ಹುಕ್ಕೇರಿ : ಹಳ್ಳದ ನೀರಿನಲ್ಲಿ ಸಿಲುಕಿದ ಶಾಲಾ ಬಸ್‌ ; ತಪ್ಪಿದ ಅನಾಹುತ

ಬೆಳಗಾವಿ : ಜಿಲ್ಲೆಯ ಹುಕ್ಕೇರಿ ತಾಲೂಕಿನ ಎಲಿಮುನ್ನೊಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ತುಂಬಿ ಹರಿಯುತ್ತಿದ್ದ ಹಳ್ಳಕ್ಕೆ ಶಾಲಾ ಬಸ್ ನುಗ್ಗಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದ್ದು ಗ್ರಾಮಸ್ಥರು ಮಕ್ಕಳನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ. ಧಾರಾಕಾರ ಮಳೆಯಿಂದಾಗಿ ಗ್ರಾಮದ ಹಳ್ಳದ ರಸ್ತೆಯ ಮೇಲೆ ಅಪಾರ ನೀರು ಹರಿಯುತ್ತಿತ್ತು. ಇದನ್ನು ಗಮನಿಸಿಯೂ … Continued

ಮಳೆ ಕೊರತೆ : ಬೆಳಗಾವಿ ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಸರ್ಕಾರದ ಅನುಮತಿ

ಬೆಳಗಾವಿ : ಜಿಲ್ಲೆಯ ಬೆಳಗಾವಿ ಹಾಗೂ ಖಾನಾಪುರ ತಾಲೂಕುಗಳನ್ನು ಹೊರತುಪಡಿಸಿ ಜಿಲ್ಲೆಯ ಉಳಿದ ಎಲ್ಲ ತಾಲೂಕುಗಳಲ್ಲಿ ಈ ಬಾರಿ ಮಳೆಯ ತೀವ್ರ ಅಭಾವ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಎರಡು ತಾಲೂಕುಗಳನ್ನು ಹೊರತುಪಡಿಸಿ ಉಳಿದ ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿದೆ. ಮಳೆಯ ತೀವ್ರ ಅಭಾವ ಎದುರಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮೋಡ … Continued

ತಿರುಪತಿ ಬಳಿ ಭೀಕರ ರಸ್ತೆ ಅಪಘಾತ : ಬೆಳಗಾವಿ ಜಿಲ್ಲೆಯ ಐವರು ಸಾವು, 11 ಮಂದಿಗೆ ಗಾಯ

ಹೈದರಾಬಾದ್‌/ ಬೆಳಗಾವಿ : ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಕನಿಷ್ಠ ಐವರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಆಂಧ್ರದ ಅನ್ನಮಯ್ಯ ಜಿಲ್ಲೆಯ ಕೆವಿಪಲ್ಲಿ ತಾಲೂಕಿನ ಮಠಂಪಲ್ಲಿಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿ ಮುಂದಿನ ಭಾಗ ನಜ್ಜುಗುಜ್ಜಾಗಿದ್ದರೆ, ಕ್ರೂಸರ್‌ ಸಂಪೂರ್ಣ ನಜ್ಜುಗುಜ್ಜಾಗಿದೆ. ಮಠಂಪಲ್ಲೆ … Continued

ಪತ್ನಿ ಎದುರಲ್ಲೇ ಪತಿ ಹತ್ಯೆ ಪ್ರಕರಣ​ : ಭೀಮನ ಅಮಾವಾಸ್ಯೆ ದಿನ ದೇಗುಲದಲ್ಲಿ ಪ್ರೇಮಿಯಿಂದ ಗಂಡನ ಹತ್ಯೆ ಮಾಡಿಸಿದ ಪತ್ನಿ…!

 ಬೆಳಗಾವಿ : ವಡೇರಹಟ್ಟಿ ಗ್ರಾಮದಲ್ಲಿ ಹೆಂಡತಿ ಎದುರೇ ನಡೆದಿದ್ದ ಗಂಡನ ಭೀಕರ ಹತ್ಯೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಜಿಲ್ಲೆಯ ಮೂಡಲಗಿ ತಾಲೂಕು ವಡೇರಟ್ಟಿ ಗ್ರಾಮದಲ್ಲಿ ಸೋಮವಾರ ವ್ಯಕ್ತಿಯೊಬ್ಬನ ಹತ್ಯೆಯಿಂದಾಗಿ ಇಡೀ ಗ್ರಾಮವನ್ನೇ ತಲ್ಲಣಗೊಂಡಿದೆ. ಭೀಮನ ಅಮಾವಾಸ್ಯೆಯಾದ ಸೋಮವಾರ ಗಂಡನ ಪೂಜೆ ಮಾಡಿದರೆ ಆತನ ಆಯುಷ್ಯ ಹೆಚ್ಚಾಗುತ್ತದೆ ಎಂಬ ನಂಬಿಕೆ ಇದೆ. ಆದರೆ ಅದೇ … Continued

ವೀಡಿಯೊ ..: ದೂಧ್‌ ಸಾಗರ ಜಲಪಾತ ನೋಡಲು ತೆರಳಿದವರಿಗೆ ಪೊಲೀಸರಿಂದ ಬಸ್ಕಿ ಶಿಕ್ಷೆ | ವೀಕ್ಷಿಸಿ

ಬೆಳಗಾವಿ : ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವಿನ ಗಡಿ ಭಾಗದಲ್ಲಿ ಪಶ್ಚಿಮ ಘಟ್ಟದ ದಟ್ಟ ಅರಣ್ಯದ ನಡುವೆ ಇರುವ ಮನಮೋಹಕ ದೂಧ್‌ ಸಾಗರ ಜಲಪಾತ ನೋಡಲು ಭಾನುವಾರ ತೆರಳಿದ ಪ್ರವಾಸಿಗರಿಗೆ ಗೋವಾ ಪೊಲೀಸರು ಶಾಕ್‌ ನೀಡಿದ್ದಾರೆ. ಪ್ರವಾಸಿಗರಿಗೆ ಬಸ್ಕಿ ಹೊಡೆಸಿ ಶಿಕ್ಷೆ ನೀಡಿ ಕಳುಹಿಸಿದ್ದಾರೆ. ಈ ಕುರಿತ ವೀಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ … Continued

ಚಿಕ್ಕೋಡಿ : ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿಯ ಹತ್ಯೆ

ಬೆಳಗಾವಿ : ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಹತ್ಯೆ ಮಾಡಲಾಗಿದೆ ಎಂದು ಎಂದು ವರದಿಯಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಕಳೆದ 15 ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿ ಮುನಿ ವಾಸವಿದ್ದರು. ನಂದಿಪರ್ವತ … Continued

ಈ ವರ್ಷ ಬೆಳಗಾವಿ ಕೇಂದ್ರ ಸ್ಥಾನವಾಗಿಸಿಕೊಂಡು ಭಗವದ್ಗೀತೆ ಅಭಿಯಾನ : ಸ್ವರ್ಣವಲ್ಲಿ ಶ್ರೀಗಳು

ಬೆಳಗಾವಿ: ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ವತಿಯಿಂದ ಪ್ರತಿ ವರ್ಷ ನಡೆಸಲಾಗುವ ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನವನ್ನು ಈ ವರ್ಷ ಬೆಳಗಾವಿಯನ್ನು ಕೇಂದ್ರ ಸ್ಥಾನವಾಗಿಸಿಕೊಂಡು ನಡೆಸಲಾಗುವುದು ಎಂದು ಸ್ವರ್ಣವಲ್ಲಿ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಈ ಕುರಿತು ಪೂರ್ವಭಾವಿ ಸಭೆ ನಡೆಸಿದ ನಂತರ ಈ ವಿಷಯವನ್ನು ಅವರು ಪ್ರಕಟಿಸಿದರು. ನವೆಂಬರ್ 21ರಿಂದ ಡಿಸೆಂಬರ್ 22ರ … Continued

ಬೆಳಗಾವಿ: ಕಾಡಸಿದ್ದೇಶ್ವರ ಸ್ವಾಮೀಜಿ ಕಾರು ಅಪಘಾತ, ಇಬ್ಬರ ಸಾವು, ಸ್ವಾಮೀಜಿಗೆ ಗಂಭೀರ ಗಾಯ

ಬೆಳಗಾವಿ : ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಿದ್ದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಶನಿವಾರ ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಆಗಮಿಸುತ್ತಿದ್ದ ಶಿವಾಪುರ ಗ್ರಾಮದ ಮುಪ್ಪಿನ ಕಾಡ ಸಿದ್ದೇಶ್ವರ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗಳ ಕಾರು, ಎರಡು ಲಾರಿಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕಾರಲ್ಲಿದ್ದ ಇಬ್ಬರು ಮೃತಪಟ್ಟಿದ್ದು ಸ್ವಾಮೀಜಿ … Continued

ತಡರಾತ್ರಿ ಲಕ್ಷ್ಮಣ ಸವದಿ ಭೇಟಿ ಮಾಡಿದ ಡಿಸಿಎಂ ಶಿವಕುಮಾರ; ಕುತೂಹಲಕ್ಕೆ ಕಾರಣವಾದ ಬೆಳವಣಿಗೆ

ಬೆಳಗಾವಿ: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವರಿ ಅವರನ್ನು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ತಡರಾತ್ರಿ ಭೇಟಿ ಮಾಡಿದ್ದಾರೆ‌ ಬೆಳಗಾವಿಯ ಸದಾಶಿವನಗರದಲ್ಲಿರುವ ಲಕ್ಷ್ಮಣ ಸವದಿ ನಿವಾಸಕ್ಕೆ ತೆರಳಿದ ಶಿವಕುಮಾರ ಅವರು ಮಾತುಕತೆ ನಡೆಸಿದರು. ಸಚಿವ ಸ್ಥಾನ ಸಿಗದಿದ್ದಕ್ಕೆ ಸವದಿ ಅಸಮಾಧಾನಗೊಂಡಿದ್ದಾರೆ ಎಂಬ ಮಾತುಗಳ ನಡುವೆ ರಾತ್ರೋರಾತ್ರಿ ಸವದಿ ನಿವಾಸಕ್ಕೆ ಆಗಮಿಸಿದ ಶಿವಕುಮಾರ ಮಾತುಕತೆ ನಡೆಸಿದ್ದಾರೆ … Continued

ಮತಹಾಕಲು ಬಂದಿದ್ದ ಮಹಿಳೆ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯರಝರವಿ ಗ್ರಾಮದಲ್ಲಿ ಮತ ಚಲಾಯಿಸಲು ಬಂದಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ವೃದ್ಧೆಯನ್ನು ಪಾರವ್ವ ಈಶ್ವರ ಸಿದ್ನಾಳ (ಪನದಿ) (68) ಎಂದು ಗುರುತಿಸಲಾಗಿದೆ. ಪಾರವ್ವ ತಮ್ಮ‌ ಮತದಾನ ಮಾಡಲು ಮತಗಟ್ಟೆಗೆ ಬಂದಿದ್ದರು. ಆದರೆ, ಮತದಾನಕ್ಕೂ ಮುನ್ನ, ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ … Continued