ಕಾಂಗ್ರೆಸ್‌ ನಾಯಕ ಆರ್. ವಿ. ದೇಶಪಾಂಡೆಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಬೆಳಗಾವಿ: ಆರ್. ವಿ. ದೇಶಪಾಂಡೆ ಅವರಿಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಬೆಳಗಾವಿ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಹಿರಿಯ ಶಾಸಕ ಆರ್. ವಿ. ದೇಶಪಾಂಡೆ ಅವರಿಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ … Continued

ಅತ್ತ ಮಹಾರಾಷ್ಟ್ರದಿಂದ ಗಡಿ ಠರಾವು ; ಇತ್ತ ಸಿಎಂ ಬೊಮ್ಮಾಯಿ ಭೇಟಿಗೆ ಬೆಳಗಾವಿಗೆ ಬಂದ ಮಹಾರಾಷ್ಟ್ರದ ಗಡಿ ಭಾಗದ ಕನ್ನಡಿಗರು

ಬೆಳಗಾವಿ: ನಾಗ್ಪುರದಲ್ಲಿ ನಡೆಯುತ್ತಿರುವ ಮಹಾರಾಷ್ಟ್ರ ವಿಧಾನ ಮಂಡಲದ ಅಧಿವೇಶನಲ್ಲಿ ಮಂಗಳವಾರ ಕರ್ನಾಟಕದ ಮಹಾರಾಷ್ಟ್ರ ಸರ್ಕಾರ ವಿರುದ್ಧ ಗಡಿ ಠರಾವು ಅಂಗೀಕರಿಸಿದೆ. ಕರ್ನಾಟಕದ 865 ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಠರಾವು ವಿಧಾನಸಭೆಯಲ್ಲಿ ಅಂಗೀಕಾರವಾದರೆ ಇತ್ತ ಮಹಾರಾಷ್ಟ್ರಕ್ಕೆ ಸೇರಿರುವ ಜತ್ತ ತಾಲೂಕಿನ ಕನ್ನಡಿಗರು ಬೆಳಗಾವಿಗೆ ಆಗಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೂಲಕ ನೆರವಿಗೆ ಒತ್ತಾಯಿಸಿದ್ದಾರೆ. ಕರ್ನಾಟಕ … Continued

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಉಲ್ಬಣ: ಮಹಾರಾಷ್ಟ್ರ ಟ್ರಕ್‌ಗಳ ಮೇಲೆ ಕಲ್ಲು ತೂರಾಟ

ಬೆಳಗಾವಿ: ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಭುಗಿಲೆದ್ದಿದ್ದು, ಗಡಿ ತಗಾದೆ ಮಾಡುತ್ತಿರುವ ಮಹಾರಾಷ್ಟ್ರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಹಿರೇಬಾಗೇವಾಡಿ ಬಳಿ ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರ ನಂಬರ್‌ ಪ್ಲೇಟ್‌ ಇರುವ ವಾಹನಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಮಹಾರಾಷ್ಟ್ರ ಗಡಿ ತಂಟೆ ತೆಗೆದ ಹಿನ್ನಲೆ … Continued

ಪ್ರಮೋದ ಮುತಾಲಿಕಗೆ ಜೀವ ಬೆದರಿಕೆ ಕರೆ; ದೂರು ದಾಖಲು

ಬೆಳಗಾವಿ: ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು (Threatening Call) ಬರುತ್ತಿರುವ ಕುರಿತು ಪ್ರಮೋದ ಮುತಾಲಿಕ್ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಪ್ರಮೋದ ಮುತಾಲಿಕ್‌, ನನಗೆ ಬೇರೆ ಬೇರೆ ನಂಬರ್‌ಗಳಿಂದ ಕರೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗುತ್ತಿದೆ. ಕೊಚ್ಚಿ ಕೊಚ್ಚಿ ತುಂಡು … Continued

ಬೆಳಗಾವಿ: ಭೀಕರ ಅಪಘಾತದಲ್ಲಿ ಎಎಸ್‌ಐ ಪತ್ನಿ, ಮಗಳು ಸೇರಿ ನಾಲ್ವರು ಸಾವು

ಬೆಳಗಾವಿ: ಸಿಮೆಂಟ್ ಲಾರಿ ಹಾಗೂ ಕಾರು ಹಾಗೂ ದ್ವಿಚಕ್ರ ವಾಹನ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಎಎಸ್‌ಐ ಪತ್ನಿ, ಪುತ್ರಿ, ಕಾರು ಚಾಲಕ ಸೇರಿ ನಾಲ್ವರು ಮೃತಪಟ್ಟ ಘಟನೆ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್ ಬಳಿ ಭಾನುವಾರ ಸಂಭವಿಸಿದೆ. ಮೃತರನ್ನು ಬೆಳಗಾವಿ ನಿವಾಸಿಗಳಾದ ಕುಡಚಿ ಠಾಣೆ ಎಎಸ್‌ಐ ಪರುಶರಾಮ ಹಲಕಿ ಎಂಬವರ … Continued

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಅಪಘಾತ

ಬೆಳಗಾವಿ : ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರ ಕಾರು ಬುಧವಾರ ಬೆಳಗಾವಿ ಜಿಲ್ಲೆಯ ಹಾರೂಗೇರಿ ಬಳಿ ಪಲ್ಟಿಯಾಗಿದ್ದು, ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಅಪಾಯದಿಂದ ಪಾರಾಗಿದ್ದಾರೆ. ಲಕ್ಷ್ಮಣ ಸವದಿ ಅವರಿದ್ದ ಕಾರು ರಾಯಬಾಗ ತಾಲೂಕು ಹಾರೂಗೇರಿ ಮತ್ತು ಹಿಡ್ಕಲ್ ಬಳಿ ಅಪಘಾತಕ್ಕೀಡಾಗಿದೆ.ಸವದಿ ಅವರು ಅಥಣಿಯಿಂದ ಬೆಳಗಾವಿಗೆ ತೆರಳುತ್ತಿದ್ದರು ಎಂದು … Continued

ಮೂಡಲಗಿ : ಹಳ್ಳದಲ್ಲಿ ಪತ್ತೆಯಾದ ಏಳು ಮೃತ ಭ್ರೂಣಗಳು

ಬೆಳಗಾವಿ: ಜಿಲ್ಲೆಯ ಮೂಡಲಗಿ ಪಟ್ಟಣದೊಳಗೆ ಹರಿದ ಹಳ್ಳದಲ್ಲಿ ಶುಕ್ರವಾರ ಮಧ್ಯಾಹ್ನ, ಸತ್ತ ಏಳು ಭ್ರೂಣಗಳು ‍‍ಪತ್ತೆಯಾಗಿವೆ. ಈ ದೃಶ್ಯ ಕಂಡು ಪಟ್ಟಣದ ಜನ ಬೆಚ್ಚಿಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಹೊರವಲಯದಲ್ಲಿರುವ ಹಳ್ಳಕ್ಕೆ ಕಿರಾತಕರು ಏಳು ಭ್ರೂಣಗಳ ಮೃತದೇಹವನ್ನು ಎಸೆದಿದ್ದಾರೆ. ಐದು ಡಬ್ಬದಲ್ಲಿ ಏಳು ಭ್ರೂಣಗಳನ್ನು ಹಾಕಿ ಹಳ್ಳಕ್ಕೆ ಎಸೆದಿರುವುದು ಪತ್ತೆಯಾಗಿದೆ. ಹಳ್ಳಕ್ಕೆ ಬಟ್ಟೆ ತೊಳೆಯಲು … Continued

ಬೆಳಗಾವಿ: ದೇವಸ್ಥಾನ ಜಾಗದ ವಿಚಾರದಲ್ಲಿ ಎರಡು ಗುಂಪಿನ ಮಧ್ಯೆ ಗಲಾಟೆ, ಓರ್ವ ಹತ್ಯೆ

ಬೆಳಗಾವಿ: ದೇವಸ್ಥಾನದ ಜಾಗದ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಉಂಟಾದ ಘರ್ಷಣೆಯಲ್ಲಿ ಓರ್ವನ ಹತ್ಯೆಯಾಗಿದೆ. ಇಡೀ ಗ್ರಾಮಕ್ಕೆ ಬೆಂಕಿ ಇಡಲಾಗಿದೆ. ಪರಿಣಾಮ ಎರಡು ಕಾರು, ಒಂದು ವಾಟರ್ ಟ್ಯಾಂಕ್ ಲಾರಿ ಮತ್ತು ಒಂದು ಟ್ರಾಕ್ಟರ್‌ ಬೆಂಕಿಗೆ ಆಹುತಿಯಾಗಿದೆ. ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಅನೇಕ ವರ್ಷಗಳಿಂದ ದೇವಸ್ಥಾನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇದ್ದ ಜಗಳ ಶನಿವಾರ ರಾತ್ರಿ … Continued

ಜನ ಕಲ್ಯಾಣೋತ್ಸವ ರಾಜ್ಯ ಮಟ್ಟದ ಕಥಾ ಸ್ಪರ್ಧೆ

ಬೆಳಗಾವಿ: ಹಸಿರು ಕ್ರಾಂತಿಯ ಹರಿಕಾರರಾಗಿ ಹೋರಾಟದ ಹಾದಿಯಲ್ಲಿ ಮುಂಚೂಣಿಯಲ್ಲಿದ್ದ  ಪತ್ರಕರ್ತ ದಿ. ಕಲ್ಯಾಣರಾವ್ ಮುಚಳಂಬಿಯವರ ನೆನಪಿನಂಗಳದ ಕಾರ್ಯಕ್ರಮ ಜನ ಕಲ್ಯಾಣೋತ್ಸವ ನಿಮಿತ್ತ ರಾಜ್ಯ ಮಟ್ಟದ ಕಥಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೂರು ಅತ್ಯುತ್ತಮ ಕಥೆಗಳಿಗೆ ಕ್ರಮವಾಗಿ ಪ್ರಥಮ 5,000 ರೂ; ದ್ವಿತೀಯ 3,000 ರೂ ಮತ್ತು ತೃತೀಯ 2,000 ರೂ.ಗಳ ನಗದು ಬಹುಮಾನದೊಂದಿಗೆ ಕಾರ್ಯಕ್ರಮದಲ್ಲಿ … Continued

ಸಚಿವ ಈಶ್ವರಪ್ಪ ವಿರುದ್ಧ ಶೇ 40ರಷ್ಟು ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಗುತ್ತಿಗೆದಾರ ಆತ್ಮಹತ್ಯೆ..!

ಉಡುಪಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಈಚೆಗೆ ಶೇ 40ರಷ್ಟು ಪರ್ಸೆಂಟೇಜ್ ಆರೋಪ ಮಾಡಿ ಸುದ್ದಿಯಾಗಿದ್ದ ಬೆಳಗಾವಿ ಜಿಲ್ಲೆ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ‌ ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸ್ ಆಪ್ ಸಂದೇಶ ಕಳುಹಿಸಿ ನಾಪತ್ತೆಯಾಗಿದ್ದ ಸಂತೋಷ್ ಪಾಟೀಲ … Continued