ಬೆಳಗಾವಿ ಜಿಲ್ಲೆಯ ಜಲಪಾತಗಳಿಗೆ ಹೋಗಲು ಪ್ರವಾಸಿಗರಿಗೆ ನಿರ್ಬಂಧ

ಬೆಳಗಾವಿ : ಜಿಲ್ಲೆಯಾದ್ಯಂತ ಹಲವಾರು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲ ಜಾಲಪಾತಗಳ ಸಮೀಪ ಸಾರ್ವಜನಿಕರು ತೆರಳುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಜಪಾತದ ಸಮೀಪಕ್ಕೆ ತೆರಳಿದಾಗ ಕಾಲುಜಾರಿ ಬಿದ್ದು ಅನೇಕ ಜನರು ಪ್ರಾಣ ಕಳೆದುಕೊಂಡ ಘಟನೆಗಳು ರಾಜ್ಯದಾದ್ಯಂತ ಸಂಭವಿಸುತ್ತಿರುವುದು ವರದಿಯಾಗಿದೆ. ಇಂತಹ ದುರ್ಘಟನೆಗಳನ್ನು ತಪ್ಪಿಸುವ ಉದ್ದೇಶದಿಂದ ಜಿಲ್ಲೆಯಲ್ಲಿರುವ … Continued

ಬೆಳಗಾವಿ: ಅಕ್ಕತಂಗೇರಹಾಳದಲ್ಲಿ ಜೋಡಿ ಕೊಲೆ

ಬೆಳಗಾವಿ : ಜಿಲ್ಲೆಯ ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಕತಂಗೇರಹಾಳದಲ್ಲಿ ಮಂಗಳವಾರ ಜೋಡಿ ಕೊಲೆ ನಡೆದಿದೆ. ಕೊಲೆ ಆರೋಪಿ ಯಲ್ಲಪ್ಪ ಮಾಳಗಿ(45) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ರೇಣುಕಾ ಮಾಳಗಿ (40) ಹಾಗೂ ಮಲ್ಲಿಕಾರ್ಜುನ ಜಗದಾರ (36) ಹಾಗೂ ಹತ್ಯೆಗೀಡಾದವರು. ಕೊಲೆಗೆ ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಆದರೆ ನಿಖರವಾದ ಕಾರಣ ತನಿಖೆ ನಂತರವೇ ಗೊತ್ತಾಗಲಿದೆ … Continued

ಬಡಾಲ ಅಂಕಲಗಿ: ಮನೆ ಕುಸಿದು ಒಂದೇ ಕುಟುಂಬದ ಏಳು ಜನರು ಸಾವು

ಬೆಳಗಾವಿ : ಧಾರಾಕಾರ ಮಳೆಗೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಮನೆ ಕುಸಿದ ಪರಿಣಾಮ ಒಟ್ಟು ಏಳು ಜನ ಮೃತಪಟ್ಟ ಘಟನೆ ನಡೆದ ಬಗ್ಗೆ ಬುಧವಾರ ವರದಿಯಾಗಿದೆ, ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಸ್ಥಳೀಯ ಖನಗಾವಿ ಕುಟುಂಬದ 7 ಜನರು  ಮೃತಪಟ್ಟಿದ್ದಾರೆ. ಮನೆಯೊಳಗೆ ಸಿಲುಕಿದ ಇನ್ನಿಬ್ಬರನ್ನು ಸುರಕ್ಷಿತವಾಗಿ ಹೊರ ತಂದು ಆಸ್ಪತ್ರೆಗೆ … Continued

ಬೋರ್ವೆಲ್ ಗೆ ಬಿದ್ದ ಎರಡು ವರ್ಷದ ಮಗು:ರಕ್ಷಣೆಗೆ ಹರಸಾಹಸ

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದಲ್ಲಿ ಸುಮಾರು 2 ವರ್ಷದ ಮಗು ಬೋರ್ ವೆಲ್ ಗೆ ಬಿದ್ದ ಘಟನೆ ವರದಿಯಾಗಿದೆ. ಅಲಕನೂರು ಗ್ರಾಮದ ಶರತ್ ಸಿದ್ಧಪ್ಪ ಹಸಿರೇ ಎಂಬ ಮಗು ನಿನ್ನೆ ಕಾಣೆಯಾಗಿದ್ದು ಈ ಬಗ್ಗೆ ಹಾರೂಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ ಎಲ್ಲಿಯೂ ಹುಡುಕಿದರೂ ಮಗು ಪತ್ತೆಯಾಗಿರಲಿಲ್ಲ. ಕುಟುಂದವರು ತೋಟದ … Continued