ಮುಗಳಖೋಡ : ಕಾರು-ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಐವರು ಸಾವು

ಬೆಳಗಾವಿ : ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಕಾಲುವೆ ಬಳಿ ಜತ್ತ-ಜಾಂಬೋಟಿ ರಸ್ತೆಯಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಗುರ್ಲಾಪುರದ ಮಲ್ಲಿಕಾರ್ಜುನ ಮರಾಠೆ (16), ಲಕ್ಷ್ಮೀ ಮರಾಠೆ(19 ), ಆಕಾಶ ಮರಾಠೆ(19), ಬೈಕ್ ಸವಾರರಾದ ನಿಪನಾಳ ಗ್ರಾಮದ ಶ್ರೀಕಾಂತ ಪಡತರಿ(22) ಹಾಗೂ ಮುಗಳಖೋಡ … Continued

ಯರಗಟ್ಟಿ :ಕಾರುಗಳ ಮುಖಾಮುಖಿ ಡಿಕ್ಕಿ ; ಸ್ಥಳದಲ್ಲೇ ಮೂವರ ಸಾವು

ಬೆಳಗಾವಿ: ಸ್ವಿಫ್ಟ್‌ ಮತ್ತು ಅಲ್ಟೋ ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಯರಗಟ್ಟಿ ತಾಲೂಕಿನ ಕುರಬಗಟ್ಟಿ ಕ್ರಾಸ್ ಬಳಿ ಶುಕ್ರವಾರ ನಡೆದಿದ್ದು, ಭೀಕರ ಅಪಘಾತದಲ್ಲಿ ಓರ್ವ ಮಹಿಳೆ, ಮಗು ಸೇರಿ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಮುತ್ತು ನಾಯಕ(8), ಗೋಪಾಲ ನಾಯಕ(45) ಹಾಗೂ ಧಾರವಾಡ ಮೂಲದ ಅನ್ನಪೂರ್ಣ(53) ಎಂಬವರು ಸ್ಥಳದಲ್ಲೇ … Continued

ಖಾನಾಪುರ : ಮರಕ್ಕೆ ಕಾರು ಡಿಕ್ಕಿ ; ಸ್ಥಳದಲ್ಲೇ ಆರು ಮಂದಿ ಸಾವು

ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ  ಬೀಡಿ-ಮಂಗ್ಯಾನಕೊಪ್ಪ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ.  ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಕಾರು ಚಾಲಕ ಶಾರುಖ್ ಪೆಂಡಾರಿ (30), … Continued

ಸಂಕೇಶ್ವರದ ನ್ಯಾಯವಾದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನ : ಇಬ್ಬರು ವಶಕ್ಕೆ

ಬೆಳಗಾವಿ : ಯುವ ನ್ಯಾಯವಾದಿಯೊಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನಿಸಿರುವ ಘಟನೆ ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಕೇಶ್ವರದ ನ್ಯಾಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಗರ ಮಾನೆ ಎಂಬ ನ್ಯಾಯವಾದಿ ಮೇಲೆ ಹಲ್ಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಫೆಬ್ರವರಿ 11 ರಂದು … Continued

ಬೆಳಗಾವಿ : ರಮೇಶ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ದಾಳಿ

ಬೆಳಗಾವಿ : ಜಿಲ್ಲೆಯ ಗೋಕಾಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಅಪೆಕ್ಸ್ ಬ್ಯಾಂಕ್ ನಲ್ಲಿ ಸಾಲ ಪಡೆದು ಪರುಪಾವತಿ ಮಾಡದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದ ಬಳಿ ಇರುವ ಸೌಭಾಗ್ಯಲಕ್ಷ್ಮೀ ಶುಗರ್‌ ಲಿಮಿಟೆಡ್‌ ಕಾರ್ಖಾನೆ … Continued

ಅಥಣಿ : ಮಾರಕಾಸ್ತ್ರದಿಂದ ಕೊಚ್ಚಿ ನವ ದಂಪತಿ ಕೊಲೆ

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಕಟನೂರು ಗ್ರಾಮದಲ್ಲಿ ಮಂಗಳವಾರ ನವ ದಂಪತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಅವರ ರಕ್ಷಣೆಗೆ ಬಂದ ಇನ್ನಿಬ್ಬರ ಮೇಲೂ ಹಲ್ಲೆ ಮಾಡಲಾಗಿದೆ. ಕೊಲೆಯಾದವರನ್ನು ಯಾಸಿನ್‌ ಬ್ಯಾಗೋಡೆ (21) ಹಾಗೂ ಹೀನಾಕೌಸರ್‌ (19) ಎಂದು ಗುರುತಿಸಲಾಗಿದೆ. ಇದೇ ಊರಿನ ತೌಫಿಕ್‌ ಕ್ಯಾಡಿ (24) ಎಂಬಾತ ಕೊಲೆ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಮಾಂಸ ಮಾರಾಟಕ್ಕಾಗಿ ವಿಷದ ಕಾಳು ತಿನ್ನಿಸಿ 8 ನವಿಲುಗಳ ಹತ್ಯೆ : ಒಬ್ಬನ ಬಂಧನ, ಇನ್ನಿಬ್ಬರಿಗಾಗಿ ಹುಡುಕಾಟ

ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಳ್ಳಿಗಳಲ್ಲಿ ಮಾಂಸಕ್ಕಾಗಿ ನವಿಲುಗಳಿಗೆ ವಿಷ ಹಾಕಿ ಕೊಲ್ಲುತ್ತಿದ್ದ ತಂಡವನ್ನು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಪತ್ತೆ ಹಚ್ಚಿದ್ದು ಒಬ್ಬನನ್ನು ಬಂಧಿಸಲಾಗಿದೆ ಹಾಗೂ ಇನ್ನಿಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಝಳಕಿ ನಿವಾಸಿ ಮಂಜುನಾಥ ಪವಾರ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಪರಾರಿಯಾಗಿದ್ದು ಇನ್ನಿಬ್ಬರ … Continued

ಬೆಳಗಾವಿ: ವಿಚಾರಣೆಗೆ ಕರೆತಂದಿದ್ದಾಗ ಕೋರ್ಟ್‌ ಆವರಣದಿಂದ ಪರಾರಿಯಾಗಿದ್ದ ಆರೋಪಿ ನಾಲ್ಕೇ ತಾಸಲ್ಲಿ ಸಿಕ್ಕಿಬಿದ್ದ..

ಬೆಳಗಾವಿ : ನ್ಯಾಯಾಲಯಕ್ಕೆ ವಿಚಾರಣೆಗೆಂದು ಕರೆತಂದಿದ್ದಾಗ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಆರೋಪಿಯನ್ನು ನಾಲ್ಕು ತಾಸಿನಲ್ಲಿ ಮತ್ತೆ ಬಂಧಿಸುವಲ್ಲಿ ಹಿರೇಬಾಗೇವಾಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಹಲವು ಠಾಣೆಗಳಿಗೆ ಬೇಕಾಗಿದ್ದ ಅಬ್ದುಲ್ ಗನಿ ಶಬ್ಬೀರ್ ಶೇಕ್ ಗುರುವಾರ ವಿಚಾರಣೆಗಾಗಿ ಕರೆತಂದಿದ್ದಾಗ ಬೆಳಗಾವಿಯ ಜೆ ಎಂ ಎಫ್ ಸಿ ನ್ಯಾಯಾಲಯದ ಆವರಣದಿಂದ ಪೊಲೀಸರ ಸಮ್ಮುಖದಲ್ಲಿಯೇ ಓಡಿ … Continued

ಕ್ಷೀರಭಾಗ್ಯ ಹಾಲಿಗೆ ಬಿದ್ದ ಹಲ್ಲಿ : ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು

ಸಂಕೇಶ್ವರ : ಕ್ಷೀರಭಾಗ್ಯ ಯೋಜನೆಯ ಹಾಲಿನಲ್ಲಿ ಹಲ್ಲಿ ಬಿದ್ದ ಪರಿಣಾಮ ಶಾಲಾ ಬಾಲಕರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾದ ಘಟನೆ ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರದ ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳಿಗೆ ಕ್ಷೀರ ಭಾಗ್ಯ ಯೋಜನೆಯ ಹಾಲು ನೀಡಲಾಗಿತ್ತು. ಆದರೆ ಹಾಲಿನಲ್ಲಿ ಹಲ್ಲಿ ಬಿದ್ದಿರುವ ವಿಷಯ ಮಕ್ಕಳು … Continued

ಬೆಳಗಾವಿ : ನಿಂತಿದ್ದ ಲಾರಿಗೆ ಗುದ್ದಿದ ಕಾರು, ಯುವ ವೈದ್ಯ ಸಾವು, ಇಬ್ಬರಿಗೆ ಗಾಯ

ಬೆಳಗಾವಿ : ರಸ್ತೆ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಯುವ ವೈದ್ಯ ಮೃತಪಟ್ಟಿದ್ದು, ಇಬ್ಬರು ಎಂಬಿಎ ಪದವೀಧರರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ರಾತ್ರಿ ಬೆಳಗಾವಿಯಲ್ಲಿ ನಡೆದಿದೆ. ನಗರದ ಯಡಿಯೂರಪ್ಪ ಮಾರ್ಗದಲ್ಲಿ ಈ ದುರ್ಘಟನೆ ನಡೆದಿದ್ದು, ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಯುವ ವೈದ್ಯ ಸೌರಭ ಕಾಂಬಳೆ (25)ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜಮಖಂಡಿಯ ಗಿರೀಶ ಕರೆಮ್ಮನವರ(25) … Continued