ಬೆಳಗಾವಿ : ವಿವಾಹಿತ ಮಹಿಳೆ ಮತಾಂತರಕ್ಕೆ ಯತ್ನ ; ಇಬ್ಬರ ಬಂಧನ

ಬೆಳಗಾವಿ : 28ರ ಹರೆಯದ ವಿವಾಹಿತ ಮಹಿಳೆಯ ಅಶ್ಲೀಲ ಫೋಟೋ ಹಾಗೂ ವೀಡಿಯೊಗಳನ್ನು ವೈರಲ್‌ ಮಾಡುವುದಾಗಿ ಬೆದರಿಸಿ ಬ್ಲಾಕ್ ಮೇಲ್ ಮೂಲಕ ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯಿಸಿದ ಆರೋಪದಲ್ಲಿ ದಂಪತಿ ಸೇರಿದಂತೆ ಏಳು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕಿರಾಣಿ ಅಂಗಡಿ ಇಟ್ಟುಕೊಂಡು ಜೀವನ ಮಾಡುತ್ತಿದ್ದ ಮಹಿಳೆಯನ್ನು ಮತಾಂತರ ಮಾಡಲು ಯತ್ನಿಸಿದ್ದ ಆರೋಪದ ಮೇರೆಗೆ ರಫೀಕ್ ಬೇಪಾರಿ … Continued

ಖಾನಾಪುರ: ಕಾಡುಕೋಣ ತಿವಿದು ವೃದ್ದೆ ಸಾವು

ಬೆಳಗಾವಿ : ಕಾಡುಕೋಣ ತಿವಿದು ವೃದ್ದೆ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ಖಾನಾಪುರ ತಾಲೂಕಿನ ಅಮಟೆ ಗ್ರಾಮದ ಹೊರವಲಯದ ಬಳಿ ಈ ದುರ್ಘಟನೆ ನಡೆದಿದ್ದು, ಕಾಡುಕೋಣದ ದಾಳಿಯಿಂದ ಸರಸ್ವತಿ ಅರ್ಜುನ ಗಾವಡೆ (80) ಎಂಬವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಅವರು ಮನೆಯಿಂದ ತಮ್ಮ ಹೊಲದ ಗೋಡಂಬಿ ಬೀಜಗಳನ್ನು ಕೀಳಲು ಹೋದಾಗ ಕಾಡುಕೋಣ … Continued

ಈಜು ಕಲಿಯಲು ಹೋದಾಗ ದುರ್ಘಟನೆ : ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಇಬ್ಬರು ಮಕ್ಕಳ ಸಾವು

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಕೃಷಿ ಹೊಂಡದ ನೀರಿನಲ್ಲಿ ಮುಳುಗಿ ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಕಲ್ಲಪ್ಪ ಬಸಪ್ಪ ಗಾಣಿಗೇರ (36) ಮತ್ತು ಮಕ್ಕಳಾದ ಮನೋಜ ಗಾಣಿಗೇರ (11) ಮತ್ತು ಮದನ ಗಾಣಿಗೇರ (9) ಎಂದು ಗುರುತಿಸಲಾಗಿದೆ. ಬೇರೆಯವರ ಜಮೀನಿನಲ್ಲಿದ್ದ ಕೃಷಿ … Continued

ಮುಗಳಖೋಡ : ಕಾರು-ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಐವರು ಸಾವು

ಬೆಳಗಾವಿ : ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಕಾಲುವೆ ಬಳಿ ಜತ್ತ-ಜಾಂಬೋಟಿ ರಸ್ತೆಯಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಗುರ್ಲಾಪುರದ ಮಲ್ಲಿಕಾರ್ಜುನ ಮರಾಠೆ (16), ಲಕ್ಷ್ಮೀ ಮರಾಠೆ(19 ), ಆಕಾಶ ಮರಾಠೆ(19), ಬೈಕ್ ಸವಾರರಾದ ನಿಪನಾಳ ಗ್ರಾಮದ ಶ್ರೀಕಾಂತ ಪಡತರಿ(22) ಹಾಗೂ ಮುಗಳಖೋಡ … Continued

ಯರಗಟ್ಟಿ :ಕಾರುಗಳ ಮುಖಾಮುಖಿ ಡಿಕ್ಕಿ ; ಸ್ಥಳದಲ್ಲೇ ಮೂವರ ಸಾವು

ಬೆಳಗಾವಿ: ಸ್ವಿಫ್ಟ್‌ ಮತ್ತು ಅಲ್ಟೋ ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಯರಗಟ್ಟಿ ತಾಲೂಕಿನ ಕುರಬಗಟ್ಟಿ ಕ್ರಾಸ್ ಬಳಿ ಶುಕ್ರವಾರ ನಡೆದಿದ್ದು, ಭೀಕರ ಅಪಘಾತದಲ್ಲಿ ಓರ್ವ ಮಹಿಳೆ, ಮಗು ಸೇರಿ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಮುತ್ತು ನಾಯಕ(8), ಗೋಪಾಲ ನಾಯಕ(45) ಹಾಗೂ ಧಾರವಾಡ ಮೂಲದ ಅನ್ನಪೂರ್ಣ(53) ಎಂಬವರು ಸ್ಥಳದಲ್ಲೇ … Continued

ಖಾನಾಪುರ : ಮರಕ್ಕೆ ಕಾರು ಡಿಕ್ಕಿ ; ಸ್ಥಳದಲ್ಲೇ ಆರು ಮಂದಿ ಸಾವು

ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ  ಬೀಡಿ-ಮಂಗ್ಯಾನಕೊಪ್ಪ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ.  ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಕಾರು ಚಾಲಕ ಶಾರುಖ್ ಪೆಂಡಾರಿ (30), … Continued

ಸಂಕೇಶ್ವರದ ನ್ಯಾಯವಾದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನ : ಇಬ್ಬರು ವಶಕ್ಕೆ

ಬೆಳಗಾವಿ : ಯುವ ನ್ಯಾಯವಾದಿಯೊಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನಿಸಿರುವ ಘಟನೆ ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಕೇಶ್ವರದ ನ್ಯಾಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಗರ ಮಾನೆ ಎಂಬ ನ್ಯಾಯವಾದಿ ಮೇಲೆ ಹಲ್ಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಫೆಬ್ರವರಿ 11 ರಂದು … Continued

ಬೆಳಗಾವಿ : ರಮೇಶ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ದಾಳಿ

ಬೆಳಗಾವಿ : ಜಿಲ್ಲೆಯ ಗೋಕಾಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಅಪೆಕ್ಸ್ ಬ್ಯಾಂಕ್ ನಲ್ಲಿ ಸಾಲ ಪಡೆದು ಪರುಪಾವತಿ ಮಾಡದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದ ಬಳಿ ಇರುವ ಸೌಭಾಗ್ಯಲಕ್ಷ್ಮೀ ಶುಗರ್‌ ಲಿಮಿಟೆಡ್‌ ಕಾರ್ಖಾನೆ … Continued

ಅಥಣಿ : ಮಾರಕಾಸ್ತ್ರದಿಂದ ಕೊಚ್ಚಿ ನವ ದಂಪತಿ ಕೊಲೆ

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಕಟನೂರು ಗ್ರಾಮದಲ್ಲಿ ಮಂಗಳವಾರ ನವ ದಂಪತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಅವರ ರಕ್ಷಣೆಗೆ ಬಂದ ಇನ್ನಿಬ್ಬರ ಮೇಲೂ ಹಲ್ಲೆ ಮಾಡಲಾಗಿದೆ. ಕೊಲೆಯಾದವರನ್ನು ಯಾಸಿನ್‌ ಬ್ಯಾಗೋಡೆ (21) ಹಾಗೂ ಹೀನಾಕೌಸರ್‌ (19) ಎಂದು ಗುರುತಿಸಲಾಗಿದೆ. ಇದೇ ಊರಿನ ತೌಫಿಕ್‌ ಕ್ಯಾಡಿ (24) ಎಂಬಾತ ಕೊಲೆ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಮಾಂಸ ಮಾರಾಟಕ್ಕಾಗಿ ವಿಷದ ಕಾಳು ತಿನ್ನಿಸಿ 8 ನವಿಲುಗಳ ಹತ್ಯೆ : ಒಬ್ಬನ ಬಂಧನ, ಇನ್ನಿಬ್ಬರಿಗಾಗಿ ಹುಡುಕಾಟ

ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಳ್ಳಿಗಳಲ್ಲಿ ಮಾಂಸಕ್ಕಾಗಿ ನವಿಲುಗಳಿಗೆ ವಿಷ ಹಾಕಿ ಕೊಲ್ಲುತ್ತಿದ್ದ ತಂಡವನ್ನು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಪತ್ತೆ ಹಚ್ಚಿದ್ದು ಒಬ್ಬನನ್ನು ಬಂಧಿಸಲಾಗಿದೆ ಹಾಗೂ ಇನ್ನಿಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಝಳಕಿ ನಿವಾಸಿ ಮಂಜುನಾಥ ಪವಾರ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಪರಾರಿಯಾಗಿದ್ದು ಇನ್ನಿಬ್ಬರ … Continued