ಗೋಕಾಕ | ಮಳೆಗೆ ಮನೆ ಕುಸಿದುಬಿದ್ದು ಮಹಿಳೆ ಸಾವು, ಇಬ್ಬರಿಗೆ ಗಾಯ

ಬೆಳಗಾವಿ : ಭಾರಿ ಮಳೆಯಿಂದಾಗಿ ಮನೆ ಕುಸಿದು ಬಿದ್ದು ಮಹಿಳೆಯೊಬ್ಬರು ಸಮೃತೊಟ್ಟ ಘಟನೆ ಜಿಲ್ಲೆಯ ಗೋಕಾಕದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಗೋಕಾಕದ ಸಂಗಮ ನಗರದ ಫರೀದಾಬಾನು ಶಕೀಲ್ ಅಹ್ಮದ್ ಕನವಾಡ (50) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಅವರ ಪುತ್ರ  ಮತ್ತು ಪುತ್ರಿ  ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. … Continued

ಭಾರಿ ಮಳೆ ಮುನ್ಸೂಚನೆ : ಬೆಳಗಾವಿ ಜಿಲ್ಲೆಯ ಶಾಲೆ-ಪದವಿಪೂರ್ವ ಕಾಲೇಜುಗಳಿಗೆ ಇಂದು (ಆ.20)ರಜೆ ಘೋಷಣೆ

ಬೆಳಗಾವಿ : ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿರುವ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಬುಧವಾರ (ಆಗಸ್ಟ್‌ 20) ರಜೆ ಘೋಷಿಸಿ ಆದೇಶಿಸಿದೆ. ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34(ಎಮ್)ರ ಅಡಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರd ಅಧ್ಯಕ್ಷರೂ … Continued

ವಿವಾಹಿತರ ಪ್ರೇಮ್‌ ಕಹಾನಿ ಕೊಲೆಯಲ್ಲಿ ಅಂತ್ಯ ; ತನ್ನಿಂದ ದೂರವಾದ ಪ್ರೇಯಸಿ ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ಪ್ರಿಯಕರ

ಬೆಳಗಾವಿ : ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಾಹಿತ ವ್ಯಕ್ತಿಯೊಬ್ಬ ತನ್ನ ಪ್ರೇಯಸಿ ತನ್ನಿಂದ ದೂರವಾದ ಹಿನ್ನೆಲೆಯಲ್ಲಿ ಕೋಪದಿಂದ ಆ ವಿವಾಹಿತೆಯನ್ನು ಬರ್ಬರವಾಗಿ ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಖಾನಾಪುರ ತಾಲೂಕಿನ ಬೀಡಿ ಗ್ರಾಮದ ರೇಶ್ಮಾ ತಿರವೀರ (28) ಎಂಬ … Continued

ತಾಂತ್ರಿಕ ದೋಷ : ಬೆಳಗಾವಿಯಿಂದ ಮುಂಬೈಗೆ ಹೊರಟ ವಿಮಾನ ಪುನಃ ಬೆಳಗಾವಿಯಲ್ಲೇ ಲ್ಯಾಂಡಿಂಗ್‌…!

ಬೆಳಗಾವಿ : ಶನಿವಾರ ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವೇಸ್ ವಿಮಾನ ಪ್ರಯಾಣ ಆರಂಭಿಸಿದ ನಂತರ ತಾಂತ್ರಿಕ ದೋಷದಿಂದಾಗಿ ಮುಂಬೈನಲ್ಲಿ ಲ್ಯಾಂಡ್‌ ಆಗುವ ಬದಲು ಪುನಃ ಬೆಳಗಾವಿ ನಿಲ್ದಾಣಕ್ಕೆ ಬಂದು ಇಳಿದ ಘಟನೆ ನಡೆದಿರುವುದು ವರದಿಯಾಗಿದೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ … Continued

ಬೆಳಗಾವಿ | ನಕಲಿ ದಾಖಲೆ ಸೃಷ್ಟಿಸಿ 16 ಕೋಟಿ ರೂ. ಜಿಎಸ್‌ಟಿ ವಂಚಿಸಿದ್ದ ಆರೋಪಿಯ ಬಂಧನ

ಬೆಳಗಾವಿ: ಕೋಟ್ಯಂತರ ರೂಪಾಯಿ ಜಿಎಸ್‌ಟಿ ವಂಚನೆ ಮಾಡಿದ್ದ ವ್ಯಕ್ತಿಯನ್ನು ಆರೋಪಿಯನ್ನು ಕೇಂದ್ರ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ವಿವಿಧ ಕಂಪನಿಗಳ ನಕಲಿ ಹೆಸರುಗಳನ್ನು ಸೃಷ್ಟಿಸಿ ಈತ ನಕಲಿ ಒಪ್ಪಂದ ಮತ್ತು ನಕಲಿ ಬಿಲ್ ಸೃಷ್ಟಿಸಿದ್ದ. ಇದಕ್ಕಾಗಿ ತನ್ನ ಕಚೇರಿಯ ನೌಕರರ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಗಳನ್ನು ಬಳಸಿಕೊಂಡಿರುವ ಮಾಹಿತಿ ಈಗ ಬಹಿರಂಗವಾಗಿದೆ. … Continued

ಮಸೀದಿಯಲ್ಲಿ 5 ವರ್ಷದ ಬಾಲಕಿ ಅತ್ಯಾಚಾರ ಆರೋಪ; ಎರಡು ವರ್ಷಗಳ ಬಳಿಕ ಆರೋಪಿ ಬಂಧನ

ಬೆಳಗಾವಿ : ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದ್ದು, ಘಟನೆ ನಡೆದು ಸುಮಾರು ಎರಡು ವರ್ಷಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಮುರುಗೋಡು ಪ್ರದೇಶದ ಮಸೀದಿಯೊಳಗೆ 5 ವರ್ಷದ ಬಾಲಕಿಯ ಮೇಲೆ 22 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ … Continued

ಆಗಸ್ಟ್ 10ರಂದು ಬೆಳಗಾವಿ-ಬೆಂಗಳೂರು ವಂದೇ ಭಾರತ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ದಕ್ಷಿಣ ಬೆಂಗಳೂರನ್ನು (ಎಲೆಕ್ಟ್ರಾನಿಕ್ ಸಿಟಿ) ನಗರದ ಕೇಂದ್ರಕ್ಕೆ ಸಂಪರ್ಕಿಸುವ ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ (ಆ‌ರ್.ವಿ. ರಸ್ತೆ-ಬೊಮ್ಮಸಂದ್ರ) ಚಾಲನೆ ನೀಡಲಿದ್ದಾರೆ. ಇದೇ ವೇಳೆ ಮೂರು ವಂದೇ ಭಾರತ ರೈಲುಗಳಿಗೂ ಹಸಿರು ನಿಶಾನೆ ತೋರಲಿದ್ದಾರೆ. ಈ ಬಗ್ಗೆ ಕೇಂದ್ರ ಆಹಾರ ಮತ್ತು ನಾಗರಿಕ … Continued

ಸವದತ್ತಿ : ಕೋರ್ಟ್ ಆವರಣದಲ್ಲಿ ಪತ್ನಿ ಮೇಲೆ ಮಚ್ಚಿನಿಂದ ದಾಳಿ ಮಾಡಿದ ಪತಿ…!

ಬೆಳಗಾವಿ : ವಿವಾಹ ವಿಚ್ಛೇದನಕ್ಕೆ ಕೌಟುಂಬಿಕ ನ್ಯಾಯಾಲಯಕ್ಕೆ ಬಂದಿದ್ದ ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಸವದತ್ತಿ ನ್ಯಾಯಾಲಯ ಸಂಕಿರ್ಣದಲ್ಲಿ ಮಂಗಳವಾರ ಸಂಭವಿಸಿದೆ. ಬೈಲಹೊಂಗಲ ತಾಲೂಕಿನ ಸವಟಗಿ ಗ್ರಾಮದ ಮುತ್ತಪ್ಪ ಗಣಾಚಾರಿ ಎಂಬಾತ ಸವದತ್ತಿ ತಾಲ್ಲೂಕಿನ ಕರೀಕಟ್ಟಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದ, ಕೌಟುಂಬಿಕ ಕಲಹದಿಂದ ದೂರವಾಗಿದ್ದ ಇವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, … Continued

ಸವದತ್ತಿ | ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಮಗ ಸಾವು

ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದ ಕಾಲುವೆ ಬಳಿ ಇರುವ ಕೃಷಿ ಹೊಂಡದಲ್ಲಿ ಮುಳುಗಿ ತಂದೆ, ಮಗ ಮೃತಪಟ್ಟ ಘಟನೆ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬಸವರಾಜ ನೀಲಪ್ಪ ಕೆಂಗೇರಿ(40), ಅವರ ಪುತ್ರ ಧರೆಪ್ಪ (14) ಎಂದು ಗುರುತಿಸಲಾಗಿದೆ. ಬಸವರಾಜ, ಧರೆಪ್ಪ ಮತ್ತು ಭಾಗಪ್ಪ ಸಣ್ಣಕ್ಕಿ (16) ಹುರಳಿ ಬೆಳೆಗೆ ಔಷಧ … Continued

ಸಿಎಂರಿಂದ ಅವಮಾನಕ್ಕೊಳಗಾಗಿ ರಾಜೀನಾಮೆಗೆ ಮುಂದಾಗಿದ್ದ ಭರಮನಿಗೆ ಬಡ್ತಿ ನೀಡಿದ ರಾಜ್ಯ ಸರ್ಕಾರ

ಬೆಳಗಾವಿ: ಕೆಲ ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಂದ ಅವಮಾನಕ್ಕೀಡಾಗಿ ರಾಜೀನಾಮೆಗೆ ಮುಂದಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ವಿ. ಭರಮನಿ ಅವರಿಗೆ ರಾಜ್ಯ ಸರ್ಕಾರ ಪದೋನ್ನತಿ ನೀಡಿದೆ. ಈಗ ಅವರನ್ನು ಬೆಳಗಾವಿ ಮಹಾನಗರ ಕಾನೂನು ಮತ್ತು ಸುವ್ಯವಸ್ಥೆಯ ನೂತನ ಡಿಸಿಪಿಯಾಗಿ ನೇಮಕ ಮಾಡಿದೆ. ಬೆಳಗಾವಿಯಲ್ಲಿ ಸಬ್ ಇನ್ಸ್ಪೆಕ್ಟರ್, … Continued