ಕಳಪೆ ರಸ್ತೆಗಳಿಂದ ‘ಯಾತನೆʼ ; ಬಿಬಿಎಂಪಿಗೆ ಬೆಂಗಳೂರು ವ್ಯಕ್ತಿಯಿಂದ ನೋಟಿಸ್ : 50 ಲಕ್ಷ ರೂ. ಪರಿಹಾರಕ್ಕೆ ಆಗ್ರಹ

ಬೆಂಗಳೂರು : ಬೆಂಗಳೂರಿನ 43 ವರ್ಷದ ವ್ಯಕ್ತಿಯೊಬ್ಬರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಗೆ ಕಾನೂನು (ಲೀಗಲ್) ನೋಟಿಸ್ ಕಳುಹಿಸಿದ್ದು, ನಗರದಲ್ಲಿನ ವಾಹನ ಚಲಾಯಿಸಲು ಯೋಗ್ಯವಲ್ಲದ ರಸ್ತೆಗಳಿಂದ ಉಂಟಾದ “ದೈಹಿಕ ಯಾತನೆ ಮತ್ತು ಭಾವನಾತ್ಮಕ ಆಘಾತ”ಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೋರಿದ್ದಾರೆ. ರಿಚ್ಮಂಡ್ ಟೌನ್ ನಿವಾಸಿ ದಿವ್ಯ ಕಿರಣ ಎಂಬವರು ತಮ್ಮ ನೋಟಿಸ್‌ನಲ್ಲಿ, ತೆರಿಗೆ … Continued

ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರಿನ ಸಂಪರ್ಕ; ಬಿಬಿಎಂಪಿ

ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿ ಬಿಬಿಎಂಪಿಯಿಂದ(BBMP) ಸ್ವಾಧೀನಾನುಭವ ಪ್ರಮಾಣ ಪತ್ರ( Occupancy certificates) ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಈ ಕುರಿತು ಬಿಬಿಎಂಪಿ ಮಹತ್ವದ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನಲ್ಲಿ ವಿದ್ಯುತ್‌ ಸಂಪರ್ಕಕ್ಕೆ ಕೋರಿ ಸುಮಾರು 66,400 ಅರ್ಜಿಗಳು ಬಂದಿವೆ. ಸುಪ್ರೀಂ ಕೋರ್ಟ್‌ ಕಳೆದ ವರ್ಷ ಡಿಸೆಂಬರ್‌ನಲ್ಲಿ ನೀಡಿರುವ … Continued

ರಾಜ್ಯ ಸರ್ಕಾರಕ್ಕೆ ಮುಜುಗರ ; ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಕಳುಹಿಸಿದ ಗವರ್ನರ್

ಬೆಂಗಳೂರು : ವಿಪಕ್ಷಗಳ ವಿರೋಧದ ನಡೆಯು ಸದನದಲ್ಲಿ ಅಂಗೀಕಾರವಾಗಿದ್ದ ಗ್ರೇಟರ್ ಬೆಂಗಳೂರು ವಿಧೇಯಕವನ್ನು ರಾಜ್ಯಪಾಲರು ಸಹಿ ಹಾಕದೆ ವಾಪಸ್ ಕಳುಹಿಸಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ವಿಪಕ್ಷಗಳ ವಿರೋಧದ ನಡುವೆಯೂ ಅನಮೋದನೆ ಸಿಕ್ಕಿತ್ತು. ಆದರೆ, ಇದೀಗ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರು ಕೆಲವೊಂದು ಸ್ಪಷ್ಟನೆ ಕೇಳಿ … Continued

ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರು ಸಾವು

ಬೆಂಗಳೂರು : ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಬೆಂಗಳೂರಿನ ಥಣಿಸಂದ್ರ ಮುಖ್ಯರಸ್ತೆಯ ಸಾರಾಯಿಪಾಳ್ಯ ಬಳಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಸಹೋದರಿಯರನ್ನು ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ ಇರ್ಫಾನ (32) ಎಂದು ಗುರುತಿಸಲಾಗಿದೆ. ಇಂದು ಶನಿವಾರ ಮಧ್ಯಾಹ್ನ ಥಣಿಸಂದ್ರ ಮುಖ್ಯ ರಸ್ತೆಯ ಸರಾಯಿಪಾಳ್ಯದ ಬಳಿ ಬಿಬಿಎಂಪಿ … Continued

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆಗೆ ಸಚಿವ ಸಂಪುಟ ಅಸ್ತು…

ಬೆಂಗಳೂರು : ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಒಟ್ಟುಗೂಡಿಸಿ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ ರಚನೆ ಮಾಡಲು ಹಾಗೂ ಅದರಡಿ ನಗರ ಪಾಲಿಕೆಗಳನ್ನು ರಚಿಸಲು ಅವಕಾಶ ಕಲ್ಪಿಸುವ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವಿಧೇಯಕ-2024ಕ್ಕೆ’ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(BBMP), ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ … Continued

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮೈಸೂರಿನಲ್ಲಿ ಹೇಳಿದ್ದಾರೆ. ಇಂದು, ಶುಕ್ರವಾರ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ಉಪಾಹಾರ ಸೇವನೆ ಬಳಿಕ … Continued

ಚಲನಚಿತ್ರ ನಿರ್ಮಾಪಕ ರಾಕ್‌ ಲೈನ್ ವೆಂಕಟೇಶಗೆ ಶಾಕ್‌ ನೀಡಿದ ಬಿಬಿಎಂಪಿ : ರಾಕ್‌ ಲೈನ್ ಮಾಲ್​ ಗೆ ಬೀಗ

ಬೆಂಗಳೂರು: ತೆರಿಗೆ ಪಾವತಿಸದ ಕಾರಣ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ಚಲನಚಿತ್ರ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ ಅವರ ಒಡೆತನದ ರಾಕ್‌ಲೈನ್ ಮಾಲ್ ಅನ್ನು ಇಂದು, ಬುಧವಾರ ಪಾಲಿಕೆ ಕಂದಾಯ ಅಧಿಕಾರಿಗಳು ಬೀಗ ಹಾಕಿದ್ದಾರೆ. ದಾಸರಹಳ್ಳಿ ವಲಯದ ಬಿಬಿಎಂಪಿ ಕಂದಾಯ ಅಧಿಕಾರಿಗಳು ಇಂದು ಬುಧವಾರ ಬೆಳ್ಳಂಬೆಳಿಗ್ಗೆ ರಾಕ್‌ಲೈನ್ ಮಾಲ್ ಬಳಿ ತೆರಳಿಬೀಗ ಜಡಿದಿದ್ದಾರೆ. ರಾಕ್​ಲೈನ್ ಮಾಲ್​ 2011 … Continued

ನಿಮ್ಮಲ್ಲಿ ಹಣವಿಲ್ಲವೇ? ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು? : ಗುತ್ತಿಗೆದಾರರ ಬಾಕಿ ಪಾವತಿ ವಿಳಂಬಕ್ಕೆ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಬೆಂಗಳೂರು : ಗುತ್ತಿಗೆದಾರರ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬುಧವಾರ ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸರ್ಕಾರವೇ ಹೇಳಿರುವಂತೆ ಈಗಾಗಲೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇನ್ನು ಎಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು, ಬಾಕಿ ಪಾವತಿಯಲ್ಲೂ ಹಿರಿತನವೇ?’’ ಎಂದು ಹೈಕೋರ್ಟ್‌ ಖಾರವಾಗಿ ಪ್ರಶ್ನಿಸಿತು. “ನೀವು (ಸರ್ಕಾರ) ನಿಮ್ಮ ದಾಖಲೆಗಳನ್ನೇ ಒಮ್ಮೆ ನೋಡಿ, … Continued

ಡಿಸಿಎಂ ಡಿ.ಕೆ. ಶಿವಕುಮಾರ ಟಿಪ್ಪಣಿ ಆಧರಿಸಿ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ, ನಿಯೋಜನೆಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು : ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು 2023ರ ಆಗಸ್ಟ್‌ 10ರಂದು ಬರೆದಿರುವ ಟಿಪ್ಪಣಿ ಆಧರಿಸಿ ಕೈಗೊಳ್ಳಲಾಗಿದ್ದ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಗೆ ಕರ್ನಾಟಕ ಹೈಕೋರ್ಟ್ ಬುಧವಾರ ತಡೆ ನೀಡಿದೆ. ಬೆಂಗಳೂರಿನ ಅನೀಸ್ ಫಾತಿಮಾ ಸೇರಿದಂತೆ ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ-ಕಿರಿಯ ಆರೋಗ್ಯ ಪರಿವೀಕ್ಷಕರು, ಎಸ್‌ಡಿಎ, ಎಫ್‌ಡಿಎ, … Continued

ಬೆಕ್ಕುಗಳಿಗೂ ಸಂತಾನಹರಣ ಚಿಕಿತ್ಸೆ ಮಾಡಿ : ಬಿಬಿಎಂಪಿಗೆ ಹೀಗೊಂದು ಮನವಿ..!

ಬೆಂಗಳೂರು : ಇಷ್ಟು ದಿನ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಬಗ್ಗೆ ಬಿಬಿಎಂಪಿಗೆ ದೂರು ದಾಖಲಾಗುತ್ತಿತ್ತು. ಆದರೆ ಈಗ ಬೆಕ್ಕುಗಳ ಕಾಟಗಳ ವಿರುದ್ಧ ಸ್ಥಳೀಯ ನಿವಾಸಿಗಳು ದೂರು ನೀಡಿದ್ದಾರೆ…! ಬೆಕ್ಕಿನ ಹಾವಳಿಯಿಂದ ಕಂಗಾಲಾಗಿರುವ ಸ್ಥಳೀಯರು ನಾಯಿಗಳಿಗೆ ಮಾಡಿದಂತೆ ಬೆಕ್ಕುಗಳಿಗೂ ಸಂತನಾಹರಣ ಚಿಕಿತ್ಸೆ ಮಾಡುವಂತೆ ಮನವಿ ಬಿಬಿಎಂಪಿಗೆ ಮಾಡಿದ್ದಾರೆ. ಬೆಂಗಳೂರಿನ ವಾರ್ಡ್ ನಂಬರ್ 5ರ ನ್ಯಾಯಾಂಗ ಬಡಾವಣೆಯಲ್ಲಿ … Continued