ಮನೆಯಲ್ಲೇ ಕಾಡುಕೋಣದ ಮಾಂಸ, ಜಿಂಕೆ ಕೊಂಬು ಇರಿಸಿಕೊಂಡಿದ್ದ ಇಬ್ಬರ ಬಂಧನ

ಬೆಳಗಾವಿ: ಖಾನಾಪುರ ತಾಲೂಕಿನ ಗೋಟಗಾಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಜಾಂಬೇಗಾಳಿ ಗ್ರಾಮದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿ ಇಟ್ಟುಕೊಂಡಿದ್ದ ಕಾಡುಕೋಣದ ಮಾಂಸ ಮತ್ತು ಜಿಂಕೆಯ ಕೊಂಬುಗಳನ್ನು ಗುರುವಾರ ಅರಣ್ಯ ಇಲಾಖೆಯ ಅಧಿಕಾರಿಗಳು ಪತ್ತೆಹಚ್ಚಿ ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಮಹಮ್ಮದ್ ಆಲಿ ಹಲಸಿಕರ ಮತ್ತು ಮೌಲಾಲಿ ಹಲಸಿಕರ … Continued

ಚಿಕ್ಕೋಡಿ : ಜೆಸಿಬಿಗೆ ಸಿಲುಕಿ 3 ವರ್ಷದ ಬಾಲಕಿ ಸಾವು

ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣದ ಹನುಮಾನ ನಗರದ ತೋಟದ ಹತ್ತಿರ ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪೈಪಲೈನ್ ಹರಿ ತೆಗಿಯುವಾಗ ಈ ಧಾರುಣ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ಬಾಲಕಿಯನ್ನು ಭೂಮಿಕಾ ರಮೇಶ ಕೂಕನೂರ (3) ಎಂದು ಗುರುತಿಸಲಾಗಿದೆ. ಪಟ್ಟಣ ಪಂಚಾಯತದ … Continued

ಮಗಳ ಬಗ್ಗೆ ಅಪಪ್ರಚಾರ : ತಮ್ಮನನ್ನೇ ಕೊಲೆಗೈದ ಅಣ್ಣ

ಬೆಳಗಾವಿ: ಮೂಡಲಗಿ ತಾಲೂಕು ಕಲ್ಲೋಳಿ ಗ್ರಾಮದಲ್ಲಿ ತಮ್ಮನನ್ನು ಸ್ವತಃ ಅಣ್ಣನೆ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೊಲೆಯಾದವನನ್ನು ವಿಠಲ್ ಚವಾಣ ಎಂದು ಗುರುತಿಸಲಾಗಿದೆ. ಭೀಮಪ್ಪ ಚವಾಣ ಕೊಲೆ ಮಾಡಿರುವ ಆರೋಪಿ. ಅಣ್ಣ ಭೀಮಪ್ಪನ ಮಗಳು ಪಕ್ಕದ ಊರಿನ ಯುವಕನನ್ನು ಪ್ರೀತಿಸಿದ್ದಳು. ಆತ ಸರ್ಕಾರಿ ನೌಕರಿಯಲ್ಲಿದ್ದಾನೆ ಎಂದು ನಂಬಿಸಲಾಗಿತ್ತು. ಆದರೆ ಮದುವೆಯಾದ ಮೂರು ತಿಂಗಳ ನಂತರ … Continued

ರಿವರ್ ಕ್ರಾಸಿಂಗ್ ತರಬೇತಿ ವೇಳೆ ಬೋಟ್ ಮುಳುಗಿ ಬೆಳಗಾವಿ ಇಬ್ಬರು ಕಮಾಂಡೊಗಳ ಸಾವು

ಬೆಳಗಾವಿ: ಮಹಾರಾಷ್ಟ್ರದ ತಿಲಾರಿ‌ ಡ್ಯಾಂ ನಲ್ಲಿ ಬೋಟ್ ಮುಳುಗಿ ರಿವರ್ ಕ್ರಾಸಿಂಗ್ ತರಬೇತಿಗೆಂದು ಹೋಗಿದ್ದ ಬೆಳಗಾವಿ ಕಮಾಂಡೋ ಸೆಂಟರ್ ನ ಇಬ್ಬರು ಕಮಾಂಡೋಗಳು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿಯ ಜೆ.ಎಲ್. ವಿಂಗ್ ಕಮಾಂಡೋ ತರಬೇತಿ ಕೇಂದ್ರದ ರಾಜಸ್ಥಾನದ ವಿಜಯಕುಮಾ‌ರ ದಿನವಾಲ್ (28) ಹಾಗೂ ಪಶ್ಚಿಮ ಬಂಗಾಳದ ದಿವಾಕ‌ರ ರಾಯ್ (26) ಮೃತಪಟ್ಟವರಾಗಿದ್ದಾರೆ. ಬೋಟ್ … Continued

ಚನ್ನಮ್ಮನ ಕಿತ್ತೂರು : ಅಪಹರಣವಾಗಿದ್ದ ಪ.ಪಂ ಸದಸ್ಯ ನಾಗರಾಜ ಪತ್ತೆ

ಚನ್ನಮ್ಮನ ಕಿತ್ತೂರು: ಆರು ದಿನಗಳ ಹಿಂದೆ ಅಪಹರಣಕ್ಕೆ ಒಳಗಾಗಿದ್ದ ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅವರು ಕೊನೆಗೂ ಪತ್ತೆಯಾಗಿದ್ದಾರೆ. ನಾಗರಾಜ ಅಸುಂಡಿ ಅವರನ್ನು ಬೈಲಹೊಂಗಲ ಕೋರ್ಟ್ ಗೆ ಹಾಜರುಪಡಿಸಲು ಪೊಲೀಸರು ಕರೆತಂದಿದ್ದಾರೆ. ಸೆಪ್ಟೆಂಬರ್ 3 ರಂದು ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯತ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಿಗದಿಯಾಗಿತ್ತು. ಸಂಖ್ಯಾಬಲ ಹೆಚ್ಚಿಸಿಕೊಂಡು ಅಧಿಕಾರ ಹಿಡಿಯಬೇಕು ಎಂದು … Continued

ಶೆಡ್‌ನಲ್ಲಿ ಕೂಡಿ ಹಾಕಿ ಥಳಿಸಿ, ಮೈ ಮೇಲೆ ಬರೆ ಎಳೆದ ಪೊಲೀಸಪ್ಪ ; ತಪ್ಪಿಸಿಕೊಂಡು ಬಂದ ಪತ್ನಿ ಹೇಳಿಕೆ

ಬೆಳಗಾವಿ : ಜನರಿಗೆ ನ್ಯಾಯ ಕೊಡಿಸಬೇಕಿದ್ದ ಪೊಲೀಸನೊಬ್ಬ ತನ್ನ ಪತ್ನಿಯ ಮೇಲೆ ಸಂಶಯ ಪಟ್ಟು ಆಕೆಯನ್ನು ಶೆಡ್‌ನಲ್ಲಿ ಕೂಡಿಹಾಕಿ ಹಲ್ಲೆ ಮಾಡಿ ಮೈಮೇಲೆ ಬರೆ ಎಳೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಈತ ಹೆಂಡತಿಯ ನಡತೆ ಬಗ್ಗೆ ಸಂಶಯ ಪಟ್ಟು ಎರಡು ತಿಂಗಳಿನಿಂದ ಶೆಡ್‌ನಲ್ಲಿ ಕೂಡಿಟ್ಟು … Continued

ಚನ್ನಮ್ಮನ ಕಿತ್ತೂರು | ಪಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ : ಬಿಜೆಪಿ ಸದಸ್ಯನ ಅಪಹರಣ..!

ಬೆಳಗಾವಿ : ಜಿಲ್ಲೆಯ ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯತದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರೊಬ್ಬರನ್ನು ಗುರುವಾರ ರಾತ್ರಿ ತಂಡವೊಂದು ಅಪಹರಣ ಮಾಡಿದೆ ಎಂದು ವರದಿಯಾಗಿದೆ. ಬಿಜೆಪಿ ಸದಸ್ಯರಾದ ನಾಗರಾಜ ಅಸುಂಡಿ ಅವರು ಪಟ್ಟಣದ ಚೌಕಿಮಠದ ಬಳಿ ನಿಂತಿದ್ದಾಗ ಸ್ಕಾರ್ಪಿಯೊ ವಾಹನದಲ್ಲಿ ಬಂದ ಕೆಲವರು ಬಲವಂತವಾಗಿ ನಾಗರಾಜ ಅವರನ್ನು ಎಳೆದುಕೊಂಡು ವಾಹನದಲ್ಲಿ … Continued

ಸವದತ್ತಿ : ರಥದ ಕಳಸ ಬಿದ್ದು ಬಾಲಕ ಸಾವು

ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲೂಕು ಚಚಡಿ ಗ್ರಾಮದಲ್ಲಿ ಸೋಮವಾರ ನಡೆದ ಸಂಗಮೇಶ್ವರ ದೇವರ ರಥೋತ್ಸವದ ಸಂದರ್ಭದಲ್ಲಿ ರಥದ ಮೇಲಿನ ಬೆಳ್ಳಿಯ ನವಿಲು ಬಿದ್ದು ಬಾಲಕನೊಬ್ಬ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಶಿವಾನಂದ ರಾಜಕುಮಾರ ಸಾವಳಗಿ (13 ವರ್ಷ) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಶ್ರಾವಣ ಮಾಸದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ … Continued

ಶ್ರೀರಾಮ ಸೇನೆ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಶನಿವಾರ ತಡರಾತ್ರಿ ಶ್ರೀರಾಮ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಗೋಕಾಕ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರವಿ ಪೂಜಾರಿ ಅವರ ದೇಹದ ನಾಲ್ಕೈದು ಕಡೆ ಚಾಕುವಿನಿಂದ ಇರಿಯಲಾಗಿದೆ. ಒಟ್ಟು ನಾಲ್ವರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದ್ದು, ರವಿ ಅವರನ್ನು … Continued

ವಿಮಾನ ನಿಲ್ದಾಣಕ್ಕೆ ನೀಡಿದ ಭೂಮಿಗೆ ಸಿಗದ ಪರಿಹಾರ: ಎಸಿ ಕಚೇರಿ ಪೀಠೋಪಕರಣ ಒಯ್ದ ರೈತರು

ಬೆಳಗಾವಿ : ಪರಿಹಾರ ನೀಡಲು ವಿಳಂಬ ಮಾಡಿದ ಕಾರಣ ನ್ಯಾಯಾಲಯದ ಆದೇಶದಂತೆ ಬೆಳಗಾವಿ ಉಪ ವಿಭಾಗಾಧಿಕಾರಿಗಳ (ಎಸಿ) ಕಚೇರಿಯ ಪೀಠೋಪರಣ, ಪ್ರಿಂಟರ್, ಕಂಪ್ಯೂಟರ್ ಗಳನ್ನು ರೈತರು ಜಪ್ತಿ ಮಾಡಿಕೊಂಡಿದ್ದಾರೆ. ಬೆಳಗಾವಿಯ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ಆದೇಶದ ಮೇರೆಗೆ ರೈತರು ಜಪ್ತಿ ಮಾಡಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ವಿಸ್ತರಣೆಗೆ ಅಲ್ಲಿನ ಪರಿಸರದ ರೈತರು ಜಮೀನು … Continued