ಬಂಟ್ವಾಳ: ವಿವಿಧೆಡೆ ಎನ್ಐಎ ದಾಳಿ

ಮಂಗಳೂರು: ವಿಧ್ವಂಸಕ‌ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪಿಗಳಿಗೆ ನೆರವು ನೀಡಿದವರ ಪತ್ತೆ ಹಚ್ಚುವ ಸಲುವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಯು ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿವಿಧೆಡೆ ಸೋಮವಾರ ಶೋಧ ನಡೆಸುತ್ತಿದೆ. ಬಂಟ್ವಾಳದ ನಂದಾವರದಲ್ಲಿ ನಾಲ್ವರು ಯುವಕರನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳ ತಂಡ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಆ ಯುವಕರ ಖಾತೆಯಿಂದ ಸಂಶಯಾಸ್ಪದ … Continued

ಬಂಟ್ವಾಳ: ಕಾರಣಿಕ ದೈವ ಕೊರಗಜ್ಜನಿಗೆ ಅಗೇಲು ಸೇವೆಯ ಹರಕೆ ತೀರಿಸಿದ ಉಕ್ರೇನ್‌ ಕುಟುಂಬ

ಮಂಗಳೂರು: ತುಳುನಾಡಿನ ಕಾರಣಿಕ ದೈವ ಕೊರಗಜ್ಜ ಮತ್ತೆ ಪವಾಡ ಮೆರೆದಿದೆ. ತಮ್ಮ ಕುಟುಂದ ಕಷ್ಟವನ್ನು ನೀಗಿಸಿದ್ದಕ್ಕೆ ಉಕ್ರೇನ್ ದೇಶದ ಕುಟುಂಬವೊಂದು ದಕ್ಷಿಣ ಕನ್ನಡಕ್ಕೆ ಬಂದು ತಮ್ಮ ಹರಕೆಯನ್ನು ಪೂರೈಸಿದೆ. ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಪುದು ಗ್ರಾಮದ ಗೋವಿನತೋಟದಲ್ಲಿರುವ ಕೊರಗಜ್ಜ ದೇವರಿಗೆ ಐಟಿ ವೃತ್ತಿಪರ ಆಂಡ್ರ್ಯೂ, ಅವರ ಪತ್ನಿ ಎಲೆನಾ ಮತ್ತು ಎಂಟು ವರ್ಷದ ಮಗ ಮ್ಯಾಕ್ಸಿಮ್ … Continued

ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿತ, ಮೂವರ ಸಾವು

ಮಂಗಳೂರು : ಕಾರ್ಮಿಕರು ಉಳಿದುಕೊಂಡ ಶೆಡ್ ಮೇಲೆ ಗುಡ್ಡ ಕುಸಿದು ಶೆಡ್‌ನೊಳಗೆ ಸಿಲುಕಿಕೊಂಡ ನಾಲ್ವರು ಕಾರ್ಮಿಕರ ಪೈಕಿ ಮೂವರು ಸಾವಿಗೀಡಾದ ಘಟನೆ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ನಡೆದಿದೆ. ಓರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಬುಧವಾರ ಸಂಜೆ ಹೆನ್ರಿ ಕಾರ್ಲೊ ಅವರ ಮನೆಯ ಬಳಿಯ ಶೆಡ್ ನಲ್ಲಿ ಉಳಿದುಕೊಂಡು … Continued

ಬೆಚ್ಚಿ ಬೀಳಿಸಿದ ಮತ್ತೊಂದು ಘಟನೆ..ಮತ್ತು ಬರುವ ಚಾಕಲೇಟ್‌ ನೀಡಿ ಶಾಲೆಗೆ ಹೋಗುತ್ತಿದ್ದ ಬಾಲಕಿ ಅಪಹರಣ; ಐದು ಜನರಿಂದ ಸಾಮೂಹಿಕ ಅತ್ಯಾಚಾರ

ಬಂಟ್ವಾಳ: ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಅಂಥದ್ದೇ ಪ್ರಕರಣ ಈಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ವರದಿಯಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಶಾಲೆಗೆ ತೆರಳುತ್ತಿದ್ದ ಬಾಲಕಿಯನ್ನು ಐದು ಮಂದಿ ಅಪಹರಿಸಿ ಆಕೆಗೆ ಮತ್ತು ಬರುವ ಚಾಕಲೇಟ್ ನೀಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ … Continued