ಸೆನ್ಯಾರ್’ ನಂತರ ದಕ್ಷಿಣ ಭಾರತಕ್ಕೆ ಈಗ ಮತ್ತೊಂದು ಚಂಡಮಾರುತದ ಭೀತಿ….

ನವದೆಹಲಿ : ಚಂಡಮಾರುತ ‘ಸೆನ್ಯಾರ್’ ದುರ್ಬಲಗೊಳ್ಳುತ್ತಿದ್ದರೂ, ಬಂಗಾಳಕೊಲ್ಲಿಯಲ್ಲಿ ಹೊಸ ಚಂಡಮಾರುತವೊಂದು ಸೃಷ್ಟಿಯಾಗುತ್ತಿದ್ದು, ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆಯಿಂದಿರಲು ಭಾರತೀಯ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ. ಗುರುವಾರ ಬಿಡುಗಡೆ ಮಾಡಿದ ತನ್ನ ಬುಲೆಟಿನ್‌ನಲ್ಲಿ, ಹವಾಮಾನ ಇಲಾಖೆಯು ನೈಋತ್ಯ ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿಯನ್ನು ಆವರಿಸಿದ್ದ ವಾಯುಭಾರ ಕುಸಿತವು ತೀವ್ರ ವಾಯುಭಾರ ಕುಸಿತವಾಗಿ ಮಾರ್ಪಟ್ಟಿದೆ … Continued

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ; 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ ; ದಕ್ಷಿಣದ ರಾಜ್ಯಗಳಲ್ಲಿ ಹೈ ಅಲರ್ಟ್…!

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮಾಹಿತಿಯ ಪ್ರಕಾರ, ಮಲೇಷ್ಯಾ ಮತ್ತು ಪಕ್ಕದ ಮಲಕ್ಕಾ ಜಲಸಂಧಿಯ ಮೇಲೆ ಉಂಟಾಗಿರುವ ಸುಳಿಗಾಳಿ ಪ್ರದೇಶವು (well-marked low-pressure area) ಮುಂದಿನ 48 ಗಂಟೆಗಳ ಒಳಗೆ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ. ನವೆಂಬರ್ 25 ರ ಸುಮಾರಿಗೆ ಕೊಮೊರಿನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲ್ಮೈಯಲ್ಲಿನ ಚಂಡಮಾರುತದ ಪರಿಚಲನೆಯು … Continued

ರೂಪುಗೊಂಡ ಮೊಂತಾ ಚಂಡಮಾರುತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ  ಉಂಟಾದ ಮೊಂತಾ ಚಂಡಮಾರುತದ ಕಾರಣದಿಂದಾಗಿ ಮುಂದಿನ ಕೆಲವು ದಿನಗಳವರೆಗೆ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಅಕ್ಟೋಬರ್ 28 ರಂದು ಕರ್ನಾಟಕದ ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಿದೆ. ಅಕ್ಟೋಬರ್ 28 ರ ಬೆಳಿಗ್ಗೆ … Continued

ವೀಡಿಯೊ…| ಒಡಿಶಾದ ಸಮುದ್ರದಲ್ಲಿ ಮಗುಚಿದ ದೋಣಿ ; ಅದರಲ್ಲಿದ್ದ ಕ್ರಿಕೆಟಿಗ ಸೌರವ ಗಂಗೂಲಿ ಸಹೋದರ, ಅತ್ತಿಗೆ ಸ್ವಲ್ಪದರಲ್ಲೇ ಪಾರು

ಪುರಿ: ಭಾರತದ ಕ್ರಿಕೆಟ್‌ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಸಹೋದರ ಸ್ನೇಹಶಿಶ್ ಗಂಗೂಲಿ ಮತ್ತು ಅವರ ಪತ್ನಿ ಅರ್ಪಿತಾ ಇದ್ದ ಸ್ಪೀಡ್‌ ಬೋಟ್‌ ಒಡಿಶಾದ ಸಮುದ್ರದಲ್ಲಿ ಭಾನುವಾರ ಮಗುಚಿ ಬಿದ್ದಿದೆ. ಅವರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದು, ಅವರನ್ನು ರಕ್ಷಣಾ ಗಾರ್ಡ್‌ಗಳು ರಕ್ಷಿಸಿದ್ದಾರೆ. ಪುರಿಯಲ್ಲಿ ರಜೆಯಲ್ಲಿದ್ದ ಗಂಗೂಲಿ ದಂಪತಿ ಕಡಲತೀರದಲ್ಲಿ ಆನಂದಿಸುತ್ತಿದ್ದಾಗ ಈ ಘಟನೆ … Continued

ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮತ್ತೆ ಮಳೆ ; ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತದ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಲವೆಡೆ ಡಿಸೆಂಬರ್ 14ರವರೆಗೆ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, … Continued

ಫೆಂಗಲ್ ಚಂಡಮಾರುತದ ಪ್ರಭಾವ : ಕರ್ನಾಟಕದ 15 ಜಿಲ್ಲೆಗಳಲ್ಲಿ ಡಿ.1ರಿಂದ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಮೇಲೆ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿ ತಮಿಳುನಾಡಿಗೆ ಅಪ್ಪಳಿಸಲಿರುವ ಚಂಡಮಾರುತ ‘ಫೆಂಗಲ್’ (Cyclone Fengal) ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆಯೂ ಆಗಲಿದೆ. ಈ ಚಂಡಮಾರುತದ ಪ್ರಭಾವದಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲಿಯೂ ವಿಶೇಷವಾಗಿ ದಕಿಷಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು … Continued

ಚಂಡಮಾರುತ ಫೆಂಗಲ್ ಎಚ್ಚರಿಕೆ: ತಮಿಳುನಾಡು, ಪುದುಚೇರಿಗೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ಮಂಗಳವಾರ (ನವೆಂಬರ್ 26) ನೈಋತ್ಯ ಬಂಗಾಳ ಕೊಲ್ಲಿಯಲ್ಲಿನ ತೀವ್ರವಾದ ವಾಯುಭಾರ ಕುಸಿತವು ಮುಂದಿನ 24 ಗಂಟೆಗಳಲ್ಲಿ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಈ ಚಂಡಮಾರುತಕ್ಕೆ ಫೆಂಗಲ್ ಎಂದು ಹೆಸರಿಸುವ ಸಾಧ್ಯತೆಯಿದೆ. ಇದು ಈ ವಾರದ ಕೊನೆಯಲ್ಲಿ ತಮಿಳುನಾಡು ಕರಾವಳಿಯನ್ನು ಸಮೀಪಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಉತ್ತರ-ವಾಯುವ್ಯವಾಗಿ ಗಂಟೆಗೆ … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ಹಿಂದೂ ಮಹಾಸಾಗರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದ್ದು, ಿದರ ಪರಿನಾಮದಿಂದ ಕರ್ನಾಟಕದಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದೆ. ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಕರ್ನಾಟಕದ ದಕ್ಷಿಣ ಒಳನಾಡಿನ … Continued

ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಅಪ್ಪಳಿಸಲಿದೆ ಡಾನಾ ಚಂಡಮಾರುತ

ಭುವನೇಶ್ವರ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಪೂರ್ವ- ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ಪಶ್ಚಿಮ- ವಾಯುವ್ಯ ದಿಕ್ಕಿನೆಡೆಗೆ ಚಲಿಸಿ ಅ.23ರ ವೇಳೆಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅಕ್ಟೋಬರ್‌ 24 … Continued

ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ : ನೈಋತ್ಯ ಮಾನ್ಸೂನ್ ಮುಂಚಿತವಾಗಿ ಆಗಮನ ; ಮುಂಗಾರು ಪೂರ್ವ ಮಳೆಯೂ ಜೋರು…!

ನವದೆಹಲಿ : ನೈಋತ್ಯ ಮಾನ್ಸೂನ್‌ ಮೇ 19ರೊಳಗೆ ಅಂದರೆ ಸಾಮಾನ್ಯವಾಗಿ ಆಗಮಿಸುವುದಕ್ಕಿಂತ ಮೂರು ದಿನ ಮುಂಚಿತವಾಗಿ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ನೈಋತ್ಯ ಮಾನ್ಸೂನ್‌ ಸಾಮಾನ್ಯವಾಗಿ ಮೇ 22 ರಂದು ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಕ್ಕೆ … Continued