ಶಿವಂ ಅಸೋಸಿಯೇಟ್ಸ್‌ ಮೇಲೆ ಇ.ಡಿ. ದಾಳಿ : ₹1,777 ಕೋಟಿ ಲೆಕ್ಕಕ್ಕೆ ಸಿಗದ ಹಣ ಪತ್ತೆ

 ಬೆಂಗಳೂರು/ಬೆಳಗಾವಿ: ಸಾರ್ವಜನಿಕರಿಂದ ಹೂಡಿಕೆ ಹಾಗೂ ಠೇವಣಿ ಹೆಸರಿನಲ್ಲಿ ಸಂಗ್ರಹಿಸಲಾದ ಹಣದಲ್ಲಿ ಸುಮಾರು ₹1,777 ಕೋಟಿ ಮೊತ್ತದ ನಿಧಿಯ ಲೆಕ್ಕ ಪತ್ತೆಯಾಗಿಲ್ಲ ಎಂಬುದು ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ. ಬೆಳಗಾವಿ ಮೂಲದ ಹಣಕಾಸು ಸಂಸ್ಥೆ ಶಿವಂ ಅಸೋಸಿಯೇಟ್ಸ್‌ ವಿರುದ್ಧ ಈ ಕಾರ್ಯಾಚರಣೆ ನಡೆದಿದ್ದು, ಸಂಸ್ಥೆಯ ಪ್ರವರ್ತಕ ಶಿವಾನಂದ ಸಿದ್ದಪ್ಪ ನೀಲಣ್ಣವರ ಅವರು … Continued

ಗೋಕಾಕ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಬೆಳಗಾವಿ: ಜಿಲ್ಲೆಯ ಗೋಕಾಕ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದ ರೇಣುಕಾ ಗಣಾಚಾರಿ ಹೆರಿಗೆ ವೇಳೆ ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡದ ಯಶಸ್ವಿ ಪ್ರಯತ್ನದಿಂದ ಹೆರಿಗೆ ಸುಗಮವಾಗಿ ನಡೆದಿದ್ದು, ತಾಯಿ ಹಾಗೂ ಮೂವರು ನವಜಾತ ಶಿಶುಗಳು ಆರೋಗ್ಯವಾಗಿದ್ದಾರೆ. ಡಾ. ಶ್ವೇತಾ ನಾಯಿಕ ನೇತೃತ್ವದಲ್ಲಿ … Continued

ಬೆಳಗಾವಿ : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಹತ್ಯೆ ; ಆರು ತಿಂಗಳ ಬಳಿಕ ಪತ್ನಿ, ಪ್ರಿಯಕರ ಬಂಧನ

ಬೆಳಗಾವಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಹತ್ಯೆ ಮಾಡಿ, ಶವವನ್ನು ಹೊಲದಲ್ಲಿ ಮುಚ್ಚಿಟ್ಟು, ಪತಿ ಕಾಣೆಯಾಗಿದ್ದಾನೆ ಎಂದು ನಂಬಿಸಿ ದೂರು ನೀಡಿದ್ದ ಪ್ರಕರಣವನ್ನು ಜಿಲ್ಲೆಯ ಖಡಕಲಾಟ ಪೊಲೀಸರು ಆರು ತಿಂಗಳ ಬಳಿಕ ಭೇದಿಸಿದ್ದಾರೆ. ಮೃತನನ್ನು ರಾಘು ಗಾವಡೆ (40) ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಬಂಗಾರಿ ಗಾವಡೆ ಹಾಗೂ … Continued

ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರ ಮನೆ ಮೇಲೆ ಇ.ಡಿ. ದಾಳಿ

ಬೆಳಗಾವಿ : ನೂರಾರು ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಶಿವಂ ಅಸೋಸಿಯೇಟ್ಸ್‌ನ ಮಾಲೀಕ ಶಿವಾನಂದ ನೀಲಣ್ಣವರ ಹಾಗೂ ಅವರ ಆಪ್ತರ ನಿವಾಸ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ. ಬೆಳಗಾವಿ, ಚಿಕ್ಕೋಡಿ ಮತ್ತು ಹುಕ್ಕೇರಿ ಸೇರಿದಂತೆ ಮೂರು ಕಡೆಗಳಲ್ಲಿ ಬೆಂಗಳೂರು ಹಾಗೂ ಗೋವಾದ ಇ.ಡಿ. ಅಧಿಕಾರಿಗಳ … Continued

‘ರಾಯರೇ ಆ ಹುಡುಗಿಯಿಂದ ನಮ್ಮನ್ನು ಕಾಪಾಡುʼ ; ರಾಘವೇಂದ್ರ ಮಠದ ಹುಂಡಿಯಲ್ಲಿ ವಿಚಿತ್ರ ಪತ್ರ ಪತ್ತೆ

ಬೆಳಗಾವಿ : ರಾಮದುರ್ಗ ಪಡಕೋಟಗಲ್ಲಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಕಾಣಿಕೆ ಹುಂಡಿಯಲ್ಲಿ ಪತ್ರವೊಂದು ಲಭಿಸಿದ್ದು ಅದರಲ್ಲಿ ರಾಯರೇ ಆ ಹುಡುಗಿಯಿಂದ ನಮ್ಮನ್ನು ಕಾಪಾಡು ಎಂದು ಪತ್ರ ಬರೆದು ಹಾಕಿ ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಇತ್ತೀಚಿಗೆ ಕಾಣಿಕೆ ಹುಂಡಿ ಎಣಿಕೆ ಮಾಡುವಾಗ ಈ ಪತ್ರ ಲಭಿಸಿದೆ. ಪತ್ರದಲ್ಲಿ ಶ್ರೀ ಗಣಪತಿಯೇ ನಮಃ, ರಾಘವೇಂದ್ರಾಯ ನಮಃ.. … Continued

ವ್ಯಾಪಕ ಮಳೆ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆ-ಪಿಯುಸಿ ಕಾಲೇಜುಗಳಿಗೆ ಜುಲೈ 7ರಂದು ರಜೆ ಘೋಷಣೆ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ಅಂಗನವಾಡಿ ಕೇಂದ್ರಗಳು/ಪ್ರಾಥಮಿಕ/ಪ್ರೌಢಶಾಲೆಗಳು ಹಾಗೂ ಪಿಯುಸಿ (12ನೇ ತರಗತಿಯವರೆಗಿನ) ಕಾಲೇಜುಗಳಿಗೆ ಮಂಗಳವಾರ(ಜುಲೈ 7) ರಜೆ ಘೋಷಿಸಲಾಗಿದೆ. ಈ ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ನಗರ ಹಾಗೂ … Continued

ಅಬಕಾರಿ ಹೆಚ್ಚುವರಿ ಆಯುಕ್ತ-ಸಚಿವ ಸತೀಶ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇ.ಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿ, ಬೆಂಗಳೂರು, ಮೈಸೂರು ಹಾಗೂ ಹಾಸನ ಜಿಲ್ಲೆಯ ಅರಸೀಕೆರೆ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಗೋವಾ ಮತ್ತು ಬೆಂಗಳೂರಿನ ಇ.ಡಿ … Continued

ಬೆಳಗಾವಿ | ಎಸ್‌ಡಿಆರ್‌ಎಫ್‌ ಸಿಪಿಐ ಆತ್ಮಹತ್ಯೆ

ಬೆಳಗಾವಿ: ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್)ಯ ಸಿಪಿಐ ಶ್ರೀಶೈಲ ಚೌಗಲಾ (37) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಚನ್ನಮ್ಮ ನಗರದಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಚೌಗಲೆ ಅವರು ಮನೆಯ ಕೊಠಡಿಯ ಬಾಗಿಲು ಹಾಕಿಕೊಂಡಿದ್ದ ವೇಳೆ ಅನುಮಾನಗೊಂಡ ಪತ್ನಿ ತಕ್ಷಣವೇ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ … Continued

ಬೆಳಗಾವಿ ; ವಕೀಲೆ ಮನೆ ಮೇಲೆ ಗುಂಡಿನ ದಾಳಿ

ಬೆಳಗಾವಿ: ನಗರದ ಮಾಂಡೋಳಿ ರಸ್ತೆಯಲ್ಲಿರುವ ವಕೀಲೆ ಪೂಜಾ ಕಾಕತಕರ ಅವರ ಮನೆಯ ಮೇಲೆ ತಡರಾತ್ರಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆದಿರುವುದು ವರದಿಯಾಗಿದೆ. ಕಳೆದ 18 ವರ್ಷಗಳಿಂದ ಹೈ-ಪ್ರೊಫೈಲ್ ಕೇಸ್‌ಗಳ ಪರ ವಾದ ಮಂಡಿಸುತ್ತಿರುವ ಪೂಜಾ ಕಾಕತಕರ ಅವರ ನಿವಾಸವನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ. ಮಧ್ಯರಾತ್ರಿ ವೇಳೆ ಕಿಡಿಗೇಡಿಗಳು ಮನೆಯ ಮೊದಲ ಮಹಡಿಗೆ ಗುಂಡು ಹಾರಿಸಿದ್ದಾರೆ. … Continued

ಬೆಳಗಾವಿ : ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹15.45 ಕೋಟಿ ವಂಚನೆ ; ಹೈದರಾಬಾದಿನಲ್ಲಿ ಇಬ್ಬರ ಬಂಧನ

ಬೆಳಗಾವಿ : ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡು 81 ವರ್ಷದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 15.45 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನೀವು ಹಣಕಾಸು ಅಪರಾಧದಲ್ಲಿ ಭಾಗಿಯಾಗಿರುವುದಾಗಿ ಉದ್ಯಮಿಗೆ ಬೆದರಿಸಿ ಈ ವಂಚನೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಹೈದರಾಬಾದ್ ನಿವಾಸಿಗಳಾದ ವೆಂಕಟೇಶ ಶರತ ನಾಯ್ಕ ಮತ್ತು ದೇಗಾವತ್ ಶ್ರೀಪಾದ … Continued