ಸಿಂಧುದುರ್ಗದಲ್ಲಿ ದುರಂತ: ಪಿಕ್ನಿಕ್ ಗೆ ತೆರಳಿದ್ದ ಬೆಳಗಾವಿ ಜಿಲ್ಲೆ ಮೂವರ ದುರ್ಮರಣ, ನಾಲ್ವರು ನಾಪತ್ತೆ

 ಬೆಳಗಾವಿ : ಮಹಾರಾಷ್ಟ್ರದ ಸಿಂಧುದುರ್ಗಕ್ಕೆ ತೆರಳಿದ್ದ ಖಾನಾಪುರದ ಎಂಟು ಜನರ ತಂಡದಲ್ಲಿ ಮೂವರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮಹಾರಾಷ್ಟ್ರದ ಶಿರೋಡಾ-ವೇಲಗರ್ ಬೀಚ್‌ನಲ್ಲಿ ಶುಕ್ರವಾರ ಘೋರ ದುರಂತ ಸಂಭವಿಸಿದೆ. ಎಂಟು ಜನರಿದ್ದ ಕುಟುಂಬ ಸದಸ್ಯರು ಅರಬ್ಬೀ ಸಮುದ್ರಕ್ಕೆ ಹೋದಾಗ ಪಿಕ್ನಿಕ್ ಮಾರಕವಾಗಿ ಪರಿಣಮಿಸಿದೆ. ಈ ಕುಟುಂಬದ ಮೂವರು ಸದಸ್ಯರು ನೀರಿನಲ್ಲಿ ಮುಳುಗಿ … Continued

ಬೆಳಗಾವಿ | ಗೋಮಾಂಸ ಸಾಗಾಟ: ಲಾರಿಗೆ ಬೆಂಕಿ ಹಚ್ಚಿದರು…

ಬೆಳಗಾವಿ : ಜಿಲ್ಲೆಯ ಕಾಗವಾಡ ತಾಲೂಕು ಐನಾಪುರದಲ್ಲಿ ಸೋಮವಾರ ರಾತ್ರಿ ಗೋಮಾಂಸ ಸಾಗಿಸುತ್ತಿದ್ದ ಆರೋಪದ ಮೇರೆಗೆ ಲಾರಿಗೆ ಬೆಂಕಿ ಹಚ್ಚಿದ ಘಟನೆ ಸೋಮವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ರಾಯಬಾಗ ತಾಲೂಕು ಕುಡಚಿಯಿಂದ ಹೈದರಾಬಾದಿಗೆ ಲಾರಿಯಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸಲಾಗುತ್ತಿದೆ ಎಂದು ಐನಾಪುರದಲ್ಲಿ ಸೋಮವಾರ ರಾತ್ರಿ ಲಾರಿ ತಡೆ ಹಿಡಿದು, ಲಾರಿಗೆ ಬೆಂಕಿ ಹಚ್ಚಲಾಗಿದೆ. ನಂತರ … Continued

ಬೆಳಗಾವಿ : ಹಾಸ್ಟೆಲ್ ಕೊಠಡಿಯಲ್ಲಿಯೇ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಹಾಸ್ಟೆಲಿನಲ್ಲಿಯೇ ಅತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರದ ಸದಾಶಿವನಗರದಲ್ಲಿರುವ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಸುಮಿತ್ರಾ ಗೋಕಾಕ (19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದವಳು ಎಂದು ಗುರುತಿಸಲಾಗಿದೆ. ಈಕೆ ನರ್ಸಿಂಗ್‌ ಓದುತ್ತಿದ್ದಳು ಎನ್ನಲಾಗಿದೆ. ಬೆಳಿಗ್ಗೆ ಉಪಾಹಾರ ಸೇವಿಸಿದ ಬಳಿಕ ಕೊಠಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ … Continued

ಬುದ್ಧಿ ಹೇಳಿದ್ದಕ್ಕೆ ವ್ಯಕ್ತಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿದ ಯುವಕ…!

ಬೆಳಗಾವಿ: ಯುವಕನಿಗೆ ಬುದ್ಧಿವಾದ ಹೇಳಿದ್ದಕ್ಕೆ ಆತ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಾಕು ಇರಿದ ಆರೋಪಿಯನ್ನು ದರ್ಶನ್ ಎಂದು ಗುರುತಿಸಲಾಗಿದೆ. ಮಡಿವಾಳಪ್ಪ ಎಂಬವರು ಗಂಭೀರವಾಗಿ ಹಲ್ಲೆಗೊಳಗಾದ ವ್ಯಕ್ತಿ ಎಂದು ಹೇಳಲಾಗಿದೆ. ದರ್ಶನ್ ಯುವತಿಯೊಂದಿಗೆ ದೇವಸ್ಥಾನಕ್ಕೆ ಹೋಗಿದ್ದ. ಇದಕ್ಕೆ ಮಡಿವಾಳಪ್ಪ ಎಂಬವರು ಯುವತಿಯ ಕುಟುಂಬದವರ … Continued

ಸಚಿವರ ಎದುರೇ ಗಂಡನಿಗೆ ಕಪಾಳ ಮೋಕ್ಷ ಮಾಡಿದ ಪತ್ನಿ…!

ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಫೈಟ್‌ ಹುಕ್ಕೇರಿ ತಾಲೂಕಿನಲ್ಲಿ ತಾರಕ್ಕೇರಿದೆ. ಸಚಿವ ಸತೀಶ ಜಾರಕಿಹೊಳಿ ಎದುರೇ ಮಹಿಳೆಯೊಬ್ಬರು ತನ್ನ ಗಂಡನ ಕಪಾಳಕ್ಕೆ ಬಾರಿಸಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಪಿಕೆಪಿಎಸ್ ಸದಸ್ಯ ಮಾರುತಿ ಸನದಿ ಅವರ ಕಾಲರ್ ಹಿಡಿದು ಎಳೆದಾಡಿದ ಪತ್ನಿ ಕಪಾಳಕ್ಕೆ ಹೊಡೆದಿದ್ದಾಳೆ. ಜಾರಕಿಹೊಳಿಗೆ ಬೆಂಬಲ ನೀಡಿದ್ದಕ್ಕಾಗಿ ಪತಿಯನ್ನು … Continued

ಬೆಳಗಾವಿ : ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮುಳುಗಿ ಇಬ್ಬರು ಸಾವು

ಬೆಳಗಾವಿ: ಬೆಳಗಾವಿ ನಗರ ಮತ್ತು ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಶನಿವಾರ ಗಣಪತಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿಯ ಜಕ್ಕೇರಿ ಹೊಂಡದಲ್ಲಿ ವಡ್ಡರವಾಡಿ ನಿವಾಸಿ ರಾಹುಲ್ ಬ್ಯಾಕವಾಡಕರ(33) ಅವರು ಗಣಪತಿ ಮೂರ್ತಿಯೊಂದಿಗೆ ನೀರಿಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಜೊತೆಯಲ್ಲಿದ್ದವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ … Continued

ಬೆಳಗಾವಿ | ಕ್ಯಾಂಪ್‌ ಪೊಲೀಸರ ಭರ್ಜರಿ ಕಾರ್ಯಾಚರಣೆ ; 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಬೆಳಗಾವಿ : ಇಲ್ಲಿನ ಕ್ಯಾಂಪ್ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಮನೆ ಕಳ್ಳರನ್ನು ಬಂಧಿಸಿ 85 ಲಕ್ಷ ಮೌಲ್ಯದ ಬಂಗಾರ ಆಭರಣಗಳು ವಶಕ್ಕೆ ಪಡೆದಿದ್ದಾರೆ. ಶ್ರಮೇಶ ಸುರೇಶ ರೇಡೆಕರ ಎಂಬವರು ತಮ್ಮ ಮನೆಯಲ್ಲಿ ಒಟ್ಟು 981.1 ಗ್ರಾಂ ತೂಕದ ಬಂಗಾರದ ಆಭರಣಗಳು ಕಳ್ಳತನವಾದ ಬಗ್ಗೆ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ದೂರು ದಾಖಲಿಸಿದ … Continued

ಕಿತ್ತೂರು | ಬೆಳ್ಳಂಬೆಳಗ್ಗೆ ಆರೋಪಿಗೆ ಪೊಲೀಸರಿಂದ ಗುಂಡೇಟು

ಬೆಳಗಾವಿ : ಬೆಳಗಾವಿ : ಇಂದು, ಶನಿವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿದ್ದ ಆರೋಪಿಗೆ ಪೊಲೀಸರು ಗುಂಡಿಹಾರಿಸಿದ ವರದಿಯಾಗಿದೆ.. ಪೊಲೀಸರು ಆರೋಪಿ ರಮೇಶ ಕಿಲಾರಿ ಎಂಬಾತನನ್ನು ಹಿಡಿಯಲು ಪ್ರಯತ್ನಿಸಿದಾಗ, ಆತ ಸಿಪಿಸಿ ಷರೀಫ್ ದಫೇದಾರ್ ಅವರನ್ನು ಚಾಕುವಿನಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದಾನೆ. ಆತನಿಗೆ ಎಚ್ಚರಿಕೆ … Continued

ಬೆಳಗಾವಿ | ಮನವೊಲಿಕೆ ಸಫಲ ; ದೇಹತ್ಯಾಗದ ನಿರ್ಧಾರದಿಂದ ಹಿಂದೆ ಸರಿದರು…

ಬೆಳಗಾವಿ : ದೇಹ ತ್ಯಾಗ ಮಾಡುತ್ತಾರೆ ಎಂಬ ವದಂತಿ ಕೊನೆಗೂ ಸುಖಾಂತ್ಯಗೊಂಡಿದೆ. ಅಧ್ಯಾತ್ಮಿಕ ಪಂಥವೊಂದಕ್ಕೆ ಮಾರು ಹೋಗಿ ಸೆಪ್ಟೆಂಬರ್ 8 ರಂದು ದೇಹತ್ಯಾಗ ಮಾಡಲು ಮುಂದಾಗಿದ್ದ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಕೆಲವರು ಕೊನೆಗೂ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ. ಅನಂತಪುರ ಗ್ರಾಮದ ತುಕಾರಾಮ ಇರಕರ ಕುಟುಂಬದ ನಾಲ್ವರು ಮತ್ತು … Continued

ಮಹಾರಾಷ್ಟ್ರದಲ್ಲಿ ಮಳೆ | ಉಕ್ಕಿ ಹರಿದ ಘಟಪ್ರಭಾ ; ಗೋಕಾಕದಲ್ಲಿ ಪ್ರವಾಹ : ಕಾಳಜಿ ಕೇಂದ್ರಕ್ಕೆ ಜನರ ಸ್ಥಳಾಂತರ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ಗೋಕಾಕ ಪಟ್ಟಣದಲ್ಲಿ ಪ್ರವಾಹ ಉಂಟಾಗಿದೆ, ನೂರಕ್ಕೂ ಹೆಚ್ಚು ಕುಟುಂಬಗಳು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿವೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಸಪ್ತನದಿಗಳು ತುಂಬಿ ಹರಿಯುತ್ತಿವೆ. ಕೃಷ್ಣೆ ತುಂಬಿ ಹರಿಯುತ್ತಿದೆ. ಘಟಪ್ರಭೆ ಕೂಡ ಅಬ್ಬರಿಸುತ್ತಿದ್ದು, ೬೦ ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಘಟಪ್ರಭಾ ನದಿಗೆ … Continued