ಅಥಣಿ : ವಿದ್ಯುತ್ ಸ್ಪರ್ಶಿಸಿ ತಂದೆ-ಮಗ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ಚಿಕ್ಕಟ್ಟಿ ಗ್ರಾಮದಲ್ಲಿ ಜಮೀನಿನಲ್ಲಿ ಪಂಪ್ ಸೆಟ್ ಬಂದ್ ಮಾಡಲು ತೆರಳಿದ್ದ ತಂದೆ-ಮಗ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಲ್ಲಿಕಾರ್ಜುನ ಸದಾಶಿವ ಪೂಜಾರಿ (32 )ಮತ್ತು ಅವರ ಪುತ್ರ ಪ್ರೀತಂ ಮಲ್ಲಿಕಾರ್ಜುನ ಪೂಜಾರಿ (6) ಎಂದು ಗುರುತಿಸಲಾಗಿದೆ. ಪ್ರೀತಂ ಅಥಣಿಯ ಶಾರದಾ ಮಾತಾ ವಿದ್ಯಾಲಯದ ಒಂದನೇ ತರಗತಿ … Continued

ಬೆಳಗಾವಿ ದಂಡು ಮಂಡಳಿ ಸಿಇಒ ಆತ್ಮಹತ್ಯೆ

ಬೆಳಗಾವಿ : ಬೆಳಗಾವಿ ದಂಡು ಮಂಡಳಿಯ ಸಿಇಒ ಕೆ.ಆನಂದ (40) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿಯ ಕ್ಯಾಂಪ್ ಪ್ರದೇಶದ ತಮ್ಮ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಬೆಳಗಾವಿ ದಂಡು ಮಂಡಳಿಯಲ್ಲಿ ಒಂದೂವರೆ ವರ್ಷಗಳಿಂದ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಆನಂದ ಅವರು ಮೂಲತಃ ತಮಿಳುನಾಡಿನವರು. ಇಂದು, ಶನಿವಾರ ಅವರ … Continued

ಗೋವಾದಿಂದ ಬೆಳಗಾವಿಗೆ ತರುತ್ತಿದ್ದ 25 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

ಬೆಳಗಾವಿ :ಗೋವಾದಿಂದ ಬೆಳಗಾವಿಗೆ ಸಾಗಿಸುತ್ತಿದ್ದ ಅಕ್ರಮ ಮದ್ಯವನ್ನು ಅಬಕಾರಿ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 25 ಲಕ್ಷ ಅಕ್ರಮ ಮದ್ಯವನ್ನು ಬೆಳಗಾವಿಯ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದು ಈ ಸಂಬಂಧ ಬಿಹಾರದ ಸುಬೋಧ ಮಹತೊ ಎಂಬಾತನನ್ನು ಬಂಧಿಸಿದ್ದಾರೆ. ಗೋವಾದಿಂದ ಬೆಳಗಾವಿಗೆ ತರುತ್ತಿದ್ದ ಲಾರಿಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದಾಗ ಅದರಲ್ಲಿ 90 ಬಾಕ್ಸ್ ನಲ್ಲಿದ್ದ … Continued

ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನ: ಬೆಳಗಾವಿಯಲ್ಲಿ ನವೆಂಬರ್‌ 21ರಂದು ಉದ್ಘಾಟನೆ

ಬೆಳಗಾವಿ/ಶಿರಸಿ: ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನ ಬೆಳಗಾವಿಯಲ್ಲಿ ಇದೇ ನ.21ರಂದು ಉದ್ಘಾಟನೆಯಾಗಲಿದೆ. ಕಳೆದ ಹದಿನೇಳು ವರ್ಷಗಳಿಂದ ನಿರಂತರವಾಗಿ ಭಗವದ್ಗೀತಾ ಅಭಿಯಾನ‌ ನಡೆಸಿಕೊಂಡು ಬರುತ್ತಿರುವ ಸೋಂದಾ ಸ್ವರ್ಣವಲ್ಲೀ‌ ಮಹಾ‌ಸಂಸ್ಥಾನವು ಬೆಳಗಾವಿಯ ಭಗವದ್ಗೀತಾ ಅಭಿಯಾನದ ಸಹಕಾರದಲ್ಲಿ ಗೀತಾ ಅಭಿಯಾನಕ್ಕೆ ಮಂಗಳವಾರ ಬೆಳಗ್ಗೆ 11 ಗಂಟೆಗೆ ಚಾಲನೆ‌ ನೀಡಲಿದೆ. ಸಮಾರಂಭವು ಅನಗೋಳದ ಸಂತ ಮೀರಾ ಶಾಲೆಯ ‌ಮಾಧವ ಸಭಾಗೃಹದಲ್ಲಿ ನಡೆಯಲಿದೆ. ಸೋಂದಾ … Continued

ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ: ಬೆಳಗಾವಿಯಲ್ಲಿ ಆರೋಪಿ ಬಂಧನ

ಉಡುಪಿ: ಮಲ್ಪೆ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ ಚೌಗಲೆ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಉಡುಪಿಯಲ್ಲಿ ಕೊಲೆ ಮಾಡಿ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಸಂಬಂಧಿ ಮನೆಯಲ್ಲಿ ಅಡಗಿ ಕುಳಿತಿದ್ದ, ಆತನ ಮೊಬೈಲ್ ಟವರ್ ಲೊಕೇಶನ್ … Continued

ಖಾನಾಪುರ: ಡೀಪ್ ಫೇಕ್ ಪ್ರಕರಣ ಬೆಳಕಿಗೆ ; ಆರೋಪಿ ಬಂಧನ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲೂ ಡೀಪ್ ಫೇಕ್ ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಡೀಪ್​ ಫೇಕ್ (Deepfake)​ ಮೂಲಕ ಯಾರದೋ ನಗ್ನ ಚಿತ್ರಕ್ಕೆ ಯುವತಿಯ ಭಾವಚಿತ್ರ ಅಳವಡಿಸಿ ಯುವಕ ಬ್ಯ್ಲಾಕ್​ಮೇಲ್ ಮಾಡಿದ ಘಟನೆ ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ನಡೆದಿದೆ. ಫೋಟೋ ಈ ರೀತಿ ಎಡಿಟ್​ ಮಾಡಿ ಬ್ಯ್ಲಾಕ್​ಮೇಲ್​ ಮಾಡಿದ್ದ ಆರೋಪಿ ಮಂಥನ್ ಪಾಟೀಲ​ (22) … Continued

ಕನ್ನಡ ಸ್ವಾಮೀಜಿ ಖ್ಯಾತಿಯ ಚಿಂಚಣಿ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ ಲಿಂಗೈಕ್ಯ

ಬೆಳಗಾವಿ : ಗಡಿ ಭಾಗದಲ್ಲಿ ‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತಿಯಾಗಿದ್ದ ಚಿಂಚಣಿಯ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ (63) ಅವರು ಭಾನುವಾರ (ನವೆಂಬರ್‌ 12) ಲಿಂಗೈಕ್ಯರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಮಠದ ಸ್ವಾಮೀಜಿಯಾಗಿದ್ದ ಅವರು ಗಡಿ ಭಾಗದಲ್ಲಿ ಚಿಂಚಣಿ ಶ್ರೀಗಳು ಕನ್ನಡದ ಸ್ವಾಮೀಜಿ ಎಂದೇ ಖ್ಯಾತರಾಗಿದ್ದರು. ಕೆಲ ದಿನಗಳಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ … Continued

ಬೆಳಗಾವಿಗೆ ನುಗ್ಗಲು ಯತ್ನಿಸಿದ 50ಕ್ಕೂ ಹೆಚ್ಚು ಶಿವಸೇನೆ ಕಾರ್ಯಕರ್ತರ ಬಂಧನ

ಬೆಳಗಾವಿ : ಬೆಳಗಾವಿ ಜಿಲ್ಲೆಗೆ ಪ್ರವೇಶಿಸಲು ಯತ್ನಿಸಿದ 50 ಕ್ಕೂ ಹೆಚ್ಚು ಶಿವಸೇನೆ (ಉದ್ಧವ್ ಠಾಕ್ರೆ ಬಣ) ಸದಸ್ಯರನ್ನು ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಬಂಧಿಸಲಾಗಿದೆ. ಬುಧವಾರ ಬೆಳಗ್ಗೆ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಆಯೋಜಿಸಿದ್ದ ‘ಕಪ್ಪು ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಬರುತ್ತಿದ್ದಾಗ ಅವರನ್ನು ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಬಂಧಿಸಲಾಗಿದೆ. ಬೆಳಗಾವಿ ಮತ್ತು 840 … Continued

ಪುತ್ರ ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪ : ಸಚಿವೆ ಹೆಬ್ಬಾಳ್ಕರ್ ‌ಮನೆಯಲ್ಲಿ ಅರಣ್ಯ ಅಧಿಕಾರಿಗಳ ಪರಿಶೀಲನೆ

ಬೆಳಗಾವಿ: ಹುಲಿ ಉಗುರಿನ ಪೆಂಡೆಂಟ್ ಆರೋಪಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಮನೆಯಲ್ಲಿ ಶುಕ್ರವಾರ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅವರ ಪುತ್ರ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಅವರ ಬಳಿ ಇದ್ದ ಹುಲಿ ಉಗುರು ಹೋಲುವ ಪೆಂಡೆಂಟ್ ಅನ್ನು ಅರಣ್ಯ ಇಲಾಖೆ … Continued

ಗೋಕಾಕ: ಸೈನಿಕನಿಗೆ ಗುಂಡು ಹಾರಿಸಿದ ಇನ್ನೊಬ್ಬ ಸೈನಿಕ

ಬೆಳಗಾವಿ: ಹಣಕಾಸಿನ ವಿಚಾರಕ್ಕಾಗಿ ನಡೆದ ಜಗಳದಲ್ಲಿ ಒಬ್ಬ ಸೈನಿಕ ಇನ್ನೊಬ್ಬ ಸೈನಿಕನಿಗೆ ಗುಂಡು ಹಾರಿಸಿದ ಘಟನೆ ಜಿಲ್ಲೆಯ ಗೋಕಾಕ ತಾಲ್ಲೂಕಿನ ರಾಜನಕಟ್ಟೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರಾಜನಕಟ್ಟೆ ಗ್ರಾಮದವರಾದ ಯೋಧ ನಂಜುಂಡಿ ಬೂದಿಹಾಳ (32) ಗುಂಡು ಹಾರಿಸಿದ ಆರೋಪಿ. ಇದೇ ಊರಿನ ಬಸಪ್ಪ ಮೈಲಪ್ಪ ಬಂಬರ್ಗಾ (32) ಎಂಬವರು ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಬಸಪ್ಪ ಅವರ ಹೊಟ್ಟೆಗೆ … Continued