ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಮುಳುಗಿ ಸಾವು

ಬೆಳಗಾವಿ: ಈಜಲು ಹೋಗಿದ್ದ ನಾಲ್ವರು ಯುವಕರು ಘಟಪ್ರಭಾ ನದಿಯಲ್ಲಿ ನೀರುಪಾಲಾಗಿರುವ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ದುಪದಾಳ ಬಳಿಯ ಘಟಪ್ರಭಾ ನದಿಯಲ್ಲಿ ನಡೆದಿದೆ. ಒಬ್ಬನನ್ನು ರಕ್ಷಿಸಲು ಹೋಗಿ ನಾಲ್ವರು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ರಜೆ ಹಿನ್ನೆಲೆಯಲ್ಲಿ ಘಟಪ್ರಭಾ ಪುರ ಸಭೆ ವ್ಯಾಪ್ತಿಯ ಮನಿಷ್ ಬಾರ್’ನ ಆರು ಜನ ಕೆಲಸದ ಹುಡುಗರು ಧೂಪದಾಳ ಡ್ಯಾಂಗೆ ಈಜಲು ಹೋಗಿದ್ದರು. ಓರ್ವ … Continued

ಅಕ್ರಮ ಜಿಲೆಟಿನ್‌: ಬೆಳಗಾವಿ ಜಿಲ್ಲೆಯಲ್ಲಿ ಐವರ ಬಂಧನ

ಬೆಳಗಾವಿ: ಅಕ್ರಮವಾಗಿ ಜಿಲೆಟಿನ್ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಜಿಲ್ಲೆ ಗೋಕಾಕ್ ತಾಲೂಕಿನ ಹೊನಕಟ್ಟಿ ಗ್ರಾಮದಲ್ಲಿ ಬಂಧಿಸಲಾಗಿದೆ. ಬಂಧಿತರನ್ನು ಗೋಪಾಲ್ ಸೊರಗಾಂವಿ, ಗಿರಿಮಲ್ಲಪ್ಪ ಸಿದ್ಧಾಪುರ, ಭೀಮಪ್ಪ ಎಂದು ಗುರುತಿಸಲಾಗಿದ್ದು, ಇವರಿಂದ 156 ಜಿಲೆಟಿನ್ ಕಡ್ದಿ ಸೇರಿದಂತೆ ಹಲವು ಸ್ಫೋಟಕಗಳನ್ನು ವಶ ಪಡಿಸಿಕೊಳ್ಳಲಾಗಿದೆ.ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದ ಹೊರವಲಯದಲ್ಲಿ ಸ್ಫೋಟಗೊಳಿಸಲು … Continued