ಸವದತ್ತಿ: ವಿಚ್ಛೇದಿತ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ ಮಾಜಿ ಪತಿ

ಬೆಳಗಾವಿ: 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ನಂತರ ವಿಚ್ಛೇದನ ಪಡೆದ ನಂತರವೂ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಮಾಜಿ ಪತಿ ಆಕೆಯನ್ನು ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಜಿಲ್ಲೆಯ ಸವದತ್ತಿಯ ರಾಮಸೈಟಿನಲ್ಲಿ ಘಟನೆ ಬೆಳಕಿಗೆ ಬಂದಿದೆ. ಮೂರು ದಿನಗಳ ಹಿಂದೆ ಕೊಲೆಯಾಗಿದ್ದ ಬಸ್ ನಿರ್ವಾಹಕಿ ಕಾಶವ್ವ ಕರೀಕಟ್ಟಿ (34) ತನ್ನ ಮಾಜಿ ಪತಿಯಿಂದಲೇ ಕೊಲೆಯಾದವರು ಎಂದು … Continued

ಬೆಳಗಾವಿ : ಒಂದೇ ದಿನ ಸಹೋದರರಿಬ್ಬರು ಹೃದಯಾಘಾತದಿಂದ ಸಾವು

ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರ ಸಹೋದರರಿಬ್ಬರು ಹೃದಯಘಾತದಿಂದ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗೋಕಾಕ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ಶನಿವಾರ ತಮ್ಮ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ಅಣ್ಣ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಎಸ್.ಎಸ್.ಎಲ್.ಸಿ ಓದುತ್ತಿದ್ದ ಸತೀಶ ಬಾಗನ್ನವರ (16) ಅವರಿಗೆ ಶನಿವಾರ ನಸುಕಿನ ಜಾವ 4 ಗಂಟೆಗೆ ಹೃದಯಾಘಾತವಾಗಿದೆ. ಸತೀಶ ಬದುಕುಳಿಯುವುದು ಕಷ್ಟ ಎಂಬ ಸುದ್ದಿ … Continued

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಕಾರು ಅಪಘಾತ ಪ್ರಕರಣ ; ಮಹಾರಾಷ್ಟ್ರದ ಲಾರಿ ಚಾಲಕನ ಬಂಧನ

ಬೆಳಗಾವಿ: ಕಿತ್ತೂರು ‌ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ದ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನ ತಕ್ರಾರವಾಡಿ ಗ್ರಾಮದ ಮಧುಕರ ಕೊಂಡಿರಾಮ ಸೋಮವಂಶ(65) ಬಂಧಿತನಾಗಿದ್ದಾನೆ. ಜನವರಿ 14 ರಂದು ಅಂಬಡಗಟ್ಟಿ … Continued

ಕಿತ್ತೂರು ರಾಣಿ ಚನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಳಗಾವಿ: ರಾಣಿ ಕಿತ್ತೂರು ಚನ್ನಮ್ಮ ಅವರ ಸಮಾಧಿಯನ್ನು ಪ್ರಾಚೀನ ಸ್ಮಾರಕಗಳು ಮತ್ತು ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ರಾಷ್ಟ್ರೀಯ ಮಹತ್ವದ ಸ್ಮಾರಕವೆಂದು ಘೋಷಿಸಬೇಕು ಎಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಕರ್ನಾಟಕದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿರುವ ವೀರ ರಾಣಿ ಕಿತ್ತೂರು ಚೆನ್ನಮ್ಮ ಸಮಾಧಿಯು … Continued

ಕದಂಬ ಕನ್ನಡ ಜಿಲ್ಲೆ ರಚನೆಗೆ ಒತ್ತಾಯಿಸಿ ಬೆಳಗಾವಿ ಸುವರ್ಣಸೌಧದ ಮುಂದೆ ಹೋರಾಟ; ಸಿಎಂ ಗಮನಕ್ಕೆ ತರುವೆ ಎಂದ ಸಚಿವ ತಂಗಡಗಿ

ಬೆಳಗಾವಿ : ಕಳೆದ ಹತ್ತು ವರ್ಷಗಳಿಂದ ಉತ್ತರ ಕನ್ನಡದಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ನಡೆಯುತ್ತಿರುವ ಹೋರಾಟ ಗಮನಕ್ಕಿದೆ. ನೂತನವಾಗಿ ಕದಂಬ ಕನ್ನಡ ಜಿಲ್ಲೆ ರಚನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವರ ಗಮನಕ್ಕೆ ತರಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಸಂದರ್ಭದಲ್ಲಿ ಕದಂಬ ಕನ್ನಡ … Continued

ಖಾನಾಪುರ ಅರಣ್ಯದಲ್ಲಿ ಕರಡಿ ದಾಳಿಯಿಂದ ತುಂಡಾಯ್ತು ರೈತನ ಕಾಲು

ಬೆಳಗಾವಿ : ಖಾನಾಪುರ ತಾಲೂಕಿನ ಮಾನ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಸೋಮವಾರ ಕರಡಿ ದಾಳಿಯಿಂದ ರೈತನ ಕಾಲು ತುಂಡಾಗಿದೆ. ರೈತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾನ ಗ್ರಾಮದ ಸಖಾರಾಮ ಗಾಂವಕರ (62) ದಾಳಿಗೆ ಒಳಗಾದ ರೈತರಾಗಿದ್ದಾರೆ. ಅವರು ಪತ್ನಿಯೊಂದಿಗೆ ಜಾನುವಾರುಗಳ ಸಮೇತ ತಮ್ಮ ಹೊಲಕ್ಕೆ ಹೊರಟಿದ್ದರು. ದಾರಿಯಲ್ಲಿ ಕರಡಿ ಎದುರಾಗಿದೆ. ಅದನ್ನು ಕಂಡ ಸಖಾರಾಮ … Continued

ಕರಾಳ ದಿನಕ್ಕೆ ಕರೆ: ಎಂಇಎಸ್‌ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಬೆಳಗಾವಿಯಲ್ಲಿ ನವೆಂಬರ್‌ 1ರಂದು ಕನ್ನಡ ರಾಜ್ಯೋತ್ಸವ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ನಡೆಸಲು ಉದ್ದೇಶಿಸಿರುವ ಕಾನೂನುಬಾಹಿರ ಕರಾಳ ದಿನ ಪ್ರತಿಭಟನೆಗೆ ಮಧ್ಯಂತರ ಪ್ರತಿಬಂಧಕಾದೇಶ ನೀಡುವಂತೆ ಕೋರಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಎಂಇಎಸ್‌ಗೆ ಕರ್ನಾಟಕ ಹೈಕೋರ್ಟ್‌ ಬುಧವಾರ ನೋಟಿಸ್‌ ಜಾರಿ ಮಾಡಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಮಲ್ಲಪ್ಪ ಚಾಯಪ್ಪ ಅಕ್ಷರದ … Continued

ಮರಾಠಾ ಸಮುದಾಯ ಆರ್ಥಿಕ, ಸಾಮಾಜಿಕವಾಗಿ ಪ್ರಗತಿ ಹೊಂದಲು ಡಾ.ಸೋನಾಲಿ ಸರ್ನೋಬತ್ ಕರೆ

ಬೆಳಗಾವಿ : ಡಾ.ಸೋನಾಲಿ ಸರ್ನೋಬತ್ ಅವರು ತಮ್ಮ ರಾಜಮಾತಾ ಜಿಜೌ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಭಾನುವಾರ (ಆಗಸ್ಟ್ 25) ಬೆಳಿಗ್ಗೆ 9 ರಿಂದ ನಗರದ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ವಧುವರ ಸಮ್ಮೇಳನ ಆಯೋಜಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜಮಾತಾ ಜಿಜೌ ಸಾಂಸ್ಕೃತಿಕ ಪ್ರತಿಷ್ಠಾನವು ಮರಾಠಾ ಸಮುದಾಯಕ್ಕಾಗಿ ಶೀಘ್ರದಲ್ಲೇ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಿದೆ ಎಂದು … Continued

ಕಾರು-ಗೂಡ್ಸ್‌ ವಾಹನ ಭೀಕರ ಅಪಘಾತ : ಇಬ್ಬರು ಸಾವು

ಬೆಳಗಾವಿ : ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಸನಿಹದ ಬೆಳಕೂಡ ಗೇಟ್ ಬಳಿ ನಿಪ್ಪಾಣಿ- ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಕಾರು-ಗೂಡ್ಸ್ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಮುಧೋಳದ ರಾಕೇಶ ವಾಟಕರ್ (23), ಸೌರಭ ಕುಲಕರ್ಣಿ (22) ಎಂದು ಗುರುತಿಸಲಾಗಿದೆ. ಎರಡು ವಾಹನಗಳಲ್ಲಿದ್ದ ನಾಲ್ವರಿಗೆ ಗಾಯಗಳಾಗಿವೆ. … Continued

ಬೆಳಗಾವಿ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ ; ಮುಗಿಲೆತ್ತರಕ್ಕೆ ಧಗಧಗಿಸಿದ ಬೆಂಕಿ ಜ್ವಾಲೆ : ಮೂವರು ಗಂಭೀರ

ಬೆಳಗಾವಿ: ನಾವಗೆ ಗ್ರಾಮದ ಸನಿಹದ ಟಿಕ್ಸ್‌ ಟೇಪ್ (ಅಂಟು) ತಯಾರಿಸುವ ಸ್ನೇಹಂ ಕಾರ್ಖಾನೆಯಲ್ಲಿ ಬೃಹತ್ ಪ್ರಮಾಣದ ಬೆಂಕಿ ಹೊತ್ತಿಕೊಂಡಿದ್ದು, ಈ ದುರ್ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ತಾಲೂಕಿನ ಕವಳವಾಡಿಯ ಮಾರುತಿ ನಾರಾಯಣ ಕರವೇಕರ (32), ಹಳೇ ಬೆಳಗಾವಿಯ ಯಲ್ಲಪ್ಪ ಪ್ರಕಾಶ ಸಲಗುಡೆ (35) ಮತ್ತು ರಾಝವಾಡಿಯ ರಂಜಿತ ದಶರಥ ಪಾಟೀಲ (39) ಎಂಬ ಮೂವರು … Continued