ಕಿತ್ತೂರು ಉತ್ಸವದಿಂದ ವಾಪಸಾಗುತ್ತಿದ್ದ ಪಾದಚಾರಿಗಳ ಮೇಲೆ ಹರಿದ ಕಾರು : ಇಬ್ಬರ ದುರ್ಮರಣ

ಕಿತ್ತೂರು : ಬೆಳಗಾವಿ ಜಿಲ್ಲೆಯ ಕಿತ್ತೂರು ಉತ್ಸವ ವೀಕ್ಷಿಸಿ ವಾಪಸ್ ಮನೆಗೆ ಬರುತ್ತಿದ್ದವರ ಮೇಲೆ ಮಂಗಳವಾರ ತಡರಾತ್ರಿ ಕಾರು ಹರಿದು ಇಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಖಾನಾಪುರ ತಾಲ್ಲೂಕು ಕೊರವಿಕೊಪ್ಪ ಗ್ರಾಮದ ಬಾಳಪ್ಪ ತಳವಾರ (33)ಮತ್ತು ಕರೆಪ್ಪ ತಳವಾರ (36) ಮೃತಪಟ್ಟವರು. ಬೆಳಗಾವಿಯಿಂದ ಧಾರವಾಡದ ಕಡೆ ಹೋಗುತ್ತಿದ್ದ ಕಾರು ಇವರಿಬ್ಬರಿಗೆ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಇವರು … Continued

ಬೆಳಗಾವಿಯಲ್ಲಿ ದುರಂತ: ದೀಪಾವಳಿಗೆ ಬಟ್ಟೆ ಖರೀದಿಸಿ ವಾಪಸ್ಸಾಗುತ್ತಿದ್ದಾಗ ಕುತ್ತಿಗೆಗೆ ಗಾಳಿಪಟದ ದಾರ ಬಿಗಿದು ಐದು ವರ್ಷದ ಮಗು ಸಾವು

ಬೆಳಗಾವಿ : ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ 5 ವರ್ಷದ ಮಗು ಮೃತಪಟ್ಟ ಘಟನೆ ಇಲ್ಲಿಯ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಇಲ್ಲಿಯ ಹಳೆ ಗಾಂಧಿನಗರ ಬ್ರಿಡ್ಜ್ ಮೇಲೆ ಭಾನುವಾರ ಸಂಜೆ ಬೈಕ್‌ನಲ್ಲಿ ಹೋಗುತ್ತಿರುವಾಗ ಈ ಘಟನೆ ನಡೆದಿದ್ದು, ಮೃತಪಟ್ಟ ಮಗುವನ್ನು ವರ್ಧನ್ ಈರಣ್ಣ ಬ್ಯಾಳಿ ಎಂದು ಗುರುತಿಸಲಾಗಿದೆ. ದೀಪಾವಳಿಗೆ ಬೆಳಗಾವಿಯ … Continued

ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳಗಾವಿ : ಬೆಚ್ಚಿ ಬೀಳಿಸುವಂತಹ ಘಟನೆಯೊಂದು ಬೆಳಗಾವಿ ನಗರದಲ್ಲಿ ನಡೆದಿದೆ. ಬೆಳಗಾವಿಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಕೊಚ್ಚಿ ಕೊಲೆ ಮಾಡಲಾಗಿದೆ. ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಬಳಿ ಕೊಲೆ ಮಾಡಲಾಗಿದ್ದು, ನಿನ್ನೆಯ ರಾತ್ರಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಕೊಲೆಯಾದ ವುದ್ಯಾರ್ಥಿಯನ್ನು ಪ್ರಜ್ವಲ್ ಶಿವಾನಂದ ಕರಿಗಾರ(16) ಎಂದು ಗುರುತಿಸಲಾಗಿದೆ. ಈತ ಬೆಳಗಾವಿಯ … Continued

ಬೆಳಗಾವಿ: ಶಸ್ತ್ರಚಿಕಿತ್ಸೆ ಮೂಲಕ ಮಹಿಳೆ ಅಂಡಾಶಯದಲ್ಲಿ ಬೆಳೆದಿದ್ದ 5.75 ಕಿಲೋ ತೂಕದ ಗಂಟನ್ನು ಯಶಸ್ವಿಯಾಗಿ ಹೊರತೆಗೆದ ಕೆಎಲ್‌ಇ ವೈದ್ಯರು

ಬೆಳಗಾವಿ : ನಗರದ ಕೆಎಲ್ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆಯ ಸ್ತ್ರೀ ರೋಗ ಹಾಗೂ ಪ್ರಸೂತಿ ವಿಭಾಗದ ತಜ್ಞೆ ಡಾ. ಗೀತಾಂಜಲಿ ತೋಟಗಿ ಅವರು ಸುಮಾರು 50 ವರ್ಷದ ಮಹಿಳೆ ಅಂಡಾಶಯದಲ್ಲಿ ಬೆಳೆದಿದ್ದ ಸುಮಾರು 30 ಸೆಂಟಿಮೀಟರ್ ಸುತ್ತಳತೆಯ 5.75 ಕಿಲೋಗ್ರಾಂ ತೂಕದ ಗಂಟನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಪ್ರಸ್ತುತ ಮಹಿಳೆಯು ಆರೋಗ್ಯವಾಗಿದ್ದಾರೆ ಎಂದು … Continued

ಗಣೇಶ ಮೂರ್ತಿ ವಿಸರ್ಜನೆ ವೇಳೆ ಯುವಕನ ಹತ್ಯೆ: ನಾಲ್ವರ ಬಂಧನ

ಬೆಳಗಾವಿ : ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಯುವಕನನ್ನು  ಕೊಲೆ ಮಾಡಿರುವ ಘಟನೆ ನಡೆದಿದೆ. ಅರ್ಜುನಗೌಡ ಪಾಟೀಲ (20) ಎಂಬಾತನನ್ನುಕೊಲೆ ಮಾಡಲಾಗಿದೆ. ಕೊಲೆ ಮಾಡಿ ಪಕ್ಕದ ಊರಿನಲ್ಲಿ ಅಡಗಿ ಕುಳಿತಿದ್ದ ಉದಯ್ ಭನದ್ರೋಲಿ (21), ಸುಭಾಷ್ ಸೋಲನ್ನವರ್ (21), ವಿಠ್ಠಲ ಮೀಸಿ (20),ಓರ್ವ ಅಪ್ರಾಪ್ತ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. … Continued

ಬೆಳಗಾವಿಯಲ್ಲಿ ಸಿಗದ ಚಿರತೆ: ಬೋನಿಗೆ ಹೆಣ್ಣು ಚಿರತೆಯ ಮೂತ್ರ ಸಿಂಪಡಣೆಗೆ ಮುಂದಾದ ಅರಣ್ಯ ಇಲಾಖೆ

ಬೆಳಗಾವಿ: ಬೆಳಗಾವಿಯಲ್ಲಿ 20 ದಿನ ಕಳೆದರೂ ಕೈಗೆ ಸಿಗದೆ ಓಡಾಡುತ್ತ ಸ್ಥಳೀಯರ ನಿದ್ದೆಗೆಡಿಸಿರುವ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಮಾಡಿದ ಪ್ರಯತ್ನಗಳೆಲ್ಲವೂ ವಿಫಲವಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಸುಸ್ತಾಗಿದ್ದಾರೆ. ಈ ನಡುವೆ ಚಿರತೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು `ಲೈಂಗಿಕ ಆಕರ್ಷಣೆ’ ತಂತ್ರ ಅನುಸರಿಸಲು ಮುಂದಾಗಿದ್ದು, ನಗರ ಸಮೀಪದ ಭೂತರಾಮನಹಟ್ಟಿ … Continued

ಬೆಳಗಾವಿ ಚಿರತೆ ಸೆರೆ ಕಾರ್ಯಾಚರಣೆಗೆ ಶಿವಮೊಗ್ಗದಿಂದ ಬರಲಿವೆ ಎರಡು ಆನೆಗಳು

ಬೆಳಗಾವಿ: ಬೆಳಗಾವಿ ನಗರದ ಗಾಲ್ಫ್‌ ಮೈದಾನದಲ್ಲಿ ಅವಿತುಕೊಂಡ ಚಿರತೆ ಸೆರೆಗೆ ಈಗ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್‌ ಶಿಬಿರದಿಂದ ಎರಡು ಆನೆಗಳನ್ನು ಕರೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಂಗಳವಾರ ಬೆಳಿಗ್ಗೆಯೇ ಎರಡು ಆನೆಗಳು ಹಾಗೂ ಪರಿಣತ ಸಿಬ್ಬಂದಿಯ ತಂಡ ಶಿವಮೊಗ್ಗದಿಂದ ಹೊರಟಿದೆ ಎಂದು ಹೇಳಲಾಗಿದೆ. ಸಕ್ರೆಬೈಲ್‌ ಆನೆ ತರಬೇತಿ ಕ್ಯಾಂಪಿನಲ್ಲಿರುವ ಪುಂಡಾನೆಗಳ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಪಳಗಿರುವ … Continued

ಶಾಲಾ ಬಸ್ – ಗೂಡ್ಸ್ ವಾಹನದ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ : ಶನಿವಾರ ಬೆಳ್ಳಂಬೆಳಿಗ್ಗೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಹೊರವಲಯದಲ್ಲಿ ವಿದ್ಯಾರ್ಥಿನಿಯರಿದ್ದ ಶಾಲಾ ಬಸ್‌ ಹಾಗೂ ಗೂಡ್ಸ್‌ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಥಣಿ ಪಟ್ಟಣದ ಬಣಜವಾಡ ಶಾಲೆಗೆ ಸೇರಿದ ವಾಹನ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಎರಡೂ ವಾಹನಗಳ ಚಾಲಕರು ಸ್ಥಳದಲ್ಲೇ ಅಸುನೀಗಿದ್ದಾರೆ. ಬಸ್‌ನಲ್ಲಿದ್ದ 10 … Continued

ಚಿರತೆ ಸಿಗದೆ ಆತಂಕ, ಶೋಧ ಕಾರ್ಯಾಚರಣೆ : ಬೆಳಗಾವಿಯ 22 ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ: ಇಲ್ಲಿನ ಜಾಧವ ನಗರದಲ್ಲಿ ಚಿರತೆ ಕಾಣಿಸಿಕೊಂಡ ಬಳಿಕ ಕಳೆದ ಮೂರು ದಿನಗಳಿಂದ ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಗಾಲ್ಫ್ ಮೈದಾನದ ಒಂದು ಕಿ.ಮೀ. ವ್ಯಾಪ್ತಿಯ 22 ಶಾಲೆಗಳಿಗೆ ಇಂದು, ಸೋಮವಾರ ರಜೆ ಘೋಷಿಸಲಾಗಿದೆ. ಇವುಗಳಿಗೆ ಡಿಡಿಪಿಐ ಮೌಖಿಕ ಸೂಚನೆ ಮೇರೆಗೆ ಬೆಳಗಾವಿ ನಗರ, ಗ್ರಾಮೀಣ ಬಿಇಒ … Continued

ಬೆಳಗಾವಿ: ಮಗನ ಮೇಲೆ ಚಿರತೆ ದಾಳಿ ಮಾಡಿದ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವು

ಬೆಳಗಾವಿ: ಮಗನ ಮೇಲೆ ಚಿರತೆ ದಾಳಿ ಸುದ್ದಿ ಕೇಳಿ ತಾಯಿ ಸಾವು ಹೃದಯಾಘಾತದಿಂದ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಖನಗಾವಿ ಕೆ.ಎಚ್. ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿ ಮಾಡುತ್ತಿದ್ದ ಸಿದರಾಯಿ ಮಿರಜಕರ್‌ಗೆ ಎಂಬವರ ಮೇಲೆ ಇಂದು, ಶುಕ್ರವಾರ ಚಿರತೆ ದಾಳಿ ಮಾಡಿತ್ತು‌. ಕಟ್ಟಡ ಕಾರ್ಮಿಕನ ಬೆನ್ನಿಗೆ ಪರಚಿದ ಗಾಯವಾಗಿತ್ತು. … Continued