ಬೆಳಗಾವಿ | ಎಸ್‌ಡಿಆರ್‌ಎಫ್‌ ಸಿಪಿಐ ಆತ್ಮಹತ್ಯೆ

ಬೆಳಗಾವಿ: ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್)ಯ ಸಿಪಿಐ ಶ್ರೀಶೈಲ ಚೌಗಲಾ (37) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಚನ್ನಮ್ಮ ನಗರದಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಚೌಗಲೆ ಅವರು ಮನೆಯ ಕೊಠಡಿಯ ಬಾಗಿಲು ಹಾಕಿಕೊಂಡಿದ್ದ ವೇಳೆ ಅನುಮಾನಗೊಂಡ ಪತ್ನಿ ತಕ್ಷಣವೇ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ … Continued

ಬೆಳಗಾವಿ ; ವಕೀಲೆ ಮನೆ ಮೇಲೆ ಗುಂಡಿನ ದಾಳಿ

ಬೆಳಗಾವಿ: ನಗರದ ಮಾಂಡೋಳಿ ರಸ್ತೆಯಲ್ಲಿರುವ ವಕೀಲೆ ಪೂಜಾ ಕಾಕತಕರ ಅವರ ಮನೆಯ ಮೇಲೆ ತಡರಾತ್ರಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆದಿರುವುದು ವರದಿಯಾಗಿದೆ. ಕಳೆದ 18 ವರ್ಷಗಳಿಂದ ಹೈ-ಪ್ರೊಫೈಲ್ ಕೇಸ್‌ಗಳ ಪರ ವಾದ ಮಂಡಿಸುತ್ತಿರುವ ಪೂಜಾ ಕಾಕತಕರ ಅವರ ನಿವಾಸವನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ. ಮಧ್ಯರಾತ್ರಿ ವೇಳೆ ಕಿಡಿಗೇಡಿಗಳು ಮನೆಯ ಮೊದಲ ಮಹಡಿಗೆ ಗುಂಡು ಹಾರಿಸಿದ್ದಾರೆ. … Continued

ಬೆಳಗಾವಿ : ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹15.45 ಕೋಟಿ ವಂಚನೆ ; ಹೈದರಾಬಾದಿನಲ್ಲಿ ಇಬ್ಬರ ಬಂಧನ

ಬೆಳಗಾವಿ : ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡು 81 ವರ್ಷದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 15.45 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನೀವು ಹಣಕಾಸು ಅಪರಾಧದಲ್ಲಿ ಭಾಗಿಯಾಗಿರುವುದಾಗಿ ಉದ್ಯಮಿಗೆ ಬೆದರಿಸಿ ಈ ವಂಚನೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಹೈದರಾಬಾದ್ ನಿವಾಸಿಗಳಾದ ವೆಂಕಟೇಶ ಶರತ ನಾಯ್ಕ ಮತ್ತು ದೇಗಾವತ್ ಶ್ರೀಪಾದ … Continued

ಬೆಳಗಾವಿ : ಇಬ್ಬರು ಅಂತಾರಾಜ್ಯ ಬೈಕ್ ಕಳ್ಳರ ಬಂಧನ ; 27 ಬೈಕ್‌ಗಳು ವಶ

ಬೆಳಗಾವಿ:   ಜಿಲ್ಲೆಯ ವಿವಿಧೆಡೆ ಹಾಗೂ ಪಕ್ಕದ ಮಹಾರಾಷ್ಟ್ರದಲ್ಲಿ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಇಬ್ಬರು ಕುಖ್ಯಾತ ಅಂತಾರಾಜ್ಯ ಕಳ್ಳರನ್ನು ಸಂಕೇಶ್ವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ₹18.30 ಲಕ್ಷ ಮೌಲ್ಯದ ಒಟ್ಟು 27 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಲಕ್ಷ್ಮಣ ವಿರುಪಾಕ್ಷಿ ಕಣಬರಗಿ (31) ಹಾಗೂ ಫಕೀರಪ್ಪ ಸಿದ್ದಪ್ಪಾ ಕರಿಗಾರ (25) ಬಂಧಿತ ಆರೋಪಿಗಳಾಗಿದ್ದಾರೆ. … Continued

ಧಾರವಾಡ : ಮಾಜಿ ಶಾಸಕನ ಪುತ್ರನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (Raju Bolashetty) ಅವರನ್ನ ಕೊಲೆ ಮಾಡಿ ಮೃತದೇಹ ಸಟ್ಟುಹಾಕಿರುವ ಶಂಕೆ ವ್ಯಕ್ತವಾಗಿದೆ. ಧಾರವಾಡದ ರಾಮಾಪುರ ಗ್ರಾಮದ ಬಳಿಯ ನಿರ್ಜನ ಪ್ರದೇಶದಲ್ಲಿ ಮಂಗಳವಾರ ಈ ಘಟನೆ ಬೆಳಕಿಗೆ ಬಂದಿದೆ. … Continued

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಮೊದಲು ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ಬೆಳಗಾವಿ : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಮೃತ ವಿದ್ಯಾರ್ಥಿನಿಯನ್ನು ಭೂಮಿಕಾ  (17) ಎಂದು ಗುರುತಿಸಲಾಗಿದೆ. ಪರೀಕ್ಷೆ ಬರೆಯಲು ತೆರಳುವ ಸಲುವಾಗಿ ಸ್ನಾನ ಮುಗಿಸಿಕೊಂಡು ಹೊರಬರುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು … Continued

ರಾಯಬಾಗ | ಲಾರಿ-ಬೈಕ್ ಡಿಕ್ಕಿ : ಒಂದೇ ಕುಟುಂಬದ ಮೂವರು ಸಾವು

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದಂಪತಿ ಹಾಗೂ ಪುತ್ರಿ ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಜೈಸಿಂಗ್‌ಪುರದ ಗಿರೇಪ್ಪ ಕುಂದ್ರಾಳಿ (38), ಅವರ ಪತ್ನಿ ಮಂಜುಳಾ (28) ಮತ್ತು … Continued

ಬೆಳಗಾವಿ : ಸಕ್ಕರೆ ಕಾರ್ಖಾನೆ ದುರಂತ ; ಮೃತರ ಸಂಖ್ಯೆ 7ಕ್ಕೆ ಏರಿಕೆ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ  ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ ಎಂದು ವರದಿಯಾಗಿದೆ. ಬೈಲಹೊಂಗಲ ತಾಲ್ಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ವಾಲ್ ದುರಸ್ತಿ ಕಾರ್ಯ ನಡೆಯುತ್ತಿದ್ದ ವೇಳೆ ಬಾಯ್ಲರ್ ಸ್ಫೋಟಗೊಂಡಿದ್ದು, ಕುದಿಯುತ್ತಿದ್ದ ಕಬ್ಬಿನ ಹಾಲು ಕಾರ್ಮಿಕರ ಮೈಮೇಲೆ ಬಿದ್ದ ಪರಿಣಾಮ  ಸ್ಥಳದಲ್ಲೇ … Continued

ಬೆಳಗಾವಿ : ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ ; ಇಬ್ಬರ ಸಾವು

ಬೆಳಗಾವಿ : ಬೈಲಹೊಂಗಲ ತಾಲೂಕು ಮರಕಂಬಿ ಗ್ರಾಮದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಬಾಯ್ಲರ್ ಸ್ಪೋಟದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡವರನ್ನು ಬೆಳಗಾವಿ ಮತ್ತು ಬೈಲಹೊಂಗಲ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ … Continued

ರಾಮದುರ್ಗ: ಕಾಲುವೆಗೆ ಈಜಲು ಇಳಿದಿದ್ದ ಇಬ್ಬರು ಬಾಲಕರು ಸಾವು

ಬೆಳಗಾವಿ: ಈಜಲು ಕಾಲುವೆಗೆ ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಪದಮಂಡಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಹಣಮಂತ  ಹಗೇದ (10) ಹಾಗೂ ಬಸವರಾಜ ಸೋಮಣ್ಣವರ (10) ಮೃತಪಟ್ಟ ಬಾಲಕರು ಎಂದು ಹೇಳಲಾಗಿದೆ. ತಂದೆಯ ಜೊತೆ ಕುರಿ ಕಾಯಲು ಹೋಗಿದ್ದ ಸಂದರ್ಭದಲ್ಲಿ ಕಾಲುವೆಯಲ್ಲಿ ಈಜಲು ತೆರಳಿದ್ದಾರೆ. ಎಷ್ಟುಹೊತ್ತು ಕಳೆದರೂ ಮಕ್ಕಳು ಬಾರದಿದ್ದಾಗ … Continued