷ್ಠ 24 ಜನರನ್ನು ಸಜೀವ ದಹನ ಮಾಡಿದೆ ಎಂದು ಸ್ಥಳೀಯ ಪತ್ರಕರ್ತರು … Continued

ಬಾಂಗ್ಲಾದೇಶ ಬಿಕ್ಕಟ್ಟು : ಬಾಂಗ್ಲಾದೇಶ ಕ್ರಿಕೆಟ್‌ ತಂಡದ ಮಾಜಿ ನಾಯಕನ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆ ಮತ್ತು ಅವರು ಸೋಮವಾರ ದೇಶದಿಂದ ನಿರ್ಗಮಿಸಿದ ನಂತರ ಬಾಂಗ್ಲಾದೇಶದಲ್ಲಿ ಉಂಟಾದ ಹಿಂಸಾಚಾರ ಮತ್ತು ಅರಾಜಕತೆಯ ನಡುವೆ, ಪ್ರತಿಭಟನಾಕಾರರು ಬಾಂಗ್ಲಾದೇಶದ ಕ್ರಿಕೆಟ್ ತಂಡದ ಮಾಜಿ ನಾಯಕ ಮಶ್ರಫೆ ಬಿನ್ ಮೊರ್ತಾಜಾ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ. ಖುಲ್ನಾ ವಿಭಾಗದ ನರೈಲ್-2 ಕ್ಷೇತ್ರದ ಸಂಸದರಾಗಿರುವ ಮಶ್ರಫೆ … Continued

ಬಾಂಗ್ಲಾದೇಶ ಬಿಕ್ಕಟ್ಟು | ಬಾಂಗ್ಲಾದೇಶ ಸೇನಾ ಮುಖ್ಯಸ್ಥ ವಾಕರ್-ಉಜ್-ಜಮಾನ್ ಬಗ್ಗೆ ಶೇಖ್ ಹಸೀನಾಗೆ ʼಭಾರತʼ ಮೊದಲೇ ಎಚ್ಚರಿಸಿತ್ತೆ ?

ನವದೆಹಲಿ: ಕಳೆದ ವರ್ಷ ಜೂನ್‌ನಲ್ಲಿ ಸೇನಾ ಮುಖ್ಯಸ್ಥರಾಗಿ ಜನರಲ್ ವಾಕರ್-ಉಜ್-ಜಮಾನ್ ಅವರನ್ನು ನೇಮಕ ಮಾಡುವುದರ ಬಗೆಗಿನ ಸಂಭವನೀಯ ಅಪಾಯಗಳ ಬಗ್ಗೆ ಭಾರತೀಯ ಸರ್ಕಾರಿ ಅಧಿಕಾರಿಗಳು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಈ ಮೊದಲೇ ಎಚ್ಚರಿಕೆ ನೀಡಿದ್ದರು ಎಂದು ವರದಿಯೊಂದು ಹೇಳಿದೆ. ಈ ಎಚ್ಚರಿಕೆಗಳ ಹೊರತಾಗಿಯೂ, ಹಸೀನಾ ಅವರು ವಾಕರ್-ಉಜ್-ಜಮಾನ್ ಅವರನ್ನು ಸೇನಾ ಮುಖ್ಯಸ್ಥರಾಗಿ … Continued

ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ಘೋಷಿಸಿದ ಬಾಂಗ್ಲಾದೇಶ ಸೇನಾ ಮುಖ್ಯಸ್ಥ ಯಾರು…?

ಢಾಕಾ: ಬಾಂಗ್ಲಾದೇಶದ ಸೇನಾ ಮುಖ್ಯಸ್ಥರಾದ ಕೇವಲ ಒಂದು ತಿಂಗಳ ನಂತರ, ಜನರಲ್ ವಕಾರ್‌-ಉಸ್-ಜಮಾನ್ ಅವರು ಸೋಮವಾರ ದೇಶದಿಂದ ಪಲಾಯನ ಮಾಡಿದ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಯನ್ನು ಘೋಷಿಸುವ ಮೂಲಕ ಬೆಳಕಿಗೆ ಬಂದಿದ್ದಾರೆ. ಶೇಖ್ ಹಸೀನಾ ಅವರು ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ನಂತರ, ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ … Continued

ಬಾಂಗ್ಲಾದೇಶದಲ್ಲಿ ದಂಗೆ | ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ದೆಹಲಿಯ ಬಳಿ ಬಂದಿಳಿದ ಶೇಖ್ ಹಸೀನಾ ; ಅಜಿತ ದೋವಲ್ ಭೇಟಿ

ನವದೆಹಲಿ: ಬಾಂಗ್ಲಾದೇಶದ ನಾಯಕಿ ಶೇಖ್ ಹಸೀನಾ ಅವರು ಸೋಮವಾರ ಸಂಜೆ ದೆಹಲಿಯಿಂದ ಸುಮಾರು 30 ಕಿಮೀ ದೂರದಲ್ಲಿರುವ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಹಿಂಡನ್ ವಾಯುಪಡೆ ನೆಲೆಗೆ ಬಂದಿಳಿದಿದ್ದಾರೆ ಎಂದು ವರದಿಯಾಗಿದೆ. ನಂತರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾದರು. ಕೆಲವು ಗಂಟೆಗಳ ಹಿಂದೆ 76 ವರ್ಷ ವಯಸ್ಸಿನ ಹಾಗೂ ಐದು ಬಾರಿ ಬಾಂಗ್ಲಾದೇಶದ … Continued

ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ; ಆಡಳಿತ ನಿಯಂತ್ರಣಕ್ಕೆ ತೆಗೆದುಕೊಂಡ ಸೇನೆ

ಅವಾಮಿ ಲೀಗ್‌ ಪಕ್ಷದ ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವಿನ ಹಿಂಸಾತ್ಮಕ ಘರ್ಷಣೆಗಳ ನಡುವೆ ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಬಾಂಗ್ಲಾದೇಶದ ಸೇನೆಯು ಆಡಳಿತದ ಮೇಲೆ ನಿಯಂತ್ರಣ ತೆಗೆದುಕೊಂಡಿದ್ದು, ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಅವರು ಸೇನೆಯು ಮಧ್ಯಂತರ ಸರ್ಕಾರವನ್ನು ರಚಿಸಲಿದೆ ಎಂದು … Continued

ಬಾಂಗ್ಲಾದೇಶದ ಘರ್ಷಣೆಯಲ್ಲಿ 72 ಮಂದಿ ಸಾವು: ರಾಜಧಾನಿ ಢಾಕಾದಲ್ಲಿ ಅನಿರ್ದಿಷ್ಟಾವಧಿಗೆ ಕರ್ಫ್ಯೂ

ಢಾಕಾ : ಬಾಂಗ್ಲಾದೇಶದಲ್ಲಿ ಭಾನುವಾರ ನಡೆದ ಘರ್ಷಣೆಯಲ್ಲಿ ಕನಿಷ್ಠ 72 ಜನರು ಸಾವಿಗೀಡಾಗಿದ್ದಾರೆ ಮತ್ತು ಹತ್ತಾರು ಜನರು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಬಾಂಗ್ಲಾದೇಶದಲ್ಲಿ ಭಾನುವಾರ ನಡೆದ ಘರ್ಷಣೆಯಲ್ಲಿ ಕನಿಷ್ಠ 72 ಜನರು ಸಾವನ್ನಪ್ಪಿದ್ದಾರೆ ಮತ್ತು ಹತ್ತಾರು ಜನರು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಸ್ಟನ್ ಗ್ರೆನೇಡ್‌ಗಳನ್ನು ಪ್ರಯೋಗಿಸಿದ್ದಾರೆ. ಹಿಂಸಾತ್ಮಕ ಪರಿಸ್ಥಿತಿಯ ನಂತರ, ಭಾನುವಾರ … Continued