ಸಾವರ್ಕರ್ ಫೋಟೋ ತೆರವಿಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ : ಸ್ಪೀಕರ್‌ ಯುಟಿ ಖಾದರ್‌

ಬೆಳಗಾವಿ: ವಿಧಾನಸಭೆ ಸಭಾಂಗಣದಲ್ಲಿ ವೀರ್‌ ಸಾವರ್ಕರ್ ಫೋಟೋ ತೆರವಿಗಾಗಿ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ‌ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ವಿಧಾನಸಭೆ ಸಭಾಂಗಣದಲ್ಲಿರುವ ಸಾವರ್ಕರ್ ಭಾವಚಿತ್ರ ತೆರವುಗೊಳಿಸಲು ಯಾವುದೇ ಪ್ರಸ್ತಾವನೆ ಬಂದಿಲ್ಲ.‌ ಪ್ರಸ್ತಾವನೆ ಬಂದ ಮೇಲೆ ಆ ಬಗ್ಗೆ ವಿಚಾರ ಮಾಡೋಣ. ಈಗಲೇ ಅದರ ಬಗ್ಗೆ ಏಕೆ..? … Continued

ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಜನವರಿ 23ಕ್ಕೆ ಮುಂದೂಡಿಕೆ : ಗೃಹ ಸಚಿವ ಡಾ.ಪರಮೇಶ್ವರ

ಬೆಳಗಾವಿ: ಇದೇ ತಿಂಗಳು ಡಿಸೆಂಬರ್‌ 23ರಂದು ನಡೆಸಲು ಉದ್ದೇಶಿಸಿದ್ದ 545 ಪಿಎಸ್‌ಐ ಹುದ್ದೆಗಳ ಮರು ಪರೀಕ್ಷೆಯನ್ನು ಸರ್ಕಾರ ಒಂದು ತಿಂಗಳ ಕಾಲ ಮುಂದೂಡಿದ್ದು, 2024ರ ಜನವರಿ 23ಕ್ಕೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಡಾ. ಪರಮೇಶ್ವರ ಪ್ರಕಟಿಸಿದ್ದಾರೆ. 545 ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಹೈಕೋರ್ಟ್‌ … Continued

ಬೆಳಗಾವಿ ಸುವರ್ಣಸೌಧದ ಎದುರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ : ಸಿಎಂ ಬೊಮ್ಮಾಯಿ

ಬೆಂಗಳೂರು : ಬೆಳಗಾವಿ ಸುವರ್ಣಸೌಧದಲ್ಲಿ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ನಡೆದ ಸಮಾರಂಭದಲ್ಲಿ ‘ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ … Continued