ಬೆಳಗಾವಿ: ಮಗನ ಮೇಲೆ ಚಿರತೆ ದಾಳಿ ಮಾಡಿದ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವು

ಬೆಳಗಾವಿ: ಮಗನ ಮೇಲೆ ಚಿರತೆ ದಾಳಿ ಸುದ್ದಿ ಕೇಳಿ ತಾಯಿ ಸಾವು ಹೃದಯಾಘಾತದಿಂದ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಖನಗಾವಿ ಕೆ.ಎಚ್. ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿ ಮಾಡುತ್ತಿದ್ದ ಸಿದರಾಯಿ ಮಿರಜಕರ್‌ಗೆ ಎಂಬವರ ಮೇಲೆ ಇಂದು, ಶುಕ್ರವಾರ ಚಿರತೆ ದಾಳಿ ಮಾಡಿತ್ತು‌. ಕಟ್ಟಡ ಕಾರ್ಮಿಕನ ಬೆನ್ನಿಗೆ ಪರಚಿದ ಗಾಯವಾಗಿತ್ತು. … Continued

ಬೆಳಗಾವಿ ನಗರದ ಮಧ್ಯೆ ಚಿರತೆ ದಾಳಿ: ಕಟ್ಟಡ ಕಾರ್ಮಿಕನಿಗೆ ಗಾಯ

ಬೆಳಗಾವಿ: ಬೆಳಗಾವಿಯ ಜಾಧವ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಚಿರತೆ ದಾಳಿ ಮಾಡಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ನಗರದ ಮಧ್ಯ ಭಾಗದಲ್ಲಿಯೇ ಚಿರತೆ ದಾಳಿ ಮಾಡಿರುವುದರಿಂದ ಜನರು ಆತಂಕ್ಕೀಡಾಗಿದ್ದಾರೆ. ಜಾಧವ ನಗರದಲ್ಲಿ ಕಟ್ಟಡ ಕೆಲಸ ಮಾಡುತ್ತಿದ್ದ ಖನಗಾವಿ ಗ್ರಾಮದ ನಿವಾಸಿ ಸಿದರಾಯಿ ಲಕ್ಷ್ಮಣ ಮಿರಜಕರ್ (38) ಎಂಬವರು ಚಿರತೆ ದಾಳಿಯಿಂದ ಗಾಯಗೊಂಡಿದ್ದಾರೆ. ಅವರು ಕೆಲಸ ಮಾಡುತ್ತಿದ್ದ ವೇಳೆ … Continued

ಬೆಳಗಾವಿ ಪೊಲೀಸರ ಕಾರ್ಯಾಚರಣೆ ; ಅಕ್ರಮ ಪಡಿತರ ಅಕ್ಕಿ ವಶ

ಬೆಳಗಾವಿ : ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ಪೊಲೀಸರು ದಾಳಿ ನಡೆಸಿ ಹುಂಚಾನಟ್ಟಿ ಮತ್ತು ಪೀರನವಾಡಿ ಗ್ರಾಮದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 31 ಟನ್ ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ. ಇದರ ಮಾರುಕಟ್ಟೆ ಮೌಲ್ಯ 7.21 ಲಕ್ಷ ರೂ.ಗಳು ಅಂದಾಜಿಸಲಾಗಿದೆ. ಶ್ರೀನಿವಾಸ ಹಾಂಡ ನೇತೃತ್ವದಲ್ಲಿ ಜೆ.ಬಿ. ಬಾಗೋಜಿಕೊಪ್ಪ (ಆಹಾರ ನಿರೀಕ್ಷಕರು) ಸೇರಿದಂತೆ ಇತರ ಸಿಬ್ಬಂದಿ ದಾಳಿ ನಡೆಸಿ … Continued

ಯುವತಿಯಿಂದ ಅತ್ಯಾಚಾರ ಪ್ರಕರಣದ ಬೆದರಿಕೆ: ತೋಟಗಾರಿಕೆ ಅಧಿಕಾರಿಯಿಂದ ದೂರು, ಆತ ನನ್ನ ಗಂಡ ಎಂದ ಯುವತಿ

ಬೆಳಗಾವಿ: ಚನ್ನಪಟ್ಟಣದ ಯುವತಿಯೊಬ್ಬರು ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಿದ್ದಾರೆ. ₹ 50 ಲಕ್ಷ ನೀಡದಿದ್ದರೆ ಅತ್ಯಾಚಾರ ಹಾಗೂ ಸುಲಿಗೆ ಮಾಡಿದ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕೋರಿ ತೋಟಗಾರಿಕೆ ಇಲಾಖೆಯ ಖಾನಾಪುರ ಸಹಾಯಕ ನಿರ್ದೇಶಕ ಮಂಗಳವಾರ ದೂರು ದಾಖಲಿಸಿದ್ದಾರೆ. ತೋಟಗಾರಿಕೆ ಇಲಾಖೆ ಎ.ಡಿ ರಾಜಕುಮಾರ್ … Continued

ನನ್ನ ಸಂಬಂಧಿಕರಿಂದಲೇ ನನ್ನ ಮೇಲೆ ಗುಂಡಿನ ದಾಳಿ: ನಟ ಶಿವರಂಜನ್ ಆರೋಪ

ಬೈಲಹೊಂಗಲ:ಚಲನಚಿತ್ರ ನಟ, ಉದ್ಯಮಿ ಹಾಗೂ ಕನ್ನಡ ಹೋರಾಟಗಾರ ಶಿವರಂಜನ್ ಬೋಳನ್ನವರ ಅವರು ತಮ್ಮ ಮೇಲೆ ಸಂಬಂಧಿಗಳಿಂದಲೇ ಗುಂಡಿನ ದಾಳಿ ನಡೆದಿದೆ ಎಂದು ಆರೋಪಿಸಿದ್ದಾರೆ. ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮಂಗಳವಾರ ರಾತ್ರಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ವ್ಯಕ್ತಿ ಶಿವರಂಜನ್ ಬೋಳನ್ನವರ ಅವರ ಶಿವರಂಜನ್ ಅವರ ದೂರದ ಸಂಬಂಧಿ ಎಂದು ಗುರುತಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ … Continued

ಹೊಸ ಮೊಬೈಲ್‌ ಕೊಡಿಸಲಿಲ್ಲವೆಂದು ತಂದೆಯ ಜನ್ಮದಿನದಂದೇ ಮಗ ಆತ್ಮಹತ್ಯೆ

ಖಾನಾಪುರ:ಹೊಸ ಮೊಬೈಲ್ ಬೇಕು ಎಂದು ಹಟ ಹಿಡಿದ ವಿದ್ಯಾರ್ಥಿಯೊಬ್ಬ ಮೊಬೈಲ್‌ ಕೊಡಿಸಲಿಲ್ಲವೆಂದು ತಂದೆಯ ಜನ್ಮದಿನದಂದೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕು ಹಲಕರ್ಣಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಆತ್ಮಹತ್ಯೆಗೆ ಶರಣಾದವನನ್ನು ಮರಾಠಾ ಮಂಡಳ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಥಮೇಶ ರಾಜು ಕೋಳಿ (17) ಎಂದು ಗುರುತಿಸಲಾಗಿದೆ. ಎರಡು ದಿನಗಳಿಂದ ಪ್ರಥಮೇಶ ಮೊಬೈಲ್ ಬೇಕು … Continued

ಕಾಲುವೆಗೆ ಉರುಳಿದ ಕಾರು: ಇಬ್ಬರ ಸಾವು, ಒಬ್ಬ ಪಾರು

ಅಥಣಿ : ಬೆಳಗಾವಿಯ ಜಿಲ್ಲೆಯ ಅಥಣಿ ತಾಲೂಕಿ ರಡ್ಡೇರಹಟ್ಟಿ ಗ್ರಾಮದ ಕರಿಮಸೂತಿ ಲಿಫ್ಟ್ ನೀರಾವರಿ ಕಾಲುವೆಗೆ ಮೂವರು ಪ್ರಯಾಣಿಸಿದ್ದ ಕಾರು ಉರುಳಿ ಬಿದ್ದ ಘಟನೆ ಶುಕ್ರವಾರ ನಡೆದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಒಬ್ಬ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ನೀರಿನಲ್ಲಿ ಮುಳುಗಿದ ಕಾರನ್ನು ಅಗ್ನಿಶಾಮಕ ದಳ ಮತ್ತು ಪೊಲೀಸರು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮೃತರನ್ನು ರಡ್ಡೇರಹಟ್ಟಿ … Continued

ಮನೆಯೊಳಗೆ ಮಲಗಿಕೊಂಡಿರುವ ರೀತಿಯಲ್ಲಿ ವ್ಯಕ್ತಿಯ ಅಸ್ಥಿ ಪಂಜರ ಪತ್ತೆ: 8-9 ತಿಂಗಳ ಹಿಂದೆ ಮೃತಪಟ್ಟಿರುವ ಶಂಕೆ

ಬೆಳಗಾವಿ: ಮನೆಯಲ್ಲಿ ಮಲಗಿಕೊಂಡಿರುವ ರೀತಿಯಲ್ಲಿ ಮೃತಪಟ್ಟ ಮನುಷ್ಯನ ಅಸ್ಥಿಪಂಜರ ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲೂಕಿನ ಶಿವಾಪುರ ಗ್ರಾಮದಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ. ಶಿವಾಪುರ ಗ್ರಾಮದ ಮನೆಯೊಂದರಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆಯಾಗಿದ್ದು, ಮೃತನನ್ನು ಅದೇ ಗ್ರಾಮದ ಪ್ರಕಾಶ ತವನಪ್ಪ ಮುರಗುಂಡಿ ಎಂದು ಶಂಕಿಸಲಾಗಿದೆ. ಮನೆಯಲ್ಲಿಯೇಮೃತಪಟ್ಟ ವ್ಯಕ್ತಿಯ ಅಸ್ಥಿಪಂಜರ ಸುಮಾರಿ 8 ರಿಂದ 9 ತಿಂಗಳ ಹಿಂದಿನದಾಗಿರಬಹುದು ಎಂದು … Continued

ಬೆಳಗಾವಿ: ನಾಲಾಕ್ಕೆ ಬಿದ್ದ ಕ್ರೂಸರ್ ವಾಹನ, 7 ಜನರ ಸಾವು

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ವಾಹನ ಬಳ್ಳಾರಿ ನಾಲಾಕ್ಕೆ ಬಿದ್ದು 7 ಮಂದಿ ಸಾವಿಗೀಡಾದ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಬಳಿಯ ಕಲ್ಯಾಳ ಫೂಲ್ ಬಳಿ ಭಾನುವಾರ (ಜೂನ್​ 26) ನಡೆದ ಬಗ್ಗೆ ವರದಿಯಾಗಿದೆ. ಹಲವರು ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಕ್ರೂಸರ್​ ವಾಹನ ಬಿದ್ದಿದೆ. ದಿನಗೂಲಿ ಕೆಲಸಕ್ಕೆಂದು ಗೋಕಾಕ್ ತಾಲೂಕಿನ … Continued

ಮೂಡಲಗಿ ಹಳ್ಳದಲ್ಲಿ 7 ಭ್ರೂಣಗಳ ಪತ್ತೆ ಪ್ರಕರಣ: ಹೆರಿಗೆ ಆಸ್ಪತ್ರೆ ಸೀಜ್​

ಬೆಳಗಾವಿ: ನಿನ್ನೆ ಜಿಲ್ಲೆಯ ಮೂಡಲಗಿ ಪಟ್ಟಣದ ಹಳ್ಳದಲ್ಲಿ 7 ಭ್ರೂಣಗಳು ಪತ್ತೆಯಾದ ಆಘಾತಕಾರಿ ಪ್ರಕರಣವನ್ನು ಅಧಿಕಾರಿಗಳು ಭೇದಿಸಿದ್ದು, ಭ್ರೂಣಗಳನ್ನು ಎಸೆದಿದ್ದ ಆಸ್ಪತ್ರೆಯನ್ನು ಸೀಜ್​ ಮಾಡಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಮಹೇಶ ಕೋಣಿ ನೇತೃತ್ವದ ತಂಡ ಪೊಲೀಸರ ಜೊತೆ ಸೇರಿ ಮೂಡಲಗಿ ವೆಂಕಟೇಶ್ವರ ಹೆರಿಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಹಾಗೂ … Continued