ಮಗು, ಗರ್ಭಿಣಿ ಸಾವು: ಮನನೊಂದು ಪತಿ ಆತ್ಮಹತ್ಯೆಗೆ ಯತ್ನ

ಬೆಳಗಾವಿ : ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಗರ್ಭಿಣಿ ಚಿಕಿತ್ಸೆ ಫಲಿಸದೆ ಮಂಗಳವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ರಾಧಿಕಾ ಮಲ್ಲೇಶ ಗಡ್ಡಿಹೊಳಿ (19) ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಪತ್ನಿಯ ಸಾವಿನ ಸುದ್ದಿ ತಿಳಿದು ವಿಷ ಸೇವಿಸಿ ಪತಿಯೂ ಆತ್ಮಹತ್ಯೆಗೆ ಯತ್ನಸಿರುವ ಘಟನೆ ನಡೆದಿದೆ. ಮಲ್ಲೇಶ ​(25) ಆತ್ಮಹತ್ಯೆಗೆ ಯತ್ನಿಸಿದ … Continued

ಬೆಳಗಾವಿ : ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಬೆಳಗಾವಿ: ನಗರದಲ್ಲಿ ನಡೆಯಲಿರುವ ಗಾಂಧಿ‌ ಭಾರತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯದ ಸರ್ಕಾರಿ, ಅನುದಾನಿತ‌ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಡಿ.26 ಹಾಗೂ 27 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಡಿ.26ರಿಂದ ಎರಡು ದಿನಗಳ ಕಾಲ ಗಾಂಧಿ‌ ಭಾರತ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದ … Continued

ಸಿ.ಟಿ. ರವಿ ಪ್ರಕರಣ ಮುಗಿದ ಅಧ್ಯಾಯ, ಸದನದೊಳಗಿನ ವಿಚಾರಕ್ಕೆ ಪೊಲೀಸರು ಕ್ರಮ ಕೈಗೊಳ್ಳುವಂತಿಲ್ಲ : ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎನ್ನಲಾದ ಆರೋಪಿತ ಪ್ರಕರಣವು ಮುಗಿದ ಅಧ್ಯಾಯವಾಗಿದ್ದು, ಸದನದೊಳಗೆ ನಡೆದಿರುವ ವಿಚಾರದಲ್ಲಿ ಪೊಲೀಸರಿಗೆ ಕ್ರಮ ಕೈಗೊಳ್ಳಲು ಅಧಿಕಾರವಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ … Continued

ಬೆಳಗಾವಿ : 2 ತಿಂಗಳ ಮಗುವನ್ನು ಕೆರೆಗೆ ಎಸೆದ ತಾಯಿ…!

ಬೆಳಗಾವಿ : ಹೆತ್ತ ತಾಯಿಯೇ ಎರಡು ತಿಂಗಳ ಮಗುವನ್ನು ತಾಯಿ (Mother) ಕೆರೆಗೆ ಎಸೆದ ಘಟನೆ ಬೆಳಗಾವಿ‌‌ ತಾಲೂಕಿನ ಕಣಬರಗಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಾಯಿ ಮಗುವನ್ನು ಕೆರೆಗೆ ಎಸೆಯುವುದನ್ನ ನೋಡಿದ ದನ, ಕರು ತೊಳೆಯುತ್ತಿದ್ದ ಯುವಕರು ತಕ್ಷಣವೇ ಕೆರೆಗೆ ಹಾರಿ ಮಗು ರಕ್ಷಣೆ ಮಾಡಿದ್ದಾರೆ. ಕಣಬರಗಿ ಗ್ರಾಮದ ನಿವಾಸಿ ಶಾಂತಾ ರಾಬರ್ಟ್‌ ಕರವಿನಕೊಪ್ಪ … Continued

ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ತೀವ್ರ ; ಪೊಲೀಸರಿಂದ ಲಾಠಿ ಚಾರ್ಜ್, ಕಲ್ಲು ತೂರಾಟ

ಬೆಳಗಾವಿ: ಬೆಳಗಾವಿ ಸುವರ್ಣಸೌಧದ ಮುಂದೆ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ತೀವ್ರಗೊಂಡಿದ್ದು, ಮಂಗಳವಾರ ಪ್ರತಿಭಟನಾಕಾರರು ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ್ದಾರೆ. ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಚಾರ್ಜ್‌ ನಡೆಸಿದ್ದಾರೆ. ಇದರಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಂಚಮಸಾಲಿ 2ಎ ಮೀಸಲಾತಿಗಾಗಿ ಪಟ್ಟು ಹಿಡಿದ ಹೋರಾಟಗಾರರು ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದಾಗ … Continued

ಬೆಳಗಾವಿ | ರಸ್ತೆ ತಡೆದು ಪ್ರತಿಭಟನೆ ನಡೆಸುವ ವೇಳೆ ನುಸುಳಿ ದಾಟಿ ಬಂದ ಬಸ್‌ : ಚಾಲಕರ ಕೈ ಕಟ್ಟಿಹಾಕಿದ ರೈತರು..!

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಸೋಮವಾರ, ಇಲ್ಲಿನ ಸುವರ್ಣ ವಿಧಾನಸೌಧ ಮಾರ್ಗದ ಹಲಗಾ ಬಳಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಕನಿಷ್ಠ ಬೆಂಬಲ ಬೆಲೆ, ಕಬ್ಬಿಗೆ ಸೂಕ್ತ ದರ ನಿಗದಿ, ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವುದು, ಕಳಸಾ- ಬಂಡೂರಿ ಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ … Continued

ಗೂಗಲ್ ಮ್ಯಾಪ್ ನಂಬಿ ದಾರಿತಪ್ಪಿ ಖಾನಾಪುರ ಕಾಡಿನಲ್ಲಿ ರಾತ್ರಿ ಕಳೆದ ಕುಟುಂಬ…!

ಬೆಳಗಾವಿ : ಗೂಗಲ್ ಮ್ಯಾಪ್ ಆಗಾಗ ಪ್ರಯಾಣಿಕರ ಹಾದಿಯನ್ನು ತಪ್ಪಿಸಿ ಅನಾಹುತ ನಡೆಯುವ ಘಟನೆ ವರದಿಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲೂ ಗೂಗಲ್ ಪ್ರಯಾಣಿಕರ ಹಾದಿ ತಪ್ಪಿಸಿ ಅವರು ರಾತ್ರಿಯಿಡೀ ಕಾಡಿನಲ್ಲೇ ಕಳೆದ ಘಟನೆ ಬೆಳಕಿಗೆ ಬಂದಿದೆ. ಗೂಗಲ್ ಮ್ಯಾಪ್ ನಂಬಿದ್ದ ಹಾದಿ ತಪ್ಪಿ ಕುಟುಂಬವೊಂದು ಕಾಡಿನಲ್ಲೇ ರಾತ್ರಿ ಕಳೆದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ. ಬಿಹಾರದ … Continued

ಬೆಳಗಾವಿ: ಮಗಳ ಮದುವೆ ಮಾಡಿಕೊಡಲು ಒಪ್ಪದ್ದಕ್ಕೆ ತಾಯಿ-ಮಗನನ್ನು ಭೀಕರವಾಗಿ ಕೊಲೆ ಮಾಡಿದ ಯುವಕ

ಬೆಳಗಾವಿ: ಯುವತಿಯನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ ಕಾರಣಕ್ಕೆ ಯುವಕನೋರ್ವ ಮನೆಗೆ ನುಗ್ಗಿ ಯುವತಿಯ ತಾಯಿ ಮತ್ತು ಸಹೋದರನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದವರನ್ನು ಅಕ್ಕೋಳ ಗ್ರಾಮದ ಮಂಗಲ ನಾಯಿಕ (42) ಹಾಗೂ ಪ್ರಜ್ವಲ ನಾಯಿಕ (18) ಎಂದು ಗುರತಿಸಲಾಗಿದೆ. … Continued

ಕೃಷ್ಣಾ ನದಿಯಲ್ಲಿ ಮುಳುಗಿಸಿ ವ್ಯಕ್ತಿ ಕೊಲೆ ಪ್ರಕರಣವನ್ನು 1 ವರ್ಷದ ನಂತರ ಭೇದಿಸಿದ ಪೊಲೀಸರು : ಪತ್ನಿ ಸೇರಿ ಮೂವರು ಅರೆಸ್ಟ್‌

 ಬೆಳಗಾವಿ: ಅಥಣಿ ತಾಲೂಕಿನಲ್ಲಿ ಹರಿಯುವ ಕೃಷ್ಣಾ ನದಿಯಲ್ಲಿ ಬರೋಬ್ಬರಿ ಸುಮಾರು ಒಂದು ವರ್ಷದ  ಹಿಂದೆ ವ್ಯಕ್ತಿಯೊಬ್ಬರನ್ನು ಮುಳುಗಿಸಿ ಕೊಲೆ ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಹಾರೂಗೇರಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಮೃತನ ಪತ್ನಿ, ಆಕೆಯ ಪ್ರಯಕರ ಸೇರಿ ಮೂವರನ್ನು ಬಂಧಿಸಲಾಗಿದೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. … Continued

ಬೆಳಗಾವಿಯಲ್ಲಿ ಗುಂಡಿನ ದಾಳಿ

ಬೆಳಗಾವಿ : ಬೆಳಗಾವಿಯ ಮಹಾಂತೇಶನಗರ ಕೆಎಂಎಫ್ ಡೈರಿ ಬಳಿ ಬುಧವಾರ ರಾತ್ರಿ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ಬೆಮುಲ್‌ ಡೇರಿ ಬಳಿ ನಿಂತುಕೊಂಡಿದ್ದಾಗ ಟಿಳಕವಾಡಿ ದ್ವಾರಕಾ ನಗರ ಐದನೇ ಕ್ರಾಸ್‌ ನಿವಾಸಿ ಪ್ರಣೀತಕುಮಾರ( 31) ಎಂಬ ಯುವಕನ ಮೇಲೆ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಇದರಿಂದ ಪ್ರಣೀತಕುಮಾರ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ … Continued