ಬಳ್ಳಾರಿ | ಬೆಳ್ಳಂಬೆಳಿಗ್ಗೆ ಜಿಲ್ಲಾ ಆಸ್ಪತ್ರೆ ಮಕ್ಕಳ ವೈದ್ಯರ ಕಿಡ್ನಾಪ್: 3 ಕೋಟಿ ರೂ. ಹಣದ ಬೇಡಿಕೆ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ ಅವರನ್ನು ಅಪಹರಿಸಲಾಗಿದೆ ಎಂದುವರದಿಯಾಗಿದೆ. ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೈಶ್ವರ ದೇವಸ್ಥಾನದ ಬಳಿ ಶನಿವಾರ ಮುಂಜಾನೆ ಅವರು ವಾಕಿಂಗ್ ಮಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಅಪಹರಣ ಮಾಡಿದ್ದು, ಅಪಹಾರಣಕಾರರು ಮೂರು ಕೋಟಿ ರೂ.ಗಳ ಹಣದ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ಅಪಹರಣಕಾರರು ವೈದ್ಯರ ಬಾಯಿಮುಚ್ಚಿ … Continued

ಕಳೆದುಹೋಗಿ 25 ವರ್ಷಗಳ ನಂತರ ಹಿಮಾಚಲ ಪ್ರದೇಶದಲ್ಲಿ ಪತ್ತೆಯಾದ ಬಳ್ಳಾರಿ ಜಿಲ್ಲೆಯ ಮಹಿಳೆ …!

ಬಳ್ಳಾರಿ: ಸುಮಾರು 25 ವರ್ಷಗಳ ನಂತರ ಮನೆಯವರ ಸಂಪರ್ಕವಿಲ್ಲದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಕೊನೆಗೂ ಪತ್ತೆಯಾಗಿದ್ದಾರೆ…! ಮೂಲತಃ ಬಳ್ಳಾರಿ ತಾಲೂಕಿನ ಕುರುವಳ್ಳಿ ಗ್ರಾಮದವರಾದ ಸಾಕಮ್ಮ ಎಂಬ ಮಹಿಳೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ಪತ್ತೆಯಾಗಿದ್ದು,ಅವರನ್ನು ಈಗ ಕರೆತರಲಾಗಿದೆ. 20 ವರ್ಷಗಳಿಗೂ ಹೆಚ್ಚು ಕಾಲ ಮನೆ ಬಿಟ್ಟು ಹೋಗಿದ್ದ ಬಳ್ಳಾರಿ ಮೂಲದ ಸಾಕವ್ವ ಪತ್ತೆಯಾಗಿದ್ದು, ಡಿಸೆಂಬರ್ 24ರಂದು ಸಂಜೆ ಬೆಂಗಳೂರಿನ … Continued

ಜೈಲಿನಲ್ಲಿ ರಾಜಾತಿಥ್ಯಕ್ಕೆ ಬಿತ್ತು ಬ್ರೇಕ್​; ಆರೋಪಿ ದರ್ಶನ್​ ಬಳ್ಳಾರಿಗೆ ಸ್ಥಳಾಂತರ, ಉಳಿದವರು ಬೇರೆ ಬೇರೆ ಜೈಲಿಗೆ ಶಿಫ್ಟ್..

ಬೆಂಗಳೂರು : ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ನ್ಯಾಯಾಲಯ ಅನುಮತಿ ನೀಡಿದೆ. ಅಲ್ಲದೆ, ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ರಾಜ್ಯದ ಇತರ ಜಿಲ್ಲಾ ನ್ಯಾಯಾಲಯಗಳಿಗೆ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆರೋಪಿ ದರ್ಶನ್​ … Continued

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ, ಶಾಸಕ ದದ್ದಲ್ ಮನೆ ಮೇಲೆ ಇ.ಡಿ. ದಾಳಿ

ಬಳ್ಳಾರಿ/ ರಾಯಚೂರು : ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ಬಳ್ಳಾರಿ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ‌ನ ಹಗರಣ ಹೊರಬಿದ್ದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಇತ್ತೀಚೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಕ್ರಮಕ್ಕೆ ಸಂಬಂಧಿಸಿದಂತೆ ಯುನಿಯನ್ ಬ್ಯಾಂಕ್ … Continued

ಬಳ್ಳಾರಿ : 5.60 ಕೋಟಿ ರೂ. ಹಣ, 3 ಕೆಜಿ ಚಿನ್ನ, 103 ಕೆಜಿ ಬೆಳ್ಳಿ ಜಪ್ತಿ

ಬಳ್ಳಾರಿ : 2024 ರ ಲೋಕಸಭೆ ಚುನಾವಣೆಗೆ ಮುನ್ನ ಬಳ್ಳಾರಿ ಪೊಲೀಸರು ನಡೆಸಿದ ಪ್ರಮುಖ ದಾಳಿಯಲ್ಲಿ 5.60 ಕೋಟಿ ರೂಪಾಯಿ ನಗದು, 3 ಕೆಜಿ ಚಿನ್ನ, 103 ಕೆಜಿ ಬೆಳ್ಳಿ ಆಭರಣಗಳು ಮತ್ತು 68 ಬೆಳ್ಳಿಯ ತುಂಡುಗಳನ್ನು ಬಳ್ಳಾರಿ ಪಟ್ಟಣದಲ್ಲಿ ವಶಪಡಿಸಿಕೊಂಡಿದ್ದಾರೆ. ಬಳ್ಳಾರಿಯ (Bellary) ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಂಬಳಿ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬಳ್ಳಾರಿಯಲ್ಲಿ ಪ್ರಮುಖ ಶಂಕಿತನನ್ನು ವಶಕ್ಕೆ ಪಡೆದ ಎನ್‌ಐಎ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಒಬ್ಬ ಶಂಕಿತ ಆರೋಪಿಯನ್ನು ಬುಧವಾರ ಬಂಧಿಸಿದೆ ಎಂದು ವರದಿಗಳು ತಿಳಿಸಿವೆ. ಬುಧವಾರ ಬೆಳಿಗ್ಗೆ ಬಳ್ಳಾರಿಯಲ್ಲಿ ಶಂಕಿತ ಆರೋಪಿ ಶಬ್ಬೀರ್‌ ಎಂಬಾತನನ್ನು ಬಂಧಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ವ್ಯಕ್ತಿಯು ಸ್ಫೋಟದ ದಿನದಂದು … Continued

ಮತ ಹಾಕಲು ಹೋಗಿದ್ದ ಗರ್ಭಿಣಿಗೆ ಮತದಾನ ಕೇಂದ್ರದಲ್ಲೇ ಹೆರಿಗೆ…!

ಬಳ್ಳಾರಿ : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, ಬುಧವಾರ ನಡೆಯುತ್ತಿರುವ ಮತದಾನದ ವೇಳೆ ತುಂಬು ಗರ್ಭಿಣಿಯೊಬ್ಬರುಮತ ಕೇಂದ್ರದಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ವರದಿಯಾಗಿದೆ.. ಬಳ್ಳಾರಿಯ ಕೂರ್ಲಂಗುದಿ ಗ್ರಾಮದಲ್ಲಿ ಗರ್ಭಿಣಿ ಮಣಿಲಾ (23) ಎಂಬ ಗರ್ಭಿಣಿ ಮತ ಚಲಾಯಿಸಲು ಬಂದಿದ್ದರು. ಈ ವೇಳೆ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಿದ್ದರಿಂದ ಗರ್ಭಿಣಿ ಸರತಿ ಸಾಲಿನಲ್ಲಿ ನಿಂತಿದ್ದರು ಮತ … Continued

ದೇವರನ್ನು ಒಲಿಸಿಕೊಳ್ಳಲು ತನ್ನ ನಾಲಿಗೆಯನ್ನೇ ಕತ್ತರಿಸಿಕೊಂಡ ಭಕ್ತ…!

ಬಳ್ಳಾರಿ: ದೇವರನ್ನು ಒಲಿಸಿಕೊಳ್ಳಲು ವ್ಯಕ್ತಿಯೊಬ್ಬ (Man) ತನ್ನ ನಾಲಿಗೆಯನ್ನೇ (Tongue) ಕತ್ತರಿಸಿ ದಾನ ಕೊಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಉಪ್ಪಾರ ಹೊಸಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ದೇವರನ್ನು ಒಲಿಸಿಕೊಳ್ಳಲು ತನ್ನ ನಾಲಿಗೆಯನ್ನೇ ಕತ್ತರಿಸಿಕೊಂಡಿದ್ದಾನೆ ಎಂದು ಹೇಳಲಾದ ಘಟನೆ ವರದಿಯಾಗಿದೆ. ವೀರೇಶ ಎಂಬಾತ ತನ್ನ ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಣೆ ಮಾಡಿದ್ದಾನೆ ಎಂದು … Continued

ಕಾಲುವೆಯ ಕಂಬದ ದುರಸ್ತಿ ಕಾರ್ಯ ಚುರುಕಿಗೆ ಪಟ್ಟು: ಸ್ಥಳದಲ್ಲೇ ಸಚಿವ ಶೀರಾಮುಲು ವಾಸ್ತವ್ಯ

ಬಳ್ಳಾರಿ: ತಾಲೂಕಿನ ಬರದಾನಹಳ್ಳಿ ಸಮೀಪದ ವೇದಾವತಿ ನದಿಯ ಸೇತುವೆಗೆ ಅಂಟಿಕೊಂಡಂತೆ ತುಂಗಭದ್ರಾ ನದಿಯ ಎಲ್ಎಲ್‌ಸಿ ಕಾಲುವೆಯಿದ್ದರೂ ವೇದಾವತಿ ನದಿಯ ಸೇತುವೆಯ ಪಿಲ್ಲರ್‌ಗಳು ಕುಸಿದ ಪರಿಣಾಮ ಎಲ್ಎಲ್‌ಸಿ ಕಾಲುವೆಗಳಿಗೆ ನೀರು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಅಕ್ಟೋಬರ್ 13ರಿಂದ ರೈತರ ಜಮೀನುಗಳಿಗೆ ನೀರಿಲ್ಲದ ಕಾರಣ ಬೆಳೆಗಳು ಒಣಗುತ್ತಿವೆ. ತುಂಗಭದ್ರಾ ಜಲಾಶಯದ ನೀರು ನಂಬಿಕೊಂಡು ಭತ್ತ, ಮೆಣಿಸಿನಕಾಯಿ ಮೊದಲಾದ ಬೆಳೆ ಬೆಳೆದವರಿಗೆ … Continued

ಬಳ್ಳಾರಿ: ಭಾರತ್ ಜೋಡೋ ಯಾತ್ರೆ ವೇಳೆ 4 ಮಂದಿಗೆ ವಿದ್ಯುತ್ ಸ್ಪರ್ಶ, ಆಸ್ಪತ್ರೆಗೆ ದಾಖಲು

ಬಳ್ಳಾರಿ: ಭಾನುವಾರ ಬಳ್ಳಾರಿ ಬಳಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ ವೇಳೆ ವಿದ್ಯುತ್ ಸ್ಪರ್ಶದಿಂದ ನಾಲ್ವರು ಗಾಯಗೊಂಡ ಘಟನೆ ವರದಿಯಾಗಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದವರೊಬ್ಬರು ಕಾಂಗ್ರೆಸ್ ಬಾವುಟವಿರುವ ಕಬ್ಬಿಣದ ರಾಡ್ ಹಿಡಿದಿದ್ದರು. ಮೋಕಾ ಗ್ರಾಮದ ಸಮೀಪ ಅದು ವಿದ್ಯುತ್‌ ತಂತಿಗೆ ತಗುಲಿ ವಿದ್ಯುತ್‌ ಪ್ರವಹಿಸಿದೆ. ಅವರು ಇತರ ಮೂವರನ್ನು ಸ್ಪರ್ಶಿಸಿದ್ದರಿಂದ ಅವರಲ್ಲಿಯೂ ವಿದ್ಯುತ್‌ ಪ್ರವಹಿಸಿದೆ. … Continued