ವಿಜಯಪುರ | ಎಸ್‌ಬಿಐ ಚಡಚಣ ಬ್ಯಾಂಕ್‌ ದರೋಡೆ ಪ್ರಕರಣ : ಪಾಳುಬಿದ್ದ ಮನೆ ಮೇಲ್ಛಾವಣಿಯಲ್ಲಿ 41 ಲಕ್ಷ ರೂ, 6 ಕೆಜಿ ಚಿನ್ನ ಪತ್ತೆ..!

ವಿಜಯಪುರ: ಜಿಲ್ಲೆಯ ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ (SBI Robbery) ಪ್ರಕರಣದಲ್ಲಿ ದೋಚಿದ್ದ ಚಿನ್ನಾಭರಣ ಪತ್ತೆ ಹಚ್ಚುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲದೆ, ದರೋಡೆಗೆ ಬಳಿಸಿದ ವಾಹನದಲ್ಲೂ ಸ್ವಲ್ಪ ಹಣ, ಚಿನ್ನಾಭರಣ ಪತ್ತೆಯಾಗಿದೆ. ವಿಜಯಪುರ ಮತ್ತು ಮಹಾರಾಷ್ಟ್ರ ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ಇದು ಸಾಧ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. … Continued

ವಿಜಯಪುರ | ಚಡಚಣದಲ್ಲಿ ಸಿಬ್ಬಂದಿ ಕೈಕಾಲು ಕಟ್ಟಿಹಾಕಿ ಬ್ಯಾಂಕ್‌ ದರೋಡೆ…!

ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಬ್ಯಾಂಕ್‌ ದರೋಡೆ ಮಾಡಿದ ಘಟನೆ ನಡೆದಿದೆ. ಜಿಲ್ಲೆಯ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಚಡಚಣ ಪಟ್ಟಣದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ನಲ್ಲಿ (SBI Bank) ದರೋಡೆ (Robbery) ನಡೆದಿದೆ ಎಂದು ವರದಿಯಾಗಿದೆ. ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್, ಮಾರಕಾಸ್ತ್ರಗಳನ್ನು ತೋರಿಸಿ, ನಂತರ ಅವರನ್ನು … Continued

ವಿಜಯಪುರ | ಮನಗೂಳಿ ಕೆನರಾ ಬ್ಯಾಂಕಿನಲ್ಲಿ ಭಾರಿ ಕಳ್ಳತನ ; 59 ಕೆಜಿ ಚಿನ್ನಾಭರಣ ದೋಚಿದ ಕಳ್ಳರು…

ವಿಜಯಪುರ:   ಜಿಲ್ಲೆಯ ಮನಗೂಳಿ ಕೆನರಾ ಬ್ಯಾಂಕಿನಿಂದ ಕಳ್ಳರು 59 ಕೆಜಿ ಚಿನ್ನವನ್ನು ದೋಚಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಬ್ಯಾಂಕಿನಿಂದ ಸಾಲ ಪಡೆದ ಜನರು ಚಿನ್ನವನ್ನು ಠೇವಣಿ ಇಟ್ಟಿದ್ದರು ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಬಿ ನಿಂಬರ್ಗಿ ಸುದ್ದಿಗಾರರಿಗೆ ತಿಳಿಸಿದ್ದಾರೆ. 59 ಕೆಜಿ ಚಿನ್ನ ಕಳುವಾಗಿದೆ ಎಂದು ಬ್ಯಾಂಕ್ ಅಧಿಕಾರಿಗಳು ತೀರ್ಮಾನಕ್ಕೆ … Continued

ದಾವಣಗೆರೆ | ಲೋನ್ ಅರ್ಜಿ ತಿರಸ್ಕರಿಸಿದ್ದಕ್ಕೆ ಬ್ಯಾಂಕ್ ಅನ್ನೇ ದರೋಡೆ ಮಾಡಿದರು….!

ದಾವಣಗೆರೆ : ನ್ಯಾಮತಿಯ ಬ್ಯಾಂಕೊಂದರಲ್ಲಿ ಆರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನಾಭರಣ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ಆರೋಪಿಗಳು ಬ್ಯಾಂಕ್ ದರೋಡೆ ಮಾಡಿದ್ದರು. ಆದರೆ ಯಾವುದೇ ಸುಳಿವು ಸಿಕ್ಕಿರಲಲಿಲ್ಲ. ಆರು ತಿಂಗಳ ಬಳಿಕ ಉಮಾ ಪ್ರಶಾಂತ ನೇತೃತ್ವದಲ್ಲಿನ ಪೊಲೀಸರ ತಂಡ ಪ್ರಕರಣವನ್ನು ಬೇಧಿಸಿದೆ. ಎಲ್ಲಾ … Continued

ಮಂಗಳೂರು | ಕೋಟೆಕಾರು ಬ್ಯಾಂಕ್‌ ದರೋಡೆ : ಮೂವರು ಆರೋಪಿಗಳ ಬಂಧನ

ಮಂಗಳೂರು : ಮಂಗಳೂರು ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಎರಡು ದಿನಗಳ ಹಿಂದೆ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ. ಮುಂಬೈ ಮೂಲದ ಗ್ಯಾಂಗ್ ನಿಂದ ದರೋಡೆಯಾಗಿದ್ದು, ತಮಿಳುನಾಡು ಮೂಲದ ಮುರುಗಂಡಿ ದೇವರ್, ಪ್ರಕಾಶ ಅಲಿಯಾಸ್ ಜೋಶ್ವಾ ,ಮನಿವೆನನ್ ಬಂಧಿತರು. ಬಂಧಿತರಿಂದ ಕಳ್ಳತನಕ್ಕೆ … Continued

ಮಂಗಳೂರು | ಬಂದೂಕು ತೋರಿಸಿ ಬ್ಯಾಂಕ್‌ ದರೋಡೆ ; ₹10 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿ

ಮಂಗಳೂರು : ಬೀದರಿನಲ್ಲಿ ಗುರುವಾರ ನಡೆದಿರುವ ಎಟಿಎಂ ವ್ಯಾನ್ ದರೋಡೆ ಪ್ರಕರಣ ನಡೆದ ಮಾರನೇ ದಿನ ಶುಕ್ರವಾರ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆ ನಡೆದಿದೆ ಎಂದು ವರದಿಯಾಗಿದೆ. ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕೆ.ಸಿ ರೋಡ್ ಜಂಕ್ಷನ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಹಾಡಹಾಗಲೇ ದರೋಡೆ ನಡೆದಿದ್ದು, ಬ್ಯಾಂಕ್ ಶಾಖೆಗೆ ನುಗ್ಗಿದ ಐವರು … Continued