ಹಿಜಾಬ್‌ ವಿವಾದ: ಬೆಳಗಾವಿಯಲ್ಲಿ ಹೈಡ್ರಾಮಾ, ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಆರು ಯುವಕರು ವಶಕ್ಕೆ

ಬೆಳಗಾವಿ: ಹಿಜಾಬ್ ಧರಿಸಲು ಅನುಮತಿ ನೀಡದ್ದಕ್ಕೆ ಕೆಲ ಯುವಕರು ಸದಾಶಿವನಗರದ ಲಕ್ಷ್ಮಿ ಕಾಂಪ್ಲೆಕ್ಸ್ ಸಮೀಪದ ವಿಜಯ ಪ್ಯಾರಾಮೆಡಿಕಲ್ ಆಪ್ ಸೈನ್ಸ್ ಕಾಲೇಜು ಬಳಿ ಗುರುವಾರ ಹೈಡ್ರಾಮಾ ನಡೆಸಿ ಅಲ್ಲಾಹು ಅಕ್ಬರ್ ಅಂತಾ ಘೋಷಣೆ ಕೂಗಿದ ಆರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ  ಎಂದು ವರದಿಯಾಗಿದೆ. ಕಾಲೇಜಿನ ತರಗತಿಯೊಳಗೆ ಹಿಜಾಬ್ ಗೆ ಅವಕಾಶ ಇಲ್ಲ ಎಂದು ಕಾಲೇಜು … Continued

ಬೆಳಗಾವಿ ಜಿಲ್ಲೆಯಲ್ಲಿ ಮೂವರು ಮಕ್ಕಳ ಸಾವು ; ಇಬ್ಬರ ಅಮಾನತು

ಬೆಳಗಾವಿ/ಬೆಂಗಳೂರು: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮೂವರು ಮಕ್ಕಳ ನಿಗೂಢ ಸಾವಿಗೆ ಸಂಬಂಧಿಸಿ ಇಬ್ಬರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಜನವರಿ 12 ರಂದು ರಾಮದುರ್ಗ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲ ಮಕ್ಕಳಿಗೆ ಚುಚ್ಚುಮದ್ದು ಹಾಕಲಾಗಿತ್ತು.ಆಗ … Continued

ಬೆಳಗಾವಿ: ಮೂವರು ಮಕ್ಕಳ ನಿಗೂಢ ಸಾವು, ವರದಿ ಕೇಳಿದ ಆರೋಗ್ಯ ಸಚಿವ

ಬೆಳಗಾವಿ: ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್​ನಲ್ಲಿ ಮೂವರು ಮಕ್ಕಳು ನಿಗೂಢವಾಗಿ ಮೃತಪಟ್ಟಿದ್ದು, ಘಟನೆ ಸಂಬಂಧ ಜಿಲ್ಲಾ ಆರೋಗ್ಯಾಧಿಕಾರಿ ಶಶಿಕಂತ ಮುನ್ಯಾಳ ಅವರಿಗೆ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. .  13 ತಿಂಗಳ ಮಗು ಪವಿತ್ರಾ ಹುಲಗುರ್, 14 ತಿಂಗಳ ಮಗು ಮಧು ಉಮೇಶ್ ಕುರಗುಂದಿ ಮತ್ತು ಒಂದೂವರೆ ವರ್ಷದ ಚೇತನ ಪೂಜಾರಿ … Continued

ಬೆಳಗಾವಿ: ಪ್ರತಿಭಟನೆಗೆ ಮುಂದಾದ ವಾಟಾಳ್ ನಾಗರಾಜ್ ಸೇರಿ ಹಲವು ಹೋರಾಟಗಾರರು ಪೊಲೀಸ್ ವಶಕ್ಕೆ

ಬೆಳಗಾವಿ: ಎಂಇಎಸ್ ಸಂಘಟನೆ ನಿಷೇಧ ಆಗ್ರಹಿಸಿ ಎಂಇಎಸ್‌ (MES) ವಿರುದ್ಧ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆದ ಸಮಯದಲ್ಲಿ ಅವರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಕುವೆಂಪು ಭಾವಚಿತ್ರಕ್ಕೆ ಹೂಹಾರ ಹಾಕಿ ವಾಟಾಳ್ ನಾಗರಾಜ ಪ್ರತಿಭಟನೆಗೆ ಚಾಲನೆ ನೀಡಿದರು. ಆ ವೇಳೆ ಎಂಇಎಸ್ ವಿರುದ್ಧ ಧಿಕ್ಕಾರ ಕೂಗಿ … Continued

ಬಿಎಂಟಿಸಿ ಸಾರಿಗೆ ಸಂಸ್ಥೆ ಖಾಸಗೀಕರಣವಿಲ್ಲ

ಸುವರ್ಣಸೌಧ(ಬೆಳಗಾವಿ): ಬೆಂಗಳೂರು ನಗರ ಸಾರಿಗೆ ಬಿಎಂಟಿಸಿ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ವಿಧಾನ ಪರಿಷತ್ತಿನ ಸಭಾ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಶುಕ್ರವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪ ವೇಳೆ ಸದಸ್ಯ ಮುನಿರಾಜು ಗೌಡ ಪ್ರಶ್ನೆಗೆ ಸಾರಿಗೆ ಸಚಿವರ ಪರವಾಗಿ ಉತ್ತರಿಸಿದ ಅವರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯನ್ನು ಖಾಸಗೀಕರಣ ಮಾಡುವ … Continued

ಭೀಕರ ಅಪಘಾತ :ಯಲ್ಲಾಪುರದ ಮೂವರ ಸಾವು

ಹಿರೇಬಾಗೇವಾಡಿ :ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿಯ ವಿರಪನ ಕೊಪ್ಪ ಕ್ರಾಸ್ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಮೂಲದವರು. ಧಾರವಾಡ ಕಡೆಯಿಂದ ಬೆಳಗಾವಿ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ಮುಂದಿದ್ದ ಲಾರಿಗೆ ಹಿಂದಿನಿಂದ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಸ್ಥಳದಲ್ಲಿಯೇ … Continued

ಬೆಳಗಾವಿ: ಹಲಸಿಯಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ, ಬಸವಣ್ಣನಿಗೆ ಕಪ್ಪು ಮಸಿ ಬಳಿದ ಮೂವರು ಆರೋಪಿಗಳ ಬಂಧನ

ಬೆಳಗಾವಿ: ನಗರದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ವಿರೂಪಗೊಳಿಸಿದ ಹಾಗೂ ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಕಪ್ಪು ಮಸಿ ಬಳಿದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯ ಬಳಿಕ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಕನ್ನಡ ಬಾವುಟ ಸುಟ್ಟು, ಬಸವಣ್ಣನ ಮೂರ್ತಿಗೆ ಮಸಿ ಬಳಿದ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ವಿರೂಪಗೊಳಿಸಿದ … Continued

ಶಾಲೆಗಳಲ್ಲಿ ಮೊಟ್ಟೆ ನೀಡಲು ವಿರೋಧ: ಅಖಿಲ ಭಾರತ ಸಸ್ಯಾಹಾರಿಗಳ ಒಕ್ಕೂಟದ ಸ್ವಾಮೀಜಿಗಳು, ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು

ಬೆಳಗಾವಿ: ಕರ್ನಾಟಕದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮೊಟ್ಟೆ ಕೊಡುವ ಯೋಜನೆಯನ್ನ ವಿರೋಧಿಸಿ ಹಾಗೂ ಮುಂದುವರಿಸಿದರೆ ಸಸ್ಯಹಾರಿಗಳಿಗಾಗಿ ಪ್ರತ್ಯೇಕ ಶಾಲೆಗಳನ್ನು ತೆರೆಯಬೇಕೆಂದು ಒತ್ತಾಯಿಸಿ ಸುವರ್ಣಸೌಧದ ವರೆಗೆ ಪಾದಯಾತ್ರೆ ಹಮ್ಮಿಕೊಂಡ ಅಖಿಲ ಭಾರತ ಸಸ್ಯಾಹಾರಿಗಳ ಒಕ್ಕೂಟ ಸ್ವಾಮೀಜಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಶಾಲೆಗಳಲ್ಲಿ ಮೊಟ್ಟೆ ಕೊಡುವುದನ್ನು ವಿರೋಧಿಸಿ ಅಖಿಲ ಭಾರತ ಸಸ್ಯಾಹಾರಿ ಒಕ್ಕೂಟದ ಸಂಚಾಲಕ ದಯಾನಂದ ಸ್ವಾಮೀಜಿ … Continued

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ:ಮೂವರ ಬಂಧನ

ಬೆಳಗಾವಿ :ಅನಗೋಳ ಭಕ್ತ ಕನಕದಾಸ ಕಾಲೊನಿ ಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶುಕ್ರವಾರ ಮಧ್ಯರಾತ್ರಿ ನಂತರ ಅನಗೋಳ ಭಕ್ತ ಕನಕದಾಸ ಕಾಲೊನಿಯಲ್ಲಿ ಇಡಲಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಹಾನಿಗೊಳಿಸಿ ಭಗ್ನಗೊಳಿಸಲಾಗಿತ್ತು. ಇದನ್ನು ಖಂಡಿಸಿ ರಾಜ್ಯಾದ್ಯಂತ ಸಂಗೊಳ್ಳಿ ರಾಯಣ್ಣ ಭಕ್ತರು ಹಾಗೂ ಕನ್ನಡಾಭಿಮಾನಿಗಳು … Continued

ಭಾರತದಿಂದ ದೂರ ಹೋದವರಲ್ಲಿಯೂ ಭಾರತೀಯತೆ ಸದಾ ಜಾಗೃತ : ರಘುನಂದನಜಿ

ಬೆಳಗಾವಿ : ಭಾರತೀಯರು ಅನೇಕ ಕಾರಣಗಳಿಂದ ಜಗತ್ತಿನ ಇತರ ದೇಶಗಳಿಗೆ ವಲಸೆ ಹೋಗುತ್ತಾರೆ. ಅಲ್ಲೇ ಉದ್ಯೋಗದಲ್ಲಿ ನಿರತರಾಗಿ ಆ ದೇಶದ ಪೌರತ್ವವನ್ನು ಪಡೆದುಕೊಳ್ಳುತ್ತಾರೆ. ಆದರೆ, ಅವರಲ್ಲಿ ಸದಾ ಭಾರತೀಯತೆ ಜಾಗೃತವಾಗಿರುತ್ತದೆ ಎಂದು ಪ್ರಜ್ಞಾ ಪ್ರವಾಹ ವೈಚಾರಿಕೆ ವೇದಿಕೆ, ದಕ್ಷಿಣ ಮಧ್ಯ ಕ್ಷೇತ್ರದ ಸಂಯೋಜಕ ರಘುನಂದನಜಿ ಅಭಿಪ್ರಾಯಪಟ್ಟರು. ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪಂಡಿತ ದೀನದಯಾಳ ಉಪಾಧ್ಯಾಯ … Continued