ನೇಮಕಕ್ಕೂ ಮುನ್ನ ಪಿಎಸ್‌ಐ ಸಮವಸ್ತ್ರ ಧರಿಸಿ ಪೋಸ್‌ ಕೊಟ್ಟಿದ್ದ ಪೊಲೀಸ್‌ ಪೇದೆ ಅಮಾನತು

ಬೆಂಗಳೂರು: ಪಿಎಸ್‌ಐ ನೇಮಕಾತಿ ಆದೇಶಕ್ಕೂ ಮುನ್ನವೇ ಹಾವೇರಿ ತಾಲೂಕಿನ ಗುಡಸಲಕೊಪ್ಪ ಗ್ರಾಮದ ಬಸನಗೌಡ ಕರೇಗೌಡ, ಸಮವಸ್ತ್ರ ಧರಿಸಿ ತಮ್ಮೂರಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ್ದ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್, ಕಾನ್‌ಸ್ಟೆಬಲ್ ಬಸನಗೌಡನನ್ನು ಅಮಾನತು ಮಾಡಿದ್ದಾರೆ. ಪಿಎಸ್‌ಐ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಬಸನಗೌಡ ಅವರನ್ನೂ ವಿಚಾರಣೆ ಮಾಡಿದ್ದರು. … Continued