ಬೆಳ್ತಂಗಡಿ : ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ; ಮೂವರು ಸಾವು

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಬಳಿ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಮೃತಪಟ್ಟು, ಅನೇಕ ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಕೇರಳದ ಸ್ವಾಮಿ(55), ವರ್ಗೀಸ್‌ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಎಂದು ಗುರುತಿಸಲಾಗಿದೆ, ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ … Continued

ಹೊಸ ವರ್ಷದ ಪಾರ್ಟಿ ವೇಳೆ ಇಬ್ಬರ ನಡುವೆ ಗಲಾಟೆ ; ಒಬ್ಬನ ಮೂಗು ಕಚ್ಚಿ ತುಂಡರಿಸಿದ ಮತ್ತೊಬ್ಬ…!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಪಿಲ್ಯದಲ್ಲಿ ಭಾನುವಾರ ರಾತ್ರಿ ಹೊಸ ವರ್ಷಾಚರಣೆ ವೇಳೆ ಇಬ್ಬರು ಯುವಕರ ನಡುವೆ ಜಗಳ ನಡೆದಿದ್ದು, ಈ ವೇಳೆ ಯುವಕನೊಬ್ಬನ ಮೂಗನ್ನು ಮತ್ತೊಬ್ಬ ಕಚ್ಚಿ ತುಂಡರಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ‘ಪಿಲ್ಯ ಗ್ರಾಮದ ಉಲ್ಪೆ ಬಳಿಯ ನಿವಾಸಿ ದೀಕ್ಷಿತ್ (28) ಮೂಗಿಗೆ ಗಾಯವಾಗಿದೆ. ಆತನ ಗೆಳೆಯ, … Continued

ಉಯ್ಯಾಲೆಯಲ್ಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವು

ಮಂಗಳೂರು : ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಿಡುಪೆ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕನನ್ನು 8ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಎಂದು ಗುರುತಿಸಲಾಗಿದೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಮನೆಯಲ್ಲಿ ಉಯ್ಯಾಲೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಬಿಗಿದು … Continued

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ…!

ಮಂಗಳೂರು: ಪ್ರಕೃತಿಯಲ್ಲಿ ವಿವಿಧ ರೀತಿಯ ವಿಸ್ಮಯಗಳು ಕಾಣ ಸಿಗುತ್ತವೆ. ಇದನ್ನು ಪುಷ್ಟೀಕರಿಸುವಂತೆ ಮನೆಯಲ್ಲಿ ಸಾಕುವ ಕೋಳಿಯೊಂದು ಗೊಡಂಬಿಯಾಕಾರದಲ್ಲಿ ಮೊಟ್ಟೆಗಳನ್ನು ಇಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಬೇಲಾಜೆ ಎಂಬಲ್ಲಿ ಪ್ರಶಾಂತ ಎಂಬುವವರ ಮನೆಯಲ್ಲಿ ಸಾಕಿದ್ದ ಕೋಳಿಯೊಂದು ಕಳೆದ ಕೆಲವು ದಿನಗಳಿಂದ ಗೊಡಂಬಿ ಆಕಾರದ ತರಹದ ಮೊಟ್ಟೆಗಳನ್ನು ಇಡುತ್ತಿದೆ. ಮೊಟ್ಟೆಯ … Continued